ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್ವೈ ಪಾಸಿಟಿವ್ ಆಗಿದ್ದಾರೆ..ರಮೇಶ ಜಾರಕಿಹೊಳಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಮಂತ್ರಿಯಾಗಿ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಅದೇ ರೀತಿ ಸಮಾಜದ ಪ್ರತಿನಿಧಿಯಾಗಿ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ವಾಲ್ಮೀಕಿ …
Read More »ಸತತ ಐದನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ
ನವದೆಹಲಿ: ಸತತ ಐದನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದ್ದು, ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ ₹95 ರ ಸನಿಹಕ್ಕೆ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆ ಪ್ರಕಾರ ಶನಿವಾರ ಪೆಟ್ರೋಲ್ ಲೀಟರ್ಗೆ 30 ಪೈಸೆ ಮತ್ತು ಡೀಸೆಲ್ ಲೀಟರ್ಗೆ 36 ಪೈಸೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ₹88.41 ಕ್ಕೆ ತಲುಪಿದ್ದರೆ, ಡೀಸೆಲ್ ದರ ₹78.74 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ₹94.93 ಹಾಗೂ ಡೀಸೆಲ್ …
Read More »ಗುಜರಾತ್: ಸ್ಥಳೀಯ ಸಂಸ್ಥೆ ಚುನಾವಣೆ; 31 ಮುಸ್ಲಿಂ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್
ಬರೂಚ್: ಗುಜರಾತ್ನ ಬರೂಚ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಒಟ್ಟು 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿಸಿನ್ಹಾ ಅಟೊದಾರಿಯಾ ಅವರ ಪ್ರಕಾರ, ಪಕ್ಷ ಇಷ್ಟು ಸಂಖ್ಯೆಯಲ್ಲಿ ಮುಸಲ್ಮಾನರನ್ನು ಚುನಾವಣೆಗೆ ಕಣಕ್ಕಿಳಿಸಿರುವುದು ಇದೇ ಮೊದಲು. ಆದರೆ, ಮುಸಲ್ಮಾನರನ್ನು ಕಣಕ್ಕಿಳಿಸಿರುವುದಕ್ಕೂ, ವಿರೋಧಿ ಪಾಳಯದಲ್ಲಿ ಭಾರತೀಯ ಟ್ರೈಬಲ್ ಪಾರ್ಟಿ (ಬಿಟಿಬಿ) ಮತ್ತು ಅಸಾಸುದ್ದೀನ್ ಒವೈಸಿ ಅವರ ಪಕ್ಷದ ಜೊತೆಗಿನ ಮೈತ್ರಿಗೂ ಸಂಬಂಧವಿಲ್ಲ ಎಂದರು. ಬರೂಚ್ ಜಿಲ್ಲೆಯಲ್ಲಿ ಮುಸಲ್ಮಾನರು …
Read More »ಜೀವನವೆಂಬ ಪರೀಕ್ಷೆಗೆ ಪಠ್ಯವಿಲ್ಲ: ಸುಧಾಮೂರ್ತಿ
ಬೆಂಗಳೂರು: ‘ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಾತ್ರಕ್ಕೆ ಎಲ್ಲವೂ ದೊರೆಯುವುದಿಲ್ಲ. ಪ್ರತಿಯೊಬ್ಬರೂ ಜೀವನವೆಂಬ ಪರೀಕ್ಷೆ ಎದುರಿಸಬೇಕಾಗುತ್ತದೆ. ಆದರೆ, ಇಲ್ಲಿ ನಿರ್ದಿಷ್ಟ ಪಠ್ಯ ಇರದ ಕಾರಣ ನಮಗೆ ಎದುರಾಗುವ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಾ ಸಾಗಬೇಕಿದೆ’ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದರು. ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು 75ನೇ ಬ್ಯಾಚ್ನ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ವೇದಿಕೆಯಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಅಡೆತಡೆಗಳು, ಸವಾಲುಗಳು ಎಲ್ಲರ ಜೀವನದಲ್ಲಿಯೂ ಇರುತ್ತವೆ. ಅದನ್ನು …
Read More »ಸ್ಪರ್ಧೆಗೆ ಸಿದ್ದ ಎಂದ ಲಕ್ಷ್ಮಿ ಹೆಬ್ಬಾಳಕರ್,ಮೋಸ್ಟ್ ವೆಲ್ ಕಂ ಎಂದ ರಮೇಶ್ ಜಾರಕಿಹೊಳಿ
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಹಸ್ತಕ್ಷೇಪ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಗಂಭೀರ ಎಚ್ಚರಿಕೆ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ನಾನೂ ಗೋಕಾಕ ಕ್ಷೇತ್ರದತ್ತ ಹೋಗಬೇಕಾಗುತ್ತದೆ. ಪಕ್ಷ ಬಯಸಿದರೆ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸಲೂ ಸಿದ್ಧ ಎಂದು ಸವಾಲೆಸೆದಿದ್ದಾರೆ ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಿ ಹೆಬ್ಬಾಳಕರ್ ಗೆ ಮೋಸ್ಟ್ ವೆಲ್ ಕಂ ಎಂದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಇಬ್ಬರೂ ಪರಸ್ಪರರಿಗೆ ಟಾಂಗ್ …
Read More »ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ.
ಬೆಂಗಳೂರು: ಪ್ರತಿಯೊಂದಕ್ಕೂ ದುಪ್ಪಟ್ಟು ತೆರಿಗೆ, ದಂಡ, ಶುಲ್ಕ ಕಟ್ಟಿ ಹೈರಾಣಾಗಿರುವ ಬೆಂಗಳೂರಿನ ಜನರಿಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಕಾದಿದೆ. ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ. ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ರೂಪಿಸಿರುವ ನೂತನ ಪಾರ್ಕಿಂಗ್ ನೀತಿಯಲ್ಲಿ ಹಲವು ಅಂಶಗಳನ್ನ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರದ ನಗರ ಅಭಿವೃದ್ಧಿ ಇಲಾಖೆಯು ಈ ಹೊಸ ನೀತಿಯ ಕರಡನ್ನ ಅಂಗೀಕರಿಸಿದೆ. …
Read More »ಮೀಸಲಾತಿ ಹೋರಾಟ ಎತ್ತಸಾಗಿದೆ ಎಂದ ಹೈಕೋರ್ಟ್ ವಕೀಲ ಎಸ್.ವಿ.ಎಸ್
ಬೆಂಗಳೂರು: ಇತ್ತೀಚೆಗೆ ಸಮಾಜದಲ್ಲಿ ಜಾತಿ ಜಾತಿಗಳಿಗೂ ಮೀಸಲಾತಿ ನೀಡಬೇಕೆಂದು ಸಮಾಜವನ್ನು ಮಾರ್ಗದರ್ಶನ ಮಾಡುವ ಸ್ವಾಮೀಜಿಗಳು ಹೋರಾಟಕ್ಕೆ ಇಳಿದಿರುವುದು ಬಹು ಚರ್ಚಿತ ಅಂಶವಾಗಿದೆ. ಧರ್ಮದ ಅನುಯಾಯಿಗಳಾದ ಪೂಜ್ಯರುಗಳೇ ಈ ರೀತಿಯ ಹಾದಿಯಲ್ಲಿ ಹೊರಟಿರುವುದು ಬೇಸರತರಿಸಿದೆ ಎಂದು ಹೈಕೋರ್ಟ್ ವಕೀಲ ಎಸ್.ವಿ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದಾರೆ. ಸನ್ಯಾಸತ್ವದ ಮೂಲತ್ವವೇ ಸರ್ವಸಂಘ ಪರಿತ್ಯಾಗ ಎಂಬ ಅರ್ಥವನ್ನು ವೇದಗಳ ಕಾಲದಿಂದಲೂ ಅಳವಡಿಕೆಯಾಗಿದೆ. ಧರ್ಮದ ತಳಹದಿಯೇ ಜಾತಿ. ಈ ಜಾತಿ ಜಾತಿಗಳ ಸಮಷ್ಟಿಯೇ ಧರ್ಮ. ಆದರೆ ಈ ಜಾತಿ …
Read More »ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ
ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪ ಹಾಗೂ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ನೋಟೀಸ್ ನೀಡಿದ್ದು, 15 ದಿನಗಳ ಒಳಗೆ ಉತ್ತರ ನಿಡುವಂತೆ ಸೂಚಿಸಿದೆ. ಯತ್ನಾಳ್ ಯಡಿಯೂರಪ್ಪ ವಿರುದ್ಧ …
Read More »ಗದಗದಲ್ಲಿ ರಾಜ್ಯದ ಮೊದಲ ಇವಿಎಂ ಗೋದಾಮು ಉದ್ಘಾಟನೆ
ಗದಗ: ರಾಜ್ಯದ ಮೊದಲ ಎಲೆಕ್ಟ್ರಾನಿಕ್ ಮತದಾನ ಯಂತ್ರ (ಇವಿಎಂ) ಗೋದಾಮನ್ನು ರೈಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಗದಗದಲ್ಲಿ ಉದ್ಘಾಟಿಸಿದರು. ಸುಮಾರು 2.65 ಕೋಟಿ ರು ವೆಚ್ಚದಲ್ಲಿ ಈ ಕಟ್ಟಡ ಜಿಲ್ಲಾಧಿಕಾರಿ ಕಚೇರಿ ಹಿಂದೆ ನಿರ್ಮಾಣವಾಗಿದೆ, ಹೆಚ್ಚು ಸುರಕ್ಷಿತವಾದ ಕಟ್ಟಡವು ಪ್ರವೇಶದ್ವಾರದ ಬಳಿ ಮೊದಲ ಹಂತದ ಚೆಕ್ರೂಮ್ ಮತ್ತು ಜಿಲ್ಲೆಯ ನಾಲ್ಕು ಅಸೆಂಬ್ಲಿ ವಿಭಾಗಗಳಿಗೆ ಮೀಸಲಾಗಿರುವ ನಾಲ್ಕು ಇಂಟರ್ ಕನೆಕ್ಟೆಡ್ ಸಭಾಂಗಣಗಳನ್ನು ಹೊಂದಿದೆ. ಎಲ್ಲಾ ಸಭಾಂಗಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು, …
Read More »ಪಕ್ಷ ಬಯಸಿದ್ರೆ ಗೋಕಾಕ್ನಿಂದ ನಾನೇ ಸ್ಪರ್ಧೆ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಪಕ್ಷ ಬಯಸಿದ್ರೆ ಗೋಕಾಕ್ನಿಂದ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ ಎಂದಿದ್ದಾರೆ. ಗ್ರಾಮ ಪಂಚಾಯತಿ ಸದಸ್ಯರಿಗೆ …
Read More »
Laxmi News 24×7