ಬೆಂಗಳೂರು: ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾದ ಆರೋಪದಡಿ ಬಂಧಿಸಲಾಗಿರುವ ನಟಿ ಸಂಜನಾ ಗಲ್ರಾನಿ ಆಪ್ತ ಎನ್ನಲಾದ ಶೇಖ್ ಫೈಜಲ್ ಎಂಬಾತನ ಮನೆ ಮೇಲೆ ಸಿಸಿಬಿ ಪೊಲೀಸರು ಬುಧವಾರ ದಾಳಿ ಮಾಡಿದರು. ಜಯನಗರದಲ್ಲಿರುವ ಮನೆಗೆ ಹೋಗಿದ್ದ ಪೊಲೀಸರು, ಗಂಟೆಗಟ್ಟಲೇ ಪರಿಶೀಲನೆ ನಡೆಸಿದರು. ಫೈಜಲ್ ಮನೆಯಲ್ಲಿ ಇರಲಿಲ್ಲ. ಸಹೋದರ ಹಾಗೂ ಪತ್ನಿ-ಮಕ್ಕಳು ಮಾತ್ರ ಇದ್ದರು. ಶೋಧ ಮುಗಿಸಿದ ಪೊಲೀಸರು, ಫೈಜಲ್ ಸಹೋದರನನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತಂದಿದ್ದರು. ಫೈಜಲ್ ಬಗ್ಗೆ ಮಾಹಿತಿ ಸಂಗ್ರಹಿಸಿ …
Read More »ಪ್ಲಾಸ್ಮಾ ಥೆರಪಿಯಿಂದ ಪ್ರಯೋಜನವಿಲ್ಲ: ಅಧ್ಯಯನದಲ್ಲಿ ಬಯಲು!
ನವದೆಹಲಿ : ಕೊರೋನಾ ಸೋಂಕಿನಿಂದ ಉಂಟಾಗುವ ಸಾವು ತಡೆಯುವಲ್ಲಿ ಅಥವಾ ಸಾಮಾನ್ಯ ಸೋಂಕು ತೀವ್ರ ಪ್ರಮಾಣಕ್ಕೆ ಹೋಗುವುದನ್ನು ನಿಲ್ಲಿಸುವಲ್ಲಿ ಪ್ಲಾಸ್ಮಾ ಥೆರಪಿಯಿಂದ ವಿಶೇಷ ಪ್ರಯೋಜನವೇನೂ ಆಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ದೇಶದ 39 ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಪ್ರಯೋಜನದ ಬಗ್ಗೆ ಏ.22ರಿಂದ ಜು.12ರವರೆಗೆ ಐಸಿಎಂಆರ್ ತಂಡ ಅಧ್ಯಯನ ನಡೆಸಿತ್ತು. ಆಸ್ಪತ್ರೆಗೆ ದಾಖಲಾದ 464 ಮಂದಿ ಸಾಮಾನ್ಯ ಪ್ರಮಾಣದ …
Read More »ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ
ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್ಡಿಆರ್ಎಫ್ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …
Read More »ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಸಾಂಬಾ ಎಲ್ಲ ಆರೋಪಿಗಳಿಗೆ ಚೈನ್ ಲಿಂಕ್,ಆರೋಪಿಗಳ ಜೊತೆಗೆ ಲೂಮ್ ಪೆಪ್ಪರ್ ನೇರ ಸಂಪರ್ಕ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ 7ನೇ ಆರೋಪಿಯಾಗಿರುವ ಸೆನೆಗಲ್ ದೇಶದ ಪ್ರಜೆ ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಸಾಂಬಾ ಎಲ್ಲ ಆರೋಪಿಗಳಿಗೆ ಚೈನ್ ಲಿಂಕ್ ಆಗಿರುವ ವಿಚಾರ ಸಿಸಿಪಿ ವಿಚಾರಣೆ ವೇಳೆ ಗೊತ್ತಾಗಿದೆ ಹೌದು. ಸೆರೆ ಸಿಕ್ಕ ಆರಂಭದಲ್ಲಿ “ಐ ದೋಂತ್ ನೋ ಇಂಗ್ಲಿಷ್” ನನಗೆ ಆಫ್ರಿಕನ್ ಭಾಷೆ ಬಿಟ್ಟರೆ ಬೇರೆ ಯಾವುದೇ ಭಾಷೆ ಬರುವುದಿಲ್ಲ ಎಂದು ಸಾಂಬಾ ಹೇಳಿದ್ದ. ಪ್ರಕರಣದಲ್ಲಿ ಈತನ ಪಾತ್ರ ದೊಡ್ಡದಿದೆ ಎಂದು ತಿಳಿದಿದ್ದ ಪೊಲೀಸರಿಗೆ …
Read More »ಸಾಹಸಮಯ ಫೋಟೋಶೂಟ್ ವರನ ಕೈಯಿಂದ ಜಾರಿದ ವಧು ಫೋಟೋಗೆ ಟ್ವಿಸ್ಟ್
ವಾಷಿಂಗ್ಟನ್: ಇತ್ತೀಚೆಗೆ ವೆಡ್ಡಿಂಗ್ ಫೋಟೋಶೂಟ್ ಟ್ರೆಂಡ್ ಆಗಿದೆ. ವಧು-ವರ ಇಬ್ಬರೂ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಇದೀಗ ವಧುಯೊಬ್ಬಳು ಸುಮಾರು 1,900 ಅಡಿ ಎತ್ತರದ ಬಂಡೆಯ ಅಂಚಿನಲ್ಲಿ ತೂಗಾಡುವ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಅಮೆರಿಕದ ಅರ್ಕಾನ್ಸಾಸ್ ಮೂಲದ ರಿಯಾನ್ ಮೈಯರ್ಸ್ (30) ಮತ್ತು ಪತ್ನಿ ಸ್ಕೈ (28) ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಜೋಡಿ ಅದ್ಧೂರಿಯಾಗಿ ಮದುವೆಯಾಗಲು ಪ್ಲಾನ್ ಮಾಡಿದ್ದರು. ಆದರೆ ಕೊರೊನಾ ಹಿನ್ನೆಲೆ ಲಾಕ್ಡೌನ್ ನಿರ್ಬಂಧಗಳಿಂದಾಗಿ ಅದು ಸಾಧ್ಯವಾಗಿಲ್ಲ. ಕೊನೆಗೆ …
Read More »T20: ಡೇವಿಡ್ ಮಾಲನ್ ನಂ.1 ಬ್ಯಾಟ್ಸ್ಮನ್
ದುಬಾೖ: ಇಂಗ್ಲೆಂಡಿನ ಡೇವಿಡ್ ಮಾಲನ್ ಟಿ20 ಕ್ರಿಕೆಟಿನ ನೂತನ ನಂಬರ್ ವನ್ ಬ್ಯಾಟ್ಸ್ಮನ್ ಆಗಿ ಮೂಡಿಬಂದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಮಿಂಚಿದ ಮಾಲನ್ 4 ಸ್ಥಾನ ಮೇಲೇರಿ ಮೊದಲ ಸಲ ಅಗ್ರಸ್ಥಾನದ ಗೌರವ ಸಂಪಾದಿಸಿದರು. ಕಳೆದ ನವೆಂಬರ್ನಲ್ಲಿ ನಂ.2 ಎನಿಸಿದ್ದು ಮಾಲನ್ ಅವರ ಈವರೆಗಿನ ಅತ್ಯುತ್ತಮ ರ್ಯಾಂಕಿಂಗ್ ಆಗಿತ್ತು. ಇದರಿಂದ ಪಾಕಿಸ್ಥಾನದ ಬಾಬರ್ ಆಜಂ ಅವರಿಗೆ ನಂ.1 ಸ್ಥಾನ ನಷ್ಟವಾಯಿತು. ಅವರೀಗ ದ್ವಿತೀಯ ಸ್ಥಾನಕ್ಕೆ ಇಳಿದಿದ್ದಾರೆ. ದ್ವಿತೀಯ ಸ್ಥಾನದಲ್ಲಿದ್ದ ಕೆ.ಎಲ್. ರಾಹುಲ್ …
Read More »ಗೆದ್ದು ನಂ.1 ಸ್ಥಾನ ಮರಳಿ ಪಡೆದ ಆಸೀಸ್
ಸೌತಾಂಪ್ಟನ್: ಇಂಗ್ಲೆಂಡ್ ಎದುರಿನ ಅಂತಿಮ ಟಿ20 ಪಂದ್ಯವನ್ನು 5 ವಿಕೆಟ್ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯ ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು. ಜತೆಗೆ ನಂ.1 ಗೌರವವನ್ನೂ ಮರಳಿ ಸಂಪಾದಿಸಿತು. ಸತತ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡ ಬಳಿಕ ಇಂಗ್ಲೆಂಡ್ ಟಿ20 ತಂಡ ರ್ಯಾಂಕಿಂಗ್ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ನೆಗೆದಿತ್ತು. ಆದರೀಗ 3ನೇ ಪಂದ್ಯವನ್ನು ಜಯಿಸುವ ಮೂಲಕ ಕಾಂಗರೂ ಪಡೆ ಮತ್ತೆ ನಂ.1 ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಯಿತು. ಸರಣಿಯನ್ನು ಕ್ಲೀನ್ಸ್ವೀಪ್ …
Read More »2016ರ ಬಳಿಕ ಆರ್ಸಿಬಿ ತಂಡ ಸಮತೋಲಿತವಾಗಿದೆ: ವಿರಾಟ್ ಕೊಹ್ಲಿ
ದುಬೈ: ಐಪಿಎಲ್ 2016ರ ಬಳಿಕ ಪ್ರಸ್ತುತ ಬೆಂಗಳೂರು ತಂಡ ಅತ್ಯಂತ ಸಮತೋಲಿತ ತಂಡವಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಬೆಂಗಳೂರು ತಂಡ 2016ರ ಫೈನಲ್ ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು. ಈ ಬಾರಿ ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೇಕಾದ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ವಿರಾಟ್ ಆರ್ಸಿಬಿ ಟಿವಿಗೆ ತಿಳಿಸಿದರು. ತಂಡದ ಯುವ …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪ್ ಸೆಟ್ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಆರ್ ಆರ್ ಸಂಖ್ಯೆಗಳನ್ನು ಪಡೆದು 50 ರೂ. ನೋಂದಣಿ ಶುಲ್ಕ ಪಾವತಿಸಿದ ರೈತರು ತಮ್ಮ ಅನುಕೂಲದ ಪ್ರಕಾರ ಸರ್ವಿಸ್ ವೈರ್ ಗಳ ಮೂಲಕ ವಿದ್ಯುತ್ …
Read More »ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ. ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ …
Read More »