Breaking News

Uncategorized

ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ – ಬದುಕಿದ್ದೇ ಪವಾಡ

ಗಾಂಧಿನಗರ: ಸಿಂಹವೊಂದು ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ. ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಸಿಂಹ ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 46 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಸಿಂಹದ ಹಿಡಿತದಿಂದ ತಪ್ಪಿಸಿಕೊಳ್ಳಲು ಕಲುಭಾಯಿ ಒದ್ದಾಡುತ್ತಿರುವುದನ್ನು ನೋಡಬಹುದು. ಅವರ ಕಾಲುಗಳನ್ನು ಸಿಂಹ ಬಿಗಿಯಾಗಿ ಹಿಡಿದುಕೊಂಡಿತ್ತು. ಗ್ರಾಮಸ್ಥರು ಸಿಂಹವನ್ನು ಓಡಿಸಲು ಜೋರಾಗಿ ಕಿರುಚಾಡುತ್ತಿರುವುದು ಕೇಳಿಸುತ್ತದೆ. ಕೆಲವರು ಸಿಂಹದ …

Read More »

ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ – ಚಾಲಕ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ  ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಂಧ್ರಪ್ರದೇಶ  ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ …

Read More »

ಮುಧೋಳ ತಾಲೂಕಿನ ವಿವಿಧ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ

ಬಾಗಲಕೋಟೆ: ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಸಮಗ್ರವಾಗಿ ಪರಿಶೀಲಿಸಿದರು. ಆರಂಭದಲ್ಲಿ ಮಂಟೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿ, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಯುವಜನರು ಡಿಜಿಟಲ್ ಗ್ರಂಥಾಲಯದ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಅರಿವು ಮೂಡಿಸಲು ಸೂಚಿಸಿದರು. ನಂತರ ಮಂಟೂರ ಕೆರೆಗೆ …

Read More »

ಮುರಗೋಡ-ಹೊಸಳ್ಳಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ

ಮುರಗೋಡ: ಗ್ರಾಮಿಣ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಂದ ದೇಶದ ಪ್ರಗತಿ ಸಾಧ್ಯ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಮುರಗೋಡ-ಹೊಸಳ್ಳಿ ವ್ಯಾಪ್ತಿಯ ಹಿರೇಕೊಪ್ಪ, ಚಿಕ್ಕೊಪ್ಪ ಮತ್ತು ಹುಲಿಕೇರಿ ತಾಂಡಾಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು. ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿ …

Read More »

ಕೃಷ್ಣಾ ನದಿ ನೀರಿನ ಪ್ರಮಾಣ ಇನಷ್ಟು ಹೆಚ್ಚಳ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ಕೃಷ್ಣಾ ವೇದಗಂಗಾ, ದೂಧಗಂಗಾ ನದಿಗಳ ನೀರಿನ ಮಟ್ಟ ಭಾನುವಾರ ಇಂದು ಏರಿಕೆಯಾಗಿದೆ. ಕೊಯ್ನಾ ಜಲಾನಯನ ಪ್ರದೇಶ ಮತ್ತು ಕೃಷ್ಣಾ ಅಚ್ಚಕಟ್ಟು ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆಮಹಾರಾಷ್ಟ್ರ ರಾಜಾಪುರ ಬ್ಯಾರೇಜ್ ಮೂಲಕ 42 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ವೇದಗಂಗಾ,ದೂಧಗಂಗಾ ನದಿಗಳ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ …

Read More »

ಆರೋಗ್ಯಯುತ ಬದುಕಿಗೆ ಪರಿಸರ ರಕ್ಷಣೆ ಅಗತ್ಯ

ಬೈಲಹೊಂಗಲ: ಮನುಷ್ಯ ಸೇರಿ ಎಲ್ಲ ಪ್ರಾಣಿಗಳು ಆರೋಗ್ಯಯುತವಾಗಿ ಬದುಕಲು ಪರಿಸರ ರಕ್ಷಣೆ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೈಲಹೊಂಗಲ ಮಂಡಳ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ನಗರದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಮುಂದಿನ …

Read More »

ನೀರಾವರಿ ಯೋಜನೆ ಸಾಕಾರಕ್ಕೆ ಸಹಕರಿಸಿ

ಹುಕ್ಕೇರಿ: ತಾಲೂಕಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 40 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಇದರಿಂದ ಅಂತರ್ಜಲ ಹೆಚ್ಚಾಗಿ ಬೇಸಿಗೆಯಲ್ಲಿ ಬೆಳೆಗಳಿಗೆ ನೀರಿನ ಕೊರತೆ ಕಾಡುವುದಿಲ್ಲ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು. ತಾಲೂಕಿನ ಸುಲ್ತಾನಪುರ ಬಳಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಯಾದಗೂಡ, ಬೆಳವಿ, ಶೇಲಾಪುರ, ಹುಲ್ಲೋಳಿ ಹಟ್ಟಿ ಸೇರಿದಂತೆ ಒಟ್ಟು 21 ಕೆರೆಗಳಿಗೆ 42.50 ಕೋಟಿ …

Read More »

ಹಾವು ಕಡಿತದ ಬಗ್ಗೆ ಸಾರ್ವಜನಿಕರಲ್ಲಿ ಇರಲಿ ಎಚ್ಚರ

ಚಿಕ್ಕೋಡಿ: ಹಾವು ಕಡಿತದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಮಳೆಗಾಲದಲ್ಲಿ ಸರ್ಪ ಕಡಿತದ ಸಂಖ್ಯೆ ಹೆಚ್ಚಿದ್ದು, ಹೊಲ-ಗದ್ದೆಗಳಲ್ಲಿ, ಹೊರ ಆವರಣದಲ್ಲಿ ಕೆಲಸ ಮಾಡುವ ಜನರು ಜೀವಭಯದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ಶಾಲೆ-ಕಾಲೇಜುಗಳ ಮೈದಾನ, ಉದ್ಯಾನಗಳಲ್ಲೂ ಹಾವುಗಳ ಭಯ ಕಾಡುವಂತಾಗಿದೆ. ಮಳೆಗಾಲದಲ್ಲಿ ಜಮೀನು, ಶಾಲೆ-ಕಾಲೇಜು, ಮನೆ, ಶಿಥಿಲ ಕಟ್ಟಡಗಳ ಸುತ್ತಲು ಹಾವುಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಹಾವುಗಳ ವಂಶಾಭಿವೃದ್ಧಿಗೆ ಸೂಕ್ತ ಸಮಯವಾಗಿರುವ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ …

Read More »

ಕೃಷ್ಣಾ, ಪಂಚಗಂಗಾ ನದಿ ಪ್ರವಾಹಕ್ಕೆ ಸಂಗಮೇಶ್ವರ ಮಂದಿರ ಮುಳುಗಡೆ

ಬೆಳಗಾವಿ: ಮಾಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮುಳಗುವ ಹಂತಕ್ಕೆ ತಲುಪಿದೆ. ಕೃಷ್ಣಾ ಮತ್ತು ಪಂಚಗಂಗಾ ನದಿಗಳ  ನೀರಿನ ಮಟ್ಟದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಏರಿಕೆಯಾಗಿದೆ. ನದಿಗಳ ನೀರಿನ ಮಟ್ಟ ಬರೋಬ್ಬರಿ 10 ಅಡಿಗಳಷ್ಟು ಹೆಚ್ಚಾಗಿದ್ದು, ಪ್ರವಾಹದ  ನೀರು ಇಲ್ಲಿನ ಪ್ರಸಿದ್ಧ ದತ್ತ ಮಂದಿರದ ಸಮೀಪಕ್ಕೆ ಬಂದು ತಲುಪಿದೆ. ನದಿಯ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ದತ್ತ ದೇವಸ್ಥಾನದ ಆಡಳಿತ ಮಂಡಳಿ …

Read More »

ಬೆಳಗಾವಿ ಅರಣ್ಯ ಇಲಾಖೆಯಿಂದ ತುರ್ತು ನಿಯಂತ್ರಣ ಕೊಠಡಿ ಸ್ಥಾಪನೆ

ಬೆಳಗಾವಿ: ಮುಂಗಾರು ಮಳೆ ಗಾಳಿಗೆ ಬೆಳಗಾವಿ ನಗರದ ರಸ್ತೆ ಅಕ್ಕಪಕ್ಕದಲ್ಲಿರುವ ಮರಗಳು ಮತ್ತು ಅದರ ಕೊಂಬೆಗಳು ರಸ್ತೆಯಲ್ಲಿ ಸಂಚರಿಸುವ ಜನರ, ವಾಹನ ಸಂಚಾಲಕು ಮತ್ತು ವಾಹನಗಳ ಮೇಲೆ ಬಿದ್ದು ಜೀವಹಾನಿ, ಆಸ್ತಿ ಹಾನಿಯಾಗುವ ಸಂಭವವಿರುವುದರಿಂದ ಅಂತಹ ಮರಗಳನ್ನು ಜಂಟಿಯಾಗಿ ಸರ್ವೆ ಮಾಡಿ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಬಿದ್ದ ಮರಗಳನ್ನು ತಕ್ಷಣವೇ ತೆರವುಗೊಳಿಸಲು ಅವಶ್ಯಕವಾದ ಪರಿಕರಗಳನ್ನು ಹಾಗೂ ಸಿಬ್ಬಂದಿಗಳನ್ನು ಸದಾ ಸಿದ್ಧತೆಯಲ್ಲಿಡಲು ತಂಡವನ್ನು ರಚಿಸಿ ತುರ್ತು ಪ್ರತಿಕ್ರಿಯೆ ತಂಡವನ್ನು …

Read More »