Breaking News

Uncategorized

ಚಿಕ್ಕೋಡಿ: ಹೆಚ್ಚುವರಿ ಜಿಲ್ಲಾಧಿಕಾರಿ ನೇಮಕಕ್ಕೆ ವಿರೋಧ

ಚಿಕ್ಕೋಡಿ: ಸರ್ಕಾರ ಚಿಕ್ಕೋಡಿಗೆ ಪ್ರತ್ಯೇಕವಾಗಿ ಅಪರ ಜಿಲ್ಲಾಧಿಕಾರಿ ನೇಮಿಸುವ ಬದಲಾಗಿ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ ಜಿಲ್ಲಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್‌ ಚಿದಂಬರ ಕುಲಕರ್ಣಿ ಅವರಿಗೆ ಶನಿವಾರ ಮನವಿ ಸಲ್ಲಿಸಿತು.   ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಬೆಳಗಾವಿಗೆ ಭೇಟಿ ನೀಡಿ ಸಭೆ ನಡೆಸಿ, ಚಿಕ್ಕೋಡಿಗೆ ಅಪರ ಜಿಲ್ಲಾಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಈ …

Read More »

ನಿಪ್ಪಾಣಿ ಕ್ಷೇತ್ರದಲ್ಲಿ ರಾಜಕೀಯ ಭವಿಷ್ಯವಿದೆ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ: ‘ಸಹಕಾರಿ ಕ್ಷೇತ್ರ, ಶಿಕ್ಷಣ ರಂಗ ಹಾಗೂ ಸಮಾಜ ಸೇವೆಯಲ್ಲಿ ಮುಖಂಡ ಅಣ್ಣಾಸಾಹೇಬ ಹಲವೆ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಬೋರಗಾಂವ ಭಾಗದಲ್ಲಿ ಕಾರ್ಯನಿರ್ವಹಿಸಿದ್ದು, ನಿಪ್ಪಾಣಿ ಕ್ಷೇತ್ರದಲ್ಲಿ ಅವರಿಗೆ ರಾಜಕೀಯ ಭವಿಷ್ಯವಿದೆ’ ಎಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಹೇಳಿದರು.   ನಿಪ್ಪಾಣಿ ತಾಲ್ಲೂಕಿನ ಬೋರಗಾಂವದ ವಿದ್ಯಾಸಾಗರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮುಖಂಡ ಅಣ್ಣಾಸಾಹೇಬ ಹವಲೆ …

Read More »

ಸ್ಮಾರ್ಟ್ ಸಿಟಿಯೋಜನೆಯಡಿ ನಿರ್ಮಿಸಿದ್ದ ಡಬಲ್ ರಸ್ತೆಯ ಒಂದು ಭಾಗ ಭೂಮಾಲೀಕರಿಗೆ ವಾಪಸ್!

ಬೆಳಗಾವಿ: ಎಸ್‌ಪಿಎಂ ರಸ್ತೆಯಿಂದ ಹಳೇ ಪಿ.ಬಿ ರಸ್ತೆಯವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿದ್ದ ರಸ್ತೆಯಲ್ಲಿ ಒಂದು ಭಾಗವನ್ನು ಹೈಕೋರ್ಟ್‌ ಧಾರವಾಡ ಪೀಠದ ಆದೇಶದಂತೆ ಭೂಮಾಲೀಕ ಬಾಳಾಸಾಹೇಬ ಪಾಟೀಲ ಅವರಿಗೆ ಶನಿವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು. ಈ ರಸ್ತೆ ನಿರ್ಮಿಸಲು ಮಹಾನಗರ ಪಾಲಿಕೆಯು ನಿರಾಕ್ಷೇಪಣಾ ಪ್ರಮಾಣಪತ್ರ ಕೊಟ್ಟಿತ್ತು. ಆದರೆ, ಭೂಸ್ವಾಧೀನ ಪ್ರಕ್ರಿಯೆಯನ್ನೇ ಪೂರ್ಣಗೊಳಿಸದೆ, ₹5.88 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿತ್ತು. 2022ರಲ್ಲಿ ಪೂರ್ಣಗೊಂಡ ಈ ಕಾಮಗಾರಿಗೆ ಸರ್ವೆ ಸಂಖ್ಯೆ 4111ರಲ್ಲಿ 21.65 ಗುಂಟೆ …

Read More »

ಕಾಲೇಜ್ ಲೇಡಿಸ್ ಟಾಯ್ಲೆಟ್‌ನಲ್ಲಿ ಕ್ಯಾಮೆರಾ! ವಿದ್ಯಾರ್ಥಿಯಿಂದಲೇ ಕೃತ್ಯ, ಯುವತಿಯರಿಂದ ಗೂಸಾ!

ಬೆಂಗಳೂರು: ಸ್ಕೂಲ್​, ಕಾಲೇಜುಗಳಲ್ಲಿ ಇತ್ತೀಚೆಗೆ ಹಿಡನ್​ ಕ್ಯಾಮೆರಾ ಅಳವಡಿಸಿ, ಚಿತ್ರೀಕರಣ ಮಾಡಿರುವ ಬಗ್ಗೆ ಸುದ್ದಿಗಳು ಕೇಳುತ್ತಲೇ ಇದ್ದೇವೆ. ಇದೀಗ ಬೆಂಗಳೂರಿನ ಕಗ್ಗಲಿಪುರದಲ್ಲಿರುವ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಇದೇ ರೀತಿ ವಾಶ್​ ರೂಮ್​ಗೆ ಕ್ಯಾಮೆರಾ ಅಳವಡಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹೌದು, ಕಳೆದ ಬಾರಿ ಉಡುಪಿಯ ಕಾಲೇಜೊಂದರ ವಾಶ್​ರೂಮ್​ನಲ್ಲಿ ಮೊಬೈಲ್​​ ಇಟ್ಟಿರುವ ಬಗ್ಗೆ ಭಾರೀ ವಿವಾದ ಸೃಷ್ಟಿಯಾಗಿತ್ತು. ಇದೀಗ ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ವಾಶ್​ ರೂಮ್​ನಲ್ಲಿ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. …

Read More »

ಈ ಇಬ್ಬರು ರಾಜಕೀಯ ಎದುರಾಳಿಗೆ ಏಡ್ಸ್‌ ರೋಗಿಯ ರಕ್ತ ಇಂಜೆಕ್ಷನ್‌ ಮಾಡಲು ಮುನಿರತ್ನ ಷಡ್ಯಂತ್ರ?: ಏನಿದು ಆರೋಪ?

ಬೆಂಗಳೂರು, ಸೆಪ್ಟೆಂಬರ್‌ 19: 2023ರ ವಿಧಾನಸಭಾ ಚುಣಾವಣೆಯಲ್ಲಿ ರಾಜರಾಜೇಶ್ವರಿ ನಗರದ ಕ್ಷೇತ್ರ ತೀವ್ರ ಜಿದ್ದಾಜಿದ್ದಿನ ಕಣವಾಗಿತ್ತು. ರಾಜರಾಜೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಬಿಜೆಪಿ ಪಕ್ಷದಿಂದ ಮುನಿರತ್ನ ಸ್ಪರ್ಧೆ ನಡೆಸಿದ್ದು, ಕಡಿಮೆ ಅಂತರದಲ್ಲಿ ಮುನಿರತ್ನ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭಾ ಚುಣಾವಣೆಯ ಸಂದರ್ಭದಲ್ಲಿ ರಾಜಕೀಯ ಎದುರಾಳಿಯಾಗಿದ್ದ ಡಿ ಕೆ ಸುರೇಶ್‌ ಹಾಗೂ ಕುಸುಮಾ ಹನುಮಂತರಾಯಪ್ಪ ಅವರ ವಿರುದ್ಧ ಹೊಸ ಷಡ್ಯಂತ್ರವನ್ನ ರೂಪಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮುನಿರತ್ನರಿಂದ …

Read More »

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್‌ 18: ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವಿಷ್ಯ ನುಡಿದಿದ್ದಾರೆ.   ಬುಧವಾರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ …

Read More »

Tatkalನಲ್ಲಿ ಬುಕ್ಕಿಂಗ್ ಮಾಡಿದ ಕೂಡಲೇ ಕನ್ಫರ್ಮ್​ ಆಗುತ್ತೆ ಸೀಟ್, ಕೆಲವರಿಗಷ್ಟೇ ಗೊತ್ತು ಈ ಟಿಪ್ಸ್​!

ನವದೆಹಲಿ(ಸೆ.18): ರೈಲ್ವೆಯನ್ನು ಭಾರತದ ಜೀವನಾಡಿ ಎಂದು ಕರೆಯಲಾಗುತ್ತದೆ. ಪ್ರತಿದಿನ ಕೋಟಿಗಟ್ಟಲೆ ಜನರನ್ನು ತಮ್ಮ ನಿಗದಿತ ಪ್ರದೇಶಕ್ಕೆ ಕೊಂಡೊಯ್ಯುತ್ತದೆ. ನೀವು ಎಂದಾದರೂ ರೈಲ್ವೇ ಮೂಲಕ ಪ್ರಯಾಣಿಸುತ್ತಿದ್ದರೆ, ದೃಢೀಕೃತ ಟಿಕೆಟ್ ಪಡೆಯಲು ನೀವು ಒಂದು ಅಥವಾ ಎರಡು ತಿಂಗಳ ಮುಂಚಿತವಾಗಿ ಟಿಕೆಟ್ ಅನ್ನು ಬುಕ್ ಮಾಡಿರಬೇಕು. ಏಕೆಂದರೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚು ಮತ್ತು ಆಸನಗಳ ಸಂಖ್ಯೆ ಕಡಿಮೆ. ಆದ್ದರಿಂದ, ನೀವು ಎಂದಾದರೂ ತುರ್ತು ಪರಿಸ್ಥಿತಿಯಲ್ಲಿ ರೈಲ್ವೇ ಮೂಲಕ ಪ್ರಯಾಣಿಸಬೇಕಾದರೆ, ರೈಲಿನಲ್ಲಿ …

Read More »

ಒಂದು ದೇಶ, ಒಂದು ಚುನಾವಣೆ’ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ, ಮೋದಿ ಸಂಪುಟ ಅನುಮೋದನೆ

ನವದೆಹಲಿ: ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಿರುವ ಒನ್ ನೇಷನ್-ಒನ್ ಎಲೆಕ್ಷನ್ (One Nation One Election) ಮಸೂದೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ (NDA Govt) ಒಪ್ಪಿಗೆ ನೀಡಿದೆ. ‘ಒಂದು ರಾಷ್ಟ್ರ-ಒಂದು ಚುನಾವಣೆ’ ಪ್ರಸ್ತಾವನೆಗೆ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದ್ದು, ಈ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್‌ನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿತ್ತು. …

Read More »

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು ಕಾನ್ ಸ್ಟೇಬಲ್ ಗಳಾದ ಸತೀಶ್ ಬಗಾಲಿ ಹಾಗೂ ತಿಮ್ಮಣ್ಣ ಪೂಜಾರಿ ಅವರನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 9ರಂದು ಕದಿರೇನಹಳ್ಳಿಯ ಸೀಮೆಂಟ್ ರಸ್ತೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರ …

Read More »

ಆರ್‌ಟಿಪಿಎಸ್, ವೈಟಿಪಿಎಸ್, ಘಟಕಗಳು ತಾತ್ಕಾಲಿಕ ಬಂದ್

ಶಕ್ತಿನಗರ (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದರಿಂದ ಜಲವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಿಸಿದ ಪರಿಣಾಮ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಆರು ಘಟಕಗಳಲ್ಲಿ ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಎರಡು ಘಟಕಗಳಲ್ಲಿ ತಾತ್ಕಲಿಕವಾಗಿ ವಿದ್ಯುತ್‌ ಉತ್ಪಾದನೆ ನಿಲ್ಲಿಸಲಾಗಿದೆ.   ಬಹುತೇಕ ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿದ್ದರಿಂದ ಜಲವಿದ್ಯುತ್ ಕೇಂದ್ರಗಳು ಕಾರ್ಯಾರಂಭಿಸಿವೆ. ಶಾಖೋತ್ಪನ್ನ ಘಟಕಗಳ ಉತ್ಪಾದನೆ ತಾತ್ಕಲಿಕವಾಗಿ ಬಂದ್ ಮಾಡಲು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಮುಂದಾಗಿದೆ. …

Read More »