Breaking News

Uncategorized

ಮಠಾಧಿಪತಿಗಳೇ ಪಾದಯಾತ್ರೆ ಮಾಡಿ ಎಂದು ಹೇಳಿ ಜಾತಿಯ ವಿಷ ಬೀಜ ಬಿತ್ತಿದ್ದಾರೆ : ವಾಟಾಳ್ ನಾಗರಾಜ್

ಮೈಸೂರು : ರಾಜ್ಯದಲ್ಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿರುವ ಮಠಾಧೀಶರ ವಿರುದ್ಧ ವಾಟಾಳ್ ನಾಗರಾಜ್ ಗರಂ ಆಗಿದ್ದು, ಇಂದು ಮೈಸೂರಿನ ಹಾಡಿರ್ಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಮೀಸಲಾತಿಗಾಗಿ ಹೋರಾಟ ಮಾಡಿ ರಾಜ್ಯವನ್ನು ಜಾತಿಗೆ ಸೀಮಿತಗೊಳಿಸಬಾರದು. ಮಠಾಧಿಪತಿಗಳು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪಾಲಿಸಿ ಮಠದಲ್ಲಿಯೇ ಇರಿ. ಮೀಸಲಾತಿ ಹಾಗೂ ಜಾತಿಗಾಗಿ ಹೋರಾಟಕ್ಕೆ ಬಂದರೆ ನಿಮ್ಮ ಶಕ್ತಿ ಕುಂದುತ್ತದೆ ಎಂದು ಮನವಿ ಮಾಡಿಕೊಂಡರು. …

Read More »

ಪತಂಜಲಿ ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಸಿಕ್ಕಿದೆ ಎಂಬುದು ಸುಳ್ಳು

ಪತಂಜಲಿ ಸಂಸ್ಥೆಯು ಕೊರೊನಾ ವೈರಸ್​ ಸೋಂಕು ನಿಗ್ರಹಕ್ಕೆಂದು ಹೊರತಂದಿರುವ ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಿದೆ ಎಂಬ ಪೋಸ್ಟ್​ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆಯುರ್ವೇದ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ವಿಶ್ವ ಆರೋಗ್ಯ ಸಂಸ್ಥೆ ಕೊರೊನಿಲ್​ಗೆ ಮಾನ್ಯತೆ ನೀಡಿದೆ ಎಂದು ವೈರಲ್ ಪೋಸ್ಟ್ ನಲ್ಲಿ ಹೇಳಲಾಗಿದೆ. ಕೋವಿಡ್-19 ತಡೆಯಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊರೊನಿಲ್ ಸಹಕಾರಿ ಎಂದು ಪತಂಜಲಿ ಸಂಸ್ಥೆ ಹೇಳಿತ್ತು. ಇದಕ್ಕೆ ಆಯುಷ್ …

Read More »

ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ

ಬೆಳಗಾವಿ: ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ ತೆಗೆಯುತ್ತಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮ ಕೂಡ ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೆ ಧಮ್ಕಿ ಹಾಕಿ ಪತ್ರವೊಂದನ್ನು ರವಾನಿಸಿದೆ. ಮಿರಜದ ಶಾಸ್ತ್ರಿ ವೃತ್ತದಲ್ಲಿ ಬಸ್ಸುಗಳ ನಿಲುಗಡೆಯೇ ಇಲ್ಲ. ಅಲ್ಲಿಗೆ ಬರುವ ಕರ್ನಾಟಕದ ” ಪರ್ಮಿಟ್ ಇಲ್ಲದ” ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತವೆ. ಇದರಿಂದಾಗಿ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮಕ್ಕೆ …

Read More »

ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ : ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಮಾರ್ಗದಲ್ಲಿ ನಡೆದ ದಾಳಿಯಲ್ಲಿ ಗಾಂಜಾ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಸುಮಾರು ಒಂದುವರೆ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ‌. ಜ್ಞಾನೇಶ್ವರ ಪಾಟೀಲ ಬಂಧಿತ ಆರೋಪಿ. ಬೆಳಗಾವಿಯ ಪೊಲೀಸರು ಮಟಕಾ ಜೂಜಾಟ,ಗಾಂಜಾ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡುತ್ತಿದ್ದು,ಡಿಸಿಪಿ ವಿಕ್ರಂ ಅಮಟೆ …

Read More »

ರೈಲ್ವೆ ನಿಲ್ದಾಣ ನೂತನ ಕಟ್ಟಡ ಉದ್ಘಾಟನೆ ಶೀಘ್ರ

ದಾವಣಗೆರೆ: ರೈಲ್ವೆ ನಿಲ್ದಾಣದ ನೂತನ ಕಟ್ಟಡ ಮತ್ತುಡಿಸಿಎಂ ರೈಲ್ವೆ ಗೇಟ್‌ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್‌ ಅಂತ್ಯ ಇಲ್ಲವೇ ಏಪ್ರಿಲ್‌ ಮೊದಲ ವಾರದಲ್ಲಿ ನೆರವೇರಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಶುಕ್ರವಾರ ನೂತನ ರೈಲ್ವೆ ನಿಲ್ದಾಣ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೊದಲ ಹಂತದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ನೂತನ ಕಟ್ಟಡದ ಕಾಮಗಾರಿ ಶೇ. 80ಕ್ಕಿಂತಲೂ ಹೆಚ್ಚು ಮುಗಿದಿದೆ. ಮಾ. …

Read More »

ಬಜೆಟ್ ಪೂರ್ವಭಾವಿ ಸಭೆಗಳು ಮುಕ್ತಾಯ: ಸಿಎಂ ಯಡಿಯೂರಪ್ಪ

ಬೆಂಗಳೂರು, ಫೆ. 19: ಬರುವ ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಬಜೆಟ್ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಗಳು ಮುಗಿದಿವೆ ಎಂದು ಅವರು ಹೇಳಿದ್ದಾರೆ. ಗೃಹ ಇಲಾಖೆ ಸೇರಿದಂತೆ ಇನ್ನೆರಡು ಇಲಾಖೆಗಳು ಬಾಕಿ ಇವೆ. ಇನ್ನು ಅರ್ಧ ದಿನ ಸಭೆ ಮಾಡಿದರೆ ಬಜೆಟ್ ಪೂರ್ವ ತಯಾರಿ ಮುಗಿಯುತ್ತದೆ. ಇದಾದ ನಂತರ ಬಜೆಟ್ …

Read More »

ಜುಲೈ 7, 8ರಂದು ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು, ಫೆ. 20: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ವೇಳಾಪಟ್ಟಿ ಹೀಗಿದೆ: * 07.07. 2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವಶಾಸ್ತ್ರ * 07.07. 2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ * 08.07. 2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತಶಾಸ್ತ್ರ * …

Read More »

ಡ್ರಗ್ಸ್‌ ಜೊತೆ ಸಿಕ್ಕಿಬಿದ್ದ ಪ್ರಕರಣ; ಸಿಐಡಿ ತನಿಖೆಗೆ ಪಮೇಲಾ ಗೋಸ್ವಾಮಿ ಒತ್ತಾಯ

ಕೋಲ್ಕತ್ತಾ, ಫೆಬ್ರವರಿ 20: ಪಶ್ಚಿಮ ಬಂಗಾಳದ ಬಿಜೆಪಿ ಯುವ ಘಟಕದ ನಾಯಕಿ ಪಮೇಲಾ ಗೋಸ್ವಾಮಿ, ಮಾದಕವಸ್ತುವಿನ ಸಮೇತ ಶುಕ್ರವಾರ ಸಿಕ್ಕಿಬಿದ್ದಿದ್ದು, ಕಾರ್‌ನಲ್ಲಿದ್ದ ಸುಮಾರು 10 ಲಕ್ಷ ರೂ ಮೌಲ್ಯದ 90 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪಮೇಲಾ ಗೋಸ್ವಾಮಿ ಅವರನ್ನು ಶನಿವಾರ ಕೋಲ್ಕತ್ತಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಲಾಗಿದೆ. ಈ ಸಂದರ್ಭ ಮಾತನಾಡಿರುವ ಪಮೇಲಾ ಗೋಸ್ವಾಮಿ, “ಇದು ನನ್ನ ವಿರುದ್ಧದ ಸಂಚು. ಇದರಲ್ಲಿ ಪಕ್ಷದ …

Read More »

‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿ

ಬೆಂಗಳೂರು: ಮೊನ್ನೆಯಷ್ಟೆ ಭರ್ಜರಿ ಓಪನಿಂಗ್ ಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ. ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು …

Read More »

ಆನೆಯ ಬೆನ್ನ ಮೇಲೆ ಬೆತ್ತಲೆ ಮಲಗಿ ಫೋಟೋಶೂಟ್

ಮಾಡೆಲ್​ ಒಬ್ಬರು ಆನೆಯ ಬೆನ್ನ ಮೇಲೆ ಬೆತ್ತಲೆ ಮಲಗಿ ಫೋಟೋಶೂಟ್​ ಮಾಡಿಸಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಅನೇಕರು ಮಾಡೆಲ್​ ಮಾಡಿದ ಅವಾಂತರ ಕಂಡು ಗರಂ ಆಗಿದ್ದಾರೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಬಗೆ ಬಗೆಯ ಕಾಮೆಂಟ್​ ಬರೆಯುವ ಮೂಲಕ ಮಾಡೆಲ್​ಗೆ ಬೈಗುಳಗಳ ಸುರಿಮಳೆ ಸುರಿಸಿದ್ದಾರೆ. ರಷ್ಯಾ ಮೂಲದ ಮಾಡೆಲ್​ ಅಲೆಸ್ಯ ಕಾಫೆಲ್ನಿಕೋವಾ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಲು ಆನೆ ಬೆನ್ನೇರಿದ್ದಾರೆ. ಸುಮಾತ್ರನ್​ ಎಂಬ ಅಳಿವಿನಂಚಿನಲ್ಲಿರುವ ಆನೆಯನ್ನು ಫೋಟೋಶೂಟ್​ಗಾಗಿ ಬಳಸಿಕೊಂಡಿದ್ದಾರೆ. ಮಾಡೆಲ್​ ಅಲೆಸ್ಯ ಇತ್ತೀಚೆಗೆ …

Read More »