ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು …
Read More »ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ : BSY
ಬೆಂಗಳೂರು,ಜ.6- ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಯೋಜನೆಗಳ ಲೋಕಾರ್ಪಣೆ, ವಿಪ್ರ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಶಂಕರಾಚಾರ್ಯ, ಮಧ್ವಾಚಾರ್ಯ ಸೇರಿದಂತೆ …
Read More »ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ :ಯತ್ನಾಳ
ಬೆಂಗಳೂರು(ಜ.06): ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಸಿದ್ದೇನೆ. ಅಭಿವೃದ್ದಿ ಬಗ್ಗೆ ಮಾತನಾಡಿದರೆ ಅದು ಪಕ್ಷ ವಿರೋಧಿ ಹೇಳಿಕೆ ಹೇಗಾಗುತ್ತೆ? ನಾನೇನು ಮಂತ್ರಿ ಮಾಡಿ ಅಂತ ಯಡಿಯೂರಪ್ಪನವರ ಮನೆಗೆ ಹೋಗಿಲ್ಲ. ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಗುಡುಗಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧ ತಿರುಗಿ ಬಿದ್ದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿರುದ್ಧವೂ …
Read More »ಮರುಕಳಿಸಿದೆ ನಿರ್ಭಯಾ ಕೇಸ್: ಕಬ್ಬಿಣದ ರಾಡ್ ನೂಕಿಸಿ ಅತ್ಯಾಚಾರ ಎಸಗಿ ಕೊಲೆ!
ಬದೌನ್ (ಉತ್ತರ ಪ್ರದೇಶ): ಕಾಮುಕರ ಅಟ್ಟಹಾಸಕ್ಕೆ, ಕ್ರೌರ್ಯಕ್ಕೆ ಕೊನೆಯೇ ಇಲ್ಲವೇನೋ ಎನ್ನುವಂಥ ಭಯಾನಕ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇದೆ. ಅಂಥದ್ದೇ ಒಂದು ಭಯಾನಕ ಘಟನೆ ಉತ್ತರ ಪ್ರದೇಶ ಬದೌನ್ನಲ್ಲಿ ನಡೆದಿದೆ. ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಗಲ್ಲುಶಿಕ್ಷೆಯಾಗಿದೆ. ಆದರೆ ಅದರ ಬೆನ್ನಲ್ಲೇ ಥೇಟ್ ಇದೇ ಘಟನೆ ನೆನಪಿಸುವ ಅತ್ಯಂತ ಕ್ರೌರ್ಯವಾದ ಅತ್ಯಾಚಾರ ಘಟನೆ ಬದೌನ್ನಲ್ಲಿ ನಡೆದಿದೆ. 50 ವರ್ಷದ ಮಹಿಳೆಯೊಬ್ಬರ ಗುಪ್ತಾಂಗಕ್ಕೆ ರಾಡ್ ಹಾಕಿ ಅತ್ಯಾಚಾರ …
Read More »ಹಾಸನ: ಹತ್ತು ಶಿಕ್ಷಕರಿಗೆ ಕೋವಿಡ್ 19 ದೃಢ, ಏಳು ಶಾಲೆಗಳಿಗೆ ರಜೆ
ಹಾಸನ: ಜಿಲ್ಲೆಯಲ್ಲಿ ಶಾಲೆಗಳು ಆರಂಭಗೊಂಡ ಬಳಿಕ ಹತ್ತು ಶಿಕ್ಷಕರಿಗೆ ಕೋವಿಡ್ 19 ದೃಢಪಟ್ಟಿರುವುದರಿಂದ ಏಳು ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಪ್ರಾಥಮಿಕ ಶಾಲೆಯ ಏಳು ಮತ್ತು ಪ್ರೌಢಶಾಲೆಯ ಮೂವರು ಶಿಕ್ಷಕರಿಗೆ ಸೋಂಕು ತಗುಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ. ಶಾಲೆ ಆರಂಭಕ್ಕೂ ಮುನ್ನ ಮೂವರು ಶಿಕ್ಷಕರಿಗೆ ಪಾಸಿಟಿವ್ ಪತ್ತೆಯಾಗಿತ್ತು. ಹಾಗಾಗಿ ಸೋಂಕಿತ ಶಿಕ್ಷಕರು ಶಾಲೆಗೆ ಹಾಜರಾಗಿರಲಿಲ್ಲ. ‘ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು, ಹಾಸನ ತಾಲ್ಲೂಕಿನ ಇಬ್ಬರು ಹಾಗೂ …
Read More »ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢ
ನವದೆಹಲಿ: ದೇಶದಲ್ಲಿ ಬ್ರಿಟನ್ ಕೊರೊನಾ ಹವಾಳಿ ಹೆಚ್ಚುತ್ತಿದ್ದು, ದೇಶದಲ್ಲಿ ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ರೂಪಾಂತರಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಅದ್ರಂತೆ, ಬೆಂಗಳೂರಿನ ನಿಮ್ಹಾನ್ಸ್ʼನಲ್ಲಿ 11 ಪ್ರಕರಣಗಳು ದಾಖಲಾಗಿದ್ರೆ, ಎನ್ʼಐವಿ ಪುಣೆ 30 ಪ್ರಕರಣಗಳು, ಇನ್ನು ಸಿಸಿಎಂಬಿ ಹೈದ್ರಾಬಾದ್ನಲ್ಲಿ 3 ಪ್ರಕರಣಗಳು ಹಾಗೂ ಎನ್ಸಿಡಿಸಿ ಕೊಲ್ಕತ್ತಾದಲ್ಲಿ 1 ಪ್ರಕರಣ ಸೇರಿ ದೇಶದಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದೆ ಎಂದು …
Read More »ಕೊರೊನಾ ಎಫೆಕ್ಟ್: ಖಾಯಂ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಹೋಂಡಾ
ಕೊರೊನಾ ಸಾಂಕ್ರಾಮಿಕದಿಂದಾಗಿ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಹೋಂಡಾ ಮೋಟಾರ್ ಕಂಪನಿ ತನ್ನ ಸಂಸ್ಥೆಯ ಕೆಲ ಖಾಯಂ ನೌಕರರಿಗೆ ಸ್ವಯಂ ಪ್ರೇರಿತ ನಿವೃತ್ತಿಯ ಆಫರ್ ನೀಡುತ್ತಿದೆ. ದೇಶದ ಎರಡನೇ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್ ಸೈಕಲ್ಸ್ ಹಾಗೂ ಸ್ಕೂಟರ್ಸ್ ಇಂಡಿಯಾ ಕೊರೊನಾ ಸಾಂಕ್ರಾಮಿಕದ ಬಳಿಕ ಮಂದಗತಿಯ ಬೇಡಿಕೆ ಹಾಗೂ ಆರ್ಥಿಕ ಕುಸಿತವನ್ನ ಅನುಭವಿಸುತ್ತಿದೆ ಎಂದು ತಿಳಿಸಿದೆ. ಬೇಡಿಕೆ ನಿಧಾನವಾಗುತ್ತಿರೋದ್ರಿಂದ ನೋಯ್ಡಾ ಕಾರು ಪ್ಲಾಂಟ್ನ್ನ ಬಂದ್ ಮಾಡಿದ …
Read More »ಜಿಲ್ಲಾಧಿಕಾರಿ ಕಚೇರಿ ಮುಂದೆ ನಾಡವಿರೋಧಿಗಳ ಪುಂಡಾಟಿಕೆ
ಕನ್ನಡ ಧ್ವಜ ತೆರವಿಗೆ ಜನವರಿ 21ರವರೆಗೆ ಗಡುವು, ಇಲ್ಲವಾದರೆ ಗಲ್ಲಿಗಲ್ಲಿಗಳಲ್ಲಿ ಕೇಸರಿ ಧ್ವಜ ಹಾರಾಟ: ಜಿಲ್ಲಾಧಿಕಾರಿ ಕಚೇರಿ ಮುಂದೆ ನಾಡವಿರೋಧಿಗಳ ಪುಂಡಾಟಿಕೆ ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಹಾರಿಸಲಾದ ಕನ್ನಡ ಧ್ವಜವನ್ನು ಜನವರಿ 20ರೊಳಗೆ ತೆರವುಗೊಳಿಸದಿದ್ದರೆ ಜನವರಿ 21ರಂದು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ, ಗಲ್ಲಿ ಗಲ್ಲಿಗಳಲ್ಲಿ ಕೇಸರಿ ಧ್ವಜ ಹಾರಿಸಲಾಗುವುದು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾಡ ವಿರೋಧಿಗಳು ಪ್ರತಿಭಟನೆ …
Read More »ನುಡಿದಂತೆ ನಡೆದ ಸರ್ಕಾರ- ಡಾ.ಸೋನಾಲಿ ಹರ್ಷ
ಬೆಳಗಾವಿ- ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವದು,ಗೋರಕ್ಷಕರ ಬಹುದಿನಗಳ ಕನಸಾಗಿತ್ತು,ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಠಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ,ರಾಜ್ಯದಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದ್ದು,ಸರ್ಕಾರ ರಾಜ್ಯದಲ್ಲಿ ಗೋಹತ್ಯೆ …
Read More »ದೇಶದ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ : ವಿವೇಕ ಜತ್ತಿ
ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …
Read More »
Laxmi News 24×7