Breaking News

Uncategorized

ಬೆಂಗಳೂರಿನಲ್ಲಿ ಟಗರು ಬೆಟ್ಟಿಂಗ್ ಭರಾಟೆ ಜೋರು- ಹಳ್ಳಿ ಕ್ರೇಜ್ ಸಿಟಿಗೆ ಶಿಫ್ಟ್

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಸಮಯದಲ್ಲೇ ಟಗರು ಆಟ ಜೋರಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದ ಟಗರು ಬೆಟ್ಟಿಂಗ್ ಕ್ರೇಜ್ ಈಗ ನಗರಕ್ಕೆ ಶಿಫ್ಟ್ ಆಗಿದೆ. ಕೆಲಸ ಇಲ್ಲದ ಯುವಕರು ಟಗರು ಆಟದ ಮೂಲ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜಯನಗರ ಸೇರಿದಂತೆ ನಗರದ ಹಲವು ಕಡೆ ಈಗ ಟಗರು ಕಾಳಗ ಸಖತ್ ಕ್ರೇಜ್ ಸೃಷ್ಟಿಸಿದೆ. ಹೊಡಿ ಮಗಾ ಅನ್ನೋ ಟೀಂ ಇದ್ರಲ್ಲಿ ಸಕ್ರೀಯ ಆಗಿದೆ. ಆದರೆ …

Read More »

ಭಿಕ್ಷುಕನ ಬಳಿ ಇದ್ದ ಕೊಳಕು ಬಟ್ಟೆ ಗಂಟು ಎಸೆಯುವಾಗ ಕಂತೆ ಕಂತೆ ಹಣ ಪತ್ತೆ

ಬೆಂಗಳೂರು: ಅಂಗವಿಕಲ ಭಿಕ್ಷುಕನ ಬಳಿ ಇದ್ದ ಕೊಳಕು ಬಟ್ಟೆ ಗಂಟು ಎಸೆಯುವಾಗ ಕಂತೆ ಕಂತೆ ಹಣ ಪತ್ತೆಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರತಿದಿನ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅಂಗವಿಕಲ ರಂಗಸ್ವಾಮಯ್ಯ ಬಳಿ ಹಣ ಪತ್ತೆಯಾಗಿದೆ. ರಂಗಸ್ವಾಮಯ್ಯ ಭಿಕ್ಷೆ ಬೇಡಿದ ಹಣ ಹಾಗೂ ಅಂಗವಿಕಲ ವೇತನವನ್ನೂ ಬಳಸದೆ ಹಣವನ್ನು ಕೂಡಿಟ್ಟಿದ್ದು, ಸುಮಾರು 60 ಸಾವಿರ ರೂ. ಗಂಟಿನಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಹಲವು ತಿಂಗಳುಗಳಿಂದ ಸಾನ್ನವಿಲ್ಲದೇ …

Read More »

ನಿರ್ವಹಣೆ ಇಲ್ಲದೆ ರೈತರಿಗೆ ಉಪಯೋಗಕ್ಕಿಂತ ಅಪಾಯವನ್ನೇ ತಂದೊಡ್ಡುತ್ತಿದೆ ಈ ಚೆಕ್ ಡ್ಯಾಮ್

ಕಾರವಾರ; ಒಂದು ಚೆಕ್ ಡ್ಯಾಮ್ ನಿರ್ಮಾಣ ಮಾಡೋದು ಆ ಭಾಗದ ರೈತರಿಗೆ ವರದಾನವಾಗಲಿ. ಅಲ್ಲಿನ ಕೃಷಿ ಭೂಮಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗಲಿ ಎನ್ನುವ ನಿಟ್ಟಿನಲ್ಲಿ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಗ್ರಾಮೀಣ ಭಾಗದಲ್ಲೊಂದು ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗಿದೆ. ಇದರ ನಿರ್ವಹಣೆ ಸರಿಯಾಗಿ ಆಗದ ಕಾರಣ ಅಲ್ಲಿನ ಕೃಷಿ ಭೂಮಿಗೂ ಇದರ ನೀರು ಪೂರೈಕೆ ಆಗುತ್ತಿಲ್ಲ. ಬದಲಾಗಿ ಈ ಡ್ಯಾಮ್​ನಿಂದ ಅನೇಕ ಸಮಸ್ಯೆಗಳೇ ರೈತರಿಗೆ ಎದುರಾಗುತ್ತಿದೆ. ಇದು …

Read More »

ಸರ್ಕಾರ ಒಪ್ಪಿದ್ರೆ ಸದ್ಯದಲ್ಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗೆ ಅವಕಾಶ ನೀಡಲಾಗುವುದು.

ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ ಕೆಲವೊಂದು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಸೆಪ್ಟೆಂಬರ್ 1 ರಿಂದ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ಮೂಲಕ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಾಮೂಲಿ ಪೂಜೆ ನಡೆಯಲಿದೆ. ಅದು ಕೂಡ ಕೊರೊನಾ ಮಾರ್ಗಸೂಚಿ ಅನ್ವಯವೇ ಎಲ್ಲಾ ಸೇವೆಗಳು ಲಭ್ಯವಾಗಲಿವೆಹೀಗಾಗಿ ಸೆಪ್ಟೆಂಬರ್ 1ರಿಂದಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ …

Read More »

ರೈಲ್ವೆ ಬೈಸಿಕಲ್- ಇಂಡಿಯನ್ ರೈಲ್ವೆ ನೂತನ ಆವಿಷ್ಕಾರ

ನವದೆಹಲಿ: ಇಂಡಿಯನ್ ರೈಲ್ವೆ ಹೊಸ ರೈಲ್ವೆ ಬೈಸಿಕಲ್‍ನ್ನು ಆವಿಷ್ಕಾರಿಸಿದ್ದು, ರೈಲ್ವೆ ಟ್ರ್ಯಾಕ್ ಪರಿಶೀಲನೆ ಹಾಗೂ ರಿಪೇರಿ ಮಾಡುವ ಸಂದರ್ಭದಲ್ಲಿ ಸಿಬ್ಬಂದಿಗೆ ಸಹಕಾರಿ ಆಗಲಿದೆ. ಈ ಕುರಿತ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಜುಲೈನಲ್ಲಿ ಮಾಹಿತಿ ನೀಡಿ ಟ್ವೀಟ್ ಮಾಡಿದ್ದರು. ನೂತನವಾಗಿ ಅವಿಷ್ಕಾರಿಸಿರುವ ರೈಲ್ವೆ ಸೈಕಲ್ ಗಂಟೆಗೆ ಗರಿಷ್ಠ 15 ಕಿಮೀ ವೇಗದಲ್ಲಿ ತುಳಿಯಬಹುದಾಗಿದೆ. ಈಸ್ಟ್ ಕೋಸ್ಟ್ ರೈಲ್ವೆ ವಿಭಾಗ ಈ ರೈಲ್ವೆ ಸೈಕಲ್‍ಗಳನ್ನು ಅವಿಷ್ಕಾರಿಸಿದೆ. 30 ಕೆಜಿ ತೂಕವಿರುವುದರಿಂದ …

Read More »

ಮಕ್ಕಳಿಗೆ ಆರೋಗ್ಯ ಕಾರ್ಡ್‌; ಈ ವರ್ಷವೇ ಲಭ್ಯ ರಾಜೀವ್‌ ಗಾಂಧಿ ವಿ.ವಿ.ಯೋಜನೆ

ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಪತ್ರ ಸಾಮಾನ್ಯ. ಇನ್ನು ಅದರ ಜತೆ ಆರೋಗ್ಯದ ಮಾಹಿತಿಯನ್ನು ಒಳಗೊಂಡಿರುವ “ಆರೋಗ್ಯ ಕಾರ್ಡ್‌’ ಕೂಡ ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರೋಗ್ಯ ಕಾರ್ಡ್‌ ದೊರೆಯಲಿದೆ. ಕೊರೊನಾದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಅತಿಯಾದ ಗಮನ ಅಗತ್ಯವಾಗಿರುವುದರಿಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಸರಕಾರಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಸ್ವಾಸ್ಥ್ಯ ನಿಗಾವಣೆಗೆ ಯೋಜನೆ ಸಿದ್ಧಪಡಿಸಿದೆ. ಪ್ರತಿ ವಿದ್ಯಾರ್ಥಿಯ …

Read More »

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ …

Read More »

ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್​ದೀಪ್​ ಕುಮಾರ್ ಜೈನ್​ರನ್ನು ACB ಎಸ್​ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್​ವರನ್ನು CCBಯ ಡಿಸಿಪಿ ಗ್ರೇಡ್​ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್​ರನ್ನು CCB ಎಐಜಿ …

Read More »

ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ

ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್‌ ಪರೀಕ್ಷೆ ನಡೆಸಿದ ಪರಿಣಾಮ …

Read More »

ಬೆಳಗಾವಿ: 170 ಮಂದಿ ಗುಣಮುಖ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …

Read More »