Breaking News

Uncategorized

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸ

ನವದೆಹಲಿ, ಆ.24- ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸವಾಗಿದ್ದು, ಇಂದು ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ಭಾರೀ ಕುತೂಹಲ ಕೆರಳಿಸಿದೆ. ಕಾಂಗ್ರೆಸ್‍ನ ಕ್ರಿಯಾಶೀಲ ನಾಯಕ ರಾಹುಲ್‍ ಗಾಂಧಿ ಅವರೇ ಮತ್ತೆ ಪಕ್ಷದ ಸಾರಥ್ಯ ವಹಿಸಬೇಕೆಂದು ಒಂದು ಬಣ ಬಿಗಿ ಪಟ್ಟು ನೀಡಿರುವ ಬೆನ್ನಲ್ಲೇ ಅವರು ಈ ಅತ್ಯುನ್ನತ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಪಕ್ಷದ ತಾರಾ …

Read More »

ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!

ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …

Read More »

ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ

ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್‌ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …

Read More »

ಬಾಲೆಯರು ಬಾಲ್ಯದಿಂದ ಬೆಂಕಿಗೆ ನಾಲ್ಕು ತಿಂಗಳಲ್ಲಿ 107 ಬಾಲ್ಯವಿವಾಹ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್‌ಡೌನ್‌ನ ನಿರ್ಬಂಧಗಳಿಂದ ಉಂಟಾದ ಸ್ತಬ್ಧತೆಯ ಲಾಭ ಪಡೆದು ಹಲವು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗಿದೆ. ಲಾಕ್‌ಡೌನ್‌ಗಿಂತ ಹಿಂದಿನ ಅವಧಿಗೆ ಹೋಲಿಸಿದರೆ ಲಾಕ್‌ಡೌನ್‌ ದಿನಗಳಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚು ಎಂದು ಅಂಕಿ ಅಂಶಗಳು ಹೇಳುತ್ತವೆ. ಬಾಲ್ಯ ವಿವಾಹ ಮಾಡಿಯೇ ತೀರಬೇಕು ಎಂದು ಹಟಕ್ಕೆ ಬಿದ್ದವರು ವಿವಿಧ ರೀತಿಯ ತಂತ್ರ, ಕುತಂತ್ರಗಳನ್ನು ಹೆಣೆದ ವರದಿಗಳು ರಾಜ್ಯದ ವಿವಿಧೆಡೆಯಿಂದ ಬಂದಿವೆ. ಮದುವೆ …

Read More »

ರಾಜ್ಯದಲ್ಲಿ ಕಡಿಮೆಯಾಯ್ತಾ ಸೋಂಕಿತರು, ಸಾವಿನ ಸಂಖ್ಯೆ..?

ಬೆಂಗಳೂರು : ರಾಜ್ಯದಲ್ಲಿ ಭಾನುವಾರ 5,938 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 68 ಮಂದಿ ಸಾವನ್ನಪ್ಪಿದ್ದಾರೆ. 4,996 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 2.77 ಲಕ್ಷಕ್ಕೆ ಏರಿಕೆಯಾದರೆ, ಸಾವನ್ನಪ್ಪಿದವರ ಸಂಖ್ಯೆ 4,683 ತಲುಪಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1.89 ಲಕ್ಷಕ್ಕೇರಿದೆ. ಉಳಿದ 83,551 ಮಂದಿ ಸಕ್ರಿಯ ಸೋಂಕಿತರಿಗೆ ನಾನಾ ಆಸ್ಪತ್ರೆಗಳು, ಕೋವಿಡ್‌ ನಿಗಾ ಕೇಂದ್ರ ಮತ್ತು ಗೃಹ ಆರೈಕೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ …

Read More »

ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್

ಅಥಣಿ  : ಬೋಟ್‌ ಇಲ್ಲದೇ ಪ್ಲಾಸ್ಟಿಕ್‌ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್‌ ಇಲ್ಲದೇ ಪ್ಲಾಸ್ಟಿಕ್‌ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …

Read More »

ಅರಭಾಂವಿ ಮತಕ್ಷೇತ್ರದಲ್ಲಿ ತಲೆ ಎತ್ತಿದ ಹೈಟೆಕ್  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ

ಗೋಕಾಕ: ಅರಭಾಂವಿ ಮತಕ್ಷೇತ್ರದಲ್ಲಿ ತಲೆ ಎತ್ತಿದ ಹೈಟೆಕ್  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಭಾನುವಾರ ಭೇಟಿ ನೀಡಿ,  ಕಾಲೇಜು ಮೂಲಸೌಕರ್ಯ  ಪರಿಶೀಲನೆ ನಡೆಸಿದರು. ಈ ಹಿಂದೆ ಸತೀಶ ಜಾರಕಿಹೊಳಿ ಅವರು ಕೈಗಾರಿಕಾ ಮಂತ್ರಿಯಾಗಿದ್ದ ವೇಳೆ ಸುಮಾರು 20 ಕೋಟಿ ರೂ. ಅನುದಾನ ಕಲ್ಪಿಸಿ,   ಅರಭಾಂವಿಯಲ್ಲಿ ಜಿಟಿಟಿಸಿ ತರಬೇತಿ ಕೇಂದ್ರಕ್ಕೆ ಸ್ಥಾಪನೆಗೆ ವಿಶೇಷ ಕಾಳಜಿವಹಿಸಿದ್ದರು. ಸದ್ಯ ಪ್ರಸಕ್ತ ವರ್ಷದಿಂದ ತರಬೇತಿ …

Read More »

ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …

Read More »

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್​ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …

Read More »

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …

Read More »