Breaking News

Uncategorized

ಐಪಿಎಲ್2020: 2ನೇ ಸ್ಥಾನ ಯಾರಿಗೆ?ಇವತ್ತು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಬೆಂಗಳೂರು: 2020ರ ಐಪಿಎಲ್ ಟೂರ್ನಿಯಲ್ಲಿ 45 ದಿನಗಳಲ್ಲಿ 54 ತಂಡಗಳು ಪೂರ್ಣಗೊಂಡರೂ ಪ್ಲೇ ಆಫ್ ರೇಸ್ ಅಂತ್ಯವಾಗಿಲ್ಲ. ಇವತ್ತು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಇವತ್ತು ದೆಹಲಿ ಮತ್ತು ಬೆಂಗಳೂರು ನಡುವೆ ಐಪಿಎಲ್ ಮ್ಯಾಚ್ ನಡೆಯಲಿದೆ. ಇಂದಿನ ಮ್ಯಾಚ್‍ನಲ್ಲಿ ಆರ್‌ಸಿಬಿ ಗೆಲ್ಲಲೇಬೇಕಾಗಿದೆ. ಗೆದ್ದರಷ್ಟೇ ಪ್ಲೇ ಆಫ್‍ಗೆ ಆರ್ ಸಿಬಿಗೆ ಎಂಟ್ರಿ ಸಿಗುತ್ತೆ. ಅಪ್ಪಿತಪ್ಪಿ ಸೋತರೆ ಆಗ ಬೆಂಗಳೂರು ತಂಡದ ಭವಿಷ್ಯ ಹೈದ್ರಾಬಾದ್-ಮುಂಬೈ ನಡುವಿನ ಪಂದ್ಯದ ಮೇಲೆ ಅವಲಂಬಿತ ಆಗಿರುತ್ತೆ. …

Read More »

ಭಾರತದಲ್ಲಿ ಕೊರೊನಾ ಏರಿಳಿತದ ಆಟ : 24 ಗಂಟೆಯಲ್ಲಿ 45,231 ಪಾಸಿಟಿವ್, 496 ಡೆತ್

ನವದೆಹಲಿ/ಮುಂಬೈ,ನ.2-ದೇಶದಲ್ಲಿ ಕಳೆದ ಏಳು ವಾರಗಳಿಂದ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಇಳಿಮುಖದ ವೇಗ ನಿಧಾನವಾಗುತ್ತಿದೆ. ಚಳಿಗಾಲ ಮತ್ತು ಹಬ್ಬದ ಋತುವಿನಲ್ಲಿ ಡೆಡ್ಲಿ ಕೊರೊನಾ ವೈರಸ್ ಏರಿಳಿತದ ಆಟ ಮುಂದುವರಿದಿದೆ. ದೇಶಾದ್ಯಂತ ಮಾರಕ ಕೊರೊನಾ ವೈರಸ್‍ನ ಹಾವಳಿ ಇಳಿಮುಖವಾಗುವ ಮುನ್ಸೂಚನೆ ಮತ್ತೆ ಗೋಚರಿಸ ತೊಡಗಿದ್ದು, ದಿನನಿತ್ಯದ ಸೋಂಕು ಪ್ರಕರಣಗಳಲ್ಲಿ ಇಳಿಕೆಯಾದರೂ ಸಾವು ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ.ಕಳೆದ ಆರು ದಿನಗಳಿಂದಲೂ 50,000 ಸನಿಹದಲ್ಲೇ ಪಾಸಿಟಿವ್ ಪ್ರಕರಣಗಳ ದಾಖಲೆ ಮುಂದುವರಿದಿದೆ. ಸತತ ನಾಲ್ಕನೇ ದಿನ …

Read More »

2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು

ಪಯಾಗ್‌ಪುರ: ಉತ್ತರ ಪ್ರದೇಶದ ಪಯಾಗ್‌ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.

Read More »

ನನ್ನ ಮಹದಾಯಿ ಹೇಳಿಕೆ ತಿರುಚಲಾಗಿದೆ : ದಿನೇಶ್ ಗುಂಡುರಾವ್

ಬೆಂಗಳೂರು, ನ.1- ಮಹದಾಯಿ ವಿವಾದ ಕುರಿತಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು …

Read More »

ವಿಂಡೋ ಸೀಟ್ ಈ ಪರಿಯಾಗಿ ಪ್ರೇಕ್ಷಕರನ್ನು ಆವರಿಸಿಕೊಳ್ಳಲು, ಅದ್ಯಾವತ್ತು ರಿಲೀಸಾಗುತ್ತೆ

ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈಗಾಗಲೇ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್‍ನಿಂದ ವಿಂಡೋ ಸೀಟ್ ಹಂಗಾಮಾ ಶುರುವಾಗಿದೆ. ವಿಂಡೋ ಸೀಟ್‍ನಲ್ಲಿ ಚೇತೋಹಾರಿಯಾದದ್ದೇನೋ ಇದೆ ಎಂಬ ಭರವಸೆಯನ್ನು ಶೀತಲ್ ಪ್ರೇಕ್ಷಕರ ಮನಸಲ್ಲಿ ಭದ್ರವಾಗಿಯೇ ನೆಲೆಯೂರಿಸಿದ್ದಾರೆ. ಈ ಸಿನಿಮಾದ ಮುಂದಿನ ಅಪ್‍ಡೇಟ್ಸ್ ಗಾಗಿ ಕಾದು ಕೂತಿದ್ದವರಿಗೀಗ ಚಿತ್ರತಂಡ ಡಬಲ್ ಧಮಾಕಾವನ್ನೇ ಕೊಡಮಾಡಿದೆ. ಈ ಮೂಲಕ ಮತ್ತೆ ವಿಂಡೋ ಸೀಟ್ ದೀಪಾವಳಿಯ ಪ್ರಭಾವಳಿಗೆ ಹೊಸ ಮೆರುಗು ನೀಡಲು …

Read More »

ಕೃಷಿ, A.P.M.C.ಕಾಯ್ದೆ ತಿದ್ದುಪಡಿ- ಮುಚ್ಚುವ ಹಂತ ತಲುಪಿದ A.P.M.C.ಗಳು

ಕೋಲಾರ: ಪ್ರಧಾನಿ ಮೋದಿ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಎಪಿಎಂಸಿ ತಿದ್ದುಪಡಿ ತಂದ ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯೇ ಬುಡಮೇಲಾಗಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವ್ಯವಹಾರ ನಡೀತಿದೆ. ಆದರೆ ಹೊಸ ಕಾನೂನಿನಿಂದ ಬಂಗಾರಪೇಟೆ, ಮಾಲೂರು, ಶ್ರೀನಿವಾಸಪುರ ಎಪಿಎಂಸಿಗಳು ಖಾಲಿ ಹೊಡೆಯುತ್ತಿವೆ. ಹೊಸ ಕಾನೂನಿನಿಂದ ಎಪಿಎಂಸಿಗಳ ಆದಾಯ ಬಹುತೇಕ ನಿಂತು ಹೋಗಿದೆ. ಹೀಗಾಗಿ ಎಪಿಎಂಸಿಗಳ ನಿರ್ವಹಣೆ ಕಷ್ಟ ಆಗುತ್ತಿದೆ. ಹೊಸ ಕಾಯ್ದೆಯಿಂದಾಗಿ ಎಪಿಎಂಸಿಗಳ ಆದಾಯ ಶೇ.75 ರಷ್ಟು …

Read More »

ನಮ್ಮ ಕರ್ನಾಟಕದ ಸಚಿವರಾದ ವೀ ಸೋಮಣ್ಣ ಹಾಗೂ ಶ್ರೀ ರಾಮ ಲು ಅವರಿಗೆ ಕನ್ನಡದ ಬಗ್ಗೆ ಜ್ಞಾನ ಇಲ್ಲ ಯಾರ ಯಾರದೋ ಹೆಸರು ಹೇಳಿ ಭಾಷಣ ಮಾಡಿದ ಸಚಿವರೂ.

ಕೊಡಗು:  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಭಾಷಣದಲ್ಲಿ ಸಚಿವ ವಿ.ಸೋಮಣ್ಣ ಯಡವಟ್ಟು ಮಾಡಿಕೊಂಡಿದ್ದು,  ಕವಿ  ಕುಮಾರವ್ಯಾಸನ ಬದಲು ಕುಮಾರಸ್ವಾಮಿ ಅವರನ್ನು ಹಾಡಿಹೊಗಳಿದ ಪ್ರಸಂಗ ನಡೆದಿದೆ.   ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ವಿ.ಸೋಮಣ್ಣ, ಕರ್ನಾಟಕದ ಕವಿಗಳ ಸಾಲಿನಲ್ಲಿ ಕುಮಾರಸ್ವಾಮಿ ಹೆಸರು ಸೇರಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಪಂಪ, ರನ್ನ, ಪೊನ್ನ,ಜನ್ನ, ಕುಮಾರಸ್ವಾಮಿ ಮುಂತಾದವರು ಭಾಷೆಯನ್ನು ಆಗಸದೆತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಭಾಷಣದಲ್ಲಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿದ್ದಾರೆ. ತಮ್ಮ ತಪ್ಪು ಸುಧಾರಿಸಿಕೊಳ್ಳದೇ …

Read More »

65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

    ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆಂದು …

Read More »

ಕಿಂಗ್ಸ್ ಸಂಕಟ : ಚನ್ನೈ ಗೆ ಚಿನ್ನಾಟ

ಹೈದರಾಬಾದ್ : ಯುವನಾಯಕ ಕೆ.ಎಲ್. ರಾಹುಲ್‌ಗೆ ಕಿಂಗ್ಸ್ ಇಲೆವನ್ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯುವ ಛಲದಲ್ಲಿದ್ದಾರೆ. ಅದಕ್ಕಾಗಿ ಅವರು ಈಗ ‘ಕೂಲ್ ಕ್ಯಾಪ್ಟನ್’ ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್‌ ಸವಾಲನ್ನು ಮೀರಿ ನಿಲ್ಲಬೇಕಿದೆ. ಧೋನಿ ಬಳಗಕ್ಕೆ ಈಗಾಗಲೇ ಪ್ಲೇ ಆಫ್‌ ಬಾಗಿಲು ಮುಚ್ಚಿದೆ. ಉಳಿದಿರುವ ಒಂದು ಪಂದ್ಯವನ್ನು ಗೆದ್ದು ಸಂಭ್ರಮದೊಂದಿಗೆ ಹೊರ ನಡೆಯುವತ್ತ ಚಿತ್ತ ನೆಟ್ಟಿದೆ. ಕಿಂಗ್ಸ್‌ ತಂಡಕ್ಕೆ ಶುಕ್ರವಾರ ರಾಜಸ್ಥಾನ ರಾಯಲ್ಸ್‌ ಎದುರು ಜಯಿಸಿದ್ದರೆ ಹಾದಿ ಸುಲಭವಾಗುತ್ತಿತ್ತು. …

Read More »

ಕೊರೋನಾ ವೈರಸ್‌ ಸೋಂಕಿನಿಂದ ಸಚಿವರ ಪರಿಸ್ಥಿತಿ ಚಿಂತಾಜನಕ

ಚೆನ್ನೈ: ಕೊರೋನಾ ವೈರಸ್‌ ತಗುಲಿರುವುದರಿಂದ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಶನಿವಾರ ತಿಳಿಸಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಗರಿಷ್ಠ ಜೀವ ರಕ್ಷಕದ ಹೊರತಾಗಿಯೂ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, …

Read More »