ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ …
Read More »ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.
ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ …
Read More »ಮಸ್ಕಿ ಯಲ್ಲಿ ಬೃಹುತ ಕಾಂಗ್ರೆಸ್ ಸಮಾವೇಶ ಎಲ್ಲ ಹಿರಿಯ ನಾಯಕರು ಭಾಗಿ
ಮಸ್ಕಿ: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23ರಂದು ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸುಮಾರು 7 ಸಾವಿರ ಆಸನಗಳನ್ನು ಹಾಕಲಾಗುತ್ತಿದ್ದು, ಪೆÇಲೀಸ್ ಠಾಣೆ ಪಕ್ಕದ ಜಾಗದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದೆ. ಸುಮಾರು ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು …
Read More »ಬೇಗ್ ಮೇಲಿರುವ ಆರೋಪ ಏನು?
ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣದ ಜೊತೆ ಬೆಲೆಬಾಳುವ ಐಷಾರಾಮಿ ವಸ್ತುಗಳು, ಕಾರುಗಳನ್ನು ಗಿಫ್ಟ್ ಪಡೆದಿರುವ ಗಂಭೀರ ಆರೋಪ ರೋಷನ್ ಬೇಗ್ ಮೇಲಿದೆ. ಐಎಂಎ ತನಿಖೆಗಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿತ್ತು. ಐಎಂಎ ನಿರ್ದೇಶಕರು ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಎಸ್ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲೇ ಬೆಂಗಳೂರಿನ ಅಂದಿನ ಜಿಲ್ಲಾಧಿಕಾರಿ ಶಂಕರ್, ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ. ನಾಗರಾಜ್ …
Read More »ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ.
ಕಾರವಾರ: ಇನ್ನು ಹೆಸರಿಡದ ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ. ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲಗೋಡ್ಲುವಿನಲ್ಲಿ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್.ವೈ (28) ಹಾಗೂ ವಾಣಿಯವರ ಇನ್ನೂ ಹೆಸರಿಡದ 11 ತಿಂಗಳ ಗಂಡು ಮಗು …
Read More »ಲಾಕ್ಡೌನ್ ಬಳಿಕ ಮಾಲ್ಡಿವ್ಸ್ ನಟಿ ಮಣಿಯರ ಹಾಟ್ಸ್ಪಾಟ್
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …
Read More »ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ
ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …
Read More »ಇಂದು ರಾಜ್ಯದಲ್ಲಿ 1,704 ಮಂದಿಗೆ ಸೋಂಕು13 ಮಂದಿ ಮೃತ
ಬೆಂಗಳೂರು: ಇಂದು ರಾಜ್ಯದಲ್ಲಿ 1,704 ಮಂದಿಗೆ ಸೋಂಕು ತಗುಲಿದ್ದು, 1,537 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8,73,046ಕ್ಕೆ ಏರಿಕೆಯಾಗಿದೆ. ಈ ಪೈಕಿ 8,36,505 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,868 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,654 ಮಂದಿ ಸೋಂಕಿಗೆ ಮೃತಪಟ್ಟಿದ್ದು, 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಟ್ಟು 20,399 ಆಂಟಿಜನ್ ಟೆಸ್ಟ್, 1,06,505 ಆರ್ಟಿ …
Read More »ಪೊಲೀಸ್ ಪೇದೆಗಳ ನೇಮಕಾತಿಯ ಅರ್ಹತಾ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಯೊರ್ವ ಪತ್ತೆಯಾದ ಪ್ರಕರಣ ಬೆಳಕಿಗೆ
ಹುಬ್ಬಳ್ಳಿ: ಪೊಲೀಸ್ ಪೇದೆಗಳ ನೇಮಕಾತಿಯ ಅರ್ಹತಾ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಯೊರ್ವ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಪರೀಕ್ಷಾ ಕೇಂದ್ರದಲ್ಲಿ ನಕಲಿ ಅಭ್ಯರ್ಥಿ ಪರವಾಗಿ ಅಸಲಿ ಪೊಲೀಸ್ ಪೇದೆ ಪರೀಕ್ಷೆ ಬರೆಯುವ ವೇಳೆ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ಹುಬ್ಬಳ್ಳಿ ಧಾರವಾಡದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಪೊಲೀಸ್ ಪೇದೆಯೋರ್ವ ಬೇರೆ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ನಕಲಿ ಅಭ್ಯರ್ಥಿ ಪರವಾಗಿ ಪರೀಕ್ಷೆ ಬರೆಯುತ್ತಿದ್ದ …
Read More »ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕದ್ದೊಯ್ದ ಕಳ್ಳರು
ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕಳ್ಳರು ಕದ್ದೊಯ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಶೋಕ ನಗರದ ಮೃತ್ಯುಂಜಯ ಬಸಣ್ಣಪ್ಪ ಬೆಲದ್ ಹಾಗೂ ರಾಮತೀರ್ಥ ನಗರದ ಉದ್ಯಮಿ ಅನಿಲ್ ಪಾಟೀಲ್ಗೆ ಸೇರಿದ ಇನ್ನೋವಾ ಕ್ರಿಸ್ಟಾ ಕಾರನ್ನು ಕಳ್ಳರು ಹೈಟೆಕ್ ಟೆಕ್ನಿಕ್ ಬಳಸಿ ಕಳ್ಳತನ ಮಾಡಿದ್ದಾರೆ. ಹೈಟೆಕ್ ಕಳ್ಳರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗೆ ಕಳ್ಳತನ? ಕಾರಿನ ಗ್ಲಾಸ್ ಒಡೆಯದೆ ಕಳ್ಳರು ಕಾರಿನ …
Read More »
Laxmi News 24×7