Breaking News

Uncategorized

ಪಕ್ಕದಲ್ಲಿ ಫೆರಾರಿ ಹೋದ್ರು ತಲೆಕೆಡಿಸಿಕೊಳ್ಳಲ್ಲ:ಪುನೀತ್ ರಾಜ್‍ಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳಿಗೆ ‘ಯುವರತ್ನ’ ಸಿನಿಮಾ ತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ. ಈ ವಿಚಾರವಾಗಿ ಕಳೆದ ಎರಡು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್ ಅನಂದರಾಮ್ ಅವರು, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ. ಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಜೊತೆಗೆ ಒಂದು ಡೈಲಾಗ್ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. …

Read More »

ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

ಚಿಕ್ಕೋಡಿ: ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ್‌ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020ರ ಗ್ರ್ಯಾಂಡ್ ‌ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್‌ವೇರ್‌ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್‌ಎಂಎಸರ್‌ ಆರ್‌ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ …

Read More »

ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!

ಬೆಳಗಾವಿ: ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. ಯಾವ ಜನ್ಮದ ಋುಣವೂ ಇಲ್ಲದ ಮೃತರ ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದು, ಎಲ್ಲರ ಮನಕಲಕುವಂತಿದೆ. ಮೃತರ ಕುಟುಂಬಸ್ಥರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದರು. ಬೆಳಗಾವಿ: ಕೊರೋನಾ ವಾರಿಯರ್ಸ್‌ಗೂ …

Read More »

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾವಾರು ಬಿಡುಗಡೆಯಾದ ಹಣದ ಲೆಕ್ಕ ಕೊಟ್ಟ ಸರ್ಕಾರ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕವನ್ನು ಸರ್ಕಾರ ಇಂದು ಬಹಿರಂಗಪಡಿಸಿದೆ. ನ್ಯಾಯವಾದಿ ಸುರೇಂದ್ರ ಉಗಾರೆ ಕೊರೊನಾ ಸಂದರ್ಭದಲ್ಲಿ ಖರ್ಚಾದ ಹಣದ ಕುರಿತು ಮಾಹಿತಿ ಕೇಳಿದ್ದರು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪ ಮಾಡಿದ್ದವು. ಈ ಹಿನ್ನೆಲೆ ಸರ್ಕಾರ ಇಂದು ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕ ಕೊಟ್ಟಿದೆ. ಇದುವರೆಗೆ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ …

Read More »

ಕೊರೊನಾ ಮಹಾಮಾರಿಗೆ ಬಲಿಯಾದ ವ್ಯಕ್ತಿಗಳ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು.

ಗೋಕಾಕ: ನಗರದ ಅಂಬಿಗೇರ ಗಲ್ಲಿಯ ನಿವೃತ ಮುಖ್ಯೋಪಾದ್ಯರೊಬ್ಬರು ಕೊರೊನಾ ಮಹಾಮಾರಿಗೆ ಗುರುವಾರ ಬಲಿಯಾಗಿದ್ದು ,ಅವರ ಅಂತ್ಯ ಸಂಸ್ಕಾರವನ್ನು ನಗರಸಭೆ ಸಿಬ್ಬಂದ್ದಿ ಮತ್ತು  ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರೆವೇರಿಸಿದರು. ಕೊರೊನಾ ಮಹಾಮಾರಿಗೆ ಬಲಿಯಾದ ಮುಖ್ಯೋಪಾದ್ಯಯರ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ  ನೆರೆವೇರಿಸಿದರು. ಪಿಏಫ್ಐ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮುಖ್ಯೋಪಾದ್ಯಯವರ ಅಂತ್ಯ ಸಂಸ್ಕಾರ ನೆರೆವೇರಿಸಲು ನಗರಸಭೆ ಸಿಬ್ಬಂದ್ದಿಯೊಂದಿಗೆ ಮುಂದೆ ಬಂದು ಅಂತ್ಯ ಸಂಸ್ಕಾರ ಮಾಡಿರುವುದರಿಂದ ಪಿಎಫ್ಐ ಕಾರ್ಯಕರ್ತರು …

Read More »

ಕೊವಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್ ಬೆಳಗಾವಿ ಆಸ್ಪತ್ರೆಯಲ್ಲಿ ಆರಂಭ

ಬೆಳಗಾವಿ, ಜುಲೈ 30: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಕೇಂದ್ರಗಳಲ್ಲಿ ಒಂದಾದ ಬೆಳಗಾವಿ ಮೂಲದ ಜೀವನ್ ರೇಖಾ ಆಸ್ಪತ್ರೆಯಲ್ಲಿ ಬಿಬಿವಿ 152 ಕೋವಿಡ್ -19 ಲಸಿಕೆ ಅಥವಾ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ ಲಸಿಕೆಯಾದ ಕೊವಾಕ್ಸಿನ್‌ನ ಕ್ಲಿನಿಕಲ್ ಪರೀಕ್ಷೆಗಳು ಈಗಾಗಲೇ ಏಮ್ಸ್ ಸೇರಿದಂತೆ 12 ಕೇಂದ್ರಗಳಲ್ಲಿ ಪ್ರಾರಂಭವಾಗಿವೆ. ಜೀವನ್ ರೇಖಾ ನಿರ್ದೇಶಕ ಟಿ.ಎನ್.ಐ.ಇ ಅವರೊಂದಿಗೆ ಮಾತನಾಡಿದ ಡಾ.ಅಮಿತ್ ಭಾಟೆ, …

Read More »

ಲೇಖಕಿಯರ ಸಂಘ: ಅಧಿಕಾರ ಹಸ್ತಾಂತರ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ‌.ಹೇಮಾವತಿ ಸೋನೊಳಿ ಅವರಿಗೆ ನಿರ್ಗಮಿತ ಅಧ್ಯಕ್ಷೆ ಜ್ಯೋತಿ ಬದಾಮಿ ಅಧಿಕಾರ ಹಸ್ತಾಂತರಿಸಿದರು. ‘ತಮ್ಮ ಎರಡು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಯಿತು. ಕುಪ್ಪಳ್ಳಿ ಹಾಗೂ ನಿಡಸೋಸಿಯ ಶ್ರೀಮಠದ ಸಾಹಿತ್ಯ ಚಿಂತನ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿತು’ ಎಂದು ಜ್ಯೋತಿ ತಿಳಿಸಿದರು. ಉಡುಪಿಯ ಉಪನ್ಯಾಸಕಿ ಸಂಧ್ಯಾ ಶೆಣೈ, ’20 ವರ್ಷಗಳ ಗಟ್ಟಿ ಹೆಜ್ಜೆಗುರುತು ಮೂಡಿಸುತ್ತಾ ಹಿರಿಯ …

Read More »

ಅಂಜುಮನ್ ಸಂಸ್ಥೆಯಿಂದ ಆರೋಗ್ಯ ಸೇವೆ

ಬೆಳಗಾವಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಸಮಿತಿಯು ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಸಿದ್ಧತೆ ಮಾಡಿಕೊಂಡಿದೆ. ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದು ಮನೆಗಳಲ್ಲಿ ಆರೈಕೆಯಲ್ಲಿರುವವರಿಗೆ ಅಥವಾ ಇತರ ಆರೋಗ್ಯ ಸಂಬಂಧಿ ಸಮಸ್ಯೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡವರಿಗೆ ಚಿಕಿತ್ಸಾ ಸೇವೆ ನೀಡಲಿದೆ. ರೋಗಿಗಳ ಮನೆಗಳಿಗೇ ಕಳುಹಿಸುವುದಕ್ಕೆಂದು ಈಗಾಗಲೇ 120 ಆಕ್ಸಿಜನ್ ಸಿಲಿಂಡರ್‌ಗಳನ್ನು ಖರೀದಿಸಿ ಸಂಗ್ರಹಿಸಿದೆ. ಸಿಲಿಂಡರ್‌ ಒಂದನ್ನು ₹ 9,500ಕ್ಕೆ ಖರೀದಿಸಲಾಗಿದೆ. …

Read More »

ಕೆಮ್ಮುತ್ತಿದ್ದ ಹುಡುಗಿಯನ್ನು ನೋಡಿ ಕೊರೊನಾ, ಕೊರೊನಾ ಎಂದೆ… ಆದರೆ!

ಮೈಸೂರು: ನಾನು ಕೋವಿಡ್-19 ಪೀಡಿತನಾಗಿದ್ದು ನನ್ನ ತಪ್ಪಿನಿಂದಲೇ. ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಡುಗಿಯೊಬ್ಬಳು ಕೆಮ್ಮುತ್ತಿದ್ದಳು. ಮೊಬೈಲ್‌ನಲ್ಲಿ ಮಾತನಾಡುತ್ತಲೇ ಆಕೆಯನ್ನು ರೇಗಿಸಿದೆ. ಕೊರೊನಾ… ಕೊರೊನಾ… ಎಂದೆ. ಇದರಿಂದ ಸಿಟ್ಟಾದ ಆಕೆ ನೇರವಾಗಿ ನನ್ನ ಬಳಿ ಬಂದು ಕೆಮ್ಮಿದಳು. ನನಗೆ ಬಂದಿದ್ದರೆ, ನಿಮಗೂ ಬರಲಿ ಅಂದಳು. ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಕಾರಣ ನಾನು ಮಾಸ್ಕ್‌ಅನ್ನು ಕುತ್ತಿಗೆಗೆ ಇಳಿಸಿಕೊಂಡಿದ್ದೆ. ಅದೇ ಪರಿಸರದಲ್ಲಿ ಉಸಿರಾಡಿದ್ದೆ. ಎರಡ್ಮೂರು ದಿನ ಕಳೆಯೋದರೊಳಗೆ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಾಣಿಸಿಕೊಂಡವು. ನನಗೆಲ್ಲಿ …

Read More »

ಆಗಸ್ಟ್ 31 ರವರೆಗೆ ಮಹಾರಾಷ್ಟ್ರ ಲಾಕ್‌-ಡೌನ್ ವಿಸ್ತರಣೆ

  ಮುಂಬೈ: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಬುಧವಾರ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಒಳಗೊಂಡಿರುವ ತುರ್ತು ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   ಮಿಷನ್ ಬಿಗಿನ್ ಎಗೇನ್ ಉಪಕ್ರಮದ ಭಾಗವಾಗಿ, ಚಿತ್ರಮಂದಿರಗಳು, ಆಹಾರ ಮಳಿಗೆಗಳು, ನ್ಯಾಯಾಲಯಗಳು, ರೆಸ್ಟೋರೆಂಟ್‌ಗಳಿಲ್ಲದ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಆಗಸ್ಟ್ …

Read More »