Breaking News

Uncategorized

ಮಹಾದೇವ ಸಾಹುಕಾರ್ ಮೇಲೆ ಗುಂಡಿನ ದಾಳಿ ಪ್ರಕರಣ- ಮತ್ತೆ ಐವರ ಬಂಧನ

ವಿಜಯಪುರ: ಭೀಮಾತೀರದ ಹಂತಕ ಮಹಾದೇವ ಸಾಹುಕಾರ್ ಮೇಲಿನ ಫೈರಿಂಗ್ ಪ್ರಕರಣದಲ್ಲಿ ಮತ್ತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಎಸ್‍ಪಿ ಅನುಪಮ್ ಅಗರವಾಲ್ ಅವರು, ವಿಜಯಪುರದ ಅತಾಲಟ್ಟಿ ಗ್ರಾಮದ ಯಾಶೀನ್ ದಂದರಗಿ (25), ಗೂಳಿ ಸೊನ್ನದ (25), ಸಿದ್ದರಾಯ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಚಿನ ಮಾನವರ (28) ಹಾಗೂ ಚಡಚಣದ ರವಿ ಬಂಡಿ (20) ಬಂಧಿತ ಆರೋಪಿಗಳಾಗಿದ್ದಾರೆ ಎಂದರು.ಮಹಾದೇವ ಸಾಹುಕಾರ್ ಹತ್ಯೆಯ …

Read More »

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 65 ಮಹನೀಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರು, ನ.7- ಕನ್ನಡ ಭಾಷೆ ಹೆತ್ತ ತಾಯಿಗೆ ಸಮ. ಹೀಗಾಗಿ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ. ಹೆತ್ತ ತಾಯಿಗೆ ಏನೆಲ್ಲಾ ಸಲ್ಲಬೇಕೋ ಅದು ನಮ್ಮ ಭಾಷೆ ಹಾಗೂ ಹುಟ್ಟಿದ ಊರಿಗೂ ಸಲ್ಲಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ. ಈ ಬಗ್ಗೆ ಯಾರಿಗೂ ಯಾವ ರೀತಿಯ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ರವೀಂದ್ರಕಲಾಕ್ಷೇತ್ರದಲ್ಲಿ ನಡೆದ 2020ನೇ ಸಾಲಿನ ಕನ್ನಡ …

Read More »

ವಡೇರಹಟ್ಟಿಯ ಇಬ್ಬರು ಬಾಲಕರಿಗೆ ಕೆ.ತ್ಯಾಗರಾಜನ್ ಶುಕ್ರವಾರ ಸನ್ಮಾನ

ಬೆಳಗಾವಿ : ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನನ್ನು ರಕ್ಷಿಸಿದ್ದ ಗೋಕಾಕ ತಾಲ್ಲೂಕಿನ ವಡೇರಹಟ್ಟಿಯ ಇಬ್ಬರು ಬಾಲಕರಿಗೆ ಇಲ್ಲಿನ ಪೊಲೀಸ್ ಆಯುಕ್ತರ ಕಾರ್ಯಾಲಯದಲ್ಲಿ ಕೆ.ತ್ಯಾಗರಾಜನ್ ಶುಕ್ರವಾರ ಸನ್ಮಾನಿಸಿ, ಕೇಂದ್ರ ಗೃಹ ಸಚಿವಾಲಯದಿಂದ ಕೊಡ ಮಾಡಿದ ಜೀವನ ರಕ್ಷಾ ಪದಕ ವಿತರಿಸಿದರು. ವಡ್ಡೇರಹಟ್ಟಿಯ  ಸಿದ್ದಪ್ಪ ಕೆಂಪಣ್ಣ ಹೊಸಟ್ಟಿ, ಶಿವಾನಂದ ದಶರಥ ಹೊಸಟ್ಟಿ ಬಾಲಕರಿಗೆ  1 ಲಕ್ಷ ಚೆಕ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದರು. 2018ರ ಮೇ 8ರಂದು ಗೋಕಾಕ ತಾಲ್ಲೂಕಿನ ವಡೇರಹಟ್ಟಿ …

Read More »

ಸಿಂಪಲ್ಲಾಗಿ ಯಥರ್ವ್ ಹುಟ್ಟುಹಬ್ಬ ಗೋವಾ ಬೀಚ್‍ನಲ್ಲಿ ಹಡಗಿನಲ್ಲಿ ಅದ್ಧೂರಿಯಾಗಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಬೆಂಗಳೂರು: ಮನೆಯಲ್ಲಿ ಸಿಂಪಲ್ಲಾಗಿ ಯಥರ್ವ್ ಹುಟ್ಟುಹಬ್ಬ ಆಚರಿಸಿದರೂ ಬಳಿಕ ತುಂಬಾ ವಿಷೇಶವಾಗಿ ಹಾಗೂ ವಿಭಿನ್ನವಾಗಿ ತಮ್ಮದೇ ಶೈಲಿಯಲ್ಲಿ ಯಶ್ ಕುಟುಂಬ ಆಚರಿಸಿದ್ದು, ಗೋವಾ ಬೀಚ್‍ನಲ್ಲಿ ಹಡಗಿನಲ್ಲಿ ಅದ್ಧೂರಿಯಾಗಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ನಟಿ ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ತುಂಬಾ ರಿಚ್ ಆಗಿ ಆಚರಿಸಿರುವುದನ್ನು ನೋಡಬಹುದಾಗಿದೆ. ಈ ಸಂಭ್ರಮಾಚರಣೆಯಲ್ಲಿ ಕೇವಲ ನಾಲ್ಕೈದು ಮಂದಿ ಕುಟುಂಬಸ್ಥರು ಮಾತ್ರ ಭಾಗವಹಿಸಿದ್ದು, ಗೋವಾದ ಬೀಚ್‍ನಲ್ಲಿ ಬೃಹತ್ ಹಡಗಿನಲ್ಲಿ ಆನಂದಿಸಿ, …

Read More »

ಕೆಎಎಸ್ ಅಧಿಕಾರಿ ಸುಧಾ ಪುರಾಣ – ಕಮೋಡ್‍ನಲ್ಲಿ ಕೀ ಬಿಸಾಡಿರೋ ಶಂಕೆ

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಮನೆಯಲ್ಲಿ ಲಾಕರ್ ತೆರೆಯಲು ಹರಸಾಹಸ ಪಡುತ್ತಿದ್ದು, ಲಾಕರ್ ಕೀ ಗಳನ್ನು ಕಮೋಡ್ ನಲ್ಲಿ ಬಿಸಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಎಸಿಬಿ ಅಧಿಕಾರಿಗಳು ಬಂದ 20 ನಿಮಿಷ ಬಾಗಿಲು ತೆರಯದೇ ಇದ್ದ ಸುಧಾ, ರಂಪಾಟ ಮಾಡಿದ್ದರು. ಸ್ಥಳೀಯ ಪೊಲೀಸರನ್ನು ಕರೆಸುತ್ತೇವೆ, ಈ ವೇಳೆ ನಿಮಗೆ ಅವಮಾನ ಆಗುತ್ತೆ. ಆಗ ಇನ್ನೂ ದೊಡ್ಡ ಕಷ್ಟ ಎದುರಾಗುತ್ತೆ ಎಂದು ಅಧಿಕಾರಿಗಳು …

Read More »

ನೂತನ ತಾಲೂಕು ಮೂಡಲಗಿ -ಹಂತ-ಹಂತವಾಗಿ ಎಲ್ಲ ಸರ್ಕಾರಿ ಕಛೇರಿಗಳ ಆರಂಭಕ್ಕೆ ಶಾಸಕರ ಭರವಸೆ

ಮೂಡಲಗಿ : ಜನೇವರಿ ಒಳಗೆ ಮೂಡಲಗಿಗೆ ಎಲ್ಲ ಸರ್ಕಾರಿ ಕಛೇರಿಗಳನ್ನು ಹಂತ-ಹಂತವಾಗಿ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯ ನೂತನವಾಗಿ ತಹಶೀಲ್ದಾರ ಕಛೇರಿ ಹತ್ತಿರ ಆರಂಭಿಸಲಾದ ತಾಲೂಕ ಪಂಚಾಯತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೂಡಲಗಿ ಹೊಸ ತಾಲೂಕು ಆದ ನಂತರ ಈಗಾಗಲೇ ತಹಶೀಲ್ದಾರ ಕಾರ್ಯಾಲಯವನ್ನು ಪ್ರಾರಂಭಿಸಲಾಗಿದೆ. ಸಿಡಿಪಿಓ ಕಛೇರಿ ಕೂಡ ಕಾರ್ಯಾರಂಭವಾಗಿದೆ. ಈಗ ತಾಲೂಕಾ ಪಂಚಾಯತ ಕಛೇರಿ ಉದ್ಘಾಟನೆಯಾಗಿದೆ. ಮುಂದಿನ ದಿನಗಳಲ್ಲಿ …

Read More »

ಶನಿವಾರ ವಿನಯ ಕುಲಕರ್ಣಿ ಜನ್ಮ ದಿನ. ಆದರೆ 3 ದಿನಗಳ ಕಾಲ ಸಿಬಿಐ ನಕಸ್ಟಡಿಗೆ

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಇಂದು ಜನ್ಮ ದಿನ. ಆದರೆ 3 ದಿನಗಳ ಕಾಲ ಅವರನ್ನು ಸಿಬಿಐ ನಕಸ್ಟಡಿಗೆ ನೀಡಿದ್ದರಿಂದ ಇಂದು ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಜೈಲಿಗೆ ಆಗಮಿಸಿದ್ದಾರೆ. ವಿನಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲು ಹಿಂಡಲಗಾ ಜೈಲಿನಲ್ಲಿ ಎಲ್ಲ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಗುರುವಾರ ಧಾರವಾಡದಲ್ಲಿ ವಿನಯ ಕುಲಕರ್ಣಿಯನ್ನು ಬಂಧಿಸಲಾಗಿದೆ. …

Read More »

ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ EXPERT: ಅತಂತ್ರ ಫಲಿತಾಂಶ ಬಂದ್ರೆ ಯಡಿಯೂರಪ್ಪ ಬಿಹಾರಕ್ಕೆ ಹೋಗ್ತಾರೆ

ಶಿವಮೊಗ್ಗ: ಬಿಹಾರದಲ್ಲಿ ಮಹಾಮೈತ್ರಿ ಅಧಿಕಾರಕ್ಕೆ ಬರುವುದು ಹಾಗೂ ತೇಜಸ್ವಿ ಯಾದವ್ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಆದರೆ ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಯಡಿಯೂರಪ್ಪ ಬಿಹಾರಕ್ಕೆ ಹೋಗಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ ಎಕ್ಸ್‍ಪರ್ಟ್ ಇದ್ದಾರೆ. ಹೀಗಾಗಿ ಬಿಹಾರಕ್ಕೆ ಹೋಗುತ್ತಾರೆ ಎಂದು ಹೇಳಿ ಕಾಲೆಳೆದರು.

Read More »

20 ವರ್ಷಗಳಿಂದ ಮಳೆಗಾಲದಲ್ಲಿ ಹಲವು ಬಾರಿ ಮುಳುಗ್ತಿದೆ ಹೆಬ್ಬಾಳೆ ಸೇತುವೆ- ಸರ್ಕಾರಕ್ಕೆ ಸ್ಥಳೀಯರು ಹಿಡಿಶಾಪ

ಚಿಕ್ಕಮಗಳೂರು: ಈ ಮಳೆಗಾಲ ಮುಗಿದ ತಕ್ಷಣ ಅದಕ್ಕೊಂದು ಶಾಶ್ವತ ಪರಿಹಾರ ಮಾಡ್ತೀವಿ ಅಂತ ಜನಪ್ರತಿನಿಧಿಗಳು, ಸರ್ಕಾರ ಹೇಳ್ತಾ ಬರೋಬ್ಬರಿ 20 ವರ್ಷಗಳೇ ಕಳೆದಿವೆ. ಆದರೂ ಸಮಸ್ಯೆಗೆ ಮಾತ್ರ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಮಳೆಗಾಲದಲ್ಲಿ ದಿನಕ್ಕೆ ನಾಲ್ಕೈದು ಬಾರಿ ಮುಳುಗಡೆಯಾಗೋ ಆ ಸೇತುವೆಯಿಂದ ಅಲ್ಲಿಯ ಜನ ಅಲ್ಲೇ, ಇಲ್ಲಿಯ ಜನ ಇಲ್ಲೆ. ರಾಜಕಾರಣಿಗಳು, ಸರ್ಕಾರದ ಆಶ್ವಾಸನೆಯಿಂದ ಬೆಂದು ಬೆಂಡಾಗಿರೋ ಜನಸಾಮಾನ್ಯರು ಸರ್ಕಾರದ ವಿರುದ್ಧ ಇಡಿ ಶಾಪ ಹಾಕ್ತಿದ್ದಾರೆ. ಸೇತುವೆ ಮುಳುಗಡೆಯಾದರೆ ಯಾವ …

Read More »

ಕರೆಂಟ್ ಶಾಕ್ ಕೊಟ್ಟ ಸರ್ಕಾರಕ್ಕೆ ಸಿದ್ದರಾಮಯ್ಯ ಕ್ಲಾಸ್..!

ಬೆಂಗಳೂರು, ನ.6- ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆಯನ್ನು ಕೈ ಬಿಟ್ಟು ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯ ಯೋಜನೆಗಳನ್ನು ರೂಪಿಸಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ಕೊರೊನಾ ಕಾರಣದಿಂದ ಉತ್ಪಾದನಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಜನರಲ್ಲಿ ಕೊಳ್ಳುವ ಶಕ್ತಿ ಇಲ್ಲ. ಈ ಸಂದರ್ಭದಲ್ಲಿ ಇಂಧನ ಮತ್ತು ವಿದ್ಯುತ್ ದರ ಎರಿಕೆಯಿಂದ ಜನರಿಗೆ ಹೊರೆಯಾಗುತ್ತದೆ. ಪೆಟ್ರೋಲ್, ಡಿಸೇಲ್ ಹಾಗೂ ವಿದ್ಯುತ್ ದರಗಳನ್ನು ಏರಿಕೆ ಮಾಡುವ ಬದಲು ಕಡಿಮೆ ಮಾಡಿ. …

Read More »