Breaking News

Uncategorized

ಕೇರಳ ಪೊಲೀಸ ದೌರ್ಜನ್ಯಕ್ಕೆ ಕರ್ನಾಟಕ ಭಕ್ತರು ಕಂಗಾಲುನೆಗೆಟಿವ್ ಬಂದ್ರು ಕನ್ನಡಿಗರಿಗಿಲ್ಲ ಅಯ್ಯಪ್ಪನ ದರ್ಶನ ಭಾಗ್ಯ

ಬೆಂಗಳೂರು: ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಮಾಲೆ ಧರಿಸಿ ತಮ್ಮ ಕಷ್ಟ ಕಾರ್ಪಣ್ಯವನ್ನು ನೀಗಿಸು ತಂದೆ ಎಂದು ಕೇರಳದ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಮಾಡುವ ಕನ್ನಡದ ಭಕ್ತರಿಗೆ ಕೊರೊನಾ ವಿಚಾರದಲ್ಲಿ ಸಮಸ್ಯೆ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೆಲ ಸ್ವಾಮಿ ಭಕ್ತರು ಶಬರಿಮಲೆಯ ಅಯ್ಯಪ್ಪನನ್ನು ನೋಡಲು ಹೋದ ವೇಳೆ ಅಲ್ಲಿನ ಪೊಲೀಸರು ತಡೆ ಹಿಡಿದಿದ್ದಾರೆ. ಜೊತೆಗೆ ಕೊರೊನಾ ವರದಿ ನೆಗೆಟಿವ್ ಬಂದರೂ, ಅಯ್ಯಪ್ಪನ ಬೆಟ್ಟಕ್ಕೆ ಹೋಗಲು …

Read More »

ಶಾಸಕ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ

ಗೋಕಾಕ್: ಕನ್ನಡಪರ ಸಂಘಟನೆಗಳನ್ನು ‘ರೋಲ್‍ಕಾಲ್ ಹೋರಾಟಗಾರರು ಎಂದು ಕರೆದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಸ್ತೆ ತಡೆದು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಶಾಸಕ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಶಾಸಕ ಯತ್ನಾಳ್ ಒಬ್ಬ ಬ್ಲಾಕ್‍ಮೇಲ್ ಶಾಸಕನಿದ್ದಂತೆ, ಕನ್ನಡಪರ ಸಂಘಟನೆಗಳಿಗೆ ಅಪಮಾನ ಮಾಡುವ ಮೂಲಕ ಕರ್ನಾಟಕದ ಜನರಿಗೆ ಅಪಮಾನ ಮಾಡಿದ್ದಾರೆ. …

Read More »

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.

ಬೆಳಗಾವಿ : ಗೋಕಾಕ ತಾಲ್ಲೂಕಿನ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಎಸ್.ಟಿ.ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.

Read More »

ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಚನ್ನರಾಜ ಹಟ್ಟಿಹೊಳ್ಳಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯಲ್ಲ ಎಂಬ ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಿತಿ ಸಭೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಇನ್ನು ಅಂತಿಮ ಆಗಿಲ್ಲ. ಸಮಿತಿ ಅಧ್ಯಕ್ಷರು ಹೇಳಿದ ರೀತಿಯಲ್ಲಿ  ಒಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. …

Read More »

ಗೋಕಾಕ ಜನತೆಯ ರೈತರ ಪಾಲಿಗೆ ಖುಷಿ ವಿಚಾರ ಕೊಟ್ಟ ಸಾಹುಕಾರರು

ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು …

Read More »

ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …

Read More »

‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್

ಚೆನ್ನೈ, ನ 21: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್ ನಲ್ಲಿದೆ. ಅಮಿತ್ ಶಾ ಭೇಟಿಯ ವಿರುದ್ದ ತರಹೇವಾರಿ ಮೀಮ್ಸ್, ಕಾಮೆಂಟುಗಳು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಇದಕ್ಕೆ ಕೌಂಟರ್ ಕೊಡುವ ಪೆÇೀಸ್ಟ್ ಗಳಿಗೂ ಬರವೇನೂ ಇಲ್ಲ. ನಿಮ್ಮ …

Read More »

ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ

ಲಕ್ನೋ: ಅಕ್ರಮವಾಗಿ ಮಾರುತ್ತಿದ್ದ ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‍ನ ಅಮಿಲಿಯಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ, ಸಾವನ್ನಪ್ಪಿದ ಎಲ್ಲರೂ ಸ್ಥಳೀಯವಾಗಿ ಅಂಗಡಿಯಲ್ಲಿ ಸಿಗುವ ಕಂಟ್ರಿ ಸರಾಯಿಯನ್ನು ಕುಡಿದ್ದಾರೆ. ಆ ಬಳಿಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಜೊತೆಗೆ 15 ಮಂದಿ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಯಾಗರಾಜ್ ಜಿಲ್ಲೆಯ …

Read More »

ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ :ಮಸ್ಕಿ ವಿಧಾನಸಭಾ ಕ್ಷೇತ್ರಜನ

ರಾಯಚೂರು: ಇಲ್ಲಿನ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆಯೇ ಘೋಷಣೆಯಾಗಿಲ್ಲ. ಅದಾಗಲೇ ಈ ಗ್ರಾಮದ ಜನ ಶಾಲೆಗಾಗಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಳೆದ ಬಾರಿ ಬಹಿಷ್ಕಾರಕ್ಕೆ ಮುಂದಾದಾಗ ಭರವಸೆ ಕೊಟ್ಟು ಸುಮ್ಮನಾಗಿಸಿದ್ರು. ಹೀಗಾಗಿ ರೊಚ್ಚಿಗೆದ್ದಿರೋ ಜನ ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ ಅಂತ ಎಚ್ಚರಿಸಿದ್ದಾರೆ. ಹೌದು. ರಾಯಚೂರಿನ ಮಸ್ಕಿ ತಾ. ಬುದ್ದಿನ್ನಿಯಲ್ಲಿ ಸುಂದರ ಪರಿಸರದಲ್ಲಿ ಭವ್ಯ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡ ಯಾವ ಶಾಲೆಗೆ ಎಂಬುದೇ …

Read More »

ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಗುಂಪು ಕಟ್ಟಿಕೊಂಡು ಹಲ್ಲೆ

ವಿಜಯಪುರ: ಟ್ರ್ಯಾಕ್ಟರ್‌ನಲ್ಲಿ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ ಘಟನೆ ವಿಜಯಪುರ ಜಿ. ಕಲಕೇರಿ ಗ್ರಾಮದಲ್ಲಿ ನಡೆದಿದೆ. ಈ ಮಾರಾಮಾರಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕಲಕೇರಿಯ ಬಾಷಾಸಾಬ್ ವಠಾರ್, ಮಹ್ಮದ್‍ನಾಸೀರ್, ಮಹ್ಮದ್ ಶರೀಫ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಲಕೇರಿಯ ಮಹ್ಮದ್ ಶರೀಫ್ ಬಡೇಘರ್, ಹುಸೇನ್ ಬಡೇಘರ್, ರಫೀಕ್ ಸೇರಿದಂತೆ 12ಕ್ಕೂ ಅಧಿಕ ಜನರಿಂದ ಹಲ್ಲೆ ನಡೆದಿದೆ.ಟ್ರ್ಯಾಕ್ಟರ್‌ನಲ್ಲಿ ಜೋರಾದ ಸೌಂಡ್ ಮೂಲಕ ಡಿಜೆ ಸಾಂಗ್ …

Read More »