Breaking News

Uncategorized

ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …

Read More »

ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …

Read More »

ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್‌ನ ಪೋರಬಂದರ್‌ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …

Read More »

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು

ಮೈಸೂರು, : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ …

Read More »

ರೆಮ್‌ಡಿಸಿವಿರ್‌ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ: ಸ್ಟಾಲಿನ್‌ ಎಚ್ಚರಿಕೆ

ಚೆನ್ನೈ: ‘ಕೋವಿಡ್‌ ಚಿಕಿತ್ಸೆಗೆ ಬಳಸಲಾಗುತ್ತಿರುವ ರೆಮ್‌ಡಿಸಿವಿರ್‌ ಔಷಧಿಯನ್ನು ಸಂಗ್ರಹಿಸುವುದು ಮತ್ತು ಆಮ್ಲಜನಕ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶನಿವಾರ ಹೇಳಿದರು. ‘ಕೋವಿಡ್‌ ಪ್ರಸರಣವನ್ನು ತಡೆಯಲು ಹೇರಲಾಗಿರುವ ಲಾಕ್‌ಡೌನ್‌ ಎಂಬ ‘ಕಹಿ ಗುಳಿಗೆ’ಯನ್ನು ಸಾರ್ವಜನಿಕರು ಸ್ವೀಕರಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ರೆಮ್‌ಡಿಸಿವಿರ್‌ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಯಲ್ಲಿ …

Read More »

Dharwad 2 ವಾರದಲ್ಲಿ ಒಂದೇ ಗ್ರಾಮದ 13 ಜನ ಸಾವು- ದೇವರ ಮೊರೆ ಹೋದ ಗ್ರಾಮಸ್ಥರು

ಧಾರವಾಡ: ಕೇವಲ ಎರಡು ವಾರದಲ್ಲಿ ಒಂದೇ ಗ್ರಾಮದ 13 ಜನ ಸಾವನ್ನಪ್ಪಿದ್ದು, ಗ್ರಾಮಸ್ಥರು ದೇವರ ಮೊರೆ ಹೋಗಿದ್ದಾರೆ. ತಾಲೂಕಿನ ಮನಸೂರ ಗ್ರಾಮದಲ್ಲಿ ಎರಡು ವಾರದಲ್ಲಿ 13 ಜನ ಸಾವನ್ನಪ್ಪಿದ್ದು, ಇದರಲ್ಲಿ 2 ಜನ ಕೋವಿಡ್‍ದಿಂದ ಸಾವನ್ನಪ್ಪಿದರೆ, 11 ಜನ ಇತರೆ ಖಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಗ್ರಾಮಸ್ಥರು ಮನೆಯಿಂದ ಹೊರಗೆ ಬರಲು ಭಯ ಪಡುತಿದ್ದಾರೆ. ಮನೆ ಬಾಗಿಲು ಹಾಕಿಕೊಂಡು ಜನ ಭಯದಿಂದಲೇ ಒಳಗೆ ಕುಳಿತಿದ್ದಾರೆ. ಮತ್ತೊಂದೆಡೆ …

Read More »

19 ಮಹಿಳೆಯರ ಅತ್ಯಾಚಾರ ಮಾಡಿದ ಕಾಮುಕನ ಬಂಧನ

ಹೈದರಾಬಾದ್​: ಹಣದ ಮೇಲಿನ ದುರಾಸೆಯಿಂದ ಕೆಲವರು ಕಳ್ಳತನಕ್ಕೆ ಇಳಿಯುವುದನ್ನು ನಾವು ನೋಡಿದ್ದೇವೆ. ಇನ್ನು ಕೆಲವರು ತಮ್ಮ ಅಗತ್ಯ ಪೂರೈಸಿಕೊಳ್ಳಲು ಕಳ್ಳತನ ಮಾಡುತ್ತಾರೆ. ಏನೇ ಆಗಲಿ ಕಳ್ಳತನ ಮಾಡುವುದು ಅಪರಾಧವೇ. ಆದರೆ, ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಇಲ್ಲೊಬ್ಬ ಖದೀಮ ತುಂಬಾ ಭಯಾನಕ. ಏಕೆಂದರೆ ಈತ ಹಣ, ಆಭರಣ ಕದ್ದಿದ್ದಲ್ಲದೆ, ಹೆಣ್ಣು ಮಕ್ಕಳ ಶೀಲವನ್ನು ದೋಚಿದ್ದಾನೆ. ಇನ್ನು ಪೊಲೀಸ್​ ವಿಚಾರಣೆಯಲ್ಲಿ ಖದೀಮ ಆಘಾತಕಾರಿ ವಿಚಾರಗಳನ್ನು ಬಿಚ್ಚಿಟ್ಟಿದ್ದು, ಸ್ವತಃ ಪೊಲೀಸರೇ ಶಾಕ್​ ಆಗಿದ್ದಾರೆ. ಅಂದಹಾಗೆ …

Read More »

ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ ಸಚಿವ ಸುಧಾಕರ್ ನನ್ನು ಸಂಪುಟದಿಂದ ವಜಾ ಮಾಡಿ: ಡಿಕೆಶಿ

ಬೆಂಗಳೂರು, ಮೇ 14-ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಘಟನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ನಿರ್ಲಕ್ಷ್ಯದ ಕಾರಣಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಆಡಳಿತ ವೈಪಲ್ಯಗಳನ್ನು ತರಾಟೆಗೆ …

Read More »