ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …
Read More »ಮಾಸ್ಟರ್ ಸಿನಿಮಾ ಲಿಂಕ್ : 25 ಕೋಟಿ ರೂ. ಪರಿಹಾರಕ್ಕೆ ನಿರ್ಮಾಪಕರು ಬೇಡಿಕೆ ಇಟ್ಟಿದ್ದಾರೆ
ದಳಪತಿ’ ವಿಜಯ್ ಮತ್ತು ‘ಮಕ್ಕಳ್ ಸೆಲ್ವನ್’ ವಿಜಯ್ ಸೇತುಪತಿ ಒಟ್ಟಿಗೆ ಅಭಿನಯಿಸಿರುವ ‘ಮಾಸ್ಟರ್’ ಸಿನಿಮಾ ಜನವರಿ 13ರಂದು ತೆರೆಕಂಡು ಅದ್ದೂರಿ ಪ್ರದರ್ಶನ ಕಾಣುತ್ತಿದೆ. ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ಇದ್ದರೂ, ಕಲೆಕ್ಷನ್ ವಿಚಾರದಲ್ಲಿ ದಾಖಲೆ ಬರೆಯುತ್ತಿದೆ. ಈ ಮಧ್ಯೆ ಪೈರಸಿ ಕಾಟವೂ ಚಿತ್ರಕ್ಕೆ ಇದೆ. ಸದ್ಯ ಇದರ ವಿರುದ್ಧ ನಿರ್ಮಾಪಕರು ಹೋರಾಟಕ್ಕೆ ನಿಂತಿದ್ದಾರೆ. ಈ ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ! ಜೊತೆಗೆ 25 ಕೋಟಿ ರೂ. ಪರಿಹಾರಕ್ಕೆ ನಿರ್ಮಾಪಕರು …
Read More »ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ
ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …
Read More »ವೈದ್ಯರೇ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಬಿಳಿ ಕೋಟು ಧರಿಸಲಿದ್ದಾರೆ ಗಣೇಶ್
ವೈದ್ಯರಿಗೂ ಸಿನಿಮಾಕ್ಕೂ ಎತ್ತಣಿಂದೆತ್ತ ಸಂಬಂಧ?! ಎನ್ನುವಂತಿಲ್ಲ, ಏಕೆಂದರೆ ವೈದ್ಯರಿಬ್ಬರು ಸೇರಿ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರಲ್ಲೊಬ್ಬರಾದ ಗಣೇಶ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 25 ವರ್ಷ ವೈದ್ಯೆಯಾಗಿ ಸೇವೆ ಸಲ್ಲಿಸಿರುವ ಶಶಿಕಲಾ ಪುಟ್ಟಸ್ವಾಮಿ ನಿರ್ದೇಶಿಸುತ್ತಿರುವ ಮತ್ತೊಬ್ಬ ವೈದ್ಯ ಶೈಲೇಶ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಅವರದ್ದು ವೈದ್ಯನ ಪಾತ್ರ. 25 ವರ್ಷಗಳ ಹಿಂದೆ ಶಶಿಕಲಾ ಹಾಗೂ ಶೈಲೇಶ್ ಒಟ್ಟಿಗೆ ವೈದ್ಯಕೀಯ ಶಿಕ್ಷಣವನ್ನು ಪಡೆದವರು. …
Read More »ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್ನಿಂದ ರಾಜಭವನ ಚಲೋ ರ್ಯಾಲಿ
ಬೆಂಗಳೂರು; ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ರ್ಯಾಲಿ ನಡೆಯಲಿದೆ. ಕಾಂಗ್ರೆಸ್ ರ್ಯಾಲಿ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರಿನ ಹೃದಯ ಭಾಗ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಜನರು ಇಂದು ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಬೇಕಿದೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್ನ ಕೆಎಸ್ಆರ್ ರೈಲು ನಿಲ್ದಾಣದಿಂದ ಆರಂಭವಾಗಲಿದೆ. …
Read More »ಉತ್ತಮ ಸಂಸದೀಯ ಪಟು ಗುರುತಿಸಲು ಸಮಿತಿ ರಚನೆ
ಬೆಂಗಳೂರು : ರಾಜ್ಯ ವಿಧಾನಸಭೆಯ ಸದಸ್ಯರೊಬ್ಬರಿಗೆ ಪ್ರತಿ ವರ್ಷ ಅತ್ಯುತ್ತಮ ಸಂಸದೀಯ ಪಟು ಅಥವಾ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಲು ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಉಪಸಭಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡುವ ಒಬ್ಬರು ಸದಸ್ಯರಾಗಿ ರುತ್ತಾರೆ. ಸಮಿತಿಯ ಶಿಫಾರಸ್ಸಿನ ಮೇಲೆ ಪ್ರಶಸ್ತಿಗೆ ಆಯ್ಕೆಯಾದ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು. ಒಬ್ಬ ಶಾಸಕರಿಗೆ …
Read More »ಗಣರಾಜ್ಯೋತ್ಸವ ಪರೇಡ್ಗೆ ಮೊದಲ ಮಹಿಳಾ ಫೈಟರ್ ಪೈಲಟ್!
ಹೊಸದಿಲ್ಲಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳುತ್ತಿರುವ “ಪ್ರಪ್ರಥಮ ಮಹಿಳಾ ಫೈಟರ್ ಪೈಲಟ್’ ಎಂಬ ಹೆಗ್ಗಳಿಕೆಗೆ ಫ್ಲೈಟ್ ಲೆಫ್ಟಿನೆಂಟ್ ಭಾವನಾ ಕಾಂತ್ ಪಾತ್ರರಾಗಿದ್ದಾರೆ. ಜ. 26ರಂದು ಐಎಎಫ್ನ ಟ್ಯಾಬ್ಲೊ ಜತೆ ಅವರು ಸಂಚರಿಸಲಿದ್ದಾರೆ. ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್ ಮತ್ತು ಸುಖೋಯ್-30 ಯುದ್ಧ ವಿಮಾನಗಳ ಅಣಕು ಸ್ತಬ್ಧಚಿತ್ರದೊಂದಿಗೆ ಭಾವನಾ ಪರೇಡ್ ನಡೆಸಲಿದ್ದಾರೆ. ಪ್ರಸ್ತುತ ಇವರು ರಾಜಸ್ಥಾನದ ವಾಯುನೆಲೆಯೊಂದರಲ್ಲಿ ಮಿಗ್-21 ಬೈಸನ್ ಫೈಟರ್ ಪ್ಲೇನ್ಗೆ ಪೈಲಟ್. 2016ರಲ್ಲಿ ವಾಯುಪಡೆಗೆ ಆಯ್ಕೆಯಾದ “ಮೊದಲ ಫೈಟರ್ …
Read More »ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ.:ರಾಖಿ ಸಾವಂತ್
ಮುಂಬೈ: ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ. ಬಿಗ್ಬಾಸ್ ಮನೆಯಿಂದ ಹೊರ ಹೋದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಬಾಲಿವುಡ್ ನಟಿ ರಾಖಿ ಸಾವಂತ್ ಹೇಳಿದ್ದಾರೆ. ಈ ಬಾರಿ ಬಿಗ್ಬಾಸ್ ಮನೆಗೆ ರಾಖಿ ಸಾವಂತ್ ಎಂಟ್ರಿ ನೀಡಿದಾಗಿನಿಂದ ಶೋಗೆ ಹೊಸ ಲುಕ್ ಬಂದಿದೆ. ರಾಖಿಯ ಜಗಳ, ಫನ್ನಿ ಮಾತುಗಳು, ಡ್ಯಾನ್ಸ್ ನೋಡುಗರನ್ನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ವಾಹಿನಿ ಸಹ ರಾಖಿಯ ಮಾತುಗಳನ್ನ ಕೇಂದ್ರಿಕರಿಸಿ ಸಂಚಿಕೆಯ ಪ್ರೋಮೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ …
Read More »ಉದ್ಧವ್ ಠಾಕ್ರೆ ಬೆಳಗಾವಿಗೆ ಕಾಲಿಟ್ಟು ನೋಡಲಿ; ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡು ಕೂತಿಲ್ಲ; ಶಾಸಕ ಶರಣಬಸ್ಸಪ್ಪಗೌಡ ಎಚ್ಚರಿಕೆ
ಯಾದಗಿರಿ(ಜ.19): ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಗೆ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಸವಾಲ್ ಹಾಕಿದ್ದಾರೆ. ಉದ್ದವ್ ಠಾಕ್ರೆ ಕರ್ನಾಟಕಕ್ಕೆ ಬಂದು, ಬೆಳಗಾವಿಯಲ್ಲಿ ಒಂದಿಂಚು ಜಾಗ ತೆಗೆದುಕೊಂಡು ನೋಡಲಿ, ಸಿಎಂ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರದಿಂದ ಜನರನ್ನು ಕರೆದುಕೊಂಡು ಬರಲಿ ಎಂದು ಸವಾಲು ಹಾಕಿದ್ದಾರೆ. ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡಿಲ್ಲ.ಕನ್ನಡಿಗರು ಸುಮ್ಮನೆ ಇದ್ದರೆ ಸುಮ್ಮನೆ ಇರುತ್ತೇವೆ. ನಮಗೆ ತೊಂದರೆ ಕೊಟ್ಟರೆ ನಾವೇನು ಮಾಡುತ್ತೀವಿ ಅಂತ ಇತಿಹಾಸ ತಿಳಿಸುತ್ತದೆ ಎಂದರು. ಮುಖ್ಯಮಂತ್ರಿ …
Read More »ಕನ್ನಡಿಗರ ತಾಳ್ಮೆ ಕೆಣಕಿದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಆಕ್ರೋಶ
ಬೆಳಗಾವಿ,ಜ.19-ಸಮಾಜ ಸೇವೆಯ ಹೆಸರೇಳಿಕೊಂಡು ಬಿಜೆಪಿ ಸೇರಿ ಆಕಸ್ಮಿಕವಾಗಿ ಮಂತ್ರಿ ಪದವಿ ಪಡೆದುಕೊಂಡಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತೊಮ್ಮೆ ಕನ್ನಡಿಗರ ತಾಳ್ಮೆ ಕೆಣಕುವ ಪ್ರಯತ್ನಕ್ಕೆ ಕೈ ಹಾಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಶಕಗಳಿಂದ ಭಾಷಾ ಮತ್ತು ಭೂಪ್ರದೇಶ ವಿಚಾರದಲ್ಲಿ ಕರ್ನಾಟಕ- ಮಹಾರಾಷ್ಟ್ರ ನಡುವೆ ಗುz್ದÁಟ ನಡೆದಿದ್ದರೂ, ತನ್ನ ಸ್ವಾರ್ಥಕ್ಕಾಗಿ ತಮಾಷೆಯ ರಾಜಕಾರಣ ಮಾಡುತ್ತಿರುವ ಜೊಲ್ಲೆ ಅವರು ತಮ್ಮ ಮರಾಠಿ ಪ್ರೇಮ ಮುಂದುವರೆಸಿದ್ದಾರೆಮಹಾರಾಷ್ಟ್ರ ಮುಖ್ಯಮಂತ್ರಿ ಕನ್ನಡ ಭಾಷೆ ಮತ್ತು ನೆಲದ ಬಗ್ಗೆ …
Read More »
Laxmi News 24×7