Breaking News

Uncategorized

ವರಮಹಾಲಕ್ಷ್ಮಿ ಹಬ್ಬದಂದೇ ವ್ಯಾಪಾರಿಗಳಿಗೆ ಶಾಕ್; ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮ ಅಂಗಡಿಗಳ ತೆರವು

  ಆನೇಕಲ್:  ಸರ್ಕಾರಿ ಆಸ್ಪತ್ರೆಗೆ ಸಾಗುವ ದಾರಿಯ ಇಕ್ಕೆಲಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಅಂಗಡಿಗಳನ್ನು ತಾಲ್ಲೂಕು ಆಡಳಿತ ತೆರವುಗೊಳಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ನಡೆದಿದೆ.  ಆನೇಕಲ್ ತಹಶಿಲ್ದಾರ್ ಮಹಾದೇವಯ್ಯ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಿದ ತಾಲ್ಲೂಕು ಆಡಳಿತ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿದ್ದ ಸುಮಾರು ಐವತ್ತಕ್ಕೂ ಅಧಿಕ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎರಡು ಬದಿಗಳಲ್ಲಿ ತಾತ್ಕಾಲಿಕ ಟೆಂಟ್​​ಗಳನ್ನು ನಿರ್ಮಿಸಿಕೊಂಡಿದ್ದ ವ್ಯಾಪಾರಿಗಳಿಗೆ ಹಲವು …

Read More »

ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಕಹಾಮ ನೌಕರರಿಗೆ ಕೊರೋನಾ ವಿಮೆ ಮಾಡಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರದಂದು ಈ ಹೇಳಿಕೆ ನೀಡಿರುವ ಅವರು, ಕಹಾಮ 992 ನೌಕರರಿಗೆ ವಿಮೆ ಮಾಡಿಸಲು ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಜಗತ್ತಿನಾದ್ಯಂತ ಹರಡುತ್ತಿರುವ ಕೊರೋನಾ …

Read More »

ವರಮಹಾಲಕ್ಷ್ಮಿ ಸರಳ ಆಚರಣೆ

ದಾವಣಗೆರೆ: ಕೊರೊನಾ ನಡುವೆಯೂ ಜಿಲ್ಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸರಳ, ಸಂಭ್ರಮದಿಂದ ನಡೆಯಿತು. ಮನೆಮನೆಗಳಲ್ಲಿ ಹಬ್ಬದ ಸಡಗರ ನೆಲೆಸಿತ್ತು. ಮುತ್ತೈದೆಯರು ಕೊರೊನಾ ಪರಿಣಾಮ ಸರಳತೆಯ ಆಚರಣೆಗೆ ಮೊರೆಹೋಗಿದ್ದರು. ಪ್ರತಿ ವರ್ಷವೂ ಅಕ್ಕಪಕ್ಕದ ಮನೆಯವರು, ಸ್ನೇಹಿತರು ಹಾಗೂ ಸಂಬಂಧಿಕರನ್ನು ಕರೆದು ಮಹಿಳೆಯರು ಸಡಗರ, ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಿದ್ದರು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಮನೆಗಷ್ಟೇ ಸೀಮಿತಗೊಂಡಿತು. ನೆರೆಹೊರೆಯ ಮುತ್ತೈದೆಯರನ್ನು ಮನೆಗೆ ಆಹ್ವಾನಿಸಿ ಉಡಿ ತುಂಬುವುದು ಸಂಪ್ರದಾಯ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಮನೆಗೆ ಕರೆಯಲು ಹಿಂಜರಿಯುವಂತಾಯಿತು. …

Read More »

ನಂಗೆ ಕಾಲಲ್ಲೆಲ್ಲ ಏನೋ ಒಂಥರಾ ಫೀಲಿಂಗ್​.’ ಎಂದು ಹೇಳ್ತಾ ಇರೋ ಮಹಿಳೆಯ ಕೇಸ್ ಈಗ ವೈದ್ಯಲೋಕದ ಅಚ್ಚರಿ!

ಬ್ರೂಸೆಲ್ಲಸ್​: ವೈದ್ಯಲೋಕದ ಅಚ್ಚರಿಗಳ ಪೈಕಿ ಇದೂ ಒಂದು. ಬೆಲ್ಜಿಯಂನ ಪ್ರಜೆಯಾದ ಆಕೆ ವಿವಾಹಿತ ಮಹಿಳೆ. ಫಾರ್ಮಸಿಯೊಂದರಲ್ಲಿ ಉದ್ಯೋಗಿ. ಮಾದಕ ವ್ಯಸನ ಅಥವಾ ಮದ್ಯಪಾನ ಮುಂತಾದ ಯಾವುದೇ ದುರಭ್ಯಾಸಗಳಿಲ್ಲ. ಆದರೂ ಆಕೆಯ ಭಾವನೆ ಮತ್ತು ನಡವಳಿಕೆಯೇ ವಿಚಿತ್ರವಾದುದು! ಈ ಮಹಿಳೆಗೆ 54 ವರ್ಷ ವಯಸ್ಸು. ಅದೊಂದು ದಿನ ಆಕೆಯ ಸಹೋದರ ಸದ್ದಿಲ್ಲದೆ ಆಕೆಯ ಬಳಿ ಬಂದು ನಿಂತ. ಆಕೆಯ ನಡವಳಿಕೆ ಕಂಡು ಬೆಚ್ಚಿಬಿದ್ದ! ಆಕೆ ನಿಂತಲ್ಲೇ ಕಾಲು ಕೆರೆಯುತ್ತ, ಕತ್ತು ಮೇಲೆ …

Read More »

ಸೂಪರ್ ಸ್ಟಾರ್ಸ್​ ಶಕ್ತಿ ಕೇಂದ್ರದ ಬಾಗಿಲು ತೆಗೆದ ಸರ್ಕಾರ

ಕೊರೊನಾ ಆರ್ಭಟ ಮತ್ತು ಲಾಕ್​ಡೌನ್​ ಎಲ್ಲಾ ಉದ್ಯಮಗಳಿಗೂ ಭಾರೀ ಪೆಟ್ಟು ಕೊಟ್ಟಿದೆ. ಕೊರೊನಾ ನಾಶವಾಗದೇ ಇದ್ರು, ಬೇರೆ ದಾರಿಯಿಲ್ಲದೇ ನಿಧಾನವಾಗಿ ಲಾಕ್​ಲಾಕ್​​ ಸಡಿಲಗೊಳಿಸಲಾಗ್ತಿದೆ. ಇದೀಗ ಕೇಂದ್ರ ಸರ್ಕಾರ ಅನ್​ಲಾಕ್​ 3 ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಆಗಸ್ಟ್​ ಒಂದರಿಂದ 3ನೇ ಹಂತದ ಅನ್​ಲಾಕ್​ ಜಾರಿಗೆ ಬರಲಿದೆ. ರಾತ್ರಿ ಕರ್ಫೂ ತೆರೆವುಗೊಳಿಸಿರೋದು ಬಿಟ್ರೆ, ಈ ಬಾರಿ ಅನ್​ಲಾಕ್​​ನಲ್ಲಿ ಭಾರಿ ಬದಲಾವಣೆ ಇಲ್ಲ. ಜಿಮ್​ ಮತ್ತು ಯೋಗ ಕೇಂದ್ರಗಳನ್ನ ತೆರೆಯಲು ಮಾತ್ರ ಅನುಮತಿ ಸಿಕ್ಕಿದೆ. …

Read More »

ಮುಂಬೈನ ಧಾರವಿ ಕೊಳೆಗೆರಿಯ ಜನತೆಯಲ್ಲಿ ಆಂಟಿ ಬಾಡಿ ಪತ್ತೆ : ವಿಜ್ಞಾನಿಗಳ ಲೆಕ್ಕಚಾರ ತಲೆಕೆಳಗು

ಮುಂಬೈ: ಭಾರತದ ಅತಿದೊಡ್ಡ ಕೊಳೆಗೇರಿಯಾಗಿರುವ ಧಾರಾವಿಯಲ್ಲಿ ವಾಸಿಸುವ ಹತ್ತು ಜನರಲ್ಲಿ ಆರರಲ್ಲಿ ಆರು ಜನರು ಕರೋನವೈರಸ್ ಪ್ರತಿಕಾಯಗಳನ್ನು ಹೊಂದಿದ್ದಾರೆ ಇದೇ ವೇಳೆ ಅವರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತದ ಹಣಕಾಸು ಕೇಂದ್ರವಾದ ಮುಂಬೈನ ಮೂರು ಉಪನಗರಗಳಲ್ಲಿ 6,936 ಜನರ ಜುಲೈನಲ್ಲಿ ನಡೆದ ಸಮೀಕ್ಷೆಯಲ್ಲಿ, ಈ ಬಗ್ಗೆ ತಿಳಿದು ಬಂದಿದೆ. ಭಾರತದ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರದ ವೈಜ್ಞಾನಿಕ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಅದರ ಪ್ರಮುಖ ವೈದ್ಯಕೀಯ ಕಾಲೇಜುಗಳ …

Read More »

ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್‌ಐ ಆತ್ಮಹತ್ಯೆ; ತನಿಖೆಗೆ ಮಾಜಿ ಪ್ರಧಾನಿ ಒತ್ತಾಯ

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ -ಪಿಎಸ್ ಐ ಕಿರಣ್ ಕುಮಾರ್ ಅವರು ಇಂದು ಬೆಳಗ್ಗೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲೆ ಪ್ರಕರಣವೊಂದನ್ನು ನಿನ್ನೆ ಮಧ್ಯ ರಾತ್ರಿಯಷ್ಟೇ ಭೇದಿಸಿದ್ದ ಅವರು, ಆರೋಪಿ‌ ಬಂಧನ ಸಂಬಂಧ ಕಾರ್ಯಪ್ರವೃತ್ತರಾಗಿದ್ದರು. ಕೊಲೆ‌ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಕುಮಾರ್ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ …

Read More »

ಬಸ್‌ನಲ್ಲಿ ಕಲ್ಲು ತುಂಬಿ ಸಾಗಿಸಿದರು!

ಹುಬ್ಬಳ್ಳಿ: ಕುಂದಗೋಳ-ಹುಬ್ಬಳ್ಳಿ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ, ಸಿಬ್ಬಂದಿ ಗುರುವಾರ ಕಲ್ಲು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸೂರು ರಸ್ತೆ ಬಳಿ ರಸ್ತೆ ವಿಭಜಕ ಕಾಮಗಾರಿ ನಡೆಯುತ್ತಿದ್ದು, ಮೊದಲು ರಸ್ತೆಗೆ ಹಾಕಲಾಗಿದ್ದ ಕಲ್ಲುಗಳನ್ನು ತೆಗೆಯಲಾಗಿದೆ. ಗೋಕುಲ ರಸ್ತೆಯ ಬಸ್‌ ಡಿಪೊದಲ್ಲಿ ಉದ್ಯಾನ ಕಾಮಗಾರಿ ನಡೆಯುತ್ತಿರುವುದರಿಂದ, ಅಲ್ಲಿಗೆ ಈ ಕಲ್ಲುಗಳನ್ನು ಸಾಗಿಸಲು ಸಿಬ್ಬಂದಿ ಬಸ್‌ ಬಳಕೆ ಮಾಡಿಕೊಂಡಿದ್ದಾರೆ. ರಸ್ತೆ ಮೇಲಿದ್ದ ಕಲ್ಲುಗಳನ್ನು ಐದಾರು ಸಿಬ್ಬಂದಿ ಸೇರಿ ಬಸ್‌ಗೆ ತುಂಬಿದ್ದಾರೆ. 50ಕ್ಕಿಂತಲೂ …

Read More »

ಸಿಇಟಿ: 1,998 ವಿದ್ಯಾರ್ಥಿಗಳು ಗೈರು

ಬೆಳಗಾವಿ: ಜಿಲ್ಲೆಯ ವಿವಿಧ 29 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ 1,998 ವಿದ್ಯಾರ್ಥಿಗಳು ಗೈರು ಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಒಳಪಡುವ ನಗರದ 11, ರಾಮದುರ್ಗದ ಸ್ಟೇಟ್ ಪಿಯು ಕಾಲೇಜು, ಸವದತ್ತಿಯ ಎಸ್‌.ಕೆ. ಪಿಯು ಕಾಲೇಜು ಹಾಗೂ ಬೈಲಹೊಂಗಲದ ಜಿಜಿಡಿ ಪಿಯು ಕಾಲೇಜಿನ ಕೇಂದ್ರಗಳಲ್ಲಿ ಬೆಳಿಗ್ಗೆ ಭೌತವಿಜ್ಞಾನ ಮತ್ತು ಮಧ್ಯಾಹ್ನ ರಸಾಯನವಿಜ್ಞಾನ ವಿಷಯದ ಪರೀಕ್ಷೆಗಳು ನಡೆದವು. ಭೌತವಿಜ್ಞಾನಕ್ಕೆ 5,316 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ …

Read More »

ಕೋವಿಡ್‌ ನಿಯಂತ್ರಣಕ್ಕೆ ಬಿಡುಗಡೆಯಾಗಿದ್ದು ಕೇವಲ ₹ 230 ಕೋಟಿ!

ಬೆಳಗಾವಿ: ಕೋವಿಡ್‌ ರೋಗವನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಇದುವರೆಗೆ ಒಟ್ಟು ₹ 230.73 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ₹ 13.97 ಕೋಟಿ ದೊರೆತಿದೆ. ಮಾಹಿತಿ ಹಕ್ಕು ಕಾರ್ಯಕರ್ತ (ಆರ್‌ಟಿಐ) ಸುರೇಂದ್ರ ಉಗಾರೆ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡ ಮಾಹಿತಿಯಿಂದ ಇದು ಬೆಳಕಿಗೆ ಬಂದಿದೆ. ‘ರಾಜ್ಯ ಸರ್ಕಾರ ಹೇಳುವಂತೆ ₹ 2,000 ಕೋಟಿ ಬಿಡುಗಡೆಯಾಗಿಲ್ಲ. ಇದಲ್ಲದೇ, ವಿರೋಧ ಪಕ್ಷದವರು ಹೇಳುವಂತೆ ಸಾವಿರಾರು ಕೋಟಿ ರೂಪಾಯಿಯ …

Read More »