Breaking News

Uncategorized

ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ:ಆನಂದ್ ಸಿಂಗ್

ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಬಹುದಿನದ ಬೇಡಿಕೆ ಈಡೇರಿದೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು.ಈ ಬೇಡಿಕೆ ನನ್ನ ಒಬ್ಬನದ್ದಲ್ಲ. ಬೇಡಿಕೆ ಇಟ್ಟವರ ಧ್ವನಿಯಾಗಿ ಇಂದು …

Read More »

ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ಇಲ್ಲಾ….

ಬೆಂಗಳೂರು : ಡಿಸೆಂಬರ್ 7 ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ ದಿನಾಂಕ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೇವಲ ಹತ್ತೇ ನಿಮಿಷದಲ್ಲಿ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

Read More »

ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖವಾಗಿದ್ದು, ಇಂದು 23 ಜಿಲ್ಲೆಗಳಲ್ಲಿ ಶೂನ್ಯ ಮರಣ ದಾಖಲಾಗಿದೆ. ಇಂದು 1,336 ಹೊಸ ಪ್ರಕರಣಗಳು ವರದಿಯಾಗಿದ್ದು, 2,100 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ ರಾಜ್ಯದಲ್ಲಿ 8,27,241 ಜನ ಗುಣಮುಖರಾಗಿದ್ದು, ಚೇತರಿಕೆ ದರ ಶೇ.95.72ರಷ್ಟಿದೆ. ಇನ್ನು ಕೋವಿಡ್ ಮರಣ ಪ್ರಮಾಣ ಶೇ.1.39 ಮತ್ತು ಖಚಿತ ಪ್ರಕರಣಗಳ ಪ್ರಮಾಣ ಶೇ.1.77ರಷ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,64,140ಕ್ಕೆ ಏರಿಕೆಯಾಗಿದ್ದು, 25,323 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾಗೆ …

Read More »

ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು:ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು: ಎಲ್ಲ ಜಾತಿಯಲ್ಲೂ ಹಿಂದುಳಿದವರಿದ್ದಾರೆ. ಎಲ್ಲ ಸಮಾಜದಲ್ಲಿಯೂ ಕಡುಬವರು ಇದ್ದಾರೆ. ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ರಚನೆ ಮಾಡ್ತಿರೋ ವಿಚಾರ ಕೇಳಿ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ ಸರ್ಕಾರ ಇರೋದು ಸಮಗ್ರ …

Read More »

ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬ

ಚಾಮರಾಜನಗರ: ಜಿಲ್ಲೆಯ ಗಡಿಯಂಚಿನಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬದ ವಿಶೇಷ. ಕೋವಿಡ್ ಗೆ ಡೋಂಟ್ ಕೇರ್ ಎಂದು ಗ್ರಾಮಸ್ಥರು ಗುಂಪು ಸೇರಿ ಕಣಿದು ಕುಪ್ಪಳಿಸಿದರು. ಬಲಿಪಾಢ್ಯಮಿಯ ಮಾರನೇ ದಿನ ಈ ಗೊರೆ ಹಬ್ಬವನ್ನು ಆಚರಿಸಲಾಗತ್ತದೆ. ಅಚ್ಚ ಕನ್ನಡಿಗರೆ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ …

Read More »

ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಸ್ಥಿತಿ

ಬೆಳಗಾವಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭವಾಗಿದ್ದು, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನೆಗೆಟಿವ್ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಿರುವುದರಿಂದ ವಿದ್ಯಾರ್ಥಿಗಳು ಕೋವಿಡ್ ಟೆಸ್ಟಗಾಗಿ ಅಲೆದಾಡುತ್ತಿದ್ದಾರೆ. ಟೆಸ್ಟ್ ಮಾಡಿಸಲು ಸೂಕ್ತ ಸ್ಥಳದ ಮಾಹಿತಿ ದೊರಕದೆ ಇಡಿ ಜಿಲ್ಲಾಸ್ಪತ್ರೆ ಸುತ್ತುತ್ತಿದ್ದಾರೆ. ಹೀಗೆ ಬಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನನ …

Read More »

ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ

ಗದಗ: ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆದಿದೆ. ಬೆಟಗೇರಿ ಸಿಪಿಐ ಭೀಮನಗೌಡ ಬಿರಾದಾರ ಹಾಗೂ ಪಿಎಸ್‍ಐ ಗಿರಿಜಾ ಜಕ್ಕಲಿ ನೇತೃತ್ವದಲ್ಲಿ ದಾಳಿಯಾಗಿದೆ. ಈ ವೇಳೆ ಇಸ್ಪೀಟು ಆಡುತ್ತಿದ್ದ ಸುಮಾರು 25 ಜನರ ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂ. ಹಣ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಬೇಕಾದವರನ್ನು ಬಿಟ್ಟಿರುವ ಹಾಗೂ ಇಸ್ಪೀಟ್ ನೋಡಲು ಬಂದವರ ಬಂಧನ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. …

Read More »

ಉತ್ತರ ಪ್ರದೇಶದಲ್ಲಿ ಮುಂದುವರಿದ ಪೈಶಾಚಿಕ ಕೃತ್ಯ

ಫತೇಪುರ್: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು …

Read More »

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ.

ನವದೆಹಲಿ : ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ದೊಡ್ಡ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಲು ದೆಹಲಿ ಪೊಲೀಸ್ ವಿಶೇಷ ಕೋಶ ಉಗ್ರರನ್ನು ಬಂಧಿಸಿದೆ. ದೆಹಲಿಯ ಸರಾಯ್ ಕೇಲ್ ಖಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನಿಸುತ್ತಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಸರೈ ಕೇಲ್ ಖಾನ್‌ನ …

Read More »

ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ. ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.         ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ …

Read More »