Breaking News

Uncategorized

ರಾಜ್ಯ ಹೆದ್ದಾರಿ 65ರಲ್ಲಿ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಹಾಳು ಗ್ರಾಮದ ಬಳಿಯ ರಾಜ್ಯ ಹೆದ್ದಾರಿ 65ರಲ್ಲಿ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ.ಒಂದು ಬಸ್ ಚನ್ನಗಿರಿಯಿಂದ ಭದ್ರಾವತಿಯತ್ತ ಹೊರಟಿತ್ತು. ಮತ್ತೊಂದು ಬಸ್ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಹೋಗುತ್ತಿತ್ತು. ಜೋಳದಹಾಳು ಗ್ರಾಮದ ಬಳಿಯ ತಿರುವಿನಲ್ಲಿಎರಡೂ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಹಿಂದೆ ಬರುತ್ತಿದ್ದ ವ್ಯಾನ್ ದಿಢೀರ್ ಬ್ರೇಕ್ ಹಾಕಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ. ಬಸ್ ಗಳಲ್ಲಿದ್ದ 40 …

Read More »

ಕ್ರೈಸ್ತರಲ್ಲೂ ಬಹಳಷ್ಟು ಮಂದಿ ಬಡವರಿದ್ದಾರೆ. ಹೀಗಾಗಿ ಕ್ರೈಸ್ತ ಅಭಿವೃದ್ಧಿ ಪ್ರಾಧಿಕಾರವನ್ನು ತಕ್ಷಣ ರಚನೆ ಮಾಡಬೇಕು: ಐವಾನ್ ಡಿಸೋಜಾ

ಮಂಗಳೂರು: ರಾಜ್ಯದಲ್ಲಿರುವ ಕ್ರೈಸ್ತರಲ್ಲೂ ಬಹಳಷ್ಟು ಮಂದಿ ಬಡವರಿದ್ದಾರೆ. ಹೀಗಾಗಿ ಕ್ರೈಸ್ತ ಅಭಿವೃದ್ಧಿ ಪ್ರಾಧಿಕಾರವನ್ನು ತಕ್ಷಣ ರಚನೆ ಮಾಡಬೇಕು ಎಂದು ಮಾಜಿ ಎಂಎಲ್‌ಸಿ, ಕೆಪಿಸಿಸಿ ವಕ್ತಾರ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದ್ದಾರೆ. ಅವರಲ್ಲಿರುವ ಬಡವರಿಗೆ ಸಹಕಾರಿಯಾಗುತ್ತೆ ಎಂದಿದ್ದಾರೆ. ನಮ್ಮ ಕ್ರೈಸ್ತರಲ್ಲೂ ಬಡವರಿದ್ದಾರೆ. ಹೀಗಾಗಿ ಪ್ರಾಧಿಕಾರ ರಚಿಸಿ ಎಂದು ಹೇಳಿದ್ದಾರೆ.ಸರ್ಕಾರ ನಮ್ಮ ಮನವಿಗೆ …

Read More »

ಕಾಲೇಜು ಪ್ರಾರಂಭದ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಸಿಕ್ಕಿದೆ.

ಬೆಂಗಳೂರು: ಪದವಿ ಕಾಲೇಜು ಪ್ರಾರಂಭದ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ದಿನವಾದ ಇಂದು ಕೂಡಾ ವಿದ್ಯಾರ್ಥಿಗಳು ಕಾಲೇಜಿಗೆ ಬರೋದಕ್ಕೆ ಹಿಂದೇಟು ಹಾಕಿದ್ದಾರೆ. ಮೊದಲ ದಿನಕ್ಕೆ ಹೋಲಿಸಿದ್ರೆ ಸ್ವಲ್ಪ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ.ಕೊರೊನಾ ನಡುವೆಯೂ ಎರಡನೇ ದಿನ ಕಡಿಮೆ ವಿದ್ಯಾರ್ಥಿಗಳಿಗೆ ಬಹುತೇಕ ಕಾಲೇಜುಗಳಲ್ಲಿ ತರಗತಿ ನಡೀತು. ಮಹಾರಾಣಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ನಿನ್ನೆಗಿಂತ ಇಂದು ಹೆಚ್ಚು ವಿದ್ಯಾರ್ಥಿನಿಯರು ಆಗಮಿಸಿದ್ದರು. ಸರ್ಕಾರದ ಮಾರ್ಗಸೂಚಿಯಂತೆ ಕಾಲೇಜಿನಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ವ್ಯವಸ್ಥೆ, …

Read More »

ಕೋಟಿ ಗೆದ್ದು ಕರೋಡ್‍ಪತಿಯಾದ ಐಪಿಎಸ್‍ ಅಧಿಕಾರಿ..!

ಮುಂಬೈ,ನ.18- ಬಾಲಿವುಡ್‍ನ ಬಿಗ್‍ಬಿ ಅಮಿತಾಬ್‍ಬಚ್ಚನ್ ನಡೆಸಿಕೊಡುತ್ತಿರುವ ಕೌನ್ ಬನೇಗಾ ಕರೋಡ್‍ಪತಿಗೆ ಈಗ 12ರ ಸಂಭ್ರಮ. ಕಾರ್ಯಕ್ರಮ ಶುರುವಾದಾಗಿನಿಂದಲೂ ಕೋಟಿ ಗೆದ್ದ ವೀರರ ಸಂಖ್ಯೆಯ ಪಟ್ಟಿ ಹೆಚ್ಚಾಗಿದೆ. ಆದರೆ ಈ ಬಾರಿಯ ರಿಯಾಲ್ಟಿ ಶೋನಲ್ಲಿ ಇಬ್ಬರು ಮಹಿಳೆಯರು ಕೋಟಿ ಪ್ರಶ್ನೆಗೆ ಉತ್ತರಿಸಿ ಕರೋಡ್‍ಪತಿಗಳಾಗಿದ್ದಾರೆ. ಕಳೆದ ರಾತ್ರಿ ಈ ಕಾರ್ಯಕ್ರಮದ ಹಾಟ್‍ಸೀಟ್‍ನಲ್ಲಿ ಕುಳಿತಿದ್ದ ಐಪಿಎಸ್ ಅಧಿಕಾರಿ ಮೋಹಿತಾಶರ್ಮಾ ಕೋಟಿ ಗೆಲ್ಲುವ ಮೂಲಕ ಸಂಭ್ರಮಿಸಿದರಾದರೂ 7 ಕೋಟಿ ಪ್ರಶ್ನೆಗೆ ಉತ್ತರಿಸಲು ಹಿಂಜರಿದರು. ಕೌನ್‍ಬನೇಗಾ ಕರೋಡ್‍ಪತಿಯ …

Read More »

ಬ್ಯಾಲೆಟ್ ಪೇಪರಿನಲ್ಲಿ ಉಪಚುನಾವಣೆ ನಡೆಸಿ ಗೆದ್ದು ತೋರಿಸಲಿಶಿವರಾಜ್ ತಂಗಡಗಿ ಬಿಜೆಪಿಗೆ ಬಹಿರಂಗ ಸವಾಲು

ಕೊಪ್ಪಳ: ಬಸವಕಲ್ಯಾಣ ಮತ್ತು ಮಸ್ಕಿಯ ಕ್ಷೇತ್ರದದಲ್ಲಿ ಬ್ಯಾಲೆಟ್ ಪೇಪರಿನಲ್ಲಿ ಉಪಚುನಾವಣೆ ನಡೆಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿಗೆ ಬಹಿರಂಗ ಸವಾಲು ಎಸೆದಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿಯ ಸ್ವಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ತಂಗಡಗಿ, ತಾಕತ್ತಿದ್ದರೆ ಇವಿಎಂ ಯಂತ್ರ ಇಲ್ಲದೆ ಗೆದ್ದು ತೋರಿಸಲಿ ಎಂದು ಬಿಜೆಪಿಯವರಿಗೆ ಸವಾಲು ಹಾಕಿದರು. ರಾಜ್ಯದಲ್ಲಿ ಗ್ರಾ.ಪಂ, ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆದರೆ ಎಂಪಿ ಎಂಎಲ್‍ಎ ಚುನಾವಣೆಗಳಲ್ಲಿ ಬಿಜೆಪಿ …

Read More »

ಧಾರವಾಡದವರೆಗೆ ಹೊಸದಾಗಿ ನಿರ್ಮಾಣವಾಗುತ್ತಿರುವ ರೈಲ್ವೆ ಹಾದಿಯನ್ನು ಬದಲಾವಣೆ ಮಾಡಬೇಕೆಂದು ಗ್ರಾಮಸ್ಥರ ಮನವಿ

ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿಗೆ ಗ್ರಾಮಸ್ಥರ ಮನವಿ ಬೆಳಗಾವಿ: ದೇಸೂರು ಇದ್ದಲಹೊಂಡ ಗ್ರಾಮದಿಂದ ಧಾರವಾಡದವರೆಗೆ ಹೊಸದಾಗಿ ನಿರ್ಮಾಣವಾಗುತ್ತಿರುವ ರೈಲ್ವೆ ಹಾದಿಯನ್ನು ಬದಲಾವಣೆ ಮಾಡಬೇಕೆಂದು ನಂದಿಹಳ್ಳಿ, ಗರ್ಲಗಂಜಿ ಹಾಗೂ ನಾಗೇನಹಳ್ಳಿ ಗ್ರಾಮಸ್ಥರು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.  ರೈಲ್ವೇ ಇಲಾಖೆಯ ಸರ್ವೇ ಕಾರ್ಯದ ಪ್ರಕಾರ ಧಾರವಾಡಕ್ಕೆ ನಂದಿಹಳ್ಳಿ, ಗರ್ಲಗಂಜಿ ಹಾಗೂ ನಾಗೇನಹಳ್ಳಿ ಮುಖಾಂತರ ರೈಲ್ವೆ ಹಾದಿ ಹಾದು ಹೋಗುತ್ತಿದೆ. ಇದ್ದರಿಂದ ನಮ್ಮ ಫಲವತ್ತಾದ …

Read More »

ಸಚಿವ ಸಂಪುಟ ಸರ್ಜರಿ ಅಂತಿಮ ಹಂತಕ್ಕೆ ಇಂದು ದೆಹಲಿಗೆ ತೆರಳಲಿರುವ BSY:ಉಮೇಶ್ ಕತ್ತಿ ಮಂತ್ರಿ ಆಗೋದು ಖಚಿತನಾ…?

ಬೆಂಗಳೂರು: ಸಂಪುಟ ಸರ್ಕಸ್ ಅಂತಿಮ ಹಂತಕ್ಕೆ ತಲುಪಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟ ಸರ್ಜರಿ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇಂದು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಂಜೆ ವೇಳೆ ನಿರ್ಧಾರ ಪ್ರಕಟವಾಗಲಿದೆ. ಈ ನಡುವೆ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸಿದ್ದಾರೆ. ದಾವಣಗೆರೆಯ ಎಸ್.ಎ. ರವೀಂದ್ರನಾಥ್, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಚಿತ್ರದುರ್ಗದ ಶಾಸಕ …

Read More »

ಬಳ್ಳಾರಿ ಜಿಲ್ಲೆ ವಿಭಜನೆಯಾದ್ರೆ ಜಿಲ್ಲೆ ಬಿಜೆಪಿ ಎರಡು ಹೋಳಾಗುತ್ತದೆ. Bellary ಸಿಎಂ ಮೊಂಡುತನ ಮಾಡಿ ಜಿಲ್ಲೆ ರಚಿಸಿದ್ರೆ ನಾನೇನು ಮಾಡ್ಲಿ

ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಖಡಕ್ಕಾಗಿ ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ವಿಚಾರದ ಕುರಿತ ಪ್ರಶ್ನಿಸಿದಾಗ ಸೋಮಶೇಖರ ರೆಡ್ಡಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲವಿಲ್ಲ. ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಈ ಜಿಲ್ಲೆಯ ಜನರು, ವಿಜಯನಗರ ಜಿಲ್ಲೆ …

Read More »

ಎರಡು ಟ್ರಕ್‍ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ 10 ಮಂದಿ ಸಾವನ್ನಪ್ಪಿ, 15 ಮಂದಿ ಗಾಯ.

ಗುಜರಾತ್: ಎರಡು ಟ್ರಕ್‍ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ 10 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‍ನ ವಡೋದರಾದಲ್ಲಿ ನಡೆದಿದೆ. ಇಂದು ಮುಂಜಾನೆ ವಡೋದರಾದ ವಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ಪಾವಘಡದಿಂದ ಸೂರತ್‍ಗೆ ಹೋಗುವ ಟ್ರಕ್ ಮತ್ತು ಇನ್ನೊಂದು ಟ್ರಕ್ ಒಂದಕ್ಕೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ವಡೋದರಾದ ಎಸ್‍ಎಸ್‍ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಕನಿಷ್ಠ 10 …

Read More »

ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ:ಆನಂದ್ ಸಿಂಗ್

ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಬಹುದಿನದ ಬೇಡಿಕೆ ಈಡೇರಿದೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು.ಈ ಬೇಡಿಕೆ ನನ್ನ ಒಬ್ಬನದ್ದಲ್ಲ. ಬೇಡಿಕೆ ಇಟ್ಟವರ ಧ್ವನಿಯಾಗಿ ಇಂದು …

Read More »