Breaking News

Uncategorized

ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ

ಆಳಂದ: ಪಟ್ಟಣದ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ  ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತಿದ್ದ 88 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಪ್ರಿಯಾಂಕಾ ವಾಮನರಾವ 97.12% ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ …

Read More »

‘ಬೆಳೆ ಸಮೀಕ್ಷೆಗೆ ಮೊಬೈಲ್ ಆಯಪ್ ಬಳಸಿ’

ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ‘ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲ್ಲೂಕು ಆಡಳಿತದಿಂದ ಪರಿಶೀಲಿಸಲಾಗುವುದು’. ‘ರೈತರು ಸ್ಮಾರ್ಟ್‌ ಮೊಬೈಲ್‌ ಫೋನ್‌ನಲ್ಲಿ ಬೆಳೆ ಸಮೀಕ್ಷೆ ಆಯಪ್‌ ಅನ್ನು …

Read More »

ಡಿ.ಜೆ. ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಡಿ.ಜೆ. ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಬುಧವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಬೆಂಗಳೂರಿನ ಡಿ.ಜೆ. ಹಳ್ಳಿ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು. …

Read More »

ಡಿಜೆ ಹಳ್ಳಿ ಘಟನೆ| ತ‍ಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ

ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್‌ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …

Read More »

ಮತ್ತೆ 46 ಜನರಿಗೆ ಸೋಂಕು

ಗದಗ: ಜಿಲ್ಲೆಯಲ್ಲಿ ಹೊಸದಾಗಿ 46 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,399ಕ್ಕೆ ಏರಿದೆ. ಈ ವರೆಗೆ 1321 ಜನರು ಗುಣಮುಖರಾಗಿದ್ದು, 1027 ಪ್ರಕರಣಗಳು ಸಕ್ರಿಯವಾಗಿವೆ. ಗದಗ-28, ಮುಂಡರಗಿ-4, ನರಗುಂದ-6, ರೋಣ-6, ಶಿರಹಟ್ಟಿ-1, ಹೊರಜಿಲ್ಲೆಯ ಒಬ್ಬರಿಗೆ ಕೋವಿಡ್‌ ದೃಢಪಟ್ಟಿದೆ. ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಜೆ.ಟಿ. ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೊ ಕಾಲೋನಿ, ಮದೀನಾ ಮಸೀದಿ ಹತ್ತಿರ, ಎಸ್‌.ಎಂ. ಕೃಷ್ಣಾ ನಗರ, …

Read More »

ಪ್ರಧಾನಿ ನರೇಂದ್ರ ಮೋದಿ ಸರ್ಕಾರವೂ ಅಡಳಿತದಲ್ಲಿ ವಿಫಲ: ಅನಂತ್ ಕುಮಾರ್ ಹೆಗಡೆ

ಕುಮಟಾ: ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ನೀಡಿರುವ ಹೇಳಿಕೆ ದೇಶದಾದ್ಯಂತ ಕೋಲಾಹಲ ಸೃಷ್ಟಿಸಿದೆ. ಪ್ರಧಾನಿ ಮೋದಿ ವಿರುದ್ಧವೇ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ದೇಶದ ಬೃಹತ್ ಟೆಲಿಕಾಂ ಸಂಸ್ಥೆಯಾದ ಬಿಎಸ್‌ಎನ್‌ಎಲ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಸಂಸ್ಥೆಯ ಉದ್ಯೋಗಿಗಳು ಸಂಸ್ಥೆಯನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿಲ್ಲ. ಬಿಎಸ್‌ಎನ್‌ಎಲ್ ಉದ್ಯೋಗಿಗಳು ದೇಶದ್ರೋಹಿಗಳು. ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಎಸ್‌ಎನ್‌ಎಲ್ …

Read More »

ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪಾಠ

ರಾಮನಗರ: ಕೋವಿಡ್‌-19 ಲಾಕ್‌ಡೌನ್‌ ಕಾರಣಕ್ಕೆ ಕಲಿಕೆಯಿಂದ ವಿಮುಖರಾಗಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಆನ್‌ಲೈನ್‌ ಪಾಠ ಆರಂಭಿಸಿದೆ. ಈ ಮೂಲಕ ಮನೆಯಲ್ಲೇ ಕಲಿಕೆ ಮುಂದುವರಿಸುವ ಅವಕಾಶ ನೀಡಿದೆ.   ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ವಿಷಯಗಳ ನುರಿತ ಉಪನ್ಯಾಸಕರಿಂದ ಪಠ್ಯದ ವಿವಿಧ ಅಧ್ಯಾಯಗಳನ್ನು ವಿಡಿಯೊ ರೂಪದಲ್ಲಿ ಸಂಗ್ರಹಿಸಿ ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಲಾಗುತ್ತಿದೆ. ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮಗಳೆಡರಲ್ಲೂ ಈ ಪಾಠಗಳು ಲಭ್ಯವಿದೆ. ಕಳೆದ ಜುಲೈನಿಂದಲೇ ಈ …

Read More »

ಸಿದ್ದರಾಮಯ್ಯನವರೇ, ನೀವು ಮಾಡಿದ್ದು ತಪ್ಪು ಅಂತ ಈಗ ಗೊತ್ತಾಯ್ತಾ..?

ಬೆಂಗಳೂರು,ಆ.12- ಎಸ್‍ಡಿಪಿಐ ಮತ್ತು ಕೆಐಎಫ್‍ಡಿ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ? ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್? ಎಂದು ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಮತ್ತೊಂದು ಟ್ವೀಟ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ್, ಶಾಂತಿಯಿಂದ ಬದುಕೋಣ ಎಂಬುದು ನಮ್ಮ ಆಶಯ. ಅಶಾಂತಿಯೇ ಕೆಲವರ ರಾಜಮಾರ್ಗ …

Read More »

ರಷ್ಯಾದಿಂದ ಕೊರೊನಾ ಲಸಿಕೆಯ ವೆಬ್ ಸೈಟ್ ಬಿಡುಗಡೆ

ಕೊನೆಗೂ ಕೊರೊನಾ ಲಸಿಕೆ ಬಂದಿದೆ. ರಷ್ಯಾ ಈ ಲಸಿಕೆ ತಯಾರಿಸಿದೆ. ಈ ಲಸಿಕೆಯನ್ನು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಔಷಧ ತಯಾರಕ ಕಂಪನಿ ಅಸ್ಟ್ರಾಜೆನೆಕಾ ತಯಾರಿಸಿದೆ. ಈ ಲಸಿಕೆ ತಯಾರಿಸಲು ರಷ್ಯಾ ಡೈರೆಕ್ಟ್ ಇನ್ವೆಸ್ಟ್ಮೆಂಟ್ ಫಂಡ್ ಹಣ ಸಹಾಯ ಮಾಡುತ್ತಿದೆ. ಈಗ ರಷ್ಯಾದ ಆರ್‌ಡಿಐಎಫ್ ಕೊರೊನಾ ಲಸಿಕೆ ಬಗ್ಗೆ ವೆಬ್ ‌ಸೈಟ್ ಪ್ರಾರಂಭಿಸಿದೆ. ಕೊರೊನಾ ಲಸಿಕೆಗೆ ಸ್ಪುಟ್ನಿಕ್ ವಿ ಎಂದು ಹೆಸರಿಡಲಾಗಿದೆ. ಆರ್‌ಡಿಐಎಫ್ ಪ್ರಾರಂಭಿಸಿದ ವೆಬ್‌ಸೈಟ್‌ಗೆ sputnikvaccine.com ಎಂದು ಹೆಸರಿಡಲಾಗಿದೆ. ಭಾರತದ …

Read More »

Googleನ ಹೊಸ ಫೀಚರ್: ಇನ್ನು ನಿಮ್ಮ ಮೊಬೈಲೇ ನೀಡಲಿದೆ ಭೂಕಂಪನದ ಎಚ್ಚರಿಕೆ!

ನವದೆಹಲಿ: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ. ಆಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ …

Read More »