Breaking News

Uncategorized

ನಾಳೆ ಬೆಳಗಾವಿಗೆ ಯಡಿಯೂರಪ್ಪ;

ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ವಿಶ್ವೇಶ್ವರ ನಗರದ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಅವರು 11 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಅದೇ ವಿಮಾನದಲ್ಲಿ ನಿರ್ಗಮಿಸುವರು

Read More »

ಯೋಧ ರಸ್ತೆ ಅಪಘಾತಕ್ಕೆ ಬಲಿಪತ್ನಿಯನ್ನು ಸಂತೈಸುತ್ತಲೇ ಕಣ್ಣೀರು ಹಾಕಿದ ಹೆಬ್ಬಾಳಕರ್

ಬೆಳಗಾವಿ – ಸಮೀಪದ ನಾವಗೆ ಗ್ರಾಮದ ಯೋಧ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.   ನಾವಗೆ ಗ್ರಾಮದ ಶಿವಾಜಿ ಆನಂದ ತಳವಾರ ( 45) ಸೋಮವಾರ ತುಮಕೂರು ಬಳಿ ರಸ್ತೆ ಅಪಘಾತದಿಂದ ಸಾವಿಗೀಡಾಗಿದ್ದಾರೆ. ಶಿವಾಜಿ ಸಂಚರಿಸುತ್ತಿದ್ದ ಬೈಕ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ರಜೆಯ ಮೇಲೆ ಬಂದಿದ್ದ ಶಿವಾಜಿ ಮೈಸೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. 19 ವರ್ಷದಿಂದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಾಜಿಗೆ ಈಚೆಗಷ್ಟೆ ಬಡ್ತಿ ಸಿಕ್ಕಿತ್ತು. 12 …

Read More »

8,000 ಶಿಕ್ಷಕ ಹುದ್ದೆಗಳು ಖಾಲಿಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 8,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿ ಆರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ: ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, …

Read More »

ಡಿಕೆಶಿಯ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ. ನಾಣ್ಯಗಳು ಮಾತ್ರ!

ರಾಮನಗರ: ಡಿಕೆ ಬ್ರದರ್ಸ್ ಮನೆಗಳ ಮೇಲೆ ಸಿಬಿಐ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರದ ದೊಡ್ಡ ಆಲಹಳ್ಳಿ, ಕೋಡಿಹಳ್ಳಿಯಲ್ಲಿ ಅಧಿಕಾರಿಗಳಿಗೆ ನಗದು ಹಣ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳಿಗೆ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ ನಾಣ್ಯಗಳು ಮಾತ್ರವಂತೆ. ಬೆಳಗ್ಗೆ 6 ಗಂಟೆಗೆ ಸಿಬಿಐ ಅಧಿಕಾರಿಗಳು ದೊಡ್ಡ ಆಲಹಳ್ಳಿಯ ನಿವಾಸದ ಮೇಲೆ ದಾಳಿ ಮಾಡಿದ್ದರು. ನಂತರ ಮಧ್ಯಾಹ್ನ 1 ಗಂಟೆಗೆ ಕೋಡಿಹಳ್ಳಿಯ ಗೌರಮ್ಮ ಇರುವ ನಿವಾಸದ …

Read More »

ಮತ್ತೆ ಅನುಶ್ರೀಗೆ ಬುಲಾವ್?​ ಅನುಶ್ರೀ ಫೋನ್​ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ

ಡ್ರಗ್ಸ್ ಕೇಸ್​ನಲ್ಲಿ ತಗ್ಲಾಕ್ಕೊಂಡಿರೋ ಆ್ಯಂಕರ್​ ಅನುಶ್ರೀ ಫೋನ್​ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಜಿ ಸಿಎಂ ಸೇರಿದಂತೆ ಪ್ರಭಾವಿಗಳು ಬಚಾವ್ ಆಗೋಕೆ ಈಗ ಪೊಲೀಸರ ಮೇಲೆಯೇ ಒತ್ತಡ ಹೇರ್ತಿದ್ದಾರಂತೆ. ಅನುಶ್ರೀ ಕಾಲ್ ರೆಕಾರ್ಡ್​ನ್ನ ನಾಶಗೊಳಿಸೋಕೆ ಪ್ರಭಾವಿಗಳು ಯತ್ನಿಸ್ತಿದ್ದು, ಪೊಲೀಸರು ಹೈರಾಣಾಗಿ ಹೋಗಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರಿಗೆ ಆ್ಯಂಕರ್ ಅನುಶ್ರೀ ಮಾಡಿರೋ ಫೋನ್​ ಕಾಲ್​ ವಿಚಾರ ಈಗ ರಾಜ್ಯದ ಹಾಟೆಸ್ಟ್ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ,ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ  ವಾಜುಭಾಯ್  ರೂಡಾಭಾಯ್ ವಾಲಾರವರು ರ್ಯಾಂಕ್ ವಿಜೇತರಿಗೆ ಸುವರ್ಣ ಪದಕಗಳು, 79 ಜನರಿಗೆ ಪಿಎಚ್.ಡಿ ಮತ್ತು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಸುವರ್ಣ ವಿಧಾನಸೌಧದ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ (ಅ.5) ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದ ಸಮಾರಂಭದಲ್ಲಿ ಸುವರ್ಣ ಪದಕಗಳು ಮತ್ತು ಪದವಿಗಳನ್ನು ಪ್ರದಾನ ಮಾಡಲಾಯಿತು. ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆನ್ …

Read More »

ಅಕ್ಟೋಬರ್ 15ರ ನಂತರ ದೇಶದಲ್ಲಿ ಶಾಲೆಗಳನ್ನು ತೆರೆಯಬಹುದು– ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

ನವದೆಹಲಿ: ಅನ್‌ಲಾಕ್‌ 5ರ ಮಾರ್ಗಸೂಚಿಯಲ್ಲಿ ಅಕ್ಟೋಬರ್ 15ರ ನಂತರ ದೇಶದಲ್ಲಿ ಶಾಲೆಗಳನ್ನು ತೆರೆಯಬಹುದು ಎಂದು ಕೇಂದ್ರ ಸರ್ಕಾರ ಆರು ದಿನಗಳ ಹಿಂದೆಯೇ ಹೇಳಿತ್ತು. ಈಗ ಗೃಹ ಸಚಿವಾಲಯ ಶಾಲೆಗಳನ್ನು ತೆರೆಯಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪೋಷಕರ ಒಪ್ಪಿಗೆ ಮೇರೆಗೆ ಮಕ್ಕಳು ಶಾಲೆಗೆ ತೆರಳಬಹುದು. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಆನ್‍ಲೈನ್ ತರಗತಿಗಳನ್ನು ಆಯ್ಕೆಯಾಗಿ ಇಟ್ಟುಕೊಳ್ಳಬಹುದು ಎಂದು ತಿಳಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ? ಶಾಲಾ ಕೊಠಡಿಗಳನ್ನು ನಿತ್ಯವೂ ಸ್ಯಾನಿಟೈಸ್ ಮಾಡುವುದು ಕಡ್ಡಾಯ. ಎಲ್ಲಾ ಸಂದರ್ಭಗಳಲ್ಲಿಯೂ …

Read More »

ಧೈರ್ಯ ದಿಂದಲೇ ಪಕ್ಷ ಸಂಘಟನೆ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ :ಸತೀಶ್ ಜಾರಕಿಹೊಳಿ

  ಧೈರ್ಯ ದಿಂದಲೇ ಪಕ್ಷ ಸಂಘಟನೆ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಗೋಕಾಕ: ಯಾವುದೇ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗೋಕಾಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಸೂಚಿಸಿದರು. ಸೋಮವಾರದಂದು ಗೋಕಾಕ ಮತಕ್ಷೇತ್ರದ ಅಂಕಲಗಿ-ಅಕ್ಕತಂಗೇರಹಾಳ ಮತ್ತು ಖನಗಾಂವ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ …

Read More »

ಬೆಳಗಾವಿಯಲ್ಲಿ MBV ಸೇರಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬೆಳಗಾವಿ: ಹತ್ರಸ್ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿ  ಸೋಮವಾರ ಮಾನವ ಬಂಧುತ್ವ ವೇದಿಕೆ  ಹಾಗೂ ದಲಿತ ಸೇನೆ ಸೇರಿ ವಿವಿಧ  ಸಂಘಟನೆಯ ಪದಾಧಿಕಾರಿಗಳು  ಬೃಹತ್ ಪ್ರತಿಭಟನಾ ರ್ಯಾಲಿ  ನಡೆಸಿದರು. ಇಲ್ಲಿನ  ಡಾ. ಬಿ.ಆರ್.  ಅಂಬೇಡ್ಕರ್  ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ  ಪದಾಧಿಕಾರಿಗಳು ಚನ್ನಮ್ಮ ವೃತ್ತ ಮೂಲಕ  ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

Read More »

ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆನ ದಾಳಿ ನಡೆಸಲಾಗಿದೆ: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ : ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆನ ದಾಳಿ ನಡೆಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನೇನು ರಾಜ್ಯದಲ್ಲಿ ಬೈ ಎಲೆಕ್ಷನ್ ನಡೆಯುತ್ತಿದ್ದಿದೆ. ಇದರಿಂದ ಸರ್ಕಾರ ಅಧಿಕಾರವನ್ನು ಬಳಿಸಿಕೊಂಡು ಸಿಬಿಐ ದಾಳಿ ನಡೆಸಲಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದುರುದ್ದೇಶದಿಂದ ದಾಳಿ ನಡೆಯುತ್ತಿದೆ. ನಮ್ಮ ನಾಯಕರು ಸಮರ್ಥರಿದ್ದಾರೆ, ಸಮರ್ಥವಾಗಿ ಎಲ್ಲವನ್ನೂ ಎದುರಿಸುತ್ತಾರೆ ಎಂದು ಹೇಳಿದ್ದಾರೆ. ಯಾರನ್ನು ಸಹ …

Read More »