Breaking News

Uncategorized

ಫೈಝರ್ ಕೋವಿಡ್ ಲಸಿಕೆ ಬಳಕೆ ಬಗ್ಗೆ ಭಾರತದಲ್ಲಿ ಗೊಂದಲ

ನವದೆಹಲಿ: – ಕೊರೊನಾ ನಿಯಂತ್ರಣಕ್ಕೆ ತುರ್ತು ಸಂದರ್ಭದಲ್ಲಿ ಬಳಸಲು ಮಾನ್ಯತೆ ಪಡೆದಿರುವ ಫೈಝರ್ ಲಸಿಕೆ ಗುಣಮಟ್ಟದ ಬಗ್ಗೆ ಉತ್ಪಾದಕ ಕಂಪೆನಿಯೇ ಗೊಂದಲಕಾರಿ ಹೇಳಿಕೆ ನೀಡಿದೆ. ಇಂಗ್ಲೆಂಡ್ ಸರ್ಕಾರ ಮತ್ತು ಬಹರೈನ್ ಆರೋಗ್ಯ ಪ್ರಾಧಿಕಾರದಿಂದ ಅಂಗೀಕಾರ ಪಡೆದಿರುವ ಫೈಝರ್‍ಲಸಿಕೆಯನ್ನು ಕೊರೊನಾ ವಿರುದ್ಧ ಹೋರಾಟಕ್ಕೆ ತುರ್ತು ಸಂದರ್ಭದಲ್ಲಿ ಬಳಸಬಹುದೆಂದು ನಿರ್ಣಯಿಸಲಾಗಿದೆ. ಭಾರತ ಸರ್ಕಾರ ಕೂಡ ಈ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಒಪ್ಪಿ ಕೊಂಡಿದ್ದು, ಲಕ್ಷಾಂತರ ಡೊಸೇಜ್‍ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗ ಫೈಝರ್‍ನ …

Read More »

ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು:ಪ್ರಿಯಾಂಕ್ರಾ ಚೋಪ್ರಾ

ನವದೆಹಲಿ: ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಬಾಲಿವುಡ್ ನಟಿ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ಗಾಯಕ-ನಟ ದಿಲ್ಜಿತ್ …

Read More »

ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ರೆ ಘೋಷಣೆ ಮಾಡ್ಲಿ- ‘ಕೈ’ಗೆ ಈಶ್ವರಪ್ಪ ಸವಾಲ್

ಬೆಂಗಳೂರು: ಕಾಂಗ್ರೆಸ್ಸಿನವರು ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಗೋಹತ್ಯೆ ನಿಷೇಧ ಮಾಡಲ್ಲ ಅಂತ ಹೇಳಲಿ. ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ದರೆ ಘೋಷಣೆ ಮಾಡಲಿ ಎಂದು ಸಚಿವ ಈಶ್ವರಪ್ಪ ಸವಾಲೆಸೆದಿದ್ದಾರೆ. ವಿಧಾನಸೌಧದಲ್ಲಿ ಲವ್ ಜಿಹಾದ್ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೋವನ್ನ ನಾವು ತಾಯಿ ಅಂತೀವಿ. ಗೋವನ್ನ ತಾಯಿ ಸ್ವರೂಪ ಅಂತ ನಾವು ಕಾಣ್ತೀವಿ. ನಮ್ಮ ತಾಯಿಗೆ ವಯಸ್ಸಾಯ್ತು …

Read More »

ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿತೀವ್ರ ಕುತೂಹಲಕ್ಕೆ ಕಾರಣ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಿಎಂ ವಿನಯ್ ಗುರೂಜಿಯನ್ನು ಕರೆಸಿಕೊಂಡಿದ್ದಾರೆ. ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಕಾರಣ ತಿಳಿದು ಬಂದಿಲ್ಲ.  ಚಿಕ್ಕಮಂಗಳೂರಿನ ವಿನಯ್ ಗುರೂಜಿ ಅವರು,  ಇತ್ತಿಚೇಗೆಹುಬ್ಬಳಿಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ದೇವರ ಆಶೀರ್ವಾದ ಉಂಟು ಎಂದಿದ್ದರು. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ …

Read More »

ಬೆಂಗಳೂರಿಗೆ ಬಂದುತನ್ನ ಅಣ್ಣನ ಆಶೀರ್ವಾದ ಪಡೆದರಜನಿಕಾಂತ್

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ತನ್ನ ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾರೆ. ಸೌತ್ ಇಂಡಿಯನ್ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್ ಅವರು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ …

Read More »

3 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಮುಂಬೈ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಇಬ್ಬರು ನೆರೆಹೊರೆಯವರಿಗೆ 20 ವರ್ಷ ಜೈಲು ಶಿಕ್ಷೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಲೈಂಗಿಕ ಅಪರಾಧಗಳಿಗೆ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ನ್ಯಾಯಾಲಯವು 19 ವರ್ಷದ ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. 2018 ರಲ್ಲಿ ನೆರೆ ಮನೆಯ 3 ವರ್ಷದ ಬಾಲಕಿಯ ಮೇಲೆ ಈ ಇಬ್ಬರು ಅತ್ಯಾಚಾರ ನಡೆಸಿದ್ದರು. ಈ ಕುರಿತಾಗಿ ತನಿಖೆ ನಡೆಯುತ್ತಿತ್ತು. ಇದೀಗ ಈ …

Read More »

ಕೊರೊನಾದಿಂದಾಗಿ ಬಡತನಕ್ಕೆ ಸಿಲುಕಿದ 100ಕೋಟಿ ಜನ..!

ನವದೆಹಲಿ : ಮಹಾಮಾರಿ ಕೊರೊನಾದಿಂದಾಗಿ ಮುಂದಿನ 10 ವರ್ಷದಲ್ಲಿ ಸುಮಾರು 100 ಕೋಟಿ ಜನ ಕಡುಬಡತನಕ್ಕೆ ಸಿಲುಕಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆ (ಯುಎನ್‍ಡಿಪಿ) ನಡೆಸಿರುವ ಸಮೀಕ್ಷೆ ಪ್ರಕಾರ ಕೊರೊನಾದಿಂದಾಗಿ ಸದ್ಯದ ಪರಿಸ್ಥಿತಿಯಲ್ಲಿ 207 ಮಿಲಿಯನ್ ಜನ ಕಡು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. 2030ರ ವೇಳೆಗೆ ಒಂದು ಬಿಲಿಯನ್ ಸರಿಸುಮಾರು 100 ಕೋಟಿ ಜನ ಬಡತನಕ್ಕೆ ಸಿಲುಕಲಿದ್ದಾರೆ ಎಂದು ಹೇಳಲಾಗಿದೆ. ಕೊರೊನಾದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ಬಿದ್ದಿದೆ. …

Read More »

ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ – ಕರ್ನಾಟಕದಲ್ಲೂ ಬಂದ್‍ಗೆ ಕರೆ

ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ. ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ …

Read More »

ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಬೆಂಗಳೂರು: ಬಿಜೆಪಿ ಮನೆಯ ಸಚಿವಾಕಾಂಕ್ಷಿ ಹಕ್ಕಿಗಳಿಗೆ ಇವತ್ತು ಬೆಳಗ್ಗೆ ಇದ್ದ ನಿರೀಕ್ಷೆ, ಕಾತರ ಸಂಜೆ ಹೊತ್ತಿಗೆ ಇಳಿದಿತ್ತು. ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆ ಸಿಎಂ ಯಡಿಯೂರಪ್ಪ ಚರ್ಚಿಸಿ ನಮ್ಮನ್ನ ನಾಳೆ ಬೆಳಗ್ಗೆಯೊಳಗೆ ಸಚಿವರಾಗಿ ಮಾಡೇಬಿಡ್ತಾರೆಂಬ ನಿರೀಕ್ಷೆ ಠುಸ್ ಆಗಿದೆ. ಕಾವೇರಿ ನಿವಾಸದಲ್ಲಿ ಮಧ್ಯಾಹ್ನ ಸಿಎಂ ಮತ್ತು ಅರುಣ್ ಸಿಂಗ್ ನಡುವಿನ ಸಂಪುಟ ವಿಸ್ತರಣೆ ಕುರಿತ ಮಾತುಕತೆ ವಿಫಲವಾಗಿದೆ. ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೊಡದೇ ತನ್ನ …

Read More »

ಸರ್ಕಾರ ಟ್ರ್ಯಾಕ್ ತಪ್ಪಿದೆ, ಸರಿ ಮಾಡ್ಲೇಬೇಕು – ಬಿಎಸ್‍ವೈ ವಿರುದ್ಧ ದೂರುಗಳ ಸುರಿಮಳೆ!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ಎಲ್ಲವೂ ಕುದಿಮೌನ. ಉಗುಳುವಂತಿಲ್ಲ, ನುಂಗುವಂತಿಲ್ಲ. ಬರೀ ಸೌಂಡ್ ಮಾಡಿ ಕೆಲಸ ಮಾಡದ ಆಡಳಿತ ಯಂತ್ರದ ರಿಪೇರಿ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ ಗೊಂದಲ, ನಿಗಮ ಮಂಡಳಿ ನೇಮಕಾತಿ ಗೊಂದಲ, ಸರ್ಕಾರದ ನಿರ್ಧಾರಗಳ ಗೊಂದಲಗಳ ಬಗ್ಗೆ ಇವತ್ತು ಪಕ್ಷದ ವೇದಿಕೆಯಲ್ಲಿ ಭರ್ಜರಿಯಾಗಿಯೇ ಸೌಂಡ್ ಮಾಡಿತ್ತು. ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು 6ಕ್ಕೂ ಹೆಚ್ಚು ಸಚಿಚರು, ಇಬ್ಬರು ಸಂಸದರು, ಇಬ್ಬರು ಶಾಸಕರು …

Read More »