Breaking News

Uncategorized

ಸೈಬರ್‌ ವಂಚನೆ: ₹8.64 ಕೋಟಿ ಕಳೆದುಕೊಂಡ ಜನ

ಬೆಳಗಾವಿ: ‘ನೀವು ಗಂಭೀರವಾದ ಅಪರಾಧ ಮಾಡಿದ್ದೀರಿ. ಆನ್‌ಲೈನ್‌ನಲ್ಲಿ ನಿಮಗೆ ಬಂದಿರುವ ಪಾರ್ಸೆಲ್‌ನಲ್ಲಿ ಮಾದಕ ದ್ರವ್ಯ ಕಂಡುಬಂದಿವೆ. ವಿಡಿಯೊ ಕರೆ ಮೂಲಕವೇ ನಾವು ನಡೆಸುವ ವಿಚಾರಣೆಗೆ ಹಾಜರಾಗಿ. ನಮ್ಮ ಕ್ಯಾಮೆರಾ ಕಣ್ಗಾವಲಿನಲ್ಲೇ ಇರಿ…’ ಇಂಥ ಕರೆಗಳು ನಿಮಗೂ ಬಂದರೆ ಎಚ್ಚರ. ಇಂಟರ್‌ನೆಟ್‌ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಹೀಗೆ ಕರೆ ಮಾಡುತ್ತಿರುವ ವಂಚಕರು ಹಣಕ್ಕೆ ಪೀಡಿಸುತ್ತಿದ್ದಾರೆ. ಅವರಿಗೆ ಹೆದರಿ ಮಾಹಿತಿ ಹಂಚಿಕೊಂಡು ಸಂಕಷ್ಟಕ್ಕೆ ಸಿಲುಕಿದವರು, ನ್ಯಾಯ ಕೋರಿ ಬೆಳಗಾವಿ ನಗರ …

Read More »

ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್‌ ವಶ: ಇಬ್ಬರ ಬಂಧನ

ನವಲಗುಂದ: ಹುಬ್ಬಳ್ಳಿ-ವಿಜಯಪೂರ ರಾಷ್ಟ್ರೀಯ ಹೆದ್ದಾರಿ ಶೆಟ್ಟರ ಕೆರೆ ಹತ್ತಿರ ಅಂದಾಜು ₹5.40 ಲಕ್ಷ ಮೌಲ್ಯದ ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್‌ ಪ್ಯಾಕೇಟ್‌ಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಾಹನ ಸಮೇತ ಪೊಲೀಸರು ಬಂಧಿಸಿದ್ಧಾರೆ.   ಉಡುಪಿ ಸಂತೆಕಟ್ಟೆ ಮೂಲದ ಮಹ್ಮದ ನೌಶಾದ, ಬೆಂಗಳೂರು ಮೂಲದ ಮಹ್ಮದ ನಾಸಿರ್ ಬಂಧಿತ ಆರೋಪಿಗಳು. ಆರೋಪಿಗಳು 160 ಬಂಡಲ್‌ಗಳಲ್ಲಿ 3200 ನಕಲಿ ಸಿಗರೇಟ್ ಪಾಕೀಟ್‌ಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದರು. ಈ ಕುರಿತು ಬೆಂಗಳೂರು …

Read More »

ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆ. 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದಾರೆ. ಸೆ. 28ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆತ್ಲೆಟಿಕ್ಸ್‌, ಬ್ಯಾಡ್ಮಿಂಟನ್‌, ಬಾಕ್ಸಿಂಗ್‌, ವೇಟ್‌ಲಿಫ್ಟಿಂಗ್‌, ಕುಸ್ತಿ, ತ್ರೋಬಾಲ್‌, ಬಾಲ್‌ ಬ್ಯಾಡ್ಮಿಂಟನ್‌ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, …

Read More »

ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಣ್ಣ ರಾಜಕುಮಾರ ವಿಜಾಪುರ ಹಾಗೂ ತಮ್ಮ ಶ್ರೀಕಾಂತ್ ವಿಜಾಪುರ ಮೃತ ಸಹೋದರರು.   ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಬ್ಬಿಣದ ಆಂಗಲ್ ಗೆ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

Read More »

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನ ನಡೆಯಲಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.   ‘ನರೇಂದ್ರ ಮೋದಿ ಪ್ರಧಾನಿಯಾದ ನಂತರ, ದೇಶದಲ್ಲಿ ಕ್ರೀಡಾ ರಂಗಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಅವಕಾಶ ಕಲ್ಪಿಸಲಾಗುತ್ತಿದೆ. …

Read More »

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ ಪಶು ಚಿಕಿತ್ಸಾಲಯ ಮೊರಬ ಇವರ ವ್ಯಾಪ್ತಿಯಲ್ಲಿ ಬರುವ ಬೆಕ್ಕೇರಿಯಲ್ಲಿ 185 ಸಾಕು ನಾಯಿಗಳಿಗೆ ಲಸಿಕೆಯನ್ನು ಹಾಕಿ ಲಸಿಕಾ ಅಭಿಯಾನ ಯಶಸ್ವಿಗೊಳಿಸಲಾಯಿತು. ಬಳಿಕ ಮುಖ್ಯ ಪಶುವೈದ್ಯಾಧಿಕಾರಿಗಳು ಡಾ.ಎಂ.ಬಿ. ಪಾಟೀಲ ಮಾತನಾಡಿ, ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಸುಲಭವಾಗಿ ಹರಡುವ ಸೋಂಕುಗಳನ್ನು ಝೂನೋಟಿಕ್ ಕಾಯಿಲೆಗಳು ಎಂದು ಕರೆಯಲಾಗುತ್ತದೆ. ಇವುಗಳಲ್ಲಿ ರೇಬೀಸ್ (ನಾಯಿಗಳಿಂದ), ಆಂಥ್ರಾಕ್ಸ್ (ಕುರಿ ಮತ್ತು …

Read More »

ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

ಮೇಷ: ಮನಸ್ಸಿನ ಸ್ವಾಸ್ಥ್ಯವನ್ನು ಕಾಯ್ದುಕೊಳ್ಳುವ ಪ್ರಯತ್ನ. ಉದ್ಯೋಗಸ್ಥರು, ವ್ಯವಹಾರಸ್ಥರಿಗೆ ಶುಭ ಸೂಚನೆ. ಹಳೆಯದಾದ ಜಟಿಲ ಸಮಸ್ಯೆಗೆ ಪರಿಹಾರ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ. ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಗುರುಸಮಾನರ ಅಕಸ್ಮಾತ್‌ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ಪರೀಕ್ಷಾ ತಯಾರಿಗೆ ಗಮನ. ಮಿಥುನ: ಪೂರ್ವಜರ ಸ್ಮರಣೆಯಿಂದ ಹಿತ. ಕುಟುಂಬದ ಕ್ಷೇಮದ ಕುರಿತು ಚಿಂತನೆ. ಜೀವನದಲ್ಲಿ ಹಿರಿಯರ ಆರೋಗ್ಯದತ್ತ ಗಮನವಿರಲಿ. ಉತ್ತರ ದಿಕ್ಕಿನಿಂದ ಶುಭ …

Read More »

ಎಲ್ಲಾ ಮುಸ್ಲಿಂ ದೇಶಗಳೂ ಭಾರತದ ವಿರೋಧಿಗಳಲ್ಲ

ಚಿಕ್ಕೋಡಿ: ರಾಜ್ಯದ ಕೆಲವೆಡೆ ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಕಿಡಿಗೇಡಿಗಳು ಪ್ಯಾಲಿಸ್ತೇನ್ ಧ್ವಜ (Palestinian flag) ಹಾರಿಸಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿದ್ದರು. ಪಾಕಿಸ್ತಾನ, ಇರಾನ್ ಧ್ವಜವನ್ನೂ ಹಾರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಪ್ಯಾಲಿಸ್ತೇನ್ ಧ್ವಜ ಹಾರಾಟದ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ವಿರೋಧಿ ದೇಶದ ಧ್ವಜ ಹಾರಾಡಿದ್ರೆ ಕ್ರಮ ಕೈಗೊಳ್ಳಬಹುದು. ಆದರೆ ಎಲ್ಲಾ ಮುಸ್ಲಿಂ (Muslim) ಕಂಟ್ರಿಗಳೂ ಭಾರತ ದೇಶದ ವಿರೋಧಿಗಳಲ್ಲ. …

Read More »

ಬೆಳಗಾವಿಯಲ್ಲಿ ಮೇಗಾ ಡೇರಿ ಸ್ಥಾಪನೆ- ಬೆಮೂಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ:ಬೆಳಗಾವಿಯಲ್ಲಿ ಅತ್ಯುನ್ನತ ತಂತ್ರಜ್ಞಾನವುಳ್ಳ ಮೇಗಾ ಡೇರಿ ನಿರ್ಮಿಸುವ ಮೂಲಕ ಜಿಲ್ಲೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಕೆಪಿಟಿಸಿಎಲ್‌ ಸಭಾಭವನದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅ‍ವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟ ಸುಧಾರಣೆಗೆ ಸಂಕಲ್ಪ ಮಾಡಿದ್ದೇನೆ. ಎಲ್ಲರೂ ಕೂಡಿ ಇದನ್ನು …

Read More »

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಬಳ್ಳಾರಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರ ಹೊರಬಂದ ಬಳಿಕ ಇದೀಗ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಆಂಧ್ರ ಪ್ರದೇಶದಿಂದ ಭಾರೀ ಬೇಡಿಕೆ ಬರುತ್ತಿದೆ. ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಬಂದಿದೆ ಎಂದು ಹೊಸಪೇಟೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.   ತಿರುಪತಿಯಿಂದ ನಂದಿನಿ ತುಪ್ಪ ಕಳಿಸುವಂತೆ ಇ-ಮೇಲ್ ಮೂಲಕ ಬೇಡಿಕೆ ಬಂದಿದೆ. ಹೀಗಾಗಿ ನಾವು ನಂದಿನಿ ತುಪ್ಪ ಕಳುಹಿಸುತ್ತಿದ್ದೇವೆ. ಈಗಾಗಲೇ 15 ದಿನಗಳಿಂದ 350 …

Read More »