Breaking News

Uncategorized

ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ:ಕ. ರ, ವೇ.ದೂಪದಾಳ

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ದೂಪದಾಳ ಕಾರ್ಯಕರ್ತರು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು ಘಟಪ್ರಭಾ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಸುಮಾರು ಹತ್ತು ನಿಮಿಷಗಳ ಕಾಲ ರಾಜ್ಯ ಹೆದ್ದಾರಿ ತಡೆದರು ಹಾಗೂ ಘಟಪ್ರಭಾ ಪಿಎಸ್ಆಯ್ ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೂಪದಾಳ …

Read More »

ಶಶಿಕಲಾ ಜೊಲ್ಲೆ51ನೇ ಹುಟ್ಟು ಹಬ್ಬನೇಸರಗಿ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ 53ನೇ ನೂತನ ಶಾಖೆಯ ಉದ್ಘಾಟನೆ

ನೇಸರಗಿ :ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.,ಯಕ್ಸಂಬಾ. ಶಾಖೆ ನೇಸರಗಿ 53ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಜಡಿಸಿದ್ದೇಶ್ವರ …

Read More »

ಯತ್ನಾಳ್‍ಗೆ ನಾರಾಯಣಗೌಡರ 2 ಸಾವಲು

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಸಂಬಂಧಿಸಿದಂತೆ ‘ರೋಲ್‍ಕಾಲ್ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್ ಮಾಡುತ್ತಾರೋ ನೋಡೋಣ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಯತ್ನಾಳಗೆ ಎರಡು ಸವಾಲುಗಳನ್ನು ಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಶಾಸಕ ಬಸವನಗೌಡ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ ಶೀಘ್ರ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಕೇಸ್..!

ಬೆಂಗಳೂರು,ನ.- ಸ್ಮಾರ್ಟ್ ಯೋಜನೆಯಡಿ ಬೆಂಗಳೂರಿನಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿದ್ದರೆ ಅಂತಹ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ. ನಗರದ ಬೇರೆ ಬೇರೆ ಇಂದು ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಭೇಟಿ ಕೊಟ್ಟು ನಂತರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಫೆನ್ಸ್‍ರಸ್ತೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಅವರು ಈವರೆಗೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ.ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ …

Read More »

ಸಚಿವ ಸ್ಥಾನಕ್ಕೆ ಫುಲ್ ಫೈಟಿಂಗ್.ಯಾರು ಇನ್ ಯಾರು ಔಟ್….?

ಬೆಂಗಳೂರು :-ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ತಮ್ಮನ್ನು ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿದ್ದ ಶಾಸಕರ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಪುಟಕ್ಕೆ ನಮ್ಮನ್ನು ಪರಿಗಣಿಸಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಶಂಕರ್ ಪಟೇಲ್ ಮುನೇನಕೊಪ್ಪ, ಲಿಂಗಣ್ಣ ಸೇರಿದಂತೆ ಮತ್ತಿತರರ ನಿಯೋಗ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರನ್ನು …

Read More »

ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?

ಚಾಮರಾಜನಗರ: ಸಿಎಂ ಯಡಿಯೂರಪ್ಪ ಮೂಢನಂಬಿಕೆಗೆ ಕಟ್ಟುಬಿದ್ದಿದ್ದಾರಾ? ಹೌದು ಹೀಗೊಂದು ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾರಣ ಅಧಿಕಾರ ವಹಿಸಿಕೊಂಡು 16 ತಿಂಗಳು ಕಳೆದರು ಸಿಎಂ ಚಾಮರಾಜನಗರದತ್ತ ತಲೆ ಹಾಕಿಲ್ಲ. ಆದರೆ ಇದೇ ತಿಂಗಳು 25ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಯಡಿಯೂರಪ್ಪ ಚಾಮರಾಜನಗರಕ್ಕೆ ಭೇಟಿ ನೀಡುತ್ತಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ. 2008ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸುಮಾರು ಮೂರು ವರ್ಷ …

Read More »

ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

ಮೈಸೂರು: ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದಾರೆ.ದೀಪಾವಳಿ ಮಗಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಸಹ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

Read More »

ಆರೋಗ್ಯ ಇಲಾಖೆ ಎಡವಟ್ಟಿನಿಂದ ಕಾಲೇಜು ತರಗತಿಗಳು ಮಾತ್ರ ಇನ್ನೂ ಆರಂಭವಾಗಿಲ್ಲ. ರಿಪೋರ್ಟ್ ಸಿಗದೆ ಪರದಾಟ

ಯಾದಗಿರಿ: ಕೊರೊನಾ ಮಹಾಮಾರಿ ಆತಂಕ ನಡುವೆಯೆ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪದವಿ ಕಾಲೇಜುಗಳನ್ನು ಆರಂಭ ಮಾಡಿದೆ. ಆದರೆ ಆರೋಗ್ಯ ಇಲಾಖೆ ಎಡವಟ್ಟಿನಿಂದ ತರಗತಿಗಳು ಮಾತ್ರ ಇನ್ನೂ ಆರಂಭವಾಗಿಲ್ಲ. ಹೌದು. ಯಾದಗಿರಿ ಜಿಲ್ಲೆಯ ಪದವಿ ಕಾಲೇಜುಗಳ ಆವರಣದಲ್ಲಿ ವಿದ್ಯಾರ್ಥಿಗಳನ್ನು ಮರದ ಕೆಳಗೆ, ಕಾಲೇಜು ಮುಂದಿನ ಕಟ್ಟೆಯ ಮೇಲೆ, ಕಾಲೇಜು ಗೇಟ್ ಬಳಿ ಸಿಬ್ಬಂದಿ ಸ್ಟಾಪ್ ಮಾಡುತ್ತಿದ್ದಾರೆ. ಈ ಹಿಂದೆ ಜನರ ಕೊರೊನಾ ಟೆಸ್ಟ್ ವರದಿ ನೀಡುವಲ್ಲಿ ನಿಧಾನಗತಿ ಅನುಸರಿಸಿ ಜನರ …

Read More »

ಐಎಎಸ್‌ ಟಾಪರ್‌ ಜೋಡಿಯಿಂದ ವಿಚ್ಛೇದನಕ್ಕೆ ಅರ್ಜಿ……

ಜೈಪುರ: 2015ನೇ ಸಾಲಿನ ಐಎಎಸ್‌ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಟೀನಾ ಡಾಬಿ ಹಾಗೂ ಅವರ ಪತಿ ಅಥರ್‌ ಖಾನ್‌ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೇಮಿಗಳಾಗಿದ್ದ ಇಬ್ಬರು 2018ರಲ್ಲಿ ಮದುವೆಯಾಗಿದ್ದರು. ಈಗ ದಂಪತಿ ಪರಸ್ಪರ ಒಪ್ಪಿಗೆಯ ಮೇರೆಗೆ ಜೈಪುರ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆ ಟೀನಾ ಡಾಬಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ʼಖಾನ್‌ʼ ಸರ್‌ ನೇಮ್‌ ತೆಗೆದು ಹಾಕಿದ್ದರು. ಅಥರ್‌ ಖಾನ್‌ ಅವರು ಇನ್‌ಸ್ಟಾಗ್ರಾಮ್‌ನಲ್ಲಿ …

Read More »

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಪ್ರಯಾಣಿಕರೊಬ್ಬರು ಮೃತ

ಧಾರವಾಡ: ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲ್ಲೂಕಿನ ಬದ್ರಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಓಂಕಾರ ಗೊಂದಕರ(25) ಮೃತ ದುರ್ದೈವಿ. ಬಳ್ಳಾರಿಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಣ್ಣಿಗೇರಿ ಬಳಿಯ ಬದ್ರಾಪುರದ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಣ್ಣಿಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »