Breaking News

Uncategorized

ಒಂದು ವಾರವಾಗುತ್ತ ಬಂದರೂ ಹೈಕಮಾಂಡ್ ಏನೂ ಹೇಳುತ್ತಿಲ್ಲ. ಹೀಗಾಗಿ ಬಿಜೆಪಿ ಗೊಂದಲದ ಗೂಡಾಗಿದೆ.

ಬೆಂಗಳೂರು,ನ.27- ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಸದರ ಸಭೆ ಕರೆದಿರುವ ಬೆನ್ನಲ್ಲೇ, ದೆಹಲಿಯಲ್ಲಿ ಲಾಬಿ ಶುರುವಾಗಿದೆ. ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ. ಬಿಜೆಪಿ …

Read More »

ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ನಬ್ ಮತ್ತು ಇತರ ಇಬ್ಬರು ವ್ಯಕ್ತಿಗಳಿಗೆ ನೀಡಿರುವ ಮಧ್ಯಂತರ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.11ರಂದು ವಿಚಾರಣೆ ನಡೆಸಿದ್ದ …

Read More »

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,082 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ನ.27- ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 43,082 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೂ 87,18,517 ಸೋಂಕಿತರು ಗುಣಮುಖರಾಗಿದ್ದು, ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.93.64ಕ್ಕೆ ಹೆಚ್ಚಳವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 492 ಮಂದಿ ಸೋಂಕಿಗೆ ಬಲಿಯಾಗುವ ಮೂಲಕ ಸಾವಿನ ಪ್ರಮಾಣ 1,35,715ಕ್ಕೆ ಏರಿಕೆಯಾಗಿದೆ. ಇದುವರೆಗೂ ದೇಶದ್ಯಾಂತ ಸುಮಾರು 14 ಕೋಟಿ ಮಂದಿಯನ್ನು ರೋಗ ತಪಸಾಣೆಗ ಒಳಪಡಿಸಲಾಗಿದ್ದು, ನಿನ್ನೆ ಒಂದೆ ದಿನ …

Read More »

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ. ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ. ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ …

Read More »

ವಾಟಾಳ್ ನಾಗರಾಜ್ ಇಂದು ಹೈವೇ ಬಂದ ಮಾಡ್ತಾರಂತೆ ಬೆಳಗಾವಿಯಲ್ಲಿ

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್  ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ಇಂದು  ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ …

Read More »

ಒನ್ ನೇಷನ್, ಒನ್ ಎಲೆಕ್ಷನ್: ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಒನ್ ನೇಷನ್, ಒನ್ ಎಲೆಕ್ಷನ್ ಬಗ್ಗೆ ಮಾತನಾಡಿದ್ದು, ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಇದರಿಂದ ಆಗಾಗ್ಗೆ ನಡೆಯುವ ಮತದಾನದಿಂದಾಗಿ ಪ್ರತಿ ಕೆಲ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಹೇಳಿದ್ದಾರೆ. ಅಖಿಲ ಭಾರತ ಅಧಿಕಾರಿಗಳ 80ನೇ ಸಮಾವೇಶದ ಅಂತಿಮ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಒಂದು …

Read More »

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ.

ಹೊಸದಿಲ್ಲಿ : ಗುರುಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆಂದು ಹರ್ಯಾಣ ಪೊಲೀಸರು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರನ್ನು ವಶಪಡಿಸಿಕೊಂಡ ಬೆನ್ನಲ್ಲೇ ಯಾದವ್ ಅವರು ಮಹತ್ವದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ. “ಇದೊಂದು ವಿಚಿತ್ರ ಸಾಂಕ್ರಾಮಿಕ,” ಎಂದು ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ನೇತೃತ್ವದ …

Read More »

ಸ್ಯಾಂಡಲ್‍ವುಡ್ ಅಂಗಳದಲ್ಲಿ ಮತ್ತೊಂದು ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಿದ್ಧವಾಗಿದೆ

ಸ್ಯಾಂಡಲ್‍ವುಡ್ ಅಂಗಳದಲ್ಲಿ ಮತ್ತೊಂದು ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಿದ್ಧವಾಗಿದೆ. ಕಳೆದು ಹೋದ ಘಟನೆಗಳ ಜೊತೆ ವಾಸ್ತವವನ್ನು ತಿಳಿಸಲು ಬರುತ್ತಿರುವ ಈ ಚಿತ್ರದ ಹೆಸರು ‘ಗಡಿಯಾರ’. ಪ್ರಬಿಕ್ ಮೊಗವೀರ್ ನಿರ್ದೇಶನದ ‘ಗಡಿಯಾರ’ ಸಿನಿಮಾ ಕೋವಿಡ್ ಅನ್‍ಲಾಕ್ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿರುವ ಎರಡನೇ ಚಿತ್ರ. ಇದೇ ವಾರ ನವೆಂಬರ್ 27ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಲಾಕ್‍ಡೌನ್ ಬಳಿಕ ಚಿತ್ರದ ತುಣುಕುಗಳ ಮೂಲಕ ಸದ್ದು ಮಾಡುತ್ತಿದ್ದ ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಗರಿಗೆದರಿದೆ. …

Read More »

ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ,:ಕರವೇ ಪ್ರತಿಭಟನೆ ನಿರ್ಧಾರ

ಬೆಂಗಳೂರು, ನ.26- ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ, ಸರ್ಕಾರದ ದುಡುಕಿನ ನಿರ್ಧಾರ ಹಾಗೂ ಅಸಾಂವಿಧಾನಿಕ ತೀರ್ಮಾನವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ವಿರೋಸುತ್ತದೆ ಎಂದು ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಸಿ ಕರ್ನಾಟಕ ಬಂದ್‍ಗೆ ಕನ್ನಡ ಒಕ್ಕೂಟ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರಕ್ಷಣಾ ವೇದಿಕೆ ರಾಜ್ಯ ಪದಾಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಂದ್‍ಗೆ ಬೆಂಬಲ ನೀಡುವುದಾಗಿ …

Read More »

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು: ಎಂ.ಜಿ.ಹಿರೇಮಠ ಎಚ್ಚರಿಕೆ

ಬೆಳಗಾವಿ: ದಂಡ ವಿಧಿಸಿದ ಬಳಿಕವೂ ನಿಯಮಾವಳಿ ಮೀರಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದರ ಜತೆಗೆ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಕೋಟ್ಪಾ ಕಾಯ್ದೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು …

Read More »