Breaking News

Uncategorized

ನನ್ನ ಮೇಲಿರೋ ಸಿಟ್ಟಿಗೆ ರಾಮನಗರ ಜನರ ಜೀವದ ಜೊತೆ ಚೆಲ್ಲಾಟ: ಎಡಿಜಿಪಿ ವಿರುದ್ಧ ಎಚ್‍ಡಿಕೆ ಆರೋಪ

ಬೆಂಗಳೂರು: ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡುವ ಮೂಲಕ ನನ್ನ ಮೇಲಿರುವ ಸಿಟ್ಟಿಗೆ ರಾಮನಗರ ಜನತೆ ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಆರೋಪ ಮಾಡಿದ್ದಾರೆ. ಪಬ್ಲಿಕ್ ಟವಿ ಜೊತೆ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸಿಎಂ ಬಿ.ಎಸ್ ಯಡಿಯೂರಪ್ಪ ಜೊತೆಗೆ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಎರಡೆರಡು ಬಾರಿ ಮಾತನಾಡಿದ್ದೇನೆ. ಯಾವುದೇ …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಸೈಕಲ್ ಮೇಲೆ ಹೊರಟ ಕಾರ್ಮಿಕರು

ವಿಜಯಪುರ: ಲಾಕ್‍ಡೌನ್ ನಿಂದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೈಕಲ್ ಗಳ ಮೇಲೆಯೇ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ 41 ಕಾರ್ಮಿಕರು ನಾಲ್ಕು ದಿನಗಳ ಹಿಂದೆಯೇ ಪ್ರಯಾಣ ಬೆಳೆಸಿದ್ದಾರೆ. ಬುಧವಾರ ರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ತಲುಪಿದ್ದಾರೆ. ನಾಲ್ಕು ದಿನಗಳಿಂದ ಸೈಕಲ್ ಮೇಲೆ ಬಂದಿದ್ದರಿಂದ ಹೆದ್ದಾರಿಯ ಪಕ್ಕದಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದರು. ಕಾರ್ಮಿಕರನ್ನು ಗಮನಿಸಿದ ಸ್ಥಳೀಯರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಲಾಕ್‍ಡೌನ್ ಆದಾಗಿನಿಂದ ಮಾಡಲು ಕೆಲಸವಿಲ್ಲ. …

Read More »

ಧಾರವಾಡ ಜಿಲ್ಲೆಯಲ್ಲಿ ನರೇಗಾ ಚಟುವಟಿಕೆಗಳು ಪ್ರಾರಂಭ…..

ಧಾರವಾಡ: ಎಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಸಮಸ್ಯೆಗಳು ಉಂಟಾಗಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು(ನರೇಗಾ) ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಪಂಚಾಯತ್‍ಗಳಲ್ಲಿ ನರೇಗಾ ಚಟುವಟಿಕೆಗಳು ಪ್ರಾರಂಭವಾಗವೆ. ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಚಟುವಟಿಕೆಗಳು ಈಗಾಗಲೇ ಪ್ರಾರಂಭವಾಗಿದ್ದು, ದೇವಲಿಂಗಿಕೊಪ್ಪದ ಕೆರೆಗೆ ನೀರಿನ ಕಾಲುವೆ …

Read More »

ಫೇಸ್‍ಬುಕ್ ಮೂಲಕ ಮದ್ಯ ಮಾರಾಟ: ಜಾಹೀರಾತಿಗೆ ಮರುಳಾದ್ರೆ ಪಂಗನಾಮ ಫಿಕ್ಸ್

ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿರುವುದು ಎಣ್ಣೆ ಪ್ರಿಯರನ್ನ ಚಡಪಡಿಸುವಂತೆ ಮಾಡಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಆನ್‍ಲೈನ್ ವಂಚನೆಗೆ ಮುಂದಾಗಿದ್ದಾರೆ. ಎಲ್ಲಿ ಹೇಳಿದ್ರೂ ಮದ್ಯವನ್ನು ಹೋಂ ಡೆಲಿವರಿ ಮಾಡುತ್ತೇವೆ ಅಂತ ಜಾಹೀರಾತು ಹಾಕಿಕೊಂಡಿದ್ದಾರೆ. ಇದನ್ನು ನಂಬಿ ಅವರ ಖಾತೆಗೆ ಹಣ ಹಾಕಿದ್ರೆ ಪಂಗನಾಮ ಗ್ಯಾರಂಟಿ. ರಾಯಚೂರಿನ ಅಮೃತ ವೈನ್‍ಶಾಪ್‍ನಿಂದ ಎಲ್ಲಾ ಬ್ರಾಂಡ್‍ನ ಮದ್ಯ ಹೋಂ ಡೆಲಿವರಿ ಇದೆ. ನಗರದ ಕೆ.ಇ.ಬಿ ಕಾಲೋನಿ, ನಿಜಲಿಂಗಪ್ಪ ಕಾಲೋನಿ …

Read More »

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*

:- ಮಹಾಮಾರಿ‌ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ. ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ‌ ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ‌ ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ …

Read More »

3 ದಿನ ನಡೆದು ಇನ್ನೇನೋ ಮನೆ ಸೇರೋ 1 ಗಂಟೆ ಮುಂಚೆ ಬಾಲಕಿ ಸಾವು

ರಾಯ್ಪುರ: ಕೊರೊನಾದಿಂದ ಇಡೀ ದೇಶವೇ ತತ್ತರಿಸಿ ಹೋಗುತ್ತಿದೆ. ಹೀಗಾಗಿ ಅನೇಕ ಕಾರ್ಮಿಕರು ನಡೆದುಕೊಂಡು ತಮ್ಮ ತಮ್ಮ ಸ್ವ-ಗ್ರಾಮಕ್ಕೆ ಹೋಗಿದ್ದಾರೆ. ಈ ನಡುವೆ ತೆಲಂಗಾಣದಿಂದ ತಮ್ಮ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಜಾಮ್ಲೋ ಮಕ್ಡಾಮ್ (12) ಮೃತ ಬಾಲಕಿ. ತೆಲಂಗಾಣದಿಂದ ಚತ್ತೀಸ್‍ಗಢದ ಬಿಜಾಪುರ ಜಿಲ್ಲೆಗೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿ ತೆಲಂಗಾಣದ ಗ್ರಾಮವೊಂದರಲ್ಲಿ ತನ್ನ ಕುಟುಂಬಕ್ಕಾಗಿ ಮೆಣಸಿನಕಾಯಿ ತೋಟದಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಲಾಕ್‍ಡೌನ್ ಆದ …

Read More »

ಲಾಕ್‍ಡೌನ್ ಮಧ್ಯೆ ಯಾದಗಿರಿಯಲ್ಲಿ ಅಕ್ರಮ ಮರಳು ದಂಧೆ ಬಲು ಜೋರು

ಯಾದಗಿರಿ: ಇಡೀ ಜಗತ್ತಿಗೆ ಒಂದು ಚಿಂತೆಯಾದ್ರೆ ಯಾದಗಿರಿ ಅಕ್ರಮ ದಂಧೆಕೋರರಿಗೆ ಒಂದು ಚಿಂತೆಯಾಗಿದೆ. ಯಾಕೆಂದರೆ ಇಡೀ ವಿಶ್ವವೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸುತ್ತಿದೆ. ಮನುಷ್ಯ ಹಣಕ್ಕಿಂತ ಆರೋಗ್ಯ ಮುಖ್ಯ ಅಂತ ನಂಬುವಂತಾಗಿದೆ. ಆದರೆ ಯಾದಗಿರಿಯಲ್ಲಿ ಅಕ್ರಮವಾಗಿ ದುಡ್ಡು ಮಾಡುವ ನೀಚ ಮನಸ್ಸುಗಳು ಮಾತ್ರ ಕಡಿಮೆಯಾಗಿಲ್ಲ . ಕೊರೊನಾ ಲಾಕ್‍ಡೌನ್ ಮಧ್ಯೆಯೂ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಇದನ್ನು ತಡೆಯಬೇಕಿದ್ದ ಪೊಲೀಸ್ ಇಲಾಖೆ ಮತ್ತು ತಹಶೀಲ್ದಾರ್ ಈ ಬಗ್ಗೆ …

Read More »

ಪತ್ರಕರ್ತರಿಗೆ ಕೊರೊನಾ ವೈರಸ್‌: ಆರೋಗ್ಯ ಇಲಾಖೆ ಸಲಹೆ ಹೀಗಿದೆ.

ಹಲವು ಪತ್ರಕರ್ತರಿಗೆ ಕೊರೊನಾ ವೈರಸ್‌: ಆರೋಗ್ಯ ಇಲಾಖೆ ಸಲಹೆ ಹೀಗಿದೆ.. ಹಲವು ಮಾಧ್ಯಮ ಸಿಬ್ಬಂದಿಗೆ ಕೊರೊನಾ ವೈರಸ್‌ ಬಂದಿದ್ದು, ಈ ಹಿನ್ನೆಲೆ ಆರೋಗ್ಯ ಸಚಿವಾಲಯವು ಪತ್ರಕರ್ತರಿಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಕೋವಿಡ್‌ 19 ಹರಡುವುದನ್ನು ತಡೆಯಲು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದಾರೆ. ಹಲವು ಪತ್ರಕರ್ತರು ಕೋವಿಡ್‌ – 19 ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿರುವುದು ಬಹಳ ದುರದೃಷ್ಟಕರ ಸುದ್ದಿ. ಪತ್ರಕರ್ತರು ಕರ್ತವ್ಯ ಮಾಡುತ್ತಿರುವಾಗ ಅಗತ್ಯವಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ಸಾಮಾಜಿಕ ಅಂತರವನ್ನು …

Read More »

ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ

ಚಿಕ್ಕೋಡಿ -ಚಿಂಚಲಿ ಪಟ್ಟಣದಲ್ಲಿ ಕಟ್ಟಡವೊಂದರಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ. ಕೊರೊನಾ ಭಯಕ್ಕೆ ರಾತ್ರೋರಾತ್ರಿ ಮಾನೆಗಳನ್ನ ಖಾಲಿ ಮಾಡುತ್ತಿರುವ ಜನ ಹತ್ತಿರದ ತೋಟಗಳಲ್ಲಿ ಟೆಂಟ್ ಹಾಕಿಕೊಂಡು ಇರಲು ನಿರ್ಧರಿಸಿದ್ದಾರೆ. ಚಿಂಚಲಿ ಪಟ್ಟಣದ ಭಕ್ತಿ ನಿವಾಸದಲ್ಲಿ 44 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಮಾಯಕ್ಕಾ ದೇವಸ್ಥಾನದ ಭಕ್ತಿ‌ನಿವಾಸದ ಸುತ್ತಲೂ ಇರುವ 40 ಕ್ಕೂ ಹೆಚ್ಚು ಕುಟುಂಬಗಳು ಮನೆ ಖಾಲಿ ಮಾಡಿವೆ. ಕುಡಚಿ …

Read More »