Breaking News

Uncategorized

ಯಾದಗಿರಿಯಲ್ಲಿ ಒಂದು ವಾರ ಮತ್ತೆ ಲಾಕ್‍ಡೌನ್-

ಯಾದಗಿರಿ: ಕಳೆದ ಒಂದು ವಾರದಿಂದ ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡ ಹಿನ್ನೆಲೆ ಜುಲೈ 15ರ ರಾತ್ರಿ 8 ಗಂಟೆಯಿಂದ ಜುಲೈ 22ರ ವರೆಗೆ ಒಂದು ವಾರ ಕಠಿಣ ಲಾಕ್‍ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಕೋವಿಡ್-19 ನಿಯಂತ್ರಣ ವಿಶೇಷ ಅಧಿಕಾರ ಬಳಸಿ ಈ ಆದೇಶ ಹೊರಡಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ …

Read More »

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

ಕಲಾ ವಿಭಾಗ ಟಾಪರ್ಸ್ ಲಿಸ್ಟ್ – ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊದಲ ಮೂರು ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರತಿ ವರ್ಷದಂತೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಮೊದಲ ಮೂರು ಸ್ಥಾನಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಾಮೇಗೌಡ 594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದರೆ, 591 ಅಂಕ ಪಡೆದ ಸ್ವಾಮಿ ಎರಡನೇ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ ಈ ವರ್ಷ ಕಲಾ ವಿಭಾಗದ ಪರೀಕ್ಷೆಗೆ 1,98,875 ಮಂದಿ ಹಾಜರಾಗಿದ್ದು, 82,077 …

Read More »

ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ

ಮೂಡಲಗಿ : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ  ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.  ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಬೇಡಿಕೆಗಳು ಮಾಸಿಕ 12 ಸಾವಿರ ರೂಗಳ ಗೌರವ ಖಾತರಿಪಡಿಸಬೇಕು.ಕೋವಿಡ 19  ವಿರುದ್ಧ ಹೋರಾಟದಲ್ಲಿ ಅಗತ್ಯ …

Read More »

ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ – ಸುರೇಶ್ ಕುಮಾರ್ ಅಭಿನಂದನೆ

ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷಾ ಮೌಲ್ಯ ಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆಗೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.   ಸುರೇಸ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ ಶಿಕ್ಷಕಿ ಕವಿತಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ಔಷಧಿ ಅಂಗಡಿಗಳು ಮುಚ್ಚಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶದಿಂದ ಬಂದಿರುವ ರೋಗಿಗಳು ಔಷಧಿ ದೊರೆಯದೇ ಪರದಾಡುವಂತಹ ಪರಿಸ್ಥಿತಿ

ಚಿಕ್ಕೋಡಿ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಪಟ್ಟಣವನ್ನು ಸೋಮವಾರದಿಂದ ಜು. 20ರವರೆಗೆ ಲಾಕ್‍ಡೌನ್ ಮಾಡಲಾಗಿದೆ. ಆದರೆ ಲಾಕ್‍ಡೌನ್‍ಗೆ ಜನರಿಂದ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ರಾಜ್ಯ ಸರ್ಕಾರ ರಿಯಾಯತಿ ನೀಡಿದೆ. ಆದರೆ ಚಿಕ್ಕೋಡಿ ಪಟ್ಟಣದಲ್ಲಿ ಜು.13 ರಿಂದ 20ರವರೆಗೆ ಅಂಗಡಿಕಾರರು ಸ್ವಯಂ ಪ್ರೇರಿತ ಲಾಕ್‍ಡೌನ್ ಘೋಷಣೆ ಮಾಡಿ ಸೋಮವಾರ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಿದ್ದಾರೆ. ಲಾಕ್‍ಡೌನ್ ಆರಂಭಿಸಿದ್ದರಿಂದ ಪಟ್ಟಣದಲ್ಲಿ ಔಷಧಿ ಅಂಗಡಿಗಳು ಮುಚ್ಚಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶದಿಂದ …

Read More »

ಬೆಳಗ್ಗೆಯಿಂದಲೇ ಗಂಟೆಗಟ್ಟಲೇ ಟ್ರಾಫಿಕ್ ಜಾಮ್

ಬೆಂಗಳೂರು,ಜು.13- ನಾಳೆ ರಾತ್ರಿಯಿಂದ ಜಾರಿಯಾಗುತ್ತಿರುವ ಎರಡನೆ ಹಂತದ ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಹೋಗುತ್ತಿರುವವರು ಮತ್ತು ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಟೋಲ್‍ಗಳ ಬಳಿ ಇಂದು ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಸರ್ಕಾರ ಉಚಿತವಾಗಿ ವಾಹನಗಳನ್ನು ಬಿಡಲು ಸೂಚಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ನಾಳೆ ರಾತ್ರಿ 8 ಗಂಟೆಯಿಂದ 8 ದಿನ ಲಾಕ್‍ಡೌನ್ ಘೋಷಣೆ ಮಾಡಿದ್ದು, ಊರುಗಳಿಗೆ ತೆರಳುವವರು ಮತ್ತು ಬೆಂಗಳೂರಿಗೆ ಬರುವವರಿಗೆ ಅವಕಾಶವನ್ನು ನೀಡಿದ …

Read More »

ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್

ಮಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್‍ಡೌನ್ ಆರಂಭವಾಗಲಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 11 …

Read More »

ಹಾಸನ ಜಿಲ್ಲೆಯನ್ನೂ ಲಾಕ್‍ಡೌನ್ ಮಾಡಿ: ಎಂಎಲ್‍ಸಿ ಗೋಪಾಲಸ್ವಾಮಿ

ಹಾಸನ: ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯನ್ನು ಲಾಕ್‍ಡೌನ್ ಮಾಡಿ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲೆಯನ್ನು ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಭಾಗಶಃ ಲಾಕ್‍ಡೌನ್ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕನ್ನು 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಸಂಪೂರ್ಣ ಲಾಕ್‍ಡೌನ್ ಮಾಡಿ ಈಗಾಗಲೇ ಒಂದು ವಾರ ಕಳೆದಿದೆ. ಅಂದಿನಿಂದ ತಾಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ …

Read More »