Home / Uncategorized (page 727)

Uncategorized

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …

Read More »

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ಸೂಟ್‍ಕೇಸ್ ಒಳಗೆ ಮಹಿಳೆಯ ಮೃತದೇಹ ಪತ್ತೆ……..

ಲಕ್ನೋ: ಮಹಿಳೆಯೊಬ್ಬಳ ಮೃತ ದೇಹ ಸೂಟ್‍ಕೇಸ್‍ನೊಳಗೆ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಗಾಜಿಯಾಬಾದ್‍ನ ದಾಶ್ಮೇಶ್ ವಾಟಿಕಾ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸುಮಾರು 25 ರಿಂದ 30 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ಆದರೆ ಮೃತ ಮಹಿಳೆಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯರು ಸೂಟ್‍ಕೇಸ್ ನೋಡಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಮೃತದೇಹವನ್ನು …

Read More »

ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಿಚ್ಚಿಟ್ಟ ನಟಿ ಸುಧಾರಾಣಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು …

Read More »

ಪ್ರೇಯಸಿಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಿತಿನ್……….

ಹೈದರಾಬಾದ್: ಟಾಲಿವುಡ್‍ನ ಖ್ಯಾತ ನಟ ನಿತಿನ್ ತಮ್ಮ ಗೆಳತಿ ಶಾಲಿನಿ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೈದರಾಬಾದ್‍ನ ತಾಜ್ ಫಲಕ್ನುಮಾ ಅರಮನೆಯಲ್ಲಿ ಭಾನುವಾರ ನಟ ನಿತಿನ್ ಮತ್ತು ಶಾಲಿಯ ಮದುವೆ ಸಮಾರಂಭ ನಡೆದಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಿಧಿಸಿರುವ ನಿಯಮಗಳನ್ನು ಅನುಸರಿಸಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿತಿನ್ ಮತ್ತು ಶಾಲಿನಿ ಮದುವೆಗೆ ಟಾಲಿವುಡ್ ಸ್ಟಾರ್ ನಟ-ನಟಿಯರು ಬಂದು ನವ ಜೋಡಿಗೆ ಶುಭಾ …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಲಾಕ್‍ಡೌನ್ ಎಫೆಕ್ಟ್: ಅಕ್ಷಯ್ ಜೊತೆ ನಟಿಸಿದ್ದ ಬಾಲಿವುಡ್ ನಟನಿಂದ ತರಕಾರಿ ಮಾರಾಟ!

ಮುಂಬೈ: ಮಹಾಮಾರಿ ಕೊರೊನಾ ಘಟಾನುಘಟಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಸಂಕಷ್ಟಕ್ಕೀಡು ಮಾಡಿದೆ. ಹಲವು ಮಂದಿ ಬಡವರ ಬದುಕನ್ನೇ ಕಸಿದುಕೊಂಡಿದೆ. ಅಂತೆಯೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ನಟಿಸಿದ್ದ ನಟನೊಬ್ಬ ತನ್ನ ಬದುಕಿನ ಬಂಡಿ ದೂಡಲು ತರಕಾರಿ ಮಾರಾಟದತ್ತ ಮುಖಮಾಡಿದ್ದಾರೆ. ಹೌದು. ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿಯಲ್ಲಿ ನಟಿಸಿದ್ದ ಕಾರ್ತಿಕ ಸಾಹೋ ಅವರೇ ತರಕಾರಿ ಮಾರುತ್ತಾ ಜೀವನ ನಡೆಸುವ ನಟರಾಗಿದ್ದಾರೆ. ಮೂಲತಃ ಒಡಿಶಾದ ಕೇಂದ್ರಪದ ಜಿಲ್ಲೆಯ ಗರದ್ಪುರ ಬ್ಲಾಕ್ ನಿವಾಸಿಯಾಗಿರುವ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »