ವಿಜಯಪುರ (ಫೆ. 7): ರಾಮ ಮಂದಿರ ನಿರ್ಮಾಣದ ಕನಸು ಇದೀಗ ನನಸಾಗುತ್ತಿದೆ. ಇನ್ನು ಕಾಶಿ ಮತ್ತು ಮಥುರಾಗಳಲ್ಲಿ ಮಂದಿರ ನಿರ್ಮಾಣ ಬಾಕಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಚ್ ಪರವಾಗಿ ಆಯೋಜಿಸಲಾಗಿದ್ದ ನಿಧಿ ಸಮರ್ಪಣಾ ಮಹಾ ಅಭಿಯಾನದ ಸಭೆಯಲ್ಲಿ ಅವರು ರಾಮ ಮಂದಿರ ನಿರ್ಮಾಣಕ್ಕೆ ರೂ. 5 ಲಕ್ಷ ದೇಣಿಗೆ ನೀಡಿ ಮಾತನಾಡಿದರು. ಎಲ್ಲವೂ …
Read More »1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ
ಕಿತ್ತೂರು- ಕಿತ್ತೂರ ಮತ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಸೋಮವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೈಲಹೊಂಗಲ ಕಛೇರಿಯಲ್ಲಿ ಸಾರ್ವಜನಿಕ ಭೇಟಿ . 12:30ಕ್ಕೆ ಬೈಲೂರ ಗ್ರಾಮದಲ್ಲಿ ಜಲಮಿಷನ್ ಯೋಜನೆಯಡಿ 1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ ಹಾಗೂ ಗಣಪತಿ ದೇವಸ್ಥಾನದ ಹತ್ತಿರ 5 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 1 ಗಂಟೆಗೆ ದೇಗಲೊಳ್ಳಿ …
Read More »ಮೇ.9ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ/ ಜಿಲ್ಲಾ/ ಗಡಿನಾಡು ಘಟಕ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೇ.9ರಂದು ಮತದಾನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಿಳಿಸಿದೆ. ಈ ಬಾರಿ ಹೊಸ ಕ.ಸಾ.ಪ ನಿಬಂಧನೆಗಳ ಅನ್ವಯ 28 ವಿಧಾನಸಭಾ ಕ್ಷೇತ್ರಗಳಲ್ಲೂ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಯಾ ಕ್ಷೇತ್ರಕ್ಕೆ ಗುರುತಿಸಲಾಗುವ ಚುನಾವಣಾ ಮತಕ್ಷೇತ್ರಕ್ಕೆ ಅಧಿಸೂಚನೆ ಹಾಗೂ ಕರಡು ಮತದಾನ ಪಟ್ಟಿ ಪ್ರಕಟಿಸಲಾಗುತ್ತದೆ.
Read More »ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ
ಬೆಳಗಾವಿ – ಜಾಂಬೋಟಿಯಲ್ಲಿ ಜನಕಲ್ಯಾಣ ಸಮಿತಿಯ ವಿದ್ಯಾ ವಿಕಾಸ ಸಮಿತಿಯಿಂದ ಪುನರ್ ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ. ಶಿಕ್ಷಣ ಸಚಿವ ಸುರೇಶ ಕುಮಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ವಿಟಿಯು ಕುಲಪತಿ ಕರಿಸಿದ್ದಪ್ಪ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
Read More »ಪತ್ನಿಯ ಎಲ್ಐಸಿ ಪಾಲಿಸಿ ಮೇಲೆ ಕಣ್ಣು ಹಾಕಿದ ಚಾರ್ಟೆರ್ಡ್ ಅಕೌಂಟೆಂಟ್ ಪತಿ ಮಾಡಿದ್ದೇನು ನೋಡಿ!
ಪಲಂಪುರ್: ಪತ್ನಿ ಮಾಡಿಸಿದ್ದ ಎಲ್ಐಸಿ ಪಾಲಿಸಿಯ ಹಣವನ್ನು ಪಡೆಯುವುದಕ್ಕೋಸ್ಕರ ಇಲ್ಲೊಬ್ಬ ನೀಚ ಪತಿ ಆಕೆಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಕೊಲೆ ಮಾಡಿ ಅದು ತಿಳಿಯದಂತೆ ರಸ್ತೆ ಅಪಘಾತ ಎಂದು ಕಥೆಯನ್ನು ಸೃಷ್ಟಿಸಿದ್ದಾನೆ. ಸುಪಾರಿ ನೀಡಿ ಅಪಘಾತ ಮಾಡಿಸಿರುವ ಈ ನೀಚ ಪತಿಯ ಕುಕೃತ್ಯ ಬೆಳಕಿಗೆ ಬಂದಿದ್ದು ಇದೀಗ ಹಣವೂ ಇಲ್ಲದೇ, ಪತ್ನಿಯನ್ನು ಕೊಲೆ ಮಾಡಿದ್ದಕ್ಕೆ ಜೈಲು ಸೇರಿದ್ದಾನೆ. ಮೂರು ತಿಂಗಳ ಹಿಂದೆ ಮಾಡಿಸಿದ್ದ ಎಲ್ ಐಸಿ ಪಾಲಿಸಿಯಲ್ಲಿ …
Read More »ಇನ್ಮೂಂದೆ ಪಡಿತರ ಧಾನ್ಯಗಳನ್ನು ಪಡೆಯುವವರಿಗೆ ಗುಡ್ ನ್ಯೂಸ್ ಏನು.?
ನವದೆಹಲಿ : ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ..! ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಯಾವುದೇ ಪಡಿತರದಾರರಿಗೂ ತೊಂದರೆಯಾಗದಂತೆ ಈಗಾಗಲೇ ಕೆಲ ರಾಜ್ಯಗಳಲ್ಲಿ …
Read More »ಗೃಹ ಸಚಿವ ಅಮಿತ್ ಶಾ ಧೌಲಿಗಂಗಾ ಪ್ರವಾಹ ಸ್ಥಳಕ್ಕೆ ಭೇಟಿ
ಉತ್ತರಾಖಂಡ: ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಪೋನ್ ಮೂಲಕ ದುರಂತದ ಮಾಹಿತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ವೇಳೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವರು, ‘ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಕುರಿತು ನಾನು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವ್ರ ಬಳಿ ಮಾಹಿತಿ ಪಡೆದುಕೊಂಡಿದ್ದೇನೆ. …
Read More »ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ …
Read More »ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!
ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ರಾಜ್ಯದ ರೈತರು ಬೆಳೆಯುವ ಭತ್ತವನ್ನು ಕ್ವಿಂಟಾಲ್ ಗೆ 1,800 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿ ಅಕ್ಕಿ ಮಾಡಿಸಲು ಬೇಕಾದ ಖರ್ಚನ್ನು ರಾಜ್ಯ ಸರ್ಕಾರವೇ ಕೊಡಲಿದ್ದು, ಏಪ್ರಿಲ್ ನಂತರದಲ್ಲಿ ರಾಜ್ಯದ ಅಕ್ಕಿಯನ್ನು …
Read More »ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರ ಸೆರೆ
ಕಲಬುರಗಿ: ನಗರದ ರೈಲು ನಿಲ್ದಾಣದ ಬಳಿ ನಕ್ಷತ್ರ ಆಮೆಯೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಿದ್ಯಾನಂದ ಮತ್ತು ಜಿತೇಂದ್ರ ಬಂಧಿತ ಆರೋಪಿಗಳು. ಇವರುಜೀವಂತ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಆಮೆ ಸಂತತಿ ಆಳಿವಿನ ಅಂಚಿಗೆ ತಲುಪಿದ್ದು, ಅಪರೂಪದ್ದಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕ್ಷತ್ರ ಆಮೆಗೆ ತುಂಬಾ ಬೇಡಿಕೆ ಇದೆ. ನಕ್ಷತ್ರ ಆಮೆ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂರಕ್ಷಣಾಧಿಕಾರಿ …
Read More »
Laxmi News 24×7