ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದೆ. ಬಿಮ್ಸ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …
Read More »ಬೆಳಗಾವಿ: ಸಚಿವ ಶ್ರೀಮಂತ ಕ್ಷಮೆ ಯಾಚನೆಗೆ ಆಗ್ರಹ
ಮೋಳೆ/ಕಾಗವಾಡ: ‘ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಜವಳಿ ಸಚಿವ ಶ್ರೀಮಂತ ಪಾಟೀಲ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಜನರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ‘ಸಚಿವರು ತಕ್ಷಣವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಳಿಸಬೇಕು’ ಎಂದು ಒತ್ತಾಯಿಸಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ …
Read More »ರಾಜ್ಯದಲ್ಲಿ ಎರಡು ಲಕ್ಷದ ಗಡಿ ದಾಟಿದ ಮಹಾಮಾರಿ! ಇವರಿಂದ ಪ್ರಕಟಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 6,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆ ಕಂಡಿದೆ. ಈ ಪೈಕಿ 78,337 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ, ಇಂದು ಕೂಡ 103 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಂಗಳೂರು ನಗರದಲ್ಲಿ 1,893 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, …
Read More »ಬೆಳಗಾವಿ | ಬೆಂಗಳೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಬೆಳಗಾವಿ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಮತ್ತು ಕಾವಲ್ಭೈರಸಂದ್ರದಲ್ಲಿ ನಡೆದ ಗಲಭೆ ಖಂಡಿಸಿ ವಿಶ್ವ ಹಿಂದೂ ಪರಿಷತ್-ಬಜರಂಗ ದಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿದರು. ‘ಕಿಡಿಗೇಡಿಗಳು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಅಮಾಯಕರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸ್ ಠಾಣೆ ಹಾಗೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದು ಪೂರ್ವಯೋಜಿತ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆದ ಘಟನೆಯಾಗಿದೆ. ಇದರಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಘಟನೆಗೆ ಕಾರಣವಾದ ಸಂಘಟನೆಗಳನ್ನು ಕೂಡಲೇ …
Read More »ಸ್ವದೇಶಿ ಎಂದರೆ ಎಲ್ಲ ವಿದೇಶಿ ಉತ್ಪನ್ನಗಳ ಬಹಿಷ್ಕಾರವಲ್ಲ; ಭಾಗವತ್ ಸ್ಪಷ್ಟನೆ
ಹೊಸದಿಲ್ಲಿ: ಸ್ವದೇಶಿ ಎಂದರೆ ಪ್ರತಿಯೊಂದು ವಿದೇಶಿ ಉತ್ಪನ್ನವನ್ನು ಬಹಿಷ್ಕರಿಸುವುದಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಜೀ ಭಾಗವತ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವುದ ರಲ್ಲಿ ಅರ್ಥವಿಲ್ಲ. ದೇಶದಲ್ಲಿ ಸಾಂಪ್ರದಾಯಿಕ ಕೊರತೆ ಇರುವ, ಸ್ಥಳೀಯವಾಗಿ ಲಭ್ಯ ವಿಲ್ಲದ ತಂತ್ರ ಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Read More »ಕೇಂದ್ರದ ಮೂಲಕವೇ ಲಸಿಕೆ ಸಂಗ್ರಹ, ಪೂರೈಕೆ
ಹೊಸದಿಲ್ಲಿ: ಲಸಿಕೆ ಸಂಶೋಧನೆಗಳು ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿವೆ. ಈ ಲಸಿಕೆಗಳು ಲಭ್ಯವಾದ ಬಳಿಕ ಕೇಂದ್ರದ ಮೂಲಕವೇ ಸಂಗ್ರಹ ಕಾರ್ಯ, ಎಲ್ಲ ರಾಜ್ಯಗಳಿಗೆ ಪೂರೈಕೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನೀತಿ ಆಯೋಗದ ಕಾಯಂ ಸದಸ್ಯ, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಯೂ ಆಗಿರುವ ಡಾ| ವಿ.ಕೆ. ಪಾಲ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ಜರುಗಿತು. ಲಸಿಕೆ ವಿತರಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ಲಸಿಕೆ ಸಂಗ್ರಹಕ್ಕೆ ಪ್ರತ್ಯೇಕ ಮಾರ್ಗ ಕಂಡುಕೊಳ್ಳದಂತೆ ಎಲ್ಲ …
Read More »ಖಾಸಗಿ ರೈಲುಗಳಿಗೆ ಇರಲಿದೆ ಕೇಂದ್ರದ ನಿಗಾ; ನಿಯಮಗಳ ಪ್ರಕಟ; ಸಮಯ ಪಾಲನೆಗೆ ಇರಲಿದೆ ಬಿಗಿ ಕ್ರಮ
ಹೊಸದಿಲ್ಲಿ: ಖಾಸಗಿ ಕಂಪೆನಿಗಳ ಪಾಲುದಾರಿಕೆಯಲ್ಲಿ ಆರಂಭವಾಗಲಿರುವ ರೈಲು ಸೇವೆಗಳಿಗೆ ಮತ್ತಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಹೇರಲು ರೈಲ್ವೆ ಇಲಾಖೆ ಮುಂದಾಗಿದೆ. ಸಮಯ ಪರಿಪಾಲನೆ ಮಾಡದ ರೈಲುಗಳ ಮೇಲೆ ದಂಡ ವಿಧಿಸುವ, ಸುಳ್ಳು ಆದಾಯ ತೋರಿಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂಥ ನಿಯಮಗಳನ್ನು ಪ್ರಕಟಿಸಲಾಗಿದೆ. ತಡವಾದರೆ, ಬೇಗ ಬಂದರೆ ದಂಡ: ಖಾಸಗಿ ರೈಲೊಂದು ನಿಲ್ದಾಣದಿಂದ ತಡವಾಗಿ ಹೊರಟರೆ ಅಥವಾ ನಿಗದಿತ ನಿಲ್ದಾಣವನ್ನು ತಡವಾಗಿ ತಲುಪಿದರೆ ಆ ರೈಲನ್ನು ನಿರ್ವಹಿಸುವ ಖಾಸಗಿ ಕಂಪೆನಿಯ ಮೇಲೆ ದಂಡ …
Read More »ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ.!
ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, ಪಾಮ್ ಮರದ ದಟ್ಟ ಕಾಡು, ಹಿನ್ನೀರು..ಈ ಎಲ್ಲ ಸೊಬಗನ್ನು ಒಂದೆಡೆ ಸೇರಿಸಬೇಕಾದರೆ ನೀವು ಕೇರಳದ ಅಲೆಪ್ಪಿಗೆ ಭೇಟಿ ನೀಡಲೇ ಬೇಕು. ಇಲ್ಲಿನ ದೋಣಿ ವಿಹಾರ ಅವಿಸ್ಮರಣೀಯ. ಹಿನ್ನೀರಿನ ಪ್ರವಾಸ, ದೋಣಿ ಮನೆಯಲ್ಲಿ ತಂಗುವಿಕೆ, ಪ್ರಶಾಂತ ವಾತಾವರಣ ಎಂಥವರನ್ನೂ ಸೆಳೆಯುವಂತಿದೆ. ದೋಣಿ …
Read More »ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ
ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮೂರು ಸಲ ಪ್ರಧಾನಿಯಾಗಿ ಆರು ವರ್ಷ 78 ದಿನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಮೋದಿ ಆರು ವರ್ಷ 79 ದಿನ ಆಡಳಿತ ನಡೆಸಿದ್ದು ವಾಜಪೇಯಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. 2014ರ ಮೇ 26 ರಂದು ಭಾರತದ 14 ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು 2019ರ ಮೇ …
Read More »ಸುಪ್ರೀಂ ತೀರ್ಪು ಸಮಾನತೆಯ ಹಾದಿಯಲ್ಲಿ
ಸಮಾನತೆಯ ಹಾದಿಯಲ್ಲಿ ದೇಶವು ಸಾಗಬೇಕಾದ ದಾರಿ ಇನ್ನೂ ಇದೆಯಾದರೂ ಈ ನಿಟ್ಟಿನಲ್ಲಿ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವು ಕೆಲವು ವರ್ಷಗಳಿಂದ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶವೊ ಒಂದೆನ್ನಬಹುದು. ಹಿಂದೂ ಅವಿಭಜಿತ ಕುಟುಂಬದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಗಳಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಸಮಾನ ಹಕ್ಕಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದಷ್ಟೇ ಅಲ್ಲದೇ …
Read More »