ನವದೆಹಲಿ: ಇಂದು ಪ್ರಧಾನಿ ಮೋದಿಯವರು ತಮ್ಮ 70ವರ್ಷದ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ದೇಶ-ವಿದೇಶಗಳಿಂದ ಜನಸಾಮಾನ್ಯರು ಹಾಗೂ ಗಣ್ಯರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಇನ್ನೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು ಅಂತ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನವನ್ನು ಆಚರಿಸಲು ಬಿಜೆಪಿ ದೇಶಾದ್ಯಂತ …
Read More »ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬದ ಸಂಭ್ರಮ : ನೇಪಾಳ, ರಷ್ಯಾ ಅಧ್ಯಕ್ಷರಿಂದ ಶುಭಾಶಯ
ನವದೆಹಲಿ: ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯ ತಿಳಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿಗೆ ಪತ್ರ ಬರೆದು ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಗೌರವಕ್ಕೆ ಅರ್ಹ. ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ. ಭಾರತ ಮತ್ತು ರಷ್ಯಾ ಭಾಂದವ್ಯ ವೃದ್ದಿಸಲು …
Read More »ಜಿಲ್ಲಾಧಿಕಾರಿಗಳಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರ ಮನವಿ ಅರ್ಪಣೆ ಬೆಳಗಾವಿಗೆ ತೆರಳಿ ಮನವಿ ಮಾಡಿಕೊಂಡ ನಿರಾಶ್ರಿತರು
ಬೆಳಗಾವಿ : ಕಳೆದ ವರ್ಷ ಅಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹಾನಿಯಾದ ಮನೆಗಳ ಫಲಾನುಭವಿಗಳು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ನಿರಾಶ್ರಿತರು ಮನವಿ ಸಲ್ಲಿಸಿದರು. ಇಂದಿಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿದ ಅವಳಿ ತಾಲೂಕುಗಳ ನಿರಾಶ್ರಿತರು ನಿರಂತರ ಮಳೆ ಮತ್ತು ಘಟಪ್ರಭಾ ನದಿಯ ಭಾರಿ ಪ್ರವಾಹದಿಂದ ಸುಮಾರು 7861 ಮನೆಗಳು ಹಾನಿಯಾಗಿವೆ. 6225 ಮನೆಗಳು ಎ ವರ್ಗದಲ್ಲಿ …
Read More »ಇಸ್ರೇಲ್ನಲ್ಲಿ 1000 ವರ್ಷಗಳಷ್ಟು ಹಳೆಯದಾದ ಚಿನ್ನದ ನಾಣ್ಯಗಳು ಪತ್ತೆ..!
ಟೆಲ್ ಅವಿವ್ ,ಸೆ.20-ಇಸ್ರೇಲ್ನಲ್ಲಿ ಸುಮಾರು 1,000 ವರ್ಷಗಳಷ್ಟು ಹಳೆಯದಾದ ನೂರಾರು ಬಂಗಾರದ ನಾಣ್ಯಗಳು ಪತ್ತೆಯಾಗಿವೆ. ಈ ಕುರಿತು ಇಲ್ಲೊಂದು ವರದಿ. ಸಹಸ್ರಮಾನಕ್ಕೂ ಹೆಚ್ಚು ಕಾಲ ಮಣ್ಣಿನ ಪಾತ್ರೆಗಳಲ್ಲಿ ಬಚ್ಚಿಡಲಾಗಿದ್ದ ನೂರಾರು ಚಿನ್ನದ ನಾಣ್ಯಗಳ ಗುಪ್ತ ನಿಧಿಯೊಂದನ್ನು ಇಸ್ರೇಲಿ ಯುವಕರು ಪತ್ತೆ ಮಾಡಿದ್ದಾರೆ. ಈ ನಿಕ್ಷೇಪ ನಿಧಿಯನ್ನು ಇತ್ತೀಚೆಗೆ ಪತ್ತೆ ಮಾಡಲಾಗಿದೆ ಎಂದು ಇಸ್ರೇಲ್ ಆಂಟಿಕ್ವಿಟೀಸ್ ಅಥಾರಿಟಿ ತಿಳಿಸಿದೆ. ಹೊಸ ವಸತಿ ಪ್ರದೇಶವೊಂದರ ನಿರ್ಮಾಣ ಯೋಜನೆ ಕಾರ್ಯರೂಪಕ್ಕೆ ಬರಲಿರುವ ಮಧ್ಯ …
Read More »ಮಾದಕ ವಸ್ತು ಸಾಗಣೆ : ಆರೋಪಿಗೆ ಗುಂಡು, 7 ಕೆ.ಜಿ ಗಾಂಜಾ ವಶ
ಆನೇಕಲ್, :ಮಾದಕ ವಸ್ತು ಸಾಗಣೆ ಪ್ರಕರಣದಲ್ಲಿ ಬಂಧಿಸಲು ಹೋದ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿದಾಗ ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ತಗುಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಅಯೂಬ್ ಖಾನ್ ಬಂಧಿತ ಆರೋಪಿ. ಈತನಿಂದ 7 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಬಿದರಗುಪ್ಪೆ ಗ್ರಾಮದ ಬಳಿ ಕಳ್ಳಹಳ್ಳಿ ಗ್ರಾಮದ ನಿವಾಸಿ ಅಯೂಬ್ ಖಾನ್ ಗಾಂಜಾ ತೆಗೆದುಕೊಂಡು ಹೋಗುತ್ತಿದ್ದಾನೆಂಬ ಮಾಹಿತಿ ಅತ್ತಿಬೆಲೆ ಪೊಲೀಸರಿಗೆ ಲಭಿಸಿದೆ. ತಕ್ಷಣ ಅತ್ತಿಬೆಲೆ ಠಾಣೆ ಇನ್ಸ್ಪೆಕ್ಟರ್ ಸತೀಶ್, ಪಿಎಸ್ಐ …
Read More »ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ಸರಣಿ..!
ಬೆಂಗಳೂರು : ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಸಾಲದ ಸುಳಿಯಿಂದ ಹೊರಬರಲಾರದೆ ಅನ್ನದಾತರು ನೇಣಿನ ಪಾಶಕ್ಕೆ ಕೊರಳೊಡ್ಡುವುದು ಮುಂದುವರೆಯುತ್ತಲೇ ಇದೆ. ದುರಂತವೆಂದರೆ ರಾಜ್ಯದಲ್ಲಿ ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಏರಿಕೆ ಕಂಡ ರೈತರ ಆತ್ಮಹತ್ಯೆಸಾಲಮನ್ನಾ, ಬೆಳೆ ವಿಮೆ ಆಸರೆ ಇದ್ದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ರಾಜ್ಯದಲ್ಲಿ ನಿರಂತರವಾಗಿ ಅತಿವೃಷ್ಟಿ, ಅನಾವೃಷ್ಟಿಯ ಸಂಕಷ್ಟ ಎದುರಾಗುತ್ತದೆ. ಇದರ ಹೊಡೆತಕ್ಕೆ …
Read More »ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ
ಬೆಂಗಳೂರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ …
Read More »ಬೀದಿ ನಾಟಕ ಆರಂಭಿಸಲು ಕಲಾವಿದರ ಮನವಿ
ಬೆಳಗಾವಿ: ‘ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಅನುಕೂಲ ಕಲ್ಪಿಸಲು, ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳ ಜನ ಜಾಗೃತಿಗೆ ಬೀದಿ ನಾಟಕ ಕಾರ್ಯಕ್ರಮಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ಜಿಲ್ಲಾ ಘಟಕದವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ‘ರಾಜ್ಯದ 4,500 ಕಲಾವಿದರನ್ನು ದಶಕಗಳಿಂದಲೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ …
Read More »‘ಆರ್ಸಿಯುಗೆ ಜಾಗ: ಶ್ಲಾಘನೀಯ’
ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇವಾಡಿ ಸಮೀಪದಲ್ಲಿ ಜಾಗ ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವುದು ಶ್ಲಾಘನೀಯವಾಗಿದೆ’ ಎಂದು ಸಿಂಡಿಕೇಟ್ ಸದಸ್ಯ ಡಾ.ಆನಂದ ಹೊಸೂರ ಹೇಳಿದ್ದಾರೆ. ‘ಜಮೀನು ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ದಶಮಾನೋತ್ಸವ ಸಂದರ್ಭದಲ್ಲಿ ಸರ್ಕಾರವು ಈ ಭಾಗದ ಜನರಿಗೆ ಖುಷಿಯ ಸುದ್ದಿ ಕೊಟ್ಟಿದೆ. ಅನೇಕ ವರ್ಷಗಳಿಂದ ತಾಂತ್ರಿಕ ಕಾರಣಗಳಿಂದಾಗಿ ನನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳು ಮುಂದುವರಿಯುವುದಕ್ಕೆ ಅವಕಾಶ ಕೊಟ್ಟಂತಾಗಿದೆ. ಇದರೊಂದಿಗೆ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ …
Read More »ಪೂಜಾರಿ ಸಹೋದರಿಯರಿಗೆ ಸತ್ಕಾರ
ಐಗಳಿ: ‘ಬಡತನವಿದ್ದರೂ ಶೈಕ್ಷಣಿಕವಾಗಿ ಸಾಧನೆ ಮಾಡಬಹುದು ಎನ್ನುವುದಕ್ಕೆ ಪೂಜಾರಿ ಸಹೋದರಿಯರು ಸಾಕ್ಷಿಯಾಗಿದ್ದಾರೆ’ ಎಂದು ಜಿಲ್ಲಾ ಆಯುಷ್ ನಿವೃತ್ತ ಅಧಿಕಾರಿ ಡಾ.ಬಸಗೌಡ ಪಾಟೀಲ ಹೇಳಿದರು. ಇಲ್ಲಿ ಡಾ.ಪಾಟೀಲ ಸಹೋದರರು ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಟಾಳ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದ ಆದರ್ಶ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕವಿತಾ ಪೂಜಾರಿ (587) ಮತ್ತು ಸಹೋದರಿ ದ್ವಿತೀಯ ಪಿಯುಸಿಯಲ್ಲಿ 560 ಅಂಕ ಪಡೆದ ಶಿಲ್ಪಾ ಪೂಜಾರಿ ಅವರನ್ನು ಸತ್ಕರಿಸಿ ಮಾತನಾಡಿದರು. …
Read More »