Breaking News

Uncategorized

ನಿತ್ಯಭವಿಷ್ಯ: ಈ ರಾಶಿಯವರಿಂದು ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ.

ಮೇಷ: ಆಸ್ತಿ ವಿಚಾರದ ಮಾತುಕತೆ. ಉದ್ಯೋಗದಲ್ಲಿ ಉನ್ನತಿ. ಮಕ್ಕಳಿಂದ ಶುಭವಾರ್ತೆ. ಪ್ರಭಾವಿ ವ್ಯಕ್ತಿಗಳ ಭೇಟಿಯಾಗುವುದು. ಶುಭಸಂಖ್ಯೆ: 5 ವೃಷಭ: ಆರೋಗ್ಯದ ಕಡೆ ಗಮನವಿರಲಿ. ದಾಂಪತ್ಯದಲ್ಲಿ ಸಾಮರಸ್ಯ ಮೂಡಿಸಲು ಬಂಧುಗಳ ಸಹಾಯ. ವಿದ್ಯಾರ್ಥಿಗಳಿಗೆ ಪ್ರಗತಿ.ಶುಭಸಂಖ್ಯೆ:1 ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ. ಮನೆಗೆ ಆತ್ಮೀಯರ ಆಗಮನ. ಹೂವು ಹಣ್ಣು ವ್ಯಾಪಾರಿಗಳಿಗೆ ನಷ್ಟವಾಗುವುದು. ಶುಭಸಂಖ್ಯೆ: 5 ಕಟಕ: ಪದವಿ ಪ್ರಾಪ್ತಿಯಲ್ಲಿ ಶತ್ರುಗಳ ಕಾಟ. ವ್ಯರ್ಥ ಕಾಲಹರಣ. ನ್ಯಾಯಾಲಯದಲ್ಲಿ ಜಯ. ಮಕ್ಕಳ ವಿಚಾರದಲ್ಲಿ ಗಮನವಿರಲಿ. ಶುಭಸಂಖ್ಯೆ: 8 ಸಿಂಹ: ಕರ್ಮಸ್ಥಾನದ ಗುರುವಿನಿಂದ ಧನ ಲಾಭವಾಗಲಿದೆ. ಹೊಸ ಉದ್ಯೋಗದ …

Read More »

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಎಲ್‌ಐಸಿ ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಿ ಸುವ ಅಂಶ ಬಹುತೇಕ ಖಚಿತವಾಗಿದೆ. ಅದಕ್ಕಾಗಿ ದೇಶದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಆರೋಗ್ಯ ವಿಮಾ ಕ್ಷೇತ್ರದ ಲ್ಲಿನ 5 ಅಗ್ರ ಕಂಪೆನಿಗಳ ಪೈಕಿ ಒಂದನ್ನು ಖರೀದಿಸಿ ಹೊಸ ಕ್ಷೇತ್ರಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಆಂಗ್ಲ ವಾಣಿಜ್ಯ ಪತ್ರಿಕೆಯೊಂದು ವರದಿ ಮಾಡಿದೆ. ಈ ಉದ್ದೇಶಕ್ಕಾಗಿ ಭಾರತೀಯ ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ)ಕ್ಕೆ ತಾನು ಜಾರಿಗೊಳಿಸ ಲಿರುವ ಉದ್ದೇಶಿತ ಆರೋಗ್ಯ …

Read More »

ಯಡಿಯೂರಪ್ಪ ವಿರುದ್ಧದ ಬಂಧನ ವಾರಂಟ್ ನಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಎಂ.ಬಿ.ಪಾಟೀಲ್

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೊರಡಿಸಲಾದ ಬಂಧನ ವಾರಂಟ್ನಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಶುಕ್ರವಾರ ಹೇಳಿದ್ದಾರೆ. ಪೋಕ್ಸೊ ಕಾಯ್ದೆ ತುಂಬಾ ಗಂಭೀರವಾಗಿದೆ, ಮತ್ತು ಚಿತ್ರದುರ್ಗ ಶ್ರೀಗಳ ವಿರುದ್ಧದ ಪ್ರಕರಣವನ್ನು ನೀವು ನೋಡಿದ್ದೀರಿ. ಬಂಧನ ವಾರಂಟ್ ಹೊರಡಿಸಿದ್ದು ನ್ಯಾಯಾಲಯವೇ ಹೊರತು ನಾವಲ್ಲ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ …

Read More »

ಈ ವರ್ಷ 2 ಲಕ್ಷ ಸಸಿಗಳನ್ನು ನೆಡುವ ‘ಬಿಬಿಎಂಪಿ’ ಗುರಿ

ಬೆಂಗಳೂರು: ಈ ವರ್ಷ ನಗರದಲ್ಲಿ 2 ಲಕ್ಷ ಸಸಿಗಳನ್ನು ನೆಡಲು ಬಿಬಿಎಂಪಿ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಬ್ಬನ್ ಪಾರ್ಕ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುರಿ ಸಾಧನೆಗೆ ಶಾಲಾ ವಿದ್ಯಾರ್ಥಿಗಳ ಸಹಕಾರ ಪಡೆಯಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್, ಬಿಬಿಎಂಪಿ ಹಲವಾರು ಪರಿಸರ ಸ್ನೇಹಿ ಯೋಜನೆಗಳಿಗಾಗಿ 410 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. …

Read More »

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಬೆಂಗಳೂರು: ದೇವೇಗೌಡರ ಕುಟುಂಬವನ್ನು ಮುಗಿಸಿ ಆಯಿತು. ಇನ್ನು 82ರ ಹರೆಯದ, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಕುಟುಂಬವನ್ನು ಮುಗಿಸಲು ಕುತಂತ್ರ ಮಾಡಲಾಗುತ್ತಿದೆ. ಆದರೆ ಈ ಯತ್ನ ಫ‌ಲಿಸದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದು ಕೇಂದ್ರದ ಬೃಹತ್‌ ಉದ್ದಿಮೆ ಮತ್ತು ಉಕ್ಕು ಖಾತೆಯ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಅವರು ಜೆಡಿಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನ …

Read More »

ರಾಯಚೂರು | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ರಾಯಚೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ಪೊಸ್ಕೊ ನ್ಯಾಯಾಲಯ ಶುಕ್ರವಾರ 20ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. 2021ರ ಜನವರಿಯಲ್ಲಿ ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ಆರೋಪಿ ಹುಲ್ಲಪ್ಪ ರಾಮಣ್ಣಗೆ (25) ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಬಿ.ಬಿ. ಜಕಾತಿ ತೀರ್ಪು ನೀಡಿದ್ದಾರೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹ 9 ಲಕ್ಷ …

Read More »

ಹೃದಯಾಘಾತದಿಂದ ‘ದರ್ಶನ್ ಗ್ಯಾಂಗ್’ ಕೊಲೆ ಕೇಸ್ ಆರೋಪಿ ತಂದೆ ನಿಧನ

ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಬೆನ್ನಲ್ಲೇ ಆಘಾತಕ್ಕೊಳಗಾಗಿದ್ದ ಚಂದ್ರಣ್ಣ ಸಾವನ್ನಪ್ಪಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನುಕುಮಾರ್ 7ನೇ ಆರೋಪಿಯಾಗಿದ್ದು, ಇವತ್ತು ಪೊಲೀಸರು ಅನುಕುಮಾರ್ ನನ್ನು ಬಂಧಿಸಿದ್ದರು. ಪುತ್ರನ ಬಂಧನದ ಸುದ್ದಿ ತಿಳಿದ ಚಿತ್ರದುರ್ಗದ ಸಿಹಿನೀರು ಹೊಂಡ ಸಮೀಪ ಇರುವ ಮನೆಯಲ್ಲಿ ಚಂದ್ರಣ್ಣ …

Read More »

ಬೆಳಗಾವಿ: ರಕ್ತದ ಸಂಗ್ರಹಕ್ಕೆ ಬೇಕಿದೆ ಇನ್ನಷ್ಟು ಜಾಗೃತಿ.

ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಬಿಮ್ಸ್‌) ರಕ್ತನಿಧಿ ಕೇಂದ್ರವು ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರ ನಡೆಸಿ, ವಾರ್ಷಿಕ 7 ಸಾವಿರಕ್ಕೂ ಅಧಿಕ ಯೂನಿಟ್‌ ರಕ್ತ ಸಂಗ್ರಹಿಸುತ್ತಿದೆ. ಆದರೆ, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಬೇಡಿಕೆಯಂತೆ ರಕ್ತ ಪೂರೈಸಲು ಕೆಲವೊಮ್ಮೆ ಖಾಸಗಿ ರಕ್ತನಿಧಿ ಕೇಂದ್ರಗಳ ನೆರವು ಪಡೆಯುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮಾತ್ರವಲ್ಲದೆ, ಅಕ್ಕಪಕ್ಕದ ಜಿಲ್ಲೆಗಳ ರೋಗಿಗಳು ದಾಖಲಾಗುತ್ತಾರೆ. ಇಲ್ಲಿ ಚಿಕಿತ್ಸೆ ಪಡೆಯುವವರಿಗೆ ಬಿಮ್ಸ್‌ ರಕ್ತನಿಧಿ ಕೇಂದ್ರದಿಂದ ರಕ್ತ ಪೂರೈಕೆಯಾಗುತ್ತದೆ. ಬಿಪಿಎಲ್‌ …

Read More »

ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಆರಂಭವಾಗದ ಸಿದ್ಧತೆ

ಬೆಳಗಾವಿ: ನಗರದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ನೆನಪಿಗೆ ವರ್ಷವಿಡೀ ವಿಶೇಷ ಕಾರ್ಯಕ್ರಮ ಆಯೋಜಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಅದಕ್ಕೆ ಬಜೆಟ್‌ನಲ್ಲಿ ₹2 ಕೋಟಿ ಅನುದಾನ ಮೀಸಲಿಟ್ಟಿದೆ. ಆದರೆ, ಕಾರ್ಯಕ್ರಮದ ಸಿದ್ಧತೆ ಇನ್ನೂ ಆರಂಭಗೊಂಡಿಲ್ಲ. 1924ರ ಡಿಸೆಂಬರ್ 25 ಮತ್ತು 26ರಂದು ಬೆಳಗಾವಿಯಲ್ಲಿ (ಈಗಿನ ವೀರಸೌಧದ ಸ್ಥಳದಲ್ಲಿ) 39ನೇ ಕಾಂಗ್ರೆಸ್‌ ಅಧಿವೇಶನ ನಡೆದಿತ್ತು. ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್‌ ಅಧಿವೇಶನವಿದು. ಇದೇ ಡಿಸೆಂಬರ್‌ 25ಕ್ಕೆ …

Read More »

ಕಾರ್ಮಿಕರ ಮೇಲೆ ಹಲ್ಲೆ: ಓರ್ವ ವಶಕ್ಕೆ

ಬೆಳಗಾವಿ: ಇಲ್ಲಿನ ವಡಗಾವಿಯ ಬನಶಂಕರಿ ಗಲ್ಲಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ಗುರುವಾರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಹಾಪುರ ಠಾಣೆ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ‘ದಶರಥ ಧಾಮಣೇಕರ ಅವರ ವಿದ್ಯುತ್ ಮಗ್ಗದಲ್ಲಿ ಬಿಹಾರ ಮೂಲದ ನಾಲ್ವರು ಕಾರ್ಮಿಕರು ದುಡಿಯುತ್ತಿದ್ದಾರೆ‌.ಹೊರರಾಜ್ಯದವರು ಇಲ್ಲಿ ಬಂದು ಕೆಲಸ ಮಾಡುತ್ತಿರುವ ಕಾರಣ, ನಮಗೆ ಉದ್ಯೋಗ ಸಿಗುತ್ತಿಲ್ಲ ಎಂದು ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದೇವೆ. ತಪ್ಪೆಸಗಿದ …

Read More »