Breaking News
Home / Uncategorized (page 720)

Uncategorized

ಮುಂಬೈನ ಧಾರವಿ ಕೊಳೆಗೆರಿಯ ಜನತೆಯಲ್ಲಿ ಆಂಟಿ ಬಾಡಿ ಪತ್ತೆ : ವಿಜ್ಞಾನಿಗಳ ಲೆಕ್ಕಚಾರ ತಲೆಕೆಳಗು

ಮುಂಬೈ: ಭಾರತದ ಅತಿದೊಡ್ಡ ಕೊಳೆಗೇರಿಯಾಗಿರುವ ಧಾರಾವಿಯಲ್ಲಿ ವಾಸಿಸುವ ಹತ್ತು ಜನರಲ್ಲಿ ಆರರಲ್ಲಿ ಆರು ಜನರು ಕರೋನವೈರಸ್ ಪ್ರತಿಕಾಯಗಳನ್ನು ಹೊಂದಿದ್ದಾರೆ ಇದೇ ವೇಳೆ ಅವರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತದ ಹಣಕಾಸು ಕೇಂದ್ರವಾದ ಮುಂಬೈನ ಮೂರು ಉಪನಗರಗಳಲ್ಲಿ 6,936 ಜನರ ಜುಲೈನಲ್ಲಿ ನಡೆದ ಸಮೀಕ್ಷೆಯಲ್ಲಿ, ಈ ಬಗ್ಗೆ ತಿಳಿದು ಬಂದಿದೆ. ಭಾರತದ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರದ ವೈಜ್ಞಾನಿಕ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಅದರ ಪ್ರಮುಖ ವೈದ್ಯಕೀಯ ಕಾಲೇಜುಗಳ …

Read More »

ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್‌ಐ ಆತ್ಮಹತ್ಯೆ; ತನಿಖೆಗೆ ಮಾಜಿ ಪ್ರಧಾನಿ ಒತ್ತಾಯ

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ -ಪಿಎಸ್ ಐ ಕಿರಣ್ ಕುಮಾರ್ ಅವರು ಇಂದು ಬೆಳಗ್ಗೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲೆ ಪ್ರಕರಣವೊಂದನ್ನು ನಿನ್ನೆ ಮಧ್ಯ ರಾತ್ರಿಯಷ್ಟೇ ಭೇದಿಸಿದ್ದ ಅವರು, ಆರೋಪಿ‌ ಬಂಧನ ಸಂಬಂಧ ಕಾರ್ಯಪ್ರವೃತ್ತರಾಗಿದ್ದರು. ಕೊಲೆ‌ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಕುಮಾರ್ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ …

Read More »

ಬಸ್‌ನಲ್ಲಿ ಕಲ್ಲು ತುಂಬಿ ಸಾಗಿಸಿದರು!

ಹುಬ್ಬಳ್ಳಿ: ಕುಂದಗೋಳ-ಹುಬ್ಬಳ್ಳಿ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ, ಸಿಬ್ಬಂದಿ ಗುರುವಾರ ಕಲ್ಲು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸೂರು ರಸ್ತೆ ಬಳಿ ರಸ್ತೆ ವಿಭಜಕ ಕಾಮಗಾರಿ ನಡೆಯುತ್ತಿದ್ದು, ಮೊದಲು ರಸ್ತೆಗೆ ಹಾಕಲಾಗಿದ್ದ ಕಲ್ಲುಗಳನ್ನು ತೆಗೆಯಲಾಗಿದೆ. ಗೋಕುಲ ರಸ್ತೆಯ ಬಸ್‌ ಡಿಪೊದಲ್ಲಿ ಉದ್ಯಾನ ಕಾಮಗಾರಿ ನಡೆಯುತ್ತಿರುವುದರಿಂದ, ಅಲ್ಲಿಗೆ ಈ ಕಲ್ಲುಗಳನ್ನು ಸಾಗಿಸಲು ಸಿಬ್ಬಂದಿ ಬಸ್‌ ಬಳಕೆ ಮಾಡಿಕೊಂಡಿದ್ದಾರೆ. ರಸ್ತೆ ಮೇಲಿದ್ದ ಕಲ್ಲುಗಳನ್ನು ಐದಾರು ಸಿಬ್ಬಂದಿ ಸೇರಿ ಬಸ್‌ಗೆ ತುಂಬಿದ್ದಾರೆ. 50ಕ್ಕಿಂತಲೂ …

Read More »

ಸಿಇಟಿ: 1,998 ವಿದ್ಯಾರ್ಥಿಗಳು ಗೈರು

ಬೆಳಗಾವಿ: ಜಿಲ್ಲೆಯ ವಿವಿಧ 29 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ 1,998 ವಿದ್ಯಾರ್ಥಿಗಳು ಗೈರು ಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಒಳಪಡುವ ನಗರದ 11, ರಾಮದುರ್ಗದ ಸ್ಟೇಟ್ ಪಿಯು ಕಾಲೇಜು, ಸವದತ್ತಿಯ ಎಸ್‌.ಕೆ. ಪಿಯು ಕಾಲೇಜು ಹಾಗೂ ಬೈಲಹೊಂಗಲದ ಜಿಜಿಡಿ ಪಿಯು ಕಾಲೇಜಿನ ಕೇಂದ್ರಗಳಲ್ಲಿ ಬೆಳಿಗ್ಗೆ ಭೌತವಿಜ್ಞಾನ ಮತ್ತು ಮಧ್ಯಾಹ್ನ ರಸಾಯನವಿಜ್ಞಾನ ವಿಷಯದ ಪರೀಕ್ಷೆಗಳು ನಡೆದವು. ಭೌತವಿಜ್ಞಾನಕ್ಕೆ 5,316 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ …

Read More »

ಕೋವಿಡ್‌ ನಿಯಂತ್ರಣಕ್ಕೆ ಬಿಡುಗಡೆಯಾಗಿದ್ದು ಕೇವಲ ₹ 230 ಕೋಟಿ!

ಬೆಳಗಾವಿ: ಕೋವಿಡ್‌ ರೋಗವನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಇದುವರೆಗೆ ಒಟ್ಟು ₹ 230.73 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ₹ 13.97 ಕೋಟಿ ದೊರೆತಿದೆ. ಮಾಹಿತಿ ಹಕ್ಕು ಕಾರ್ಯಕರ್ತ (ಆರ್‌ಟಿಐ) ಸುರೇಂದ್ರ ಉಗಾರೆ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡ ಮಾಹಿತಿಯಿಂದ ಇದು ಬೆಳಕಿಗೆ ಬಂದಿದೆ. ‘ರಾಜ್ಯ ಸರ್ಕಾರ ಹೇಳುವಂತೆ ₹ 2,000 ಕೋಟಿ ಬಿಡುಗಡೆಯಾಗಿಲ್ಲ. ಇದಲ್ಲದೇ, ವಿರೋಧ ಪಕ್ಷದವರು ಹೇಳುವಂತೆ ಸಾವಿರಾರು ಕೋಟಿ ರೂಪಾಯಿಯ …

Read More »

ಸತ್ಯಂಪೇಟ ಮೇಲಿನ ಪ್ರಕರಣ ರದ್ದುಪಡಿಸಲು ಆಗ್ರಹ

ಬೆಳಗಾವಿ: ‘ಕಲಬುರ್ಗಿ ಜಿಲ್ಲೆಯ ಶಹಾಪುರದ ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟ ಅವರ ಮೇಲೆ ದಾಖಲಿಸಲಾದ ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವ ಸೇನೆ ಹಾಗೂ ಬಸವಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ‘ಅನುಭವಿ ಪತ್ರಕರ್ತ, ವೈಚಾರಿಕ ಚಿಂತಕ ಹಾಗೂ ಶರಣ ಸಾಹಿತಿ ವಿಶ್ವರಾಧ್ಯ ಅವರ ಮೇಲೆ ದುರುದ್ದೇಶದಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್‌ …

Read More »

ಪಿಎಸ್ ಐ ಮಲ್ಲಿಕಾರ್ಜುನ : ಸೈಕಲ್ ನಲ್ಲಿ ಠಾಣೆಗೆ

ಮೂಡಲಗಿ : ಜನರ ಕಷ್ಟಗಳಿಗೆ ಸ್ಪಂಧಿಸಿ , ಸಮಸ್ಯೆಗಳಿಗೆ ಪರಿಹಾರ ನೀಡುವ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ ಐಯೊಬ್ಬ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದು, ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಹೌದು. ಮೂಡಲಗಿ ಪೊಲೀಸ್ ಠಾಣೆಯ ಪಿಎಸ್ ಐ ಮಲ್ಲಿಕಾರ್ಜುನ ಸಿಂಧೂರ ಅವರ ಠಾಣೆಯ ವ್ಯಾಪ್ತಿಯಲ್ಲಿನ ಜನರ ಕಷ್ಠಗಳಿಗೆ ಸ್ಪಂಧಿಸುತ್ತಾ ಕಾರ್ಯ ನಿರ್ವಹಿಸುತ್ತಿರುವುದು ಜನರ ಮೆಚ್ಚುಗೆ ಕಾರಣ. ಶಕ್ತಿಯಿಂದಾಗದ ಕೆಲಸವನ್ನು ಯುಕ್ತಿಯಿಂದ ಮಾಡಬೇಕು ಎಂಬ ಗಾದೆಯಂತೆ ಪೊಲೀಸ್ ಠಾಣೆಗೆ ಬರುವ …

Read More »

ಯುವಕನೊಬ್ಬ ಗೂಡ್ಸ್ ರೈಲಿಗೆ ಸಿಲುಕಿ ಆತ್ಮಹತ್ಯೆ…….

ಬೆಳಗಾವಿ: ಯುವಕನೊಬ್ಬ ಗೂಡ್ಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಗೋಳ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ. ಕಣಬರ್ಗಿ ಗ್ರಾಮದ ಶರತ್ ಕಾಟೇ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಿಎ ಆಗುವ ಕನಸು ಕಂಡಿದ್ದ ಈತ, ಕಳೆದ 1 ವರ್ಷದಿಂದ ಪ್ರೀತಿಯ ಬಲೆಗೆ ಬಿದ್ದಿದ್ದನು. ಹೀಗಾಗಿ ಅವರಿಬ್ಬರ ನಡುವಿನ ಪ್ರೇಮ ವೈಫಲ್ಯವೇ ಅವನ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ರೇಲ್ವೆ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ಭೇಟಿ …

Read More »

ಸಚಿವ ಬಿ.ಸಿ.ಪಾಟೀಲ್ ಪತ್ನಿ, ಅಳಿಯ ಸೇರಿ ಐವರಿಗೆ ಕೊರೊನಾ ಸೋಂಕು

ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ …

Read More »

ಪಕ್ಕದಲ್ಲಿ ಫೆರಾರಿ ಹೋದ್ರು ತಲೆಕೆಡಿಸಿಕೊಳ್ಳಲ್ಲ:ಪುನೀತ್ ರಾಜ್‍ಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳಿಗೆ ‘ಯುವರತ್ನ’ ಸಿನಿಮಾ ತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ. ಈ ವಿಚಾರವಾಗಿ ಕಳೆದ ಎರಡು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್ ಅನಂದರಾಮ್ ಅವರು, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ. ಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಜೊತೆಗೆ ಒಂದು ಡೈಲಾಗ್ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. …

Read More »