ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (83) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಪತ್ರಕರ್ತರ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಿ ಹಿಂದು ಪತ್ರಿಕೆಯಲ್ಲಿ ಸುಮಾರು 47 ವರ್ಷ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ವಿವಿಧ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು.
Read More »ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …
Read More »D ಗ್ಯಾಂಗ ಗೆ ಜೈ ಲಾ ಬೆಲಾ.. ?
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. …
Read More »‘ವಾಹನ ಸವಾರ’ರಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ‘ತೆರಿಗೆ ದರ’ ಹಚ್ಚಳ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡಿದೆ. …
Read More »ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್ನಿಂದ ₹5 ಲಕ್ಷ ಪರಿಹಾರ
ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್ನಿಂದ ₹5 ಲಕ್ಷ ಪರಿಹಾರ ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ಮೃತನ ಮನೆಗೆ ಇಂದು ಭೇಟಿ ನೀಡಿತು. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರ ತಂದೆ-ತಾಯಿ, ಗರ್ಭಿಣಿ ಪತ್ನಿಗೆ ಫಿಲ್ಮ್ ಚೇಂಬರ್ ಅಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂತ್ವಾನ ಹೇಳಿದರು. ಮೊದಲಿಗೆ ಕುಟುಂಬದ ಬಳಿ ಚಿತ್ರರಂಗದ …
Read More »ನಿಮ್ಮ ವಾಹನಗಳಿಗೆ VIP ನಂಬರ್ ಪಡೆಯುವುದು ಹೇಗೆ?
ಯುವ ಜನತೆಯಲ್ಲಿ ಫ್ಯಾಷನ್ ಕ್ರೇಜ್ ಹೆಚ್ಚಾಗಿದೆ. ತಾವು ಏನೇ ಮಾಡಿದರೂ ಡಿಫ್ರೆಂಟ್ ಆಗಿ ಇರಬೇಕು ಎಂಬ ಮನಸ್ಥಿತಿ ಬೆಳಸಿಕೊಂಡಿದ್ದಾರೆ. ಅಲ್ಲದೆ ತಮ್ಮ ಬಳಿ ಇರುವ ವಸ್ತುಗಳ ಸಹ ಹಾಗೇ ಕೂಡಿರಬೇಕು ಎಂಬುದು ಅವರ ಆಶಯ.. ಹೀಗಾಗಿ ಈಗಿನ ಯುವ ಜನ, ತಮ್ಮ ವಾಹನಗಳಿಗೆ ಹೆಚ್ಚಾಗಿ ಫ್ಯಾನ್ಸಿ ನಂಬರ್ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಹಾಗಿದ್ದರೆ ಈ ಫ್ಯಾನ್ಸಿ ನಂಬರ್ ಪಡೆಯುವುದು ಹೇಗೆ? ಇದಕ್ಕೆ ಎಷ್ಟು ಹಣವನ್ನು ಖರ್ಚು ಮಾಡಬೇಕು …
Read More »ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಇಂದು ಓಪನ್,
ಬೆಂಗಳೂರು, ಜೂನ್. 15: ಬೆಂಗಳೂರಿನ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಮೇಲ್ಸೇತುವೆ, ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್ಬಿ) ಗೆ 3.3 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಹಲವು ವಿಳಂಬಗಳ ನಂತರ ಜೂನ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಸಿದ್ಧವಾಗಿದೆ. ಈ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯು ಎರಡು ಹಂತಗಳನ್ನು ಒಳಗೊಂಡಿದೆ. ಮೊದಲನೆಯದು ಕೆಳ ಹಂತ, ನೆಲದಿಂದ ಎಂಟು ಮೀಟರ್ ಎತ್ತರದಲ್ಲಿ, ವಾಹನಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಎರಡನೇಯದು ಮೇಲಿನ ಹಂತವು 16 ಮೀಟರ್ ಎತ್ತರದಲ್ಲಿದೆ. …
Read More »ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ನಗದು ಭಸ್ಮ!
ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ನಗದು ಭಸ್ಮ! ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ. ಹೌದು ಬೆಳಗಾವಿಯ ಶಿವರಾಜ್ …
Read More »ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು
ಕಾರವಾರ, ಜೂನ್ 15: ಪಿಎಸ್ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು …
Read More »ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ
ಬೆಂಗಳೂರು, ಜೂನ್ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …
Read More »