Breaking News

Uncategorized

ದುಬೈನಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆ, ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಹರಡಿದ ವಿಶ್ವಗುರು ಚಿಂತನೆಗಳು

ಬೆಂಗಳೂರು,ಜು.5- ಇಂಗ್ಲೆಂಡ್ ನಲ್ಲಿರುವ ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣನವರ ಪ್ರತಿಮೆ ಸ್ಥಾಪನೆಯಾಗಿದ್ದು ಇತಿಹಾಸ. ಈಗ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗುವ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ. ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ?ಅವರ ಸಹಾಯ ಮತ್ತು ಸಹಕಾರದಿಂದ ದುಬೈ ಬಸವ …

Read More »

ಪ್ರೀತಿಸಿ ಮದ್ವೆಯಾದ್ರು- ಪ್ರೀತಿಯ ಸಂಕೇತವಾದ ಮಗುವನ್ನೇ ಕೊಂದ ತಂದೆ

ಬೆಂಗಳೂರು: ಪತಿ-ಪತ್ನಿ ಜಗಳದ ಮಧ್ಯೆ ಮಗು ಅತ್ತಿತೆಂದು ಎಸೆದು ತಂದೆಯೇ ತನ್ನ ಮೂರು ತಿಂಗಳ ಹೆಣ್ಣು ಮಗುವನ್ನು ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಘಟನೆ ನಡೆದಿದ್ದು, ಜನನಿ ಮತ್ತು ಶ್ರೀನಿವಾಸ್ ದಂಪತಿಯ ಮಗು ಸ್ಪಂದನ ಸಾವನ್ನಪ್ಪಿದ ದುರ್ದೈವಿ. ಈ ದಂಪತಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲೂಕಿನ ನಿವಾಸಿಗಳಾಗಿದ್ದು, ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಪ್ರತಿ ದಿನ …

Read More »

ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಬಿಎಂಪಿ ಹೊಸ ಪ್ಲಾನ್

ಬೆಂಗಳೂರು : ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಕಾರಣ ಈಗ ಸರ್ಕಾರವೇ ಮುಂದೆ ಬಂದು ಮಾರ್ಗೋಪಾಯಗಳನ್ನು ಕಂಡು ಹಿಡಿಯುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ ಈಗ ಕರೋನಾ ಚಿಕಿತ್ಸೆ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕೇಂದ್ರದಲ್ಲಿ ಮಕ್ಕಳು ಹಾಗೂ ಅಗತ್ಯವುಳ್ಳವರಿಗೆ ತುರ್ತು ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡುವ ವೈದ್ಯರು ಹಾಗೂ …

Read More »

ಕೇರಳದಲ್ಲಿ ಕೊರೋನಾ ಕಂಟ್ರೋಲ್‌ಗೆ ಸ್ಟ್ರಿಕ್ಟ್ ರೂಲ್ಸ್

ಕಾಸರಗೋಡು: ಕೇರಳ ಸರಕಾರ ಕೊರೋನಾ ವಿರುದ್ದ ಹೋರಾಟದಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ತಂದಿದ್ದು, ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಗಳ ಹೆಚ್ಚಾಗುತ್ತಿರುವ ಹಿನ್ನಲೆ ಕೇರಳ ಸರಕಾರ ಸಾರ್ವಜನಿಕ ಮತ್ತು ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ 10,000 ರೂ.ವರೆಗೆ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸುಗ್ರೀವಾಜ್ಞೆ ಹೊರಡಿಸಿದೆ. ಕೊರೋನಾ ರೋಗದ ವಿರುದ್ಧ ಹೋರಾಡಲು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಈ ಸುಗ್ರೀವಾಜ್ಞೆಯನ್ನು …

Read More »

ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿನಟಿ ಮೇಲೆ ಅತ್ಯಾಚಾರ

ಬೆಂಗಳೂರು: ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕುಡಿಸಿ ಸ್ಯಾಂಡಲ್‍ವುಡ್ ನಟಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆರೋಪಿಯನ್ನು ಮೋಹಿತ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪ ಮಾಡುತ್ತಿದ್ದಾರೆ. ಏನಿದು ಪ್ರಕರಣ? ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್‍ನಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ …

Read More »

60 ವರ್ಷ ಮೇಲ್ಪಟ್ಟವರಿಗೆ ಹೋಂ ಐಸೋಲೇಷನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟು ಬೇರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಕಡ್ಡಾಯವಾಗಿ ಹೋಂ ಐಸೋಲೆಷನ್ ಮಾಡಲಾಗುವುದು. ಈ ಸಂಬಂಧ ಕಾನೂನು ಜಾರಿಗೆ ಚಿಂತನೆ ನಡೆದಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರ ಬರಬಾರದು. ವಾಕಿಂಗ್‍ಗೂ ಬರುವಂತಿಲ್ಲ. ಅವರನ್ನ ಮನೆ ಒಳಗೆ ಇರಿಸುವುದಕ್ಕೆ ಶೀಘ್ರವಾಗಿ ಕಾನೂನು ರೂಪಿಸ್ತೇವೆ. ಜೊತೆಗೆ ಟೆಸ್ಟಿಂಗ್ ಹೆಚ್ಚಿಸ್ತೇವೆ. ಕೋವಿಡ್ ಟೆಸ್ಟ್ ಮಾಡಿಸಿದ 24 ಗಂಟೆಯೊಳಗೆ ರಿಪೋರ್ಟ್ ನೀಡಬೇಕು ಅಂತ …

Read More »

ಅಂಧನಿಗೆ ದಾರಿ ಮಾಡಿಕೊಟ್ಟ ನಾಯಿ…………

ಮುಂಬೈ: ಹಲವು ಬಾರಿ ವಿಕಲಚೇತನರಿಗೆ ಯಾರೂ ಸಹಾಯ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ಅಂಧ ವ್ಯಕ್ತಿಗೆ ನಾಯಿ ಸಹಾಯ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ನೆಟ್ಟಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಾಯಿ ಅಂಧನಿಗೆ ಸಹಾಯ ಮಾಡುವ ವಿಡಿಯೋವನ್ನು ಪುಣೆಯ ಪೊಲೀಸ್ ಆಯಕ್ತರು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಂಧ ವ್ಯಕ್ತಿಯೊಬ್ಬರು ನಡೆದು ಹೋಗುತ್ತಿರುವಾಗ ದಾರಿಯಲ್ಲಿ ಅಡ್ಡಲಾಗಿ ದೊಡ್ಡ ಕೋಲು ಬಿದ್ದಿರುತ್ತದೆ. ಇದನ್ನು …

Read More »

ಕರುನಾಡ ಚಕ್ರವರ್ತಿಯ ಹುಟ್ಟುಹಬ್ಬಕ್ಕೆ ಕಿಚ್ಚನಿಂದ ಅಡ್ವಾನ್ಸ್ ಗಿಫ್ಟ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಇನ್ನೂ 7 ದಿನ ಬಾಕಿ ಇದ್ದು, ಅವರ ಅಭಿಮಾನಿಗಳು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರುವುದು ಒಂದು ಕಡೆಯಾದರೆ ಇನ್ನೊಂದೆಡೆ ಕಿಚ್ಚ ಸುದೀಪ್ ಈಗಲೇ ವಿಶೇಷ ಗಿಫ್ಟ್ ನೀಡುವ ಮೂಲಕ ಶುಭ ಕೋರಿದ್ದಾರೆ. ನಟ ಶಿವರಾಜ್ ಕುಮಾರ್ ಕೊರೊನಾ ಕಾರಣದಿಂದಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. …

Read More »

ಭಾರತಕ್ಕೆ ಕೊರೊನಾ ಸೋಂಕಿತರನ್ನ ಕಳಸ್ತಿದೆಯಾ ಪಾಕಿಸ್ತಾನ?

ಶ್ರೀನಗರ: ನೆರೆಯ ವೈರಿ ರಾಷ್ಟ್ರ ಪಾಕಿಸ್ತಾನ ಕೊರೊನಾ ಸೋಂಕಿತರನ್ನ ಭಾರತಕ್ಕೆ ರಹಸ್ಯವಾಗಿ ಕಳಿಸ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಶನಿವಾರ ಸೈನಿಕರ ಗುಂಡಿಗೆ ಬಲಿಯಾದ ಇಬ್ಬರು ಉಗ್ರರಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಇಬ್ಬರು ಉಗ್ರರು ಸಾವನ್ನಪ್ಪಿದ ಬಳಿಕ ಮೃತದೇಹಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಇಬ್ಬರು ಕೊರೊನಾ ಸೋಂಕಿತರು ಎಂಬ ವಿಚಾರ ಬೆಳಕಿಗೆ ಬಂದಿದೆ. ಕೊರೊನಾ ಸೋಂಕಿತರನ್ನು ಭಾರತದೊಳಗೆ ಕಳಿಸಲು ಪಾಕ್ ಪ್ರಯತ್ನಿಸುತ್ತಿದೆ ಅನ್ನೋ ಅನುಮಾನಗಳು ದಟ್ಟವಾಗುತ್ತಿವೆ. …

Read More »

ಬಿಬಿಎಂಪಿ ಎಡವಟ್ಟು- ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆತಂದ ಕುಟುಂಬಸ್ಥರು

ಬೆಂಗಳೂರು: ಕೊರೊನಾ ಸೋಂಕಿತನನ್ನು ಅವರ ಕುಟುಂಬಸ್ಥರೇ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುವ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆಯೇ ಸೋಂಕಿತನಿಗೆ ಕರೆ ಮಾಡಿದ್ದ ಬಿಬಿಎಂಪಿಯವರು ನಿಮಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಮನೆಯಲ್ಲೇ ಇರಿ ಅಂಬುಲೆನ್ಸ್ ಬಂದು ಕರೆದುಕೊಂಡು ಬರುತ್ತದೆ ಎಂದಿದ್ದಾರೆ. ಆದರೆ ಎರಡು ದಿನ ಕಳೆದರೂ ಅಂಬುಲೆನ್ಸ್ ಬಾರದ ಕಾರಣ, ಇಂದು ಮನೆಯವರೇ ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಶವಂತಪುರ ಬಳಿ ಇರುವ …

Read More »