Breaking News

Uncategorized

ಕರುನಾಡಿಗೆ ಮತ್ತೆ ವರುಣಾಘಾತ; ಹವಾಮಾನ ಇಲಾಖೆ ಎಚ್ಚರಿಕೆ.

ಬೆಳಗಾವಿ ಸೇರಿ ಉತ್ತರದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಕರುನಾಡಿಗೆ ವರಣನ ಕಂಟಕವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, …

Read More »

ಸಾವಿರಾರು ಎಕರೆ ರೈತರ ಫಲವತ್ತಾದ ಭೂಮಿ ಸರ್ಕಾರದ ಸ್ವಾಧೀನಕ್ಕೆ’

ನಾಗಮಂಗಲ  : ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಯೋಜನೆ ರೂಪಿಸಿದ್ದೆ. ಆದರೀಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಏನೇ ಆದರೂ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ರೈತರ ಕೃಷಿಗೆ ಯೋಗ್ಯವಾದ …

Read More »

ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿ

ದಾವಣಗೆರೆ: ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ತೋಗಟವೀರ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಪ್ರಕಾಶ್ ಎಂಬುವರು ತೊಗಟವೀರ ಕಲ್ಯಾಣ ಮಂಟಪದ ಬಳಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಆದರೆ ಪ್ರಕಾಶ್ ವಾಪಸ್ ಬರುವಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ದುಷ್ಕರ್ಮಿಗಳು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ತಕ್ಷಣ ಪ್ರಕಾಶ್ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ …

Read More »

ಮಾದಕ’ ನಟಿಮಣಿಯರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿ

ಬೆಂಗಳೂರು, ಸೆ.19- ಡ್ರಗ್ಸ್ ದಂಧೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಾದ ರವೀಂದ್ರ ಅವರು ಒಂದು ವಾರಗಳ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ, ಸಿಟಿ ಸಿವಿಲ್ ಕೋರ್ಟ್‍ನಲ್ಲಿರುವ ಎನ್‍ಡಿಪಿಎಸ್ ನ್ಯಾಯಾಲಯದ ನ್ಯಾಯಾಧೀಶರಾದ ಸೀನಪ್ಪ ಅವರು ಎರಡು ದಿನಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿದರು. ರಾಗಿಣಿ, ಸಂಜನಾ ಮತ್ತಿತರ ಆರೋಪಿಗಳ ಜಾಮೀನು ಅರ್ಜಿ …

Read More »

ದಿಲ್ಲಿಯಿಂದಲೇ ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಎಸ್‌ವೈ, ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ನವದೆಹಲಿ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸುತ್ತಿದೆ. ಮತ್ತೊಂದೆಡೆ ಆಕಾಂಕ್ಷಿಗಳಂತೂ ತುದಿಗಾಲಲ್ಲಿ ನಿಂತಿದ್ದು, ಸಂಪುಟ ಸೇರ್ಪಡೆಯ ಅದೃಷ್ಟ ಯಾರಿಗೆ ಒಲಿಯುವುದೋ ಎಂಬ ತವಕದಲ್ಲಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಗೆ ತೆರಳಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇಂದು (ಶನಿವಾರ) ಸಂಜೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ಸಹ ಕೊಟ್ಟಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ …

Read More »

ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …

Read More »

ʼಆಕೆ ಸಂಜನಾ ಗಿಲ್ರಾನಿ ಅಲ್ಲ ಮಾಹಿರಾʼ: ನಟಿಮಣಿಯ ಬುರ್ಕಾವತಾರ ಬಯಲು..!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷ್ಯ ಬಹಿರಂಗವಾಗಿದ್ದು, ಸಮಾಜೀಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಆಕೆ ಸಂಜನಾ ಗಿಲ್ರಾನಿ ಅಲ್ಲ ಮಹಿರಾ ಎಂದು ಹೇಳಿದ್ದಾರೆ. ಹೌದು, ಪ್ರಶಾಂತ್‌ ಸಂಬರಗಿ ಈ ಕುರಿತು ಪೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದು, ‘ ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ …

Read More »

ಸುರತ್ಕಲ್: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಇಬ್ಬರು ಅಪಾಯದಿಂದ ಪಾರು

ಸುರತ್ಕಲ್: ತಡೆಗೋಡೆಯೊಂದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು …

Read More »

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ. ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ …

Read More »

ಖಡಕಲಾಟ ಪೊಲೀಸರ್ ಭರ್ಜರಿ ಕಾರ್ಯಾಚರಣೆ 8.61 ಲಕ್ಷ ಮೌಲ್ಯದ ವಸ್ತುಗಳು ವಶ

  ಚಿಕ್ಕೋಡಿ:ರಸ್ತೆ ಬದಿಯಲ್ಲಿರುವ ಹಾಗೂ ಹೊಲ ಮನೆಯ ಹತ್ತಿರ ನಿಲ್ಲಿಸಿದ ಟ್ರಾಕ್ಟರ್ ಟ್ರೇಲರ್‌ಗಳನ್ನು ಹಾಗೂ ಡಿಸ್ಕ ಸಮೇತ 46 ಟಾಯರಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಖಡಕಲಾಟ ಪೋಲಿಸರು ಬಂಧಿಸಿದ್ದಾರೆ.   ಆರೋಪಿತರು ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಮಾರುತಿ ಬಸಪ್ಪಾ ಠೊಣ್ಣೆ (24), ಮಹಾದೇವ ಮುರಾರಿ ಮಾಕಾಳೆ (27), ‌ಬಾಬು ಸಿದ್ದಪ್ಪಾ ಡಾಲೆ (37), ಶಿವಾನಂದ ಮಾರುತಿ ಗಜಬರ (29), ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಸಂಜು ಬಿಷ್ಟಪ್ಪಾ ಅಂಬಡಗಟ್ಟಿ …

Read More »