ಬೆಳಗಾವಿ(ಡಿಸೆಂಬರ್. 21): ಅತ್ಯಂತ ಪ್ರತಿಷ್ಠ ಚುನಾವಣೆ ಆಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇದೀಗ ಎಲ್ಲಾ ರೀತಿಯ ಸಿದ್ದತೆ ನಡೆದಿದೆ. ಬೆಳಗಾವಿ ಜಿಲ್ಲೆಯ 7 ತಾಲೂಕಿನಲ್ಲಿ ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇಂದು ಮತ ಪೆಟ್ಟೆಗೆ ಸಮೇತ ಅಧಿಕಾರಿಗಳ ಮತದಾನ ಕೇಂದ್ರಕ್ಕೆ ತೆರಳಿದರು. ಕೊರೋನಾ ವೈರಸ್ ಭೀತಿಯ ನಡುವೆ ಪ್ರತಿಷ್ಠಿತ ಲೋಕಲ್ ಫೈಟ್ ನಡೆಯಲಿದ್ದು, ಗ್ರಾಮೀಣ ಪ್ರದೇಶ ಮತದಾರರು ನಾಳೆ ತಮ್ಮ ಹಚ್ಚು ಚಲಾವಣೆ ಮಾಡಲಿದ್ದಾರೆ. ಬೆಳಗಾವಿ …
Read More »ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್ ಮಾಡಿದ್ದಾರೆ.
ಬೆಂಗಳೂರು (ಡಿ. 21): ವಿಧಾನ ಪರಿಷತ್ನಲ್ಲಿ ಕಳೆದ ವಾರ ನಡೆದ ಕೋಲಾಹಲ ಬೆನ್ನಲ್ಲೇ ಇದೀಗ ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್ ಮಾಡಿದ್ದಾರೆ. ಸರ್ಕಾರಿ ಮನೆ ತೊರೆದಿರುವ ಅವರು ತಮ್ಮ ಸ್ವ ಕ್ಷೇತ್ರಕ್ಕೆ ತೆರಳಿದ್ದಾರೆ. ಅಲ್ಲದೇ ತಮ್ಮ ಮನೆಯ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗುವಂತೆ ಸಭಾಪತಿಯವರೇ ಲೋಕೋಪಯೋಗಿ ಇಲಾಖೆಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡದ ಪ್ರತಾಪ್ …
Read More »ಭಾರತದಲ್ಲಿ ಪೊಲೀಯೋ ಮಾದರಿಯಲ್ಲಿ ಕೊರೊನಾ ಲಸಿಕಾ ವಿತರಣೆಗೆ ಸಿದ್ಧತೆ
ನವದೆಹಲಿ, ಡಿ.18- ಕೊರೊನಾ ನಿರ್ಮೂಲನೆಗೆ ಪಲ್ಸ್ ಪೊಲೀಯೋ ಮಾದರಿಯಲ್ಲಿ ಲಸಿಕಾ ಆಂದೋಲನ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಜನವರಿ ವೇಳೆಗೆ ಸಾರ್ವಜನಿಕರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ದನ್ ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಲಸಿಕೆ ಆಂದೋಲನದ ಬಗ್ಗೆ ಸಮಗ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ದೇಶಕ್ಕೆ ಲಸಿಕಾ ಆಂದೋಲನದ ವಿಷಯವಾಗಿ ಸಾಕಷ್ಟು ಅನುಭವ ಇದೆ. 25 ವರ್ಷಗಳ ಹಿಂದೆ ಭಾರತದಲ್ಲಿ ಶೇ.60ರಷ್ಟು …
Read More »ಶಿವಸೇನೆ ಮತ್ತು ಬಿಜೆಪಿ ನಡುವಿನ ತಿಕ್ಕಾಟಕ್ಕೆ ಕಾರಣವಾದ ರಾಮಮಂದಿರ
ಮುಂಬೈ,ಡಿ.21-ಕೇಂದ್ರ ಸರ್ಕಾರ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಶಿವಸೇನೆ ಗಂಭೀರ ಆರೋಪ ಮಾಡಿದೆ. ಬಿಜೆಪಿ ಮುಖಂಡರು 2024ರ ಲೋಕಸಭಾ ಚುನಾವಣೆ ಪ್ರಚಾರದ ಅಂಗವಾಗಿ ಶ್ರೀ ರಾಮನ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ ಎಂದು ಸೇನೆ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಲಾಗಿದೆ. ಆದರೆ, ಶಿವಸೇನೆ ಆರೋಪವನ್ನು ಸಾರ ಸಗಟಾಗಿ ನಿರಾಕರಿಸಿರುವ ಬಿಜೆಪಿ ಮುಖಂಡರು …
Read More »ಬೆಳಗಾವಿಯ ಕುಟುಂಬವೊಂದು ಮನೆಯಲ್ಲಿ ಸಾಕಿದ ಹುಂಜಗಳ ಹುಟ್ಟುಹಬ್ಬ ಆಚರಿಸಿದೆ.
ಬೆಳಗಾವಿ: ಸಾಕು ನಾಯಿ, ಬೆಕ್ಕುಗಳ ಹುಟ್ಟುಹಬ್ಬ ಆಚರಿಸೋದನ್ನ ನೋಡಿರುತ್ತೇವೆ. ಇತ್ತೀಚೆಗೆ ಹಾವೇರಿಯಲ್ಲಿ ರೈತನೋರ್ವ ತನ್ನ ಎತ್ತಿಗೆ 25 ಕೆಜಿ ಕೇಕ್ ಕತ್ತರಿಸಿ ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿದ್ದ. ಬೆಳಗಾವಿಯ ಕುಟುಂಬವೊಂದು ಮನೆಯಲ್ಲಿ ಸಾಕಿದ ಹುಂಜಗಳ ಹುಟ್ಟುಹಬ್ಬ ಆಚರಿಸಿದೆ. ಮೇಘನಾ ಲಂಗರಖಂಡೆ ಹುಂಜಗಳ ಬರ್ತ್ ಡೇ ಆಚರಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು …
Read More »ಡಿ.22 ಹಾಗೂ ಡಿ.27ರಂದು ನಡೆಯುವ ಗ್ರಾ. ಪಂ. ಚುನಾವಣೆ ಮತದಾನ ಮಾಡಲು ಸಾರ್ವತ್ರಿಕ ರಜೆ
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಸಾರ್ವತ್ರಿಕ ರಜೆ ನೀಡಲಾಗಿದೆ. ಗ್ರಾಪಂಗಳಿಗೆ ಡಿ.22 ಹಾಗೂ ಡಿ.27ರಂದು ನಡೆಯುವ ಸಾರ್ವತ್ರಿಕ ಚುನಾವಣೆ ಸಂಬಂಧ ನಡೆಯುವ ಗ್ರಾಪಂ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ …
Read More »ಕಳೆದ 14 ಗಂಟೆಗಳಿಂದ 270 ಕಿಲೋ ಮೀಟರ್ ಉದ್ಧಕ್ಕೂ ಸಾಲು ಗಟ್ಟಿನಿಂತಿದ್ದ ಸಂಚಾರ ದಟ್ಟಣೆ
ಜಮ್ಮು, ಡಿ.20- ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ಧಾರಿಯಲ್ಲಿ ಕಳೆದ 14 ಗಂಟೆಗಳಿಂದ 270 ಕಿಲೋ ಮೀಟರ್ ಉದ್ಧಕ್ಕೂ ಸಾಲು ಗಟ್ಟಿನಿಂತಿದ್ದ ಸಂಚಾರ ದಟ್ಟಣೆಯಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ತೆರವುಗೊಳಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ರಂಬಾನ್ ಜಿಲ್ಲೆಯ ಚಂದರ್ಕೋಟೆ ಬಳಿಯ ಭೂಂ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿತ್ತು. ಸುಮಾರು 2 ಸಾವಿರ ವಾಹನಗಳು ಭೂ ಕುಸಿತದಿಂದ ಮುಂದೆ ಸಾಗಲಾಗದೆ ರಸ್ತೆಯಲ್ಲಿ ನಿಲ್ಲಬೇಕಾಯಿತು. …
Read More »ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ
ಬೆಂಗಳೂರು – ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿಯುತ್ತಿದ್ದಂತೆ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಲಾವ್ ಬಂದಿದೆ. ಹಾಗಾಗಿ ಡಿಸೆಂಬರ್ 28 ಅಥವಾ 29ಕ್ಕೆ ಅವರು ದೆಹಲಿಗೆ ತೆರಳಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸುವ ಸಾಧ್ಯತೆ ಇದೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆಯಷ್ಟೆ ಅಲ್ಲ, ಪುನಾರಚನೆ ಖಚಿತ. ಸಧ್ಯಕ್ಕೆ 7 …
Read More »ನೋ ಫೋನ್ pay ನೋ ಗೂಗಲ್ pay only ಪಾಕೆಟ್ ಪೇ
ಮುಂಬೈ: ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ. ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ ಪೇದೆ ಸ್ವಾತಿ ಸೋನರ್ ಡ್ಯೂಟಿಗೆ ಹಾಕಲಾಗಿತ್ತು. ಕೊರೊನಾ ಭಯದಿಂದ ನೋಟುಗಳನ್ನ ಕೈಯಲ್ಲಿ ಮುಟ್ಟದ ಸ್ವಾತಿ ಸೋನರ್, ಯುವತಿಗೆ ಜೇಬಿಗೆ ಇಡುವಂತೆ ಹೇಳಿದ್ದಾರೆ. ಈ ಎಲ್ಲ ದೃಶ್ಯಗಳು ಸಾರ್ವಜನಿಕರ ಮೊಬೈಲನಲ್ಲಿ ಸರೆಯಾಗಿದ್ದವು. ವೀಡಿಯೋ ವೈರಲ್ ಬಳಿಕ …
Read More »ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ.
ಬೆಂಗಳೂರು: ಇದೇ ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ. ಯೆಸ್ ಈ ಕುರಿತು ಪೋಸ್ಸ್ ಮಾಡಿರುವ ಪ್ರಶಾಂತ್ ನೀಲ್ ಡಿಸೆಂಬರ್ 21, 2020, ಬೆಳಗ್ಗೆ 10.08 ನಿಮಿಷಕ್ಕಾಗಿ ಕಾಯ್ತಿರಿ ಎಂದು ಹೇಳಿದ್ದಾರೆ. ಕೆಜಿಎಫ್ ಚಾಪ್ಟರ್ -1 ತೆರೆ ಕಂಡು ಡಿಸೆಂಬರ್ 21ಕ್ಕೆ ಮೂರು ವರ್ಷವಾಗಲಿದೆ. ಅಂದುಕೊಂಡಂತೆ ಆಗಿದ್ರೆ ಕೆಜಿಎಫ್ ಇಡೀ ದೇಶದಾದ್ಯಂತ ಅಬ್ಬರಿಸುತ್ತಿತ್ತು. ಕೊರೊನಾದಿಂದ ಶೂಟಿಂಗ್ ಸ್ಥಗಿತಗೊಂಡ ಹಿನ್ನೆಲೆ ಸಿನಿಮಾ ರಿಲೀಸ್ …
Read More »
Laxmi News 24×7