ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಇಂದು (ಜು.4) ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ನಿನ್ನೆಯಿಂದ ಅವರು ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ವೈದ್ಯರ ಸಲಹೆಯ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. ಸದ್ಯ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ವಿಶೇಷ ತಂಡವೊಂದು ಅವರ ಆರೋಗ್ಯದ ಮೇಲೆ …
Read More »SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ
ತುಮಕೂರು: ಎಸ್ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ ಗೂಳೂರಿನಲ್ಲಿ ನಡೆದಿದೆ. ಭಾವನಾ (26) ಗಂಭೀರ ಗಾಯಗೊಂಡಿರುವ ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಭಾವನಾಗೆ ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ …
Read More »ಕೆಆರ್ ಸರ್ಕಲ್ ಬಳಿ ಭೀಕರ ಅಪಘಾತ – ಗಾಯಾಳುಗಳ ಆರೋಗ್ಯ ವಿಚಾರಿಸಿದ ಬೈರತಿ ಸುರೇಶ್
ಬೆಂಗಳೂರು: ಕೆಆರ್ ಸರ್ಕಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ಕೆ.ಆರ್ ಸರ್ಕಲ್ನಲ್ಲಿ ಬೆಳಗ್ಗೆ ಎರಡು ಇವಿ ಬಿಎಂಟಿಸಿ ನಡುವೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ 16 ಜನ …
Read More »480 ಕೋಟಿ ರೂ. ವೆಚ್ಚದ ಜೋಧ್ಪುರ ಏರ್ಪೋರ್ಟ್ ಟರ್ಮಿನಲ್ ಉದ್ಘಾಟಿಸಿದ ಮೋದಿ
ಜೈಪುರ: ರಾಜಸ್ಥಾನದ ಜೋಧ್ಪುರ ವಿಮಾನ ನಿಲ್ದಾಣದಲ್ಲಿ 480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಇದೇ ವೇಳೆ ಮುಂದಿನ ಹತ್ತು ವರ್ಷಗಳ ಅವಧಿಗೆ 28,840 ಕೋಟಿ ರೂ. ಅನುದಾನ ಹೊಂದಿರುವ ಪರಿಷ್ಕೃತ ಉಡಾನ್ ಯೋಜನೆಗೂ ಅಧಿಕೃತ ಚಾಲನೆ ನೀಡಿದರು. ಪ್ರಧಾನಿ ಮೋದಿ ಜೋಧ್ಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜಸ್ಥಾನ ರಾಜ್ಯಪಾಲ ಹರಿಭಾವು ಬಾಗಡೆ, ಕೇಂದ್ರ ಜಲಶಕ್ತಿ ಸಚಿವ ಹಾಗೂ ಜೋಧ್ಪುರ …
Read More »ಆತ್ಮಹತ್ಯೆಗೆ ಹೇಮಾವತಿ ನದಿಗೆ ಹಾರಿ ಮರಳಿನ ಮೇಲೆ ಬಿದ್ದವನ ರಕ್ಷಣೆ
ಹಾಸನ: ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಿಸಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಮಳಲಿ ಬೈಪಾಸ್ನಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಿರಂತ್ ರಾಷ್ಟ್ರೀಯ ಹೆದ್ದಾರಿ 75ರ ಬಿಎಂ ರಸ್ತೆಯ ಮಳಲಿ ಬೈಪಾಸ್ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿದ್ದಾನೆ. ಚಿರಂತ್ ಜಿಗಿದಿದ್ದನ್ನು ಕಂಡು ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. …
Read More »ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ರೈತರು ಬೆಳೆ ಬೆಳೆಯಬೇಡಿ ಎಂದಿರೋದು ಆಶ್ಚರ್ಯ: ಸಿಎಂ ಹೇಳಿಕೆಗೆ ವಿಜಯೇಂದ್ರ ಕಿಡಿ
ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ರೈತರು ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿ ಹೇಳಿರುವುದು ಆಶ್ಚರ್ಯಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಬರಗಾಲದ ಮುನ್ಸೂಚನೆ ಇದೆ. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ. ಅದಕ್ಕಾಗಿ ರೈತರು ಬೆಳೆ ಬೆಳೆಯಬೇಡಿ ಎಂದು ಸಿಎಂ ಹೇಳಿರುವುದು ಆಶ್ಚರ್ಯ ಹಾಗೂ ನೋವು ತಂದಿದೆ. ಮುಖ್ಯಮಂತ್ರಿಯವರ ಈ ಹೇಳಿಕೆ ರಾಜ್ಯದ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ. …
Read More »ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್; 20ಕ್ಕೂ ಹೆಚ್ಚು ಮಂದಿಗೆ ಗಾಯ
ಗದಗ: ಬ್ರೇಕ್ ಫೇಲ್ ಆದ ಪರಿಣಾಮ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದು, 13 ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗದಗಜಿಲ್ಲೆಯ ಲಕ್ಷ್ಮೇಶ್ವರತಾಲೂಕಿನ ದೊಡ್ಡೂರು ಸಮೀಪ ನಡೆದಿದೆ. ಲಕ್ಷ್ಮೇಶ್ವರದಿಂದ ಶಿಗ್ಲಿ, ಬಾಳೆಹೊಸೂರ ಮಾರ್ಗವಾಗಿ ಗುತ್ತಲಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 90 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ದೊಡ್ಡೂರು ಮತ್ತು ಶಿಗ್ಲಿ ಗ್ರಾಮದ ನಡುವಿನ ಸೇತುವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಬಸ್ನ ಬ್ರೇಕ್ ಏಕಾಏಕಿ ಫೇಲ್ ಆಗಿದೆ. …
Read More »ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ
ಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ ಘಟನೆ ಆರ್ಆರ್ ನಗರದ ಹಲಗೆವಡೆರಹಳ್ಳಿಯಲ್ಲಿ ನಡೆದಿದೆ. ವಾಹನಗಳು ಜಖಂಗೊಂಡಿದ್ದರಿಂದ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಸರ್ಕಾರಿ ಶಾಲೆ ಪಕ್ಕದಲ್ಲೇ ಈ ಘಟನೆ ನಡೆದಿದೆ. ಈ ವೇಳೆ ಮಕ್ಕಳು ಹಾಗೂ ಜನರು ಸ್ಥಳದಲ್ಲಿ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಡ್ರಗ್ ಪೆಡ್ಲರ್ ಬಂಧನಕ್ಕೆ ಹೋದ ಪೊಲೀಸರಿಗೆ ಶಾಕ್; 17 ಲಾಂಗು, 230 ಮೊಬೈಲ್ ಜಪ್ತಿ
ಬೆಂಗಳೂರು: ಡ್ರಗ್ ಪೆಡ್ಲರ್ನನ್ನು ಬಂಧಿಸಲು ತೆರಳಿದ್ದ ಬ್ಯಾಟರಾಯನಪುರ ಪೊಲೀಸರಿಗೆ ಶಾಕ್ ಎದುರಾಗಿದ್ದು. ಆರೋಪಿ ಮನೆಯ ಮೇಲೆ ದಾಳಿ ನಡೆಸಿದ ವೇಳೆ 17 ಮಾರಕಾಸ್ತ್ರಗಳು, 230 ಕಳವು ಮೊಬೈಲ್ಗಳು ಹಾಗೂ 600-700 ಗ್ರಾಂ ಗಾಂಜಾ ಪತ್ತೆಯಾಗಿದೆ. ಜುಲೈ 1ರಂದು ರಾತ್ರಿ ಸುಮಾರು 10.50ಕ್ಕೆ ಬ್ಯಾಟರಾಯನಪುರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 37 ವರ್ಷದ ಅಕ್ಬರ್ ಶರೀಫ್ನನ್ನು ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಕ್ಬರ್ ನೀಡಿದ …
Read More »ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಸಾಧ್ಯ; ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ
ಬೆಂಗಳೂರು: ಎಲ್ ನಿನೊ ಪರಿಣಾಮದಿಂದ ಜಲವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆ ಇರುವುದನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ತುರ್ತು ಕಾರ್ಯಯೋಜನೆ ರೂಪಿಸಬೇಕು. ಜೊತೆಗೆ ವಿದ್ಯುತ್ ಸಂಗ್ರಹಣೆ ಹಾಗೂ ಇತರೆ ಮೂಲಗಳಿಂದ ಉತ್ಪಾದನೆ ಹೆಚ್ಚಿಸಲು ತುರ್ತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಮೊದಲ ಬಾರಿಗೆ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ, ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ …
Read More »
Laxmi News 24×7