ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸೆ. 17ರಂದು ಆಚರಿಸಲಾಗುವುದು. ಪಕ್ಷದ ಕಾರ್ಯಕರ್ತರು ಸೇವಾ ಸಪ್ತಾಹ ಕೈಗೊಂಡಿದ್ದಾರೆ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಬಿ. ಪಾಟೀಲ ತಿಳಿಸಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ದೇಶನದಂತೆ ಸೆ.14ರಿಂದ ಆರಂಭವವಾಗಿರುವ ಸೇವಾ ಸಪ್ತಾಹ ಸೆ. 20ರವರೆಗೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು. …
Read More »ವಿಪತ್ತು ನಿರ್ವಹಣೆ: ಸ್ವಯಂ ಸೇವಕರಿಗೆ ತರಬೇತಿ
ಅಥಣಿ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಇಲ್ಲಿನ ಶಾಖೆಯಿಂದ ವಿಪತ್ತು ನಿರ್ವಹಣೆ ಕುರಿತು ತಾಲ್ಲೂಕಿನ ಮುರುಗುಂಡಿ ಮುರಸಿದ್ದೇಶ್ವರ ದೇವಾಲಯದಲ್ಲಿ ಸ್ವಯಂ ಸೇವಕರಿಗೆ ತರಬೇತಿ ಶಿಬಿರ ನಡೆಸಲಾಯಿತು. ತಹಶೀಲ್ದಾರ್ ದುಂಡಪ್ಪ ಕೋಮಾರ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಸ್ವಯಂಸೇವಕರ ಮೂಲಕ ಕೈ ಜೋಡಿಸಿದರೆ ವಿಪತ್ತನ್ನು ಸುಲಭವಾಗಿ ನಿರ್ವಹಿಸಬಹುದು’ ಎಂದರು. ‘ತಾಲ್ಲೂಕಿನಲ್ಲಿ ಪ್ರತಿ ವರ್ಷ ನೆರೆ ಹಾವಳಿ ಕಾಡುತ್ತಿರುತ್ತದೆ. ಆಗ ಎನ್ಡಿಆರ್ಎಫ್, ಪೊಲೀಸರು, ಸೈನ್ಯದವರು ಬಂದು ತಲುಪವರಿಗೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಮಹಾಪೂರ …
Read More »ಮೇಕೆದಾಟು ಯೋಜನೆ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …
Read More »ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಲು ಕನ್ನಡಪರ ಹೋರಾಟಗಾರರ ಆಗ್ರಹ
ಬೆಳಗಾವಿ : ಹುಬ್ಬಳ್ಳಿ ರೈಲು ನಿಲ್ದಾಣ ಇನ್ನೂ ಮುಂದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣವಾಗಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣವೆಂದು ನಾಮಕರಣ ಮಾಡಲು ಅನುಮೋದನೆ ನೀಡಿದೆ. ಈ ಬೆನ್ನಲ್ಲೇ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಹೆಸರಿಡಬೇಕು. ಜೊತೆಗೆ ರೈಲು ನಿಲ್ದಾಣಕ್ಕೆ ಬೆಳವಡಿ ರಾಣಿ ಮಲ್ಲಮ್ಮ ಹೆಸರು ಇಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. …
Read More »ಸಂಜನಾಗೆ ಇಂದೂ ಮುಂದುವರೆದ ಸಿಸಿಬಿ ಡ್ರಿಲ್
ಬೆಂಗಳೂರು, ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಅವರ ವಿಚಾರಣೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದಾರೆ. ಸಂಜನಾ ಅವರ ಪೊಲೀಸ್ ಕಸ್ಟಡಿ ಇಂದು ಮುಗಿಯುವ ಹಿನ್ನೆಲೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತಲೆ ಮರೆಸಿಕೊಂಡಿರುವ ಶೇಖ್ ಫಾಝಿಲ್ ಎಲ್ಲಿದ್ದಾನೆ, ಆತನ ಚಟುವಟಿಕೆಗಳೇನು, ಕ್ಯಾಸಿನೋ ಪಾರ್ಟಿಗೆ ಯಾರ್ಯಾರನ್ನು ಕರೆದೊಯ್ಯುತ್ತಿದ್ದ ಎಂಬಿತ್ಯಾದಿಗಳ ಬಗ್ಗೆ ಸಂಜನಾ ಅವರಿಂದ ಉತ್ತರ ಪಡೆಯುತ್ತಿದ್ದಾರೆ. ಆದಿತ್ಯ ಆಳ್ವಾ ಅವರ ವಿಶಾಲವಾದ ಭವ್ಯ ಬಂಗಲೆಯಲ್ಲಿ ಪಾರ್ಟಿಗಳು ನಡೆಯುತ್ತಿತ್ತೇ , ನೀವೇನಾದರೂ …
Read More »ಮನಮೋಹನ್ ಸಿಂಗ್, ಚಿದಂಬರಂ ಸೇರಿ 16 ಸಂಸದರು ಅಧಿವೇಶನಕ್ಕೆ ಗೈರು
ನವದೆಹಲಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದಂತೆ 16 ರಾಜ್ಯಸಭಾ ಸಂಸದರು ಸಂಸತ್ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಮೇಲ್ಮನೆಗೆ ಮಾಹಿತಿ ನೀಡಿದ್ದಾರೆ. ಇಂದು ಸದನವು 14 ಸಂಸದರಿಗೆ ರಜೆ ಅನುಮೋದನೆ ನೀಡಿದ್ದರೆ, ಸೋಮವಾರ ತೃಣಮೂಲ ಕಾಂಗ್ರೆಸ್ ಸುಖೇಂಡು ಶೇಖರ್ ರಾಯ್ ಮತ್ತು ಸುಭಾಶಿಶ್ ಚಕ್ರವರ್ತಿ ಎಂಬ ಇಬ್ಬರು ಸಂಸದರಿಗೆ ರಜೆ ನೀಡಿತ್ತು. ಮನ್ಮೋಹನ್ ಸಿಂಗ್, ಚಿದಂಬರಂ ಮತ್ತು ಆಸ್ಕರ್ ಫರ್ನಾಂಡಿಸ್ (ಕಾಂಗ್ರೆಸ್), …
Read More »ಶಿರಾ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ
ಬೆಂಗಳೂರು, ಶಿರಾ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಅಭ್ಯರ್ಥಿಯಾಗಬೇಕೆಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಕೆ.ಎನ್.ರಾಜಣ್ಣ ಅವರ ಉಪಾಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಕೆ.ಎನ್.ರಾಜಣ್ಣ ಅವರು ಜಯಚಂದ್ರ ಅವರ ಅಭ್ಯರ್ಥಿಗಳಾಗಬೇಕೆಂದು …
Read More »ಸರ್ಕಾರದ ವಿವಾದಿತ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧಾರ
ಬೆಂಗಳೂರು, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಭೂಸುಧಾರಣ, ಎಪಿಎಂಸಿ, ಕೈಗಾರಿಕೆ ಸುಧಾರಣಾ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟುಹಿಡಿಯಲು ಕಾಂಗ್ರೆಸ್ ಶಾಸಕಾಂಗ ಸಭೆ ನಿರ್ಧರಿಸಿದೆ. ಕೊರೊನಾ, ಡ್ರಗ್ಸ್ ಹಾವಳಿ ಮತ್ತು ಡಿಜೆಹಳ್ಳಿ ಪ್ರಕರಣಗಳನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ಪ್ರಸ್ತಾವನೆ ಮಂಡಿಸಲು ನಿರ್ಧರಿಸಲಾಗಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಿದ್ದರಾಮಯ್ಯನವರು ಭೂ …
Read More »ಕೊರೊನಾ ಜೊತೆ ಬದುಕೋಣ: ‘ಲೇ… ಮಾಸ್ಕ್ ಹಾಕೊ ತಮ್ಮಾ…’
ಬೆಂಗಳೂರು: ‘ನೀವೆಲ್ಲ ಎಚ್ಚರಿಕೆಯಾಗಿ ಇರ್ರಯ್ಯಾ …ಮಾಸ್ಕ್ ಹಾಕೊ ತಮ್ಮಾ… ಲೇ.. ಮಾಸ್ಕ್ ಹಾಕೊ…’ ‘ಇದನ್ನು ನಿರ್ಲಕ್ಷ್ಯ ಮಾಡೋಕೆ ಹೋಗಬೇಡಿ. ನೋಡೋಕೆ ಇದು ತುಂಬ ಸಿಂಪಲ್. ನಿಮಗೆ ಆಸ್ಪತ್ರೆಗೆ ಹೋದರೆ ಗೊತ್ತಾಗುತ್ತೆ ಕಥೆ. ನಿಮ್ಮನ್ನು ಯಾರೂ, ನಿಮ್ಮ ಮನೆಯವರೂ ಬಂದು ನೋಡುವಂಗಿಲ್ಲ. ನಿಮಗೆ ಯಾರೂ ಬಂದು ಊಟ ಕೊಡುವವರಿಲ್ಲ. ಕಷ್ಟ ಸುಖ ವಿಚಾರಿಸುವವರಿಲ್ಲ. ಬರದೇ ಇರಲಿ ಪಾಪ… ಯಾರಿಗೂ ಬರಬಾರದು’ – ಕೋವಿಡ್ ದೃಢಪಟ್ಟು 10 ದಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ, …
Read More »ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ವತಃ ಬಸವರಾಜ ಬೊಮ್ಮಾಯಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ಪರೀಕ್ಷೆಗೊಳಪಟ್ಟಿದ್ದು, ನನಗೆ ಸೋಂಕು ದೃಢಪಟ್ಟಿದೆ. ಆದರೆ, ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದಿಲ್ಲ, ಪ್ರಸ್ತುತ ಆರೋಗ್ಯವಾಗಿಯೇ ಇದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆಂದು ಹೇಳಿದ್ದಾರೆ. …
Read More »