ಮುಖ್ಯಮಂತ್ರಿಗಳು ರಾಜ್ಯದ ಸಂಸದರಿಗೆ ಸೂಕ್ತ ಮಾರ್ಗದರ್ಶನ ಮಾಡಿ ಲೋಕಸಭೆಯಲ್ಲಿ ಬಾಯ್ಬಿಡಲು ಹೇಳಬೇಕು.ಕಳೆದ ಕೆಲವು ತಿಂಗಳುಗಳಿಂದ ನೆರೆಯ ಮಹಾರಾಷ್ಟ್ರದ ಶಿವಸೇನೆ ಸರಕಾರ ಗಡಿವಿವಾದವನ್ನು ಕೆದಕುತ್ತಲೇ ಇದ್ದು ಈಗ ಮತ್ತೊಂದು ಹೆಜ್ಜೆಯನ್ನು ಮುಂದಿರಿಸಿದೆ.ತನ್ನ ಆಟಕ್ಕೆ ಈಗ ಲೋಕಸಭೆಯನ್ನು ಆಯ್ಕೆ ಮಾಡಿಕೊಂಡಿದೆ! ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮೊದಲು ಕರ್ನಾಟಕದ ವಿರುದ್ಧ ಟ್ವೀಟ್ ಮಾಡಿದರು.ಬೆಳಗಾವಿ ಹಾಗೂ ಇತರ ಗಡಿ ಪ್ರದೇಶಗಳನ್ನು ಕರ್ನಾಟಕದ ಆಕ್ರಮಿತ ಪ್ರದೇಶಗಳೆಂದು ಕರೆದದ್ದಲ್ಲದೇ ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ತಮ್ಮ ಸರಕಾರ ಬದ್ಧವಾಗಿದೆ …
Read More »ರೈತರ ಅಳಲು ಆಲಿಸಿದ ಜಿಲ್ಲಾಧಿಕಾರಿ
ಬೆಳಗಾವಿ: ಹೊರವಲಯದ ಹಲಗಾ-ಮಚ್ಚೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಜಮೀನು ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸೊದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ರೈತರ ಅಹವಾಲು ಆಲಿಸಿದರು. ‘ಯಾವುದೇ ಕಾರಣಕ್ಕೂ ನಮ್ಮ ಜಮೀನು ಬಿಟ್ಟು ಕೊಡುವುದಿಲ್ಲ. ಕಬಳಿಸಿಕೊಳ್ಳುತ್ತಿರುವುದನ್ನು ತಡೆಯಬೇಕು. ಇದು ಫಲವತ್ತಾದ ಕೃಷಿ ಭೂಮಿ. ಈ ತುಂಡು ಜಮೀನು ಬಿಟ್ಟರೆ ನಮಗೆ ಪರ್ಯಾಯವಿಲ್ಲ. ಪರಿಹಾರದ ವಿಷಯದಲ್ಲಿಯೂ ಕೆಲವರು ಮಧ್ಯವರ್ತಿಗಳಾಗಿ ಬಂದು ಸತಾಯಿಸುತ್ತಿದ್ದಾರೆ. …
Read More »ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ
ಮೀರತ್: ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಬಾಲಕಿ ಕುಟುಂಬದವರು ದೂರು ನೀಡಿದ್ದಾರೆ. ಮೀರತ್ ನ ಮೆಡಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು, ಆರೋಪಿಗಳನ್ನು ಈಗ ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ. ಆದರೆ, ಬಂಧಿತ ಯುವಕನ ಪೋಷಕರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಆಧಾರ ರಹಿತ ಆರೋಪ ಇದಾಗಿದ್ದು, ಯುವಕನನ್ನು ಬಿಡುಗಡೆ …
Read More »ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ. ಅಖಂಡ ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ತಮ್ಮ ತಮ್ಮ ಪ್ರತಿಷ್ಠೆ ಬದಿಗಿಟ್ಟು ಪಕ್ಷಾತೀತವಾಗಿ ಕನ್ನಡ ನಾಡು, ನುಡಿ, ನೆಲ, ಜಲಕ್ಕಾಗಿ ಹೋರಾಟ ನಡೆಸಬೇಕಾಗಿದೆ. ಸುಮಾರು …
Read More »ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿನವದೆಹಲಿಯಲ್ಲೆಕ್ಕೋ ?
ನವದೆಹಲಿ – ಕೇಂದ್ರ ನಾಗರಿಕ ವಿಮಾನಯಾನ ಹಾಗೂ ವಸತಿ ಮತ್ತು ನಗರ ವ್ಯವಹಾರ ಖಾತೆ ರಾಜ್ಯ ಸಚಿವ ಹರ್ದಿಪ್ ಸಿಂಗ್ ಪುರಿ ಅವರ ನವದೆಹಲಿಯ ನಿರ್ಮಾಣ್ ಭವನ ಕಚೇರಿಗೆ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೌಜನ್ಯದ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿಗಳು ಹಾಗೂ ಹುಬ್ಬಳ್ಳಿಯ ಶ್ರೀಧರ್ ಪರಿಮಳಾಚಾರ್ ಉಪಸ್ಥಿತರಿದ್ದರು.
Read More »ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ.
ಶಿರಸಿ: ಶ್ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ. ಮನಜವಳ್ಳಿಯ ಕೃಷ್ಣ ಗೌಡ ಬಂಧಿತ ಆರೊಪಿ. ಬಂಧಿತನಿಂದ 12. ಕೆ.ಜಿ. ತೂಕದ ಶ್ರೀಗಂಧ ಹಾಗೂ ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿರಸಿ ತಾಲೂಕಿನ ಹುಲೆಕಲ್ ವಲಯದ ಶೀಗೆಹಳ್ಳಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಈತ ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ. ಗ್ರಾಮಸ್ಥರು ಹಾಗೂ ಗ್ರಾಮ ಅರಣ್ಯ ಸಮೀತಿಯ ಖಚಿತ ಮಾಹಿತಿ ಮೇರೆಗೆ ಅರಣ್ಯ …
Read More »ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ
ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ‘ಮೊದಲು ಎರಡ್ಮೂರು ತಿಂಗಳಿಗೊಮ್ಮೆ ಅರ್ಜಿಗಳ ಪರಿಶೀಲನೆ ನಡೆಯುತ್ತಿತ್ತು. ಈಗ ಪ್ರತಿ ತಿಂಗಳು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ …
Read More »ಯಡಿಯೂರಪ್ಪ ಮೇಲೆ ಮತ್ತೆ ಹೆಚ್ಚಿದ ಮೀಸಲಾತಿ ಒತ್ತಡ: ಸಭೆ ನಡೆಸಿದ ಲಿಂಗಾಯಿತ ಮಠಾಧೀಶರು, ಒಬಿಸಿ ಸೇರ್ಪಡೆಗೆ ಆಗ್ರಹ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಯಡಿಯೂರಪ್ಪ ಪರವಾಗಿ ನಿಂತಿರುವ ಮಠಾಧೀಶರ ಬಣ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತಿರುಗಿಬಿದ್ದಿದೆ. ಈ ಬೆಳವಣಿಗೆ ನಡುವೆ ವಿರಕ್ತ ವೀರಶೈವ ಸಮುದಾಯದ ಎಲ್ಲಾ ಮಠಗಳು ಒಂದೇ ಎಂಬುದನ್ನು ಎತ್ತಿ ತೋರಿಸಲು ನಗರದಲ್ಲಿಂದು ಸಭೆ ನಡೆಸಿದರು. ರಾಷ್ಟ್ರೀಯ ವೀರಶೈವ ಲಿಂಗಾಯಿತ ಮಠಾಧೀಶರ ಒಕ್ಕೂಟದಿಂದ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ …
Read More »ರಾಜ್ಯದ ‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ : ‘ಅಕ್ಕಿ, ಗೋಧಿ ಪ್ರಮಾಣ’ದಲ್ಲಿ ಕಡಿತ
ಬೆಳಗಾವಿ : ರಾಜ್ಯದಲ್ಲಿ ಭೌಗೋಳಿಕವಾಗಿ ಸ್ಥಳೀಯ ಆಹಾರ ಪದ್ದತಿಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಅಕ್ಕಿ ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಪಡಿತರದಾರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ, ನಾಗರೀಕ ಪೂರೈಕೆ ಹಾಗೂ …
Read More »ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ…ರಮೇಶ ಜಾರಕಿಹೊಳಿ ವ್ಯಂಗ್ಯ
ಗೋಕಾಕ್ನಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ಗೆ ಮೋಸ್ಟ್ ವೆಲ್ಕಮ್ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಗ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಶನಿವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕನಿಂದ ಸ್ಪರ್ಧೆ ಮಾಡೋದಾದ್ರೆ ಮೋಸ್ಟ್ ವೆಲ್ ಕಮ್ ಅಂತಾ ಹೇಳಿದ್ದೇನೆ. ಇನ್ನು ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ, ಅದಕ್ಕೆ ಹೀಗೆ ಮಾತಾನಡುತ್ತಿದ್ದಾರೆ. ಔಟ್ ಆಪ್ ಮೈಂಡ್ …
Read More »
Laxmi News 24×7