ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಮೊಮ್ಮಗ ಹಾಗೂ ಸ್ಯಾಂಡಲ್ವುಡ್ ನಟ ರಾಮ್ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದು, ಮೊದಲ ಚಿತ್ರ ಆರಂಭದಲ್ಲಿಯೇ ಭರ್ಜರಿಯಾಗಿ ಸದ್ದು ಮಾಡುತ್ತಿದೆ. ದೊಡ್ಮನೆ ಹುಡುಗನ ಮೊದಲ ಚಿತ್ರವೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಧೀರೇನ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಈ ಹಿಂದೆ ‘ದಾರಿ ತಪ್ಪಿದ ಮಗ’ ಸಿನಿಮಾ ಮೂಲಕ ಧೀರೇನ್ ಕಳೆದ ವರ್ಷವೇ ತಮ್ಮ ಸಿನಿ ಜರ್ನಿ ಆರಂಭಿಸಲಿದ್ದಾರೆ ಎನ್ನಲಾಗಿತ್ತು. ಇದು …
Read More »ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್ನ್ಯೂಸ್ ಕೊಡಲು ಮುಂದಾಗಿದೆ……”
ಬೆಂಗಳೂರು: ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಕಳೆದ ಒಂದು ತಿಂಗಳಿನಿಂದ ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್ನ್ಯೂಸ್ ಕೊಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಒಂದುಕಡೆ ಮದ್ಯ ವ್ಯಾಪಾರಿಗಳು, ಇನ್ನೊಂದುಕಡೆ ಎಣ್ಣೆ ಪ್ರಿಯರ ಒತ್ತಾಯವು ಫಲ ನೀಡುತ್ತಾ? ಮತ್ತೆ ಮದ್ಯ ಮಾರಾಟ ಆರಂಭವಾಗುತ್ತಾ? ಇಷ್ಟು ದಿನ ಲಾಕ್ಡೌನ್ ಮುಗಿಯುವವರೆಗೆ ಓಪನ್ ಮಾಡುವ ಪ್ರಶ್ನೆಯೇ ಇಲ್ಲಾ ಎನ್ನುತ್ತಿದ್ದ ಸರ್ಕಾರ ಈಗ ಮದ್ಯದಂಗಡಿ ತೆರೆಯಲು ಮುಂದಾಗುತ್ತಾ ಎನ್ನುವ ಪ್ರಶ್ನೆ …
Read More »ಜನರಿಗೊಂದು ನಿಯಮ, ಸಚಿವರಿಗೊಂದು ನಿಯಮ – ಕೊರೊನಾ ಮಾರ್ಗಸೂಚಿ ಉಲ್ಲಂಘನೆ
ಸೋಂಕಿತ ಕ್ಯಾಮೆರಾಮನ್ ಜೊತೆ ಪ್ರಾಥಮಿಕ ಸಂಪರ್ಕ – ಕ್ವಾರಂಟೈನ್ ಆಗಬೇಕಾದವರು ಸಭೆಯಲ್ಲಿ ಭಾಗಿ – ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಪ್ರಶ್ನಿಸಿ ಟೀಕೆ ಬೆಂಗಳೂರು: ಕೊರೊನಾ ಕ್ವಾರಂಟೈನ್ ವಿಚಾರದಲ್ಲಿ ಸಚಿವರಿಗೊಂದು ನಿಯಮ ಬೇರೆಯವರಿಗೊಂದು ನಿಯಮವೇ ಹೀಗೊಂದು ಪ್ರಶ್ನೆ ಎದ್ದಿದೆ. ವೈದ್ಯಕೀಯ ಶಿಕ್ಷಣ ಸಚಿವರ ನಡೆಯಿಂದಾಗಿ ಈ ಪ್ರಶ್ನೆ ಸೃಷ್ಟಿಯಾಗಿದೆ. ಹೌದು. ಖಾಸಗಿ ವಾಹಿನಿಯ ಕ್ಯಾಮೆರಾಮೆನ್ಗೆ ಸೋಂಕು ದೃಢಪಟ್ಟಿದ್ದು, ಆತನ ಸಂಪರ್ಕಕ್ಕೆ ಸಚಿವರು ಬಂದಿದ್ದು ಅವರು ಕ್ವಾರಂಟೈನ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಹೀಗಾಗಿ ಸೋಂಕಿತನ …
Read More »ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ
ಬೆಳಗಾವಿ- ಬುಧವಾರ ಸಂಜೆಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಪ್ರಕರಣ ಪತ್ತೆಯಾಗಿಲ್ಲ ಬುಧಾವಾರ ಸಂಜೆಯ ರಿಪೋರ್ಟ್ ಬೆಳಗಾವಿ ಜಿಲ್ಲೆಗೆ ಸಮಾಧಾನ ತಂದಿದೆ ಬುಧಾವರಾ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ಸಂಕೇಶ್ವರದ ಹನ್ನೆರಡು ವರ್ಷದ ಬಾಲಕನಿಗೆ ಸುಂಕು ಇರುವದು ದೃಡವಾಗಿತ್ತು ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಇದೆ
Read More »ಖ್ಯಾತ ನಟ ಇರ್ಫಾನ್ ಖಾನ್ ನಿಧನ
ಖ್ಯಾತ ನಟ ಇರ್ಫಾನ್ ಖಾನ್ ನಿಧನ. ಮೊನ್ನೆ ತಾನೆ ಅವರ ತಾಯಿ ನಿಧನರಾದಾಗ ಅಂತ್ಯಕ್ರಿಯೆಗೆ ಹೋಗಲು ಇರ್ಫಾನ್ ಖಾನ್ ಗೆ ಹೋಗಲು ಆಗಿರಲಿಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೆ. ಇದೀಗ ತನ್ನ ತಾಯಿಯನ್ನೇ ಭೇಟಿಯಾಗಲು ಹೋಗಿ ಬಿಟ್ಟರೇ ಇರ್ಫಾನ್ ಖಾನ್? ಅವರ ಆತ್ಮಕ್ಕೆ ಸದ್ಗತಿ ದೊರಕಲಿ.
Read More »ವಿಶೇಷ ಲೇಖನ: ದಿವ್ಯತೇಜ ಆದಿಗುರು ಶಂಕರಾಚಾರ್ಯ ಜಯಂತಿ…..
ವೇದವು ಆತ್ಮ ಮತ್ತು ಆತ್ಮಕ್ಕಿಂತ ಭಿನ್ನವಾದ ಪರಮಾತ್ಮನನ್ನು ಬೋಧಿಸುತ್ತದೆ ಎಂದು ಸಾರುತ್ತಿದ್ದವರಿಂದ ವೇದವನ್ನು ರಕ್ಷಿಸಿ ಆತ್ಮನೇ ಪರಮಾತ್ಮನು, ಜೀವನು ಮೋಹಾದಿ ಮಾಯೆಯಿಂದ ಕನಸಿನಂತೆ ಜಗತ್ತನ್ನು ಅನುಭವಿಸುತ್ತಿದ್ದಾನೆ ಎಂದು ವಾಸ್ತವತೆಯನ್ನು ಅರಿವಿಗೆ ಬರುವಂತೆ ಹದಿನಾರನೇ ವಯಸ್ಸಿನಲ್ಲೇ ವೇದಗಳಿಗೆ ಭಾಷ್ಯವನ್ನು ಬರೆದು ಪ್ರತಿಪಾದಿಸಿದ ದಿವ್ಯ ತೇಜ ಆದಿಗುರು ಶಂಕರಾಚಾರ್ಯ. ವೈಶಾಖ ಮಾಸ ಶುಕ್ಲ ಪಂಚಮಿದಿನದಂದು ಜನಿಸಿದ ಶಂಕರರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ ಕ್ರಿ.ಶ.788ರಲ್ಲಿ ವೈಶಾಖ ಶುಕ್ಲ ಪಂಚಮಿಯಲ್ಲಿ ಆರಿದ್ರಾ ನಕ್ಷತ್ರ ಮಿಥುನರಾಶಿಯಲ್ಲಿ ಚಂದ್ರನಿರುವಾಗ …
Read More »55 ವರ್ಷ ಮೇಲ್ಪಟ್ಟ ಪೊಲೀಸರನ್ನ ಕೋವಿಡ್ ಡ್ಯೂಟಿಗೆ ಹಾಕುವಂತಿಲ್ಲ:ಐಜಿಪಿ ಪ್ರವೀಣ್ ಸೂದ್
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಹರಡದಂತೆ ತಡೆಯಲು ಪೊಲೀಸರು ಶ್ರಮಿಸುತ್ತಿದ್ದಾರೆ. ಇದೀಗ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್ ಅವರು, 55 ವರ್ಷ ಮೇಲ್ಪಟ್ಟ ಪೊಲೀಸರನ್ನ ಕೋವಿಡ್ ಡ್ಯೂಟಿಗೆ ಹಾಕುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಮಧುಮೇಹ, ಬಿಪಿ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರೊ ಸಿಬ್ಬಂದಿಗೆ ರೋಡ್ ಮೇಲೆ ಡ್ಯೂಟಿ ಹಾಕುವಂತಿಲ್ಲ. ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಹಾಕಬೇಕು ಎಂದು ಪ್ರವೀಣ್ …
Read More »ಯಾರ ಸಂಪರ್ಕಕ್ಕೆ ಬಾರದೇ ಇದ್ದರೂ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಆರೋಗ್ಯ ಅಧಿಕಾರಿಗಳಿಗೆ ಕೊನೆಗೆ ಉತ್ತರ ಸಿಕ್ಕಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು 8 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಯಾರ ಸಂಪರ್ಕಕ್ಕೂ ಸಿಗದ ಪಾದರಾಯನಪುರದ ವ್ಯಕ್ತಿಗೆ ಕೊರೊನಾ ಬಂದಿದೆ. 48 ವರ್ಷದ ವ್ಯಕ್ತಿ(ರೋಗಿ 513) ನಾನು ಲಾಕ್ಡೌನ್ ಬಳಿಕ ಮನೆಯಲ್ಲೇ ಇದ್ದೆ ಹೊರಗಡೆ ಹೋಗಿಲ್ಲ ಎಂದು ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೇ ಪಾಸಿಟಿವ್ ಅಲ್ಲದ ವ್ಯಕ್ತಿಗಳ ಜೊತೆಗೂ ನಾನು ಸಂಪರ್ಕ ಹೊಂದಿಲ್ಲ. ವಿದೇಶಕ್ಕೆ ಹೋಗಿಲ್ಲ. ವಿದೇಶ ಹೋಗಿ ಬಂದವರ ಜೊತೆ ಸಂಪರ್ಕವನ್ನು ಮಾಡಿಲ್ಲ ಎಂದು ಹೇಳಿದ್ದಾರೆ. ಯಾರ ಸಂಪರ್ಕಕ್ಕೆ …
Read More »ಪಾದರಾಯನಪುರ ಗಲಾಟೆ ಪ್ರಕರಣ: ಪ್ರಮುಖ ಆರೋಪಿ ಇರ್ಫಾನ್ ಬಂಧನ………
ಬೆಂಗಳೂರು(ಏ. 27): ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ ಪಾದರಾಯನಪುರ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಕೊನೆಗೂ ಖಾಕಿ ಪಡೆಯ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾಡುಗೊಂಡನ ಹಳ್ಳಿಯಲ್ಲಿ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ ಇರ್ಫಾನ್ನನ್ನು ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಬಿ ಮತ್ತು ಜೆಜೆ ನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇರ್ಫಾನ್ನನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಪಾದರಾಯನಪುರದಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ಗೆ ಕರೆದೊಯ್ಯಲು ಬಂದಿದ್ದ ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಲು ಮತ್ತು ಗಲಾಟೆ …
Read More »ದೇಶದಲ್ಲಿ ಒಂದೇ ದಿನ 1,400 ಮಂದಿಗೆ ಕೊರೊನಾ,886 ಮಂದಿ ಸಾವನ್ನಪ್ಪಿದ್ದಾರೆ.”
ನವದೆಹಲಿ: ದೇಶಾದ್ಯಂತ ಕೊರೊನಾ ರಣಕೇಕೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,400 ಮಂದಿಗೆ ಸೋಂಕು ತಗುಲಿದ್ದು, ಬಾಧಿತರ ಸಂಖ್ಯೆ 28 ಸಾವಿರದ ಗಡಿ ದಾಟಿದೆ. ಇದುವರೆಗೂ 886 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನಿಂದ ದೇಶದಲ್ಲಿ 6,573 ಮಂದಿ ಗುಣಮುಖರಾಗಿದ್ದು, ಚೇತರಿಕೆಯ ಪ್ರಮಾಣ ಶೇ.22.17ಕ್ಕೆ ಏರಿಕೆಯಾಗಿದೆ. ಕಳೆದ 28 ದಿನಗಳಿಂದ ದೇಶದ 16 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಕಂಡುಬಂದಿಲ್ಲ. ಕಳೆದ 14 ದಿನಗಳಿಂದ 85 ಜಿಲ್ಲೆಗಳಲ್ಲಿ ಹೊಸ ಪ್ರಕರಣ ಬೆಳಕಿಗೆ …
Read More »