ಹಾವೇರಿ: ರಾಜ್ಯದಲ್ಲೀಗ ಎಲ್ಲೆಲ್ಲೂ ಬರಗಾಲದ ಛಾಯೆ ಆವರಿಸಿದೆ. ರೈತರ ಜಮೀನಿನಲ್ಲಿ ಬಿತ್ತನೆ ಮಾಡಿದ ಬೀಜ ಮಳೆರಾಯನ ಅವಕೃಪೆಯಿಂದ ಮೊಳಕೆ ಒಡೆಯುತ್ತಿಲ್ಲ. ಕೆಲವೆಡೆ ಮೊಳಕೆಯೊಡೆದ ಬೀಜ ಇನ್ನೇನೂ ಚಿಗುರಬೇಕು ಎನ್ನುವಾಗಲೇ ಒಣಗಿ ಹೋಗ್ತಿದೆ. ರೈತರು ಮಳೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದೀಗ ರೈತರ ಸಮಸ್ಯೆ ಬಗೆಹರಿಸಲು ಹಾವೇರಿಯ ವಿವಿಧ ಕ್ಷೇತ್ರಗಳ ಶಾಸಕರು ಮುಂದಾಗಿದ್ದಾರೆ. ಮಂಗಳವಾರದಿಂದಲೇ ಮೋಡ ಬಿತ್ತನೆ ನಡೆಯಲಿದೆ. ಹಾವೇರಿ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ. ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಕೃಷಿಯೇ ಪ್ರಧಾನವಾಗಿದೆ. …
Read More »ಮಲೆನಾಡಿನಲ್ಲಿ ಮಳೆಯ ಕೊರತೆ – ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಗಿಲ್ಲ ಭದ್ರಾ ಡ್ಯಾಂ ನೀರು!
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ 1.05 ಹೆಕ್ಟೇರ್ ಪ್ರದೇಶದ ರೈತರಿಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಬಾರಿ ಮುಂಗಾರು ಹಂಗಾಮಿಗೆ ಸತತವಾಗಿ ನಾಲೆಗಳ ಮೂಲಕ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಹಲವು ವರ್ಷಗಳಿಂದ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆದು ಸಂತೃಪ್ತರಾಗಿದ್ದರು ಆದರೆ, ಈ ವರ್ಷ ಭತ್ತದ ಬೆಳೆಗೆ ಅಗತ್ಯವಿರುವ …
Read More »ಬೈಕ್ ಸಮೇತ ಸುಟ್ಟು ಕರಕಲಾಗಿದ್ದ ಯುವಕನ ಗುರುತು ಪತ್ತೆ
ಬೆಂಗಳೂರು: ಆನೇಕಲ್ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಯುವಕನ ಗುರುತು ಪತ್ತೆಯಾಗಿದೆ. ಮೃತನನ್ನು ಆಂಧ್ರಪ್ರದೇಶದ ಗುಂಟೂರು ಮೂಲದ 26 ವರ್ಷದ ವಂಶಿಕೃಷ್ಣ ಎಂದು ಗುರುತಿಸಲಾಗಿದೆ. ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ ಬಿಕ್ಕನಹಳ್ಳಿ ರಸ್ತೆಯ ಬಳಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು …
Read More »ಕೈಕೊಟ್ಟ ಮಳೆ – ಪೂರ್ವ ಮುಂಗಾರು ನಂಬಿ ಬಿತ್ತನೆ ಮಾಡಿದ್ದ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ
ಬಳ್ಳಾರಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯನಗರ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೂರ್ವ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ಬೆಳೆ ಇದೀಗ ಒಣಗಲಾರಂಭಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಮಳೆ ಬರದ ಕಾರಣ ಬೆಳೆ ಒಣಗದಂತೆ ಕಾಪಾಡಲು ರೈತರು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ ಕೈತಪ್ಪುವ ಆತಂಕದಲ್ಲಿ ಅನ್ನದಾತರು ದಿನ ಕಳೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ …
Read More »ಟೀ ಕುಡಿಯುವಾಗಲೇ ಕುಸಿದುಬಿದ್ದು ಟ್ರಕ್ ಚಾಲಕ ದುರ್ಮರಣ
ಹಾಸನ: ಟೀ ಕುಡಿಯುವಾಗಲೇ ಟ್ರಕ್ ಚಾಲಕನೊಬ್ಬ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಕಲೇಶಪುರದ ಬಾಳುಪೇಟೆಯಲ್ಲಿ ನಡೆದಿದೆ. ಉತ್ತರಪ್ರದೇಶದ ಬರೇಲಿ ಮೂಲದ ಅಮರ್ ಸಿಂಗ್ ಪೈ (50) ಸಾವನ್ನಪ್ಪಿದ ಟ್ರಕ್ ಚಾಲಕ. ಟ್ರಕ್ ಮಂಗಳೂರು ಕಡೆಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಟೀ ಕುಡಿಯಲು ಚಾಲಕ ಟ್ರಕ್ ನಿಲ್ಲಿಸಿದ್ದರು. ಈ ವೇಳೆ ಟೀ ಕುಡಿಯುವಾಗಲೇ ಕುಸಿದುಬಿದ್ದು ಅವರು ಸಾವನ್ನಪ್ಪಿದ್ದಾರೆ. ಅಮರ್ ಸಿಂಗ್ ಕುಸಿದು ಬೀಳುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಅವರು …
Read More »ಸಿಎಂ ತಮ್ಮ ಮನೆಗೆ ಡಿಸಿ ಕರೆಸಿ ಎಸ್ಐಆರ್ ನಡೆಸಿದ್ರಲ್ಲ, ಅದೇ ಅಕ್ರಮದ ಮೊದಲ ಪೂಜೆ: ಹೆಚ್ಡಿಕೆ
ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅಕ್ರಮಗಳ ವಿರುದ್ಧ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷ್ಯ ಹಾಗೂ ದಾಖಲೆ ಸಮೇತ ದೂರು ನೀಡುವುದಾಗಿ ತಿಳಿಸಿದ್ದಾರೆ. ಅಕ್ರಮವಾಗಿ ಹೆಸರು ಸೇರ್ಪಡೆ ರಾಜ್ಯದ ಹಲವು ಭಾಗಗಳಿಂದ ತಮಗೆ ಅಕ್ರಮದ ಬಗ್ಗೆ ಮಾಹಿತಿ …
Read More »ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ – ಮೂವರು ಅರೆಸ್ಟ್, ಪ್ರಮುಖ ಆರೋಪಿಗಳಿಗಾಗಿ ಶೋಧ
ಚಿಕ್ಕಬಳ್ಳಾಪುರ: ಯುವತಿಯೊಬ್ಬಳ ಮನೆಗೆ ನುಗ್ಗಿ ಆಕೆಗೆ ಚಾಕು ಇರಿದಿದ್ದ ಮೂವರು ದುಷ್ಕರ್ಮಿಗಳನ್ನು ಚಿಂತಾಮಣಿ ನಗರ ಪೊಲೀಸರುಬಂಧಿಸಿದ್ದಾರೆ. ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಾದ ಕಾರ್ತಿಕ್ ಹಾಗೂ ವಿನೋದ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿ ಮೇಘನಾ ಎಂಬ ಯುವತಿಗೆ ಆರೋಪಿಗಳು ಚುಡಾಯಿಸಿದ್ದರು. ಈ ವೇಳೆ ಸಿಟ್ಟಿಗೆದ್ದ ಯುವತಿ ಆರೋಪಿಗಳ ಕೆನ್ನೆಗೆ ಬಾರಿಸಿದ್ದಳು. ಇದೇ ಕಾರಣಕ್ಕೆ ಆರೋಪಿಗಳು, ಯುವತಿಯ ಮನೆಗೆ …
Read More »ದೆಹಲಿಯಲ್ಲಿ ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್ನಲ್ಲೇ ಪ್ರೆಸ್ಮೀಟ್ ಮಾಡ್ತೀನಿ: ನಿಖಿಲ್ ಕಿಡಿ
ರಾಮನಗರ: ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಕುಳಿತು ವೋಟ್ ಚೋರಿ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಬಂದು ನೋಡಲಿ. ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್ನಲ್ಲೇ ಪ್ರೆಸ್ಮೀಟ್ ಮಾಡುತ್ತೇನೆ ಎಂದು ಸವಾಲು ಹಾಕಿದರು. ಮೂರು ದಿನಗಳ ಹಿಂದೆ ನಮ್ಮ ಬಿಎಲ್ಎ-2 ಗಳನ್ನು ಕರೆಸಿ …
Read More »ಹುಸಿ ಬಾಂಬ್ ಕರೆಗಳು, ಇಮೇಲ್ ಪತ್ತೆ ಹಚ್ಚೋದು ಕಷ್ಟ- ಪ್ರಿಯಾಂಕ್ ಖರ್ಗೆ
ಬೆಂಗಳೂರು : ಹುಸಿ ಬಾಂಬ್ ಕರೆಗಳು , ಇಮೇಲ್ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಗಾಗ ಇಂತಹ ಹುಸಿ ಬೆದರಿಕೆಗಳು ಬರುತ್ತದೆ. ವಿಮಾನ ನಿಲ್ದಾಣ ಇರಬಹುದು, ಥರ್ಮಲ್ ಪವರ್ ಪ್ಲ್ಯಾಂಟ್ ಇರಬಹುದು. ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದರು. …
Read More »ರಾಮ ಮಂದಿರಕ್ಕೆ ನಾನು ಕೊಟ್ಟ ದೇಣಿಗೆ ವಾಪಸ್ ಬೇಕು, ಕೋರ್ಟಿಗೆ ಹೋಗ್ತೇನೆ – ದಿಗ್ವಿಜಯ್ ಸಿಂಗ್
ಭೋಪಾಲ್: ರಾಮ ಮಂದಿರ ನಿರ್ಮಾಣಕ್ಕಾಗಿ ನಾನು ನೀಡಿದ್ದ ದೇಣಿಗೆ ದುರುಪಯೋಗವಾಗಿದೆ ಎಂದು ಅಯೋಧ್ಯೆಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಅಲ್ಲದೇ ತಮ್ಮ ದೇಣಿಗೆಯನ್ನು ಹಿಂದಿರುಗಿಸುವಂತೆ ಒತ್ತಾಯಿಸುವುದಾಗಿಯೂ ಹೇಳಿದ್ದಾರೆ. ನಾನು ನೀಡಿದ ದೇಣಿಗೆಯನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಇದರ ವಿರುದ್ಧ ಅಯೋಧ್ಯೆ ಕೋರ್ಟ್ನಲ್ಲಿ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ. ದೇಣಿಗೆ ನೀಡಿದ್ದ ಹಣವನ್ನ ಅವರು ಲೂಟಿ ಮಾಡಿದ್ದಾರೆ, ಆದ್ದರಿಂದ ಅದನ್ನ ನನಗೆ …
Read More »
Laxmi News 24×7