Breaking News

Uncategorized

ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಪೊಲೀಸರು ಸತತ ವಿಚಾರಣೆ ಮಾಡುತ್ತಲೇ ಇದ್ದಾರೆ. ಸ್ಥಳ ಮಹಜರು, ಸಾಕ್ಷ್ಯಗಳ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.     ಕೊಲೆ ಪ್ರಕರಣದಲ್ಲಿ ದರ್ಶನ್ (Darshan Thoogudeepa) ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ. ಇತ್ತೀಚೆಗಷ್ಟೆ …

Read More »

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ಇಳಿಕೆಯಾದರೆ ಅನುಭೋಗ ಪ್ರಮಾಣದಲ್ಲಿ ಏರಿಕೆಯಾಗಲಿದ್ದು, ಮಧ್ಯಮ ವರ್ಗಕ್ಕೆ ವರದಾನವಾಗುತ್ತದೆ. ಇದು ಸಬ್ಸಿಡಿ, ಕಲ್ಯಾಣ ಯೋಜನೆಗಳಿಗಿಂತ ಮಿಗಿಲಾಗಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ. ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿರುವುದರಿಂದ ಎಂದಿನಂತೆ ಈ ಬಾರಿ ಬಜೆಟ್ ಇರುವುದಿಲ್ಲ. ಮಿತ್ರ ಪಕ್ಷಗಳ ಸಲಹೆಯನ್ನು ಕೂಡ ಪರಿಗಣಿಸಬೇಕಿದೆ. ಈ ಬಾರಿ ವೈಯಕ್ತಿಕ ಆದಾಯ ತೆರಿಗೆ ಮಿತಿ ಹೆಚ್ಚಿಸಲಾಗುವುದು …

Read More »

ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. 2010-11ರಲ್ಲಿಯೇ ಕರಾಡ-ಕೊಲ್ಹಾಪುರ-ಬೆಳಗಾವಿ ರೈಲ್ವೆ ಮಾರ್ಗ ಹಾಗೂ ಶೇಡಬಾಳ-ಅಥಣಿ-ವಿಜಯಪೂರ ನೂತನ ರೈಲ್ವೆ ಮಾರ್ಗಗಳನ್ನು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೇ ಕಳೆದ ಒಂದೂವರೆ ದಶಕದಿಂದ ಕುಂಟುತ್ತಾ ಸಾಗಿರುವ ಕುಡಚಿ-ಬಾಗಲಕೋಟೆ ನೂತನ ರೈಲ್ವೆ ಮಾರ್ಗ ನಿರ್ಮಾಣ …

Read More »

ಇವಿಎಂ ಬೇಡ, ಮತಪತ್ರಗಳ ಬಳಕೆ ಆಗಬೇಕು: ಮಾಜಿ ಸಿಎಂ ಜಗನ್

ಅಮರಾವತಿ: ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ ಬಳಕೆ ಆರಂಭಿಸಬೇಕು ಎಂದು ವೈಎಸ್‌ಆರ್‌ಸಿಪಿ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ. ಈಚೆಗೆ ನಡೆದ ಲೋಕಸಭಾ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಹೀನಾಯ ಸೋಲು ಕಂಡಿದೆ.   ಮುಂದುವರಿದ ಪ್ರಜಾತಂತ್ರ ರಾಷ್ಟ್ರಗಳು ಮತಪತ್ರಗಳನ್ನು ಬಳಕೆ ಮಾಡುತ್ತಿವೆ ಎಂದು ರೆಡ್ಡಿ ಅವರು ‘ಎಕ್ಸ್‌’ನಲ್ಲಿ ಬರೆದಿದ್ದಾರೆ. ‘ಭಾರತದ ಪ್ರಜಾತಂತ್ರ ವ್ಯವಸ್ಥೆಯ ನಿಜವಾದ ಆಶಯವನ್ನು ಎತ್ತಿಹಿಡಿಯಲು ನಾವು ಕೂಡ ಮತಪತ್ರಗಳ …

Read More »

ದೇಶದ ಹಲವು ವಿಮಾನ ನಿಲ್ದಾಣಗಳಿಗೆ ‘ಬಾಂಬ್ ಬೆದರಿಕೆ

ನವದೆಹಲಿ: ಮುಂಬೈ, ಜೈಪುರ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 40 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಸುದ್ದಿ ವಾಹಿನಿಗಳ ಮೂಲಗಳ ಪ್ರಕಾರ, ಇತರ ನಗರಗಳ ಜೊತೆಗೆ ಜೈಪುರದಲ್ಲಿ ವಿಮಾನ ನಿಲ್ದಾಣವನ್ನು ಸ್ಫೋಟಿಸಲು ಟ್ರೀಟ್ ಮೇಲ್ ಸ್ವೀಕರಿಸಲಾಗಿದೆ. ಮೇಲ್ ಸ್ವೀಕರಿಸಿದ ಕೂಡಲೇ ಭದ್ರತೆಯನ್ನು ಬಿಗಿಗೊಳಿಸಲಾಯಿತು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದಾಗ್ಯೂ, ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, …

Read More »

ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಯಮಕನಮರಡಿ ಗ್ರಾಮದ ದಿ ಗುಡುಸಾಬ ಚಿಕ್ಕೋಡಿ ಇವರಿಗೆ ಮಂಜೂರಾದ ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಮಂಜೂರಾದ ರೂ 3.00 ಲಕ್ಷ ಗಳ ಆದೇಶ ಪತ್ರವನ್ನು ಮೃತರ ವಾರಸುದಾರ ಮಸಾಬಿ ಗುಡುಸಾಬ ಚಿಕ್ಕೋಡಿ ಮತ್ತು ಅಮಾನುಲ್ಲಾ ರಿಯಾಜ ಸೊಲ್ಲಾಪುರೆ ಇವರಿಗೆ ವೈದ್ಯಕೀಯ ವೆಚ್ಚ ರು 19581/- ಆದೇಶ ಪತ್ರವನ್ನು ವಿತರಿಸಿದರು ವಸಂತ ಹೆಗಡೆ ಮೀನುಗಾರಿಕೆ ಉಪ …

Read More »

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಸಂಘ ಸಹಕಾರಿ: ಉದ್ಯಮಿ ರಾಜು ಶೆಟ್ಟಿ

ಯರಗಟ್ಟಿ: ‘ಮಹಿಳೆಯರು ಸ್ವಂತ ಉದ್ಯೋಗ ಮಾಡಲು ತರಬೇತಿ ನೀಡುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಹಕಾರಿಯಾಗಿದೆ’ ಎಂದು ಹೋಟೆಲ್‌ ಉದ್ಯಮಿ ರಾಜು ಶೆಟ್ಟಿ ಹೇಳಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್ ಮತ್ತು ವಾಟರ್ ಬೆಡ್ ವಿತರಿಸಿ ಅವರು ಮಾತನಾಡಿದರು. ಸಂಸ್ಥೆಯ ಜಿಲ್ಲಾ ನಿರ್ದೇಶಕ ಲವಕುಮಾರ ಮಾತನಾಡಿ, ‘ಸಂಸ್ಥೆ ಮಹಿಳೆಯರ ಅಭಿವೃದ್ಧಿ ಜೊತೆಗೆ ಕುಟಂಬದ ಪ್ರಗತಿಗೂ ಹಲವು ಯೋಜನೆ …

Read More »

ಚಿಕ್ಕೋಡಿ: ಶಿಕ್ಷಕರ ಕೊರತೆ, ಸುಧಾರಿಸದ ಫಲಿತಾಂಶ

ಚಿಕ್ಕೋಡಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದರೆ ಸಾಕು ಇಡೀ ರಾಜ್ಯವೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯತ್ತ ನೋಡುವ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಫಲಿತಾಂಶದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಇದೆ. ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಕರ ಕೊರತೆ ಇರುವುದೇ ಇದಕ್ಕೆ ಕಾರಣ ಎನ್ನುವುದು ಶಿಕ್ಷಣ ತಜ್ಞರ ಅಭಿಮತ. ಈ ಬಾರಿಯ ಫಲಿತಾಂಶ ಕೂಡ ಇದನ್ನೇ ಸಾಬೀತು ಮಾಡುವಂತಿದೆ. ಕುಸಿಯುತ್ತಿರುವ ಫಲಿತಾಂಶದ ಜತೆಗೆ ಗರಿಷ್ಠ ಫಲಿತಾಂಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕೂಡ ಕಡಿಮೆಯಾಗುತ್ತ ಸಾಗಿದೆ. ಹಿಂದೆ …

Read More »

ಅಭಿವೃದ್ಧಿ ಕಾಮಗಾರಿಗಳನ್ನು ಕೈಬಿಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ರೂಪ ಅನಂತರಾಜು ಆಗ್ರಹ

ಗೌರಿಬಿದನೂರು: ದಲಿತರು ಹೆಚ್ಚಾಗಿ ವಾಸಿಸುವ ವಾರ್ಡ್‌ಗಳಲ್ಲಿ ನಡೆಸಲು ಉದ್ದೇಶಿಸಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಕೈಬಿಟ್ಟಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ರೂಪ ಅನಂತರಾಜು ಆಗ್ರಹಿಸಿದ್ದಾರೆ.   ‘2022ರಲ್ಲಿ ನಾನು ನಗರಸಭೆ ಅಧ್ಯಕ್ಷೆಯಾಗಿದ್ದಾಗ ಅಂದಿನ ಶಾಸಕ ಹಾಗೂ ನಗರಸಭೆ ಎಲ್ಲ ಸದಸ್ಯರೊಂದಿಗೆ ಚರ್ಚಿಸಿ ಅಮೃತ ನಗರೋತ್ಥಾನ ಯೋಜನೆಯಡಿ ₹30ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ಧಪಡಿಸಿ ನಗರ ಯೋಜನಾ ನಿರ್ದೇಶಕರಿಗೆ ಕಳುಹಿಸಿಕೊಡಲಾಗಿತ್ತು. 18ನೇ ವಾರ್ಡ್ ನೆಹರೂ …

Read More »

ಬೆಲೆ ಏರಿಕೆ: ಎತ್ತಿನಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಪ್ರತಿಭಟನೆ

ಕೊರಟಗೆರೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಎನ್‌ಡಿಎ ಕಾರ್ಯಕರ್ತರು ಎತ್ತಿನ ಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಸೋಮವಾರ ಪ್ರತಿಭಟಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಬದಲಾಗಿ ಗ್ಯಾರಂಟಿಗಳ ಗುಂಗಲ್ಲಿ ಕಾಲ ಹರಣ ಮಾಡುತ್ತಿದೆ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚು ಮಾಡಿ ಜನ ಸಾಮಾನ್ಯರಿಗೆ ಬರೆ …

Read More »