Breaking News

Uncategorized

ಮಂಗಳಾರತಿಯಲ್ಲಿದ್ದ ಹಣವನ್ನು ಖತರ್ನಾಕ್ ಭಕ್ತೆಯೊಬ್ಬಳು ಎಗರಿಸಿದ ಘಟನೆ

ಮಡಿಕೇರಿ: ದೇವರಿಗೆ ವಿನಮ್ರವಾಗಿ ಕೈ ಮುಗಿದು, ಸುತ್ತು ಬಂದ ಬಳಿಕ ಮಂಗಳಾರತಿಯಲ್ಲಿದ್ದ ಹಣವನ್ನು ಖತರ್ನಾಕ್ ಭಕ್ತೆಯೊಬ್ಬಳು ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 12 ರಂದು ನಡೆದಿರುವ ಮಹಿಳೆಯ ಖತರ್ನಾಕ್ ಕೆಲಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಧವಾರ ಸಂಜೆ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ವೀಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲೇನಿದೆ? ಮಹಿಳೆ ಮೊದಲು ದೇವರಿಗೆ ಕೈಮುಗಿದು ಅತ್ತ-ಇತ್ತ ನೋಡುತ್ತಾಳೆ. ನಂತರ …

Read More »

ಕೈ-ಕಮಲ-ದಳ ಸಾಥ್: ಕಾಫಿನಾಡಿನ ಎನ್.ಆರ್.ಪುರ ಬಂದ್

ಚಿಕ್ಕಮಗಳೂರು: ಶತಮಾನಗಳ ಬದುಕೇ ಬೀದಿಗೆ ಬೀಳುತ್ತೆ ಅಂದಾಗ ಹೋರಾಟ ಅನಿವಾರ್ಯ. ಅಂತಹ ಹೋರಾಟಕ್ಕೆ ಜಿಲ್ಲೆಯ ಎನ್.ಆರ್.ಪುರ ತಾಲೂಕು ಮುಂದಾಗಿದೆ. ಬದುಕಿಗಿಂತ ರಾಜಕೀಯ-ರಾಜಕಾರಣ ದೊಡ್ಡದ್ದಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮರಣ ಶಾಸನವಾಗಿರೋ ಭದ್ರಾ ಹುಲಿ ಯೋಜನೆಯ ಬಫರ್ ಜ್ಹೋನ್, ಪರಿಸರ ಸೂಕ್ಷ್ಮ ವಲಯದ ವಿರುದ್ಧ ಎನ್.ಆರ್.ಪುರ ತಾಲೂಕಿನ ಜನ ಪಕ್ಷಾತೀತವಾಗಿ ಹೋರಾಟಕ್ಕಿಳಿದಿದ್ದಾರೆ. ಇಂದು ಬೆಳಗ್ಗೆ ಏಳು ಗಂಟೆಯಿಂದ ಇಡೀ ದಿನ ಎನ್.ಆರ್.ಪುರ ತಾಲೂಕು ಸಂಪೂರ್ಣ ಸ್ತಬ್ಧಗೊಂಡಿದೆ. ಮೈಸೂರಿನ ಅರಸರಾದ ನರಸಿಂಹರಾಜ …

Read More »

ಜೆಸಿಬಿಯನ್ನು ಮಣ್ಣು ಅಗೆಯಲು ಬಳಸುತ್ತಾರೆಇದೇ ಜೆಸಿಬಿಯಲ್ಲಿ ತನ್ಬೆನ್ನು ಉಜ್ಜಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರು ಭಾರೀ ಸುದ್ದಿ

ಸಾಮಾನ್ಯವಾಗಿ ಜೆಸಿಬಿಯನ್ನು ಮಣ್ಣು ಅಗೆಯಲು ಬಳಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೇ ಜೆಸಿಬಿಯಲ್ಲಿ ತನ್ನ ಬೆನ್ನು ಉಜ್ಜಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರು ಭಾರೀ ಸುದ್ದಿಯಾಗಿದ್ದಾರೆ. ಹೌದು. ಈ ವಿಚಾರ ನಿಮಗೆ ಅಚ್ಚರಿ ಎನಿಸಿದರೂ ಸತ್ಯ. ಯಾಕಂದ್ರೆ ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಕೂಡ ವೈರಲ್ ಆಗುತ್ತಿದೆ. 41 ಸೆಕೆಂಡಿನ ವೀಡಿಯೋವನನ್ನು ಅಬ್ದುಲ್ ನಝಾರ್ ಎಂಬವರು ತಮ್ಮ ಫೇಸ್‍ಬುಕ್ ಖಾತೆಯಿಂದ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋ …

Read More »

ಚಾಲಕ ಕಾರ್ ನಿಲ್ಲಿಸಿದೇ ಪೊಲೀಸ್ ಅಧಿಕಾರಿಯನ್ನೇ ಕಾರ್ ಬಾನೆಟ್ ಮೇಲೆ ಕೆಲ ಮೀಟರ್ ಗಳ ದೂರ ಕೊಂಡೊಯ್ದು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಯಾನಕ ಘಟನೆ ನಡೆದಿದ್ದು, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸರು ಕಾರ್ ತಡೆದಿದ್ದಾರೆ. ಚಾಲಕ ಕಾರ್ ನಿಲ್ಲಿಸಿದೇ ಪೊಲೀಸ್ ಅಧಿಕಾರಿಯನ್ನೇ ಕಾರ್ ಬಾನೆಟ್ ಮೇಲೆ ಕೆಲ ಮೀಟರ್ ಗಳ ದೂರ ಕೊಂಡೊಯ್ದು ಕೆಳಗೆ ಕೆಡವಿದ್ದಾನೆ. ಈ ಭಯಾನಕ ವಿಡಿಯೋ ಇದೀಗ ವೈರಲ್ ಆಗಿದೆ. ದೆಹಲಿಯ ಧೌಲಾ ಕುವಾನ್ ಬಳಿ ಈ ಭಯಾನಕ ಘಟನೆ ನಡೆದಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸರು ಕಾರ್ …

Read More »

ಕೊರೊನಾ ಸೋಂಕು ನಿಯಂತ್ರಿಸಲು ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು:

ಗೋಕಾಕ : ಕೊರೊನಾ ಸೋಂಕು ನಿಯಂತ್ರಿಸಲು ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು  12ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಂ.ಎ. ಹೇಳಿದರು. ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‍ಎಲ್‍ಜೆ ಕಾನೂನು ಕಾಲೇಜ್ ಸಹಯೋಗದಲ್ಲಿ ನಡೆದ ಕೊರೊನಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ನಿಯಂತ್ರಿಸುವ …

Read More »

ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ತಹಶೀಲ್ದಾರ್ ವಿಚಾರಣೆ ಆರಂಭವಾಗಿದೆ. ಕೋವಿಡ್ ನಿರ್ವಹಣೆಯ 1.49 ಕೋಟಿ ಅನುದಾನವನ್ನು ತಮ್ಮ ಸ್ವಂತ ಖಾತೆಗೆ ತಹಶೀಲ್ದಾರ್ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ್  ವಿಧಾನಮಂಡಲ ಅಧಿವೇಶನದಲ್ಲಿ  ಆರೋಪಿಸಿದ್ದರು. ಕೆಲ ಸಂಘಟನೆಗಳು ತನಿಖೆಗೆ ಜಿಲ್ಲಾಧಿಕಾರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದರು. ಇದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ …

Read More »

ಸತ್ತಿದ್ದಾರೆಂದು ಫ್ರೀಜರ್ ಬಾಕ್ಸಿನಲ್ಲಿಟ್ಟ ಕುಟುಂಬಸ್ಥರು – ಬೆಳಗ್ಗೆ ಉಸಿರಾಡುತ್ತಿದ್ದ ವೃದ್

ಚೆನ್ನೈ: ಸತ್ತಿದ್ದಾರೆ ಎಂದು ರಾತ್ರಿ ಪೂರ್ತಿ ಫ್ರೀಜರ್ ಬಾಕ್ಸಿನಲ್ಲಿಟ್ಟ 74 ವರ್ಷದ ವೃದ್ಧರೊಬ್ಬರು ಬೆಳಗ್ಗೆ ಆ ಪೆಟ್ಟಿಗೆಯೊಳಗೆ ಉಸಿರಾಡುತ್ತಿರುವ ವಿಚಿತ್ರ ಘಟನೆ ತಮಿಳುನಾಡಿ ಸೇಲಂನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ಕಂಧಂಪತ್ತಿಯ ನಿವಾಸಿ 74 ವರ್ಷದ ವೃದ್ಧ ಬಾಲಸುಬ್ರಹ್ಮಣ್ಯ ಕುಮಾರ್ ಒಂದು ರಾತ್ರಿ ಪೆಟ್ಟಿಗೆಯಲ್ಲಿದ್ದ ವೃದ್ಧ ಎಂದು ಗುರತಿಸಲಾಗಿದೆ. ಸದ್ಯ ಅವರನ್ನು ಪೊಲೀಸರು ರಕ್ಷಿಸಿದ್ದು, ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಕೊಡಿಸಿದ್ದಾರೆ. ಬಾಲಸುಬ್ರಹ್ಮಣ್ಯ ಕುಮಾರ್ 70 ವರ್ಷದ ಕಿರಿಯ ಸಹೋದರ …

Read More »

ಭಾರತದಲ್ಲಿ ಲಸಿಕೆ ದೊರೆಯಲಿದೆ :ಕೇಂದ್ರ ಆರೋಗ್ಯ ಸಚಿವ ಹೇಳಿಕೆ

ನವದೆಹಲಿ : ವಿಶ್ವವನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್‌ ನಿಗ್ರಹಕ್ಕೆ 2021ರ ಆರಂಭದಿಂದ ಭಾರತದಲ್ಲಿ ಲಸಿಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್‌ ಅವರು ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಈ ಲಸಿಕೆಯನ್ನು ಯಾವ ರೀತಿ ವಿತರಣೆ ಮಾಡಬೇಕು ಎಂಬ ಯೋಜನೆ ರೂಪಿಸುವ ಕಾರ್ಯದಲ್ಲಿ ತಜ್ಞರು ಮಗ್ನರಾಗಿದ್ದಾರೆ ಎಂದೂ ಹೇಳಿದ್ದಾರೆ. ಸಚಿವರ ಸಮೂಹದ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷಾರಂಭದಲ್ಲಿ ದೇಶದಲ್ಲಿ ಲಸಿಕೆ ದೊರೆಯಲಿದೆ. ಒಂದಕ್ಕಿಂತ ಹೆಚ್ಚು ಕಡೆಯಿಂದ ಲಸಿಕೆ …

Read More »

ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾರಿಗೆ ಒಲಿಯುತ್ತಾಳೆ ರಾಜ ರಾಜೇಶ್ವರಿ?

ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರುತ್ತಿದೆ. ಇಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದು, ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.ನಾಮಪತ್ರ ಸಲ್ಲಿಕೆ ಹಿನ್ನೆಲೆ ರಾಜರಾಜೇಶ್ವರಿ ನಗರ ಜಂಟಿ ಆಯುಕ್ತರ ಕಚೇರಿಯ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗಿತ್ತು. ಮಂಗಳವಾರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸುಪ್ರೀಂಕೋರ್ಟ್ …

Read More »

50 ವರ್ಷಗಳಿಂದ ತಿರುಗಿ ನೋಡದ ಸರ್ಕಾರ, ಸ್ವತಃ ಖರ್ಚಿನಲ್ಲಿಯೇ ರಸ್ತೆ ನಿರ್ಮಿಸಿಕೊಂಡ ಗ್ರಾಮಸ್ಥರು..!

ತಿಪಟೂರು , – ಕಳೆದ 50 ವರ್ಷಗಳಿಂದಲೂ ಸರ್ಕಾರದಿಂದ ಅಭಿವೃದ್ಧಿಪಡಿಸದ ರಸ್ತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅಭಿವೃದ್ಧಿಪಡಿಸಿ ಮಾದರಿ ರಸ್ತೆಯನ್ನು ನಿರ್ಮಾಣ ಮಾಡಿ ಜನಪ್ರತಿನಿಗಳ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದ್ದಾರೆ. ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮತ್ತಿಹಳ್ಳಿ ಗ್ರಾಮದ ಕೆರೆಯ ಹಿಂಭಾಗದಿಂದ ಚಿಕ್ಕಬಿದರೆ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 1.5 ಕಿ.ಮೀ.ರಸ್ತೆಯನ್ನು ಒಂದು ಲಕ್ಷ ರೂಗಳ ಸ್ವತಃ ಖರ್ಚಿನಲ್ಲಿಯೇ ಗ್ರಾಮಸ್ಥರು ಅಭಿವೃದ್ಧಿಪಡಿಸಿದ್ದಾರೆ. ರಸ್ತೆಯೂ ಹಿಂದೆ ಕಾಲುದಾರಿಯಲ್ಲಿ ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿಯಲ್ಲಿತ್ತು. ಈ ರಸ್ತೆಯೂ …

Read More »