Breaking News

Uncategorized

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ಸೂಟ್‍ಕೇಸ್ ಒಳಗೆ ಮಹಿಳೆಯ ಮೃತದೇಹ ಪತ್ತೆ……..

ಲಕ್ನೋ: ಮಹಿಳೆಯೊಬ್ಬಳ ಮೃತ ದೇಹ ಸೂಟ್‍ಕೇಸ್‍ನೊಳಗೆ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಗಾಜಿಯಾಬಾದ್‍ನ ದಾಶ್ಮೇಶ್ ವಾಟಿಕಾ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸುಮಾರು 25 ರಿಂದ 30 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ಆದರೆ ಮೃತ ಮಹಿಳೆಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯರು ಸೂಟ್‍ಕೇಸ್ ನೋಡಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಮೃತದೇಹವನ್ನು …

Read More »

ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಿಚ್ಚಿಟ್ಟ ನಟಿ ಸುಧಾರಾಣಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು …

Read More »

ಪ್ರೇಯಸಿಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಿತಿನ್……….

ಹೈದರಾಬಾದ್: ಟಾಲಿವುಡ್‍ನ ಖ್ಯಾತ ನಟ ನಿತಿನ್ ತಮ್ಮ ಗೆಳತಿ ಶಾಲಿನಿ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೈದರಾಬಾದ್‍ನ ತಾಜ್ ಫಲಕ್ನುಮಾ ಅರಮನೆಯಲ್ಲಿ ಭಾನುವಾರ ನಟ ನಿತಿನ್ ಮತ್ತು ಶಾಲಿಯ ಮದುವೆ ಸಮಾರಂಭ ನಡೆದಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಿಧಿಸಿರುವ ನಿಯಮಗಳನ್ನು ಅನುಸರಿಸಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿತಿನ್ ಮತ್ತು ಶಾಲಿನಿ ಮದುವೆಗೆ ಟಾಲಿವುಡ್ ಸ್ಟಾರ್ ನಟ-ನಟಿಯರು ಬಂದು ನವ ಜೋಡಿಗೆ ಶುಭಾ …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಲಾಕ್‍ಡೌನ್ ಎಫೆಕ್ಟ್: ಅಕ್ಷಯ್ ಜೊತೆ ನಟಿಸಿದ್ದ ಬಾಲಿವುಡ್ ನಟನಿಂದ ತರಕಾರಿ ಮಾರಾಟ!

ಮುಂಬೈ: ಮಹಾಮಾರಿ ಕೊರೊನಾ ಘಟಾನುಘಟಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಸಂಕಷ್ಟಕ್ಕೀಡು ಮಾಡಿದೆ. ಹಲವು ಮಂದಿ ಬಡವರ ಬದುಕನ್ನೇ ಕಸಿದುಕೊಂಡಿದೆ. ಅಂತೆಯೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ನಟಿಸಿದ್ದ ನಟನೊಬ್ಬ ತನ್ನ ಬದುಕಿನ ಬಂಡಿ ದೂಡಲು ತರಕಾರಿ ಮಾರಾಟದತ್ತ ಮುಖಮಾಡಿದ್ದಾರೆ. ಹೌದು. ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿಯಲ್ಲಿ ನಟಿಸಿದ್ದ ಕಾರ್ತಿಕ ಸಾಹೋ ಅವರೇ ತರಕಾರಿ ಮಾರುತ್ತಾ ಜೀವನ ನಡೆಸುವ ನಟರಾಗಿದ್ದಾರೆ. ಮೂಲತಃ ಒಡಿಶಾದ ಕೇಂದ್ರಪದ ಜಿಲ್ಲೆಯ ಗರದ್ಪುರ ಬ್ಲಾಕ್ ನಿವಾಸಿಯಾಗಿರುವ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ಕೊವಿಡ್ ಕೇರ್ ಸೆಂಟರ್ ಘಟಪ್ರಭಾದ ಕೆಎಚ್ಐ, ಜೆಜಿಕೊ ಆಸ್ಪತ್ರೆಯಲ್ಲಿಪ್ರಾರಂಭಿಸಲು ಅಶೋಕ ಪೂಜಾರಿ ಮನವಿ

ಗೋಕಾಕ: ಉತ್ತರ ಕರ್ನಾಟಕದಲ್ಲಿ ವೈಧ್ಯಕೀಯ ಸೇವೆಯಲ್ಲಿ ತನ್ನದೇ ಆದ ಹಿರಿಮೆ-ಗರಿಮೆ ಹೊಂದಿರುವ ಘಟಪ್ರಭಾದಲ್ಲಿರುವ ಸೇವಾದಳದ ಸಂಸ್ಥಾಪಕ ನಾ.ಸು. ಹರ್ಡಿಕರ ಅವರ ನಿಸ್ವಾರ್ಥ ಸಾರ್ವಜನಿಕ ಸೇವಾ ಮನೋಭಾವನೆಯ ತತ್ವದೊಂದಿಗೆ ಸ್ಥಾಪನೆಗೊಂಡರುವ ಕರ್ನಾಟಕ ಆರೋಗ್ಯಧಾಮ (ಕೆ.ಎಚ್.ಆಯ್.) ಮತ್ತು ಮೂರುಸಾವಿರ ಮಠದ ಜಗದ್ಗುರುಗಳ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಮನೋಭಾವನೆಯಿಂದ ಪ್ರಾರಂಭಗೊಂಡಿರುವ ಜಗ್ದಗುರು ಗಂಗಾಧರರಾಜಯೋಗಿಂದ್ರ ಸಹಕಾರಿ ಆಸ್ಪತ್ರೆ (ಜೆ.ಜಿ.ಕೊ-ಆಪ್ ಹಾಸ್ಪಿಟಲ್) ಗಳು ಕೋವಿಡ್-19 ರೋಗಕ್ಕೆ ಬಳಲಿ ಬೆಂಡಾಗುತ್ತಿರುವ ಜನರಿಗೆ ತಮ್ಮ ಆಸ್ಪತ್ರೆಗಳಲ್ಲಿ ಕೂಡಲೇ ಪ್ರತ್ಯೇಕ …

Read More »

“ಯಾರು ಎಷ್ಟೇ ಟೀಕೆ ಮಾಡಿದರೂ ನಾನೆಂದೂ ದ್ವೇಷ ರಾಜಕಾರಣ ಮಾಡಲ್ಲ” : ಸಿಎಂ ಬಿಎಸ್ವೈ

ಬೆಂಗಳೂರು,ಜು.27- ನನ್ನನ್ನು ಎಷ್ಟೇ ಟೀಕೆ ಮಾಡಿದರೂ ನಾನು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ, ಸರ್ಕಾರದ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನನ್ನನ್ನು ಎಷ್ಟೇ ಟೀಕೆ ಮಾಡಲಿ. ಇದರ ಬಗ್ಗೆ ಗಮನಹರಿಸುವುದಿಲ್ಲ. ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ತೀರ್ಮಾನಿಸಿದ್ದೇನೆ. ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದ್ದರೂ ಎಂದಿಗೂ ದ್ವೇಷ ರಾಜಕಾರಣ …

Read More »