ಬೆಳಗಾವಿ: ಧಾರವಾಡದಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮಾರ್ಗ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಮುಖಂಡರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ರೈತರಿಗೆ ಬೆಂಬಲ ಸೂಚಿಸಿದರು. ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಯೋಗ್ಯ ಹಾಗೂ ನ್ಯಾಯಯುತವಾದ ಪರಿಹಾರವನ್ನು ನಿಗದಿಪಡಿಸಬೇಕು ಎಂದು ಈ …
Read More »ತಾಡಪತ್ರಿ ಕೆಳಗೆ ವಾಸಿಸುತ್ತಿದ್ದ ಸಹೋದರಿಯರಿಗೆ ಅನಿಲ ಬೆನಕೆ ಸಹಾಯ
ಬೆಳಗಾವಿ: ಹಲವು ದಿನಗಳಿಂದ ಪ್ಲಾಸ್ಟಿಕ್ ತಾಡಪತ್ರಿಗಳ ಅಡಿಯಲ್ಲಿ ವಾಸಿಸುತ್ತಿದ್ದ ಇಬ್ಬರು ವೃದ್ಧ ಸಹೋದರಿಯರಿಗೆ ಮಾಜಿ ಶಾಸಕ ಅನಿಲ್ ಬೆನಕೆ ಅವರ ನೇತೃತ್ವದಲ್ಲಿ ಪುನರ್ವಸತಿ ಕಲ್ಪಿಸಲಾಯಿತು. ಕ್ಯಾಂಪ್ ಪ್ರದೇಶದ ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಬೊಗಾರ ವೇಸ್ ಪ್ರದೇಶದಲ್ಲಿ ಹಲವು ದಿನಗಳಿಂದ ಪ್ಲಾಸ್ಟಿಕ್ ತಾಡಪತ್ರಿಗಳ ಅಡಿಯಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ವಾಸಿಸುತ್ತಿದ್ದ ಇಬ್ಬರು ವೃದ್ಧ ಸಹೋದರಿಯರನ್ನು ಸುರಕ್ಷಿತ ಸ್ಥಳಕ್ಕೆ ಪುನರ್ವಸತಿ ಮಾಡಲಾಯಿತು. ನಿರಂತರ ಮಳೆಯಿಂದಾಗಿ ಅವರ ಜೀವನವು ಹೆಚ್ಚು ಕಷ್ಟಕರವಾಗಿತ್ತು. ಈ …
Read More »ಬೆಳಗಾವಿಯ ಕಲ್ಲೋಳದ ದತ್ತ ಮಂದಿರ ಜಲಾವೃತ
ಬೆಳಗಾವಿ: ಕರ್ನಾಟಕದ ಗಡಿ ಭಾಗದ ಕೃಷ್ಣಾ ನದಿ ತಿರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ದತ್ತ ಮಂದಿರವು ಸಂಪೂರ್ಣವಾಗಿ ಜಲಾವೃತಗೊಂಡು ಭಕ್ತರಿಗೆ ನಿಷೇದ ಹೆರಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಸದ್ ಕೃಷ್ಣಾ ನದಿಗೆ ಬರೋಬ್ಬರಿ 1 ಲಕ್ಷ 35 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು …
Read More »ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು
ಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಬುಧವಾರ ಮುಂಜಾನೆ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಕನ್ನಡ ಸಂಘಟನೆಗಳು ಸುದೀರ್ಘವಾಗಿ ಚರ್ಚಿಸಿದವು. ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ನಡೆದ ಚರ್ಚೆಗಳು, ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ ನೂರು ದಿನಗಳಿಂದಲೂ ನಡೆದಿರುವ …
Read More »ಘಟಪ್ರಭಾ ನದಿಯ ಒಳಹರಿವು ಹೆಚ್ಚಳ: ಸೇತುವೆ ಜಲಾವೃತ, ಹಲವು ಗ್ರಾಮಗಳ ಸಂಪರ್ಕ ಕಡಿತ
ಬೆಳಗಾವಿ: ಸತತ ಮಳೆಯಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅವರಾದಿ ಬಳಿಯ ಬ್ರಿಡ್ಜ್ ಕಂ ಬ್ಯಾರೆಜ್ ಜಲಾವೃತಗೊಂಡಿದೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ ಸೇತುವೆಗಳು ಜಲಾವೃತವಾಗುವ ಸಾಧ್ಯತೆಗಳು ಇವೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾದಾಗ ತಾಲ್ಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ …
Read More »E20 ಪೆಟ್ರೋಲ್ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ ಸವಾಲು
ನವದೆಹಲಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಟೀಕೆಗಳ ಮಧ್ಯೆ ಇ20 ಪೆಟ್ರೋಲ್ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸವಾಲು ಹಾಕಿದ್ದಾರೆ. ಮಂಗಳವಾರ ವಿಕಸಿತ್ ಭಾರತ್ ಕಾನ್ಕ್ಲೇವ್ನಲ್ಲಿ ಮಾತನಾಡಿದ ಅವರು, ಎಥನಾಲ್ ಮಿಶ್ರಿತ ಪೆಟ್ರೋಲ್ ಬಗ್ಗೆ ತಪ್ಪು ಮಾಹಿತಿ ಮತ್ತು ಸುಳ್ಳು ಪ್ರತಿಪಾದನೆಗಳು ಹರಡಲಾಗುತ್ತಿದೆ ಎಂದು ಆರೋಪಿಸಿದರು. ಇ20 ಪೆಟ್ರೋಲ್ನಿಂದ ಸಮಸ್ಯೆ ಎದುರಿಸುತ್ತಿರುವ …
Read More »ವೈದ್ಯರ ಮೇಲೆ ಹಲ್ಲೆ – ಶಿವಸೇನೆ ಕಾರ್ಪೊರೇಟರ್ ಸೇರಿ ಆರು ಮಂದಿ ವಿರುದ್ಧ FIR, ಮೂವರ ಬಂಧನ
ಮುಂಬೈ: ಇಲ್ಲಿನ ಥಾಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಶಿವಸೇನೆ ಕಾರ್ಪೊರೇಟರ್ ಸೇರಿ ಆರು. ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ ಶಿವಸೇನೆ ಕಾರ್ಪೊರೇಟರ್ ರಮೇಶ್ ಸುಕ್ರಿಯಾ ಮಹಾತ್ರೆ ಹಾಗೂ ಅವರ ಐವರು ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಗರ್ಭಿಣಿಯೊಬ್ಬರಿಗೆ ಹೆರಿಗೆ ಬಳಿಕ ಜನಿಸಿದ ಶಿಶುವಿನ ಆರೋಗ್ಯ ಗಂಭೀರವಾಗಿತ್ತು. ಥಾಣೆಯ ಡೊಂಬಿವ್ಲಿಯಲ್ಲಿರುವ ಕಲ್ಯಾಣ-ಡೊಂಬಿವ್ಲಿ …
Read More »11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್ಕೌಂಟರ್ಗೆ ಆರೋಪಿ ಬಲಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ನಡೆದಿದ್ದ 11 ವರ್ಷದ ಅಪ್ರಾಪ್ತ ಬಾಲಕಿಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ರಾಜ್ಯಾದ್ಯಂತ ಭಾರಿ ಆಕ್ರೋಶ ಮೂಡಿಸಿದ್ದ ಈ ಘಟನೆಯ ಪ್ರಮುಖ ಆರೋಪಿಯ ಪ್ರವಾಶ್ ಮೊಂಡಲ್ನನ್ನು ತನಿಖೆಯ ಭಾಗವಾಗಿ ಸ್ಥಳ ಮಹಜರಿಗೆ ಕರೆದೊಯ್ದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಆರೋಪಿ …
Read More »ಸಿ.ಟಿ. ರವಿ ಮೊದಲು ವಾಯ್ಸ್ ಸ್ಯಾಂಪಲ್ ಕೊಟ್ಟು ಆಮೇಲೆ ಮಾತನಾಡಲಿ: ಪ್ರಿಯಾಂಕ್ ತಿರುಗೇಟು
ಬೆಂಗಳೂರು: ಸಿ.ಟಿ. ರವಿ ಅವರು ಮೊದಲು ತಮ್ಮ ವಾಯ್ಸ್ ಸ್ಯಾಂಪಲ್ ನೀಡಿ, ಆ ಬಳಿಕ ಬೇರೆಯವರ ಬಗ್ಗೆ ಮಾತನಾಡಲಿ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆಖಾರವಾಗಿ ತಿರುಗೇಟು ನೀಡಿದ್ದಾರೆ. ತೇಜಸ್ ಗೌಡ ( ಅವರ ಮನೆಗೆ ಗೃಹ ಸಚಿವರೇ ಪೊಲೀಸರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಾರೆ ಎಂಬ ಸಿ.ಟಿ. ರವಿ ಅವರ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಬಿಜೆಪಿಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಿ.ಟಿ. ರವಿ, …
Read More »ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಪೋಷಕರಿಂದ ವಾರ್ಡನ್ಗೆ ಥಳಿತ
ಚಿಕ್ಕಬಳ್ಳಾಪುರ: ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಅತಿಯಾದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ಗುರುಕಿರಣ್ ಮೃತ ವಿದ್ಯಾರ್ಥಿ. ಆತ ಕಾಡಯರಪ್ಪನಹಳ್ಳಿ ಬಳಿಯ ಸ್ಟರ್ಲಿಂಗ್ ಇಂಗ್ಲಿಷ್ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು (ಜು.8) …
Read More »
Laxmi News 24×7