ಮಂಗಳೂರು: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಮಲಗಿರುವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ.ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ ಮೊಮ್ಮಗ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. …
Read More »ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್ಡೌನ್
ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ತರಕಾರಿ, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಕಾರ್ಮಿಕರ ಅನುಕೂಲ …
Read More »ಗೋಕಾಕ ತಾಲೂಕಿನ ಜನತೆಗೆ ಬಿಗ್ ಶಾಕ್……
ಆಸ್ಪತ್ರೆಯ ಬಾತ್ರೂಮ್ ಕಿಟಕಿಯಲ್ಲಿ ನೇಣುಬಿಗಿದುಕೊಂಡು ರೋಗಿ ಆತ್ಮಹತ್ಯೆ
ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸಾಂದರ್ಭಿಕ ಚಿತ್ರ ಆಸ್ಪತ್ರೆ ಸಿಬ್ಬಂದಿ …
Read More »ಯಾವ ರೈತ ಫೋಟೋಶೂಟ್ ಮಾಡಿಸುತ್ತಾನೆ?’- ಸಲ್ಲು ಪೋಸ್ಟ್ಗೆ ನೆಟ್ಟಿಗರು ಟಾಂಗ್
ಮುಂಬೈ: ರೈತ ಪರವಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಾಕಿದ್ದ ಸಲ್ಮಾನ್ ಖಾನ್ ಈಗ ಅದೇ ಫೋಟೋದಿಂದ ಈಗ ಟ್ರೋಲ್ಗೆ ಒಳಗಾಗಿದ್ದಾರೆ. ಕೊರೊನಾ ಭೀತಿಯಿಂದ ಚಿತ್ರರಂಗದ ಎಲ್ಲ ಚಟುವಟಿಕೆಗಳು ನಿಂತಿದ್ದು, ಸರ್ಕಾರ ಆದೇಶದಂತೆ ಮತ್ತೆ ಆರಂಭಗೊಳ್ಳುತ್ತಿವೆ. ಲಾಕ್ಡೌನ್ ವೇಳೆಯಿಂದಲೂ ತಮ್ಮ ತೋಟದ ಮನೆಯಲ್ಲೇ ಕಾಲಕಳೆಯುತ್ತಿರುವ ಸಲ್ಲು ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ರೈತರ ಪರವಾಗಿ ಫೋಟೋವೊಂದನ್ನು ಹಾಕಿದ್ದರು. ಈಗ ಇದೇ ಫೋಟೋವನ್ನು ಇಟ್ಟುಕೊಂಡು ನೆಟ್ಟೆಗರು ಸಲ್ಲು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ …
Read More »ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ.ಟಗರು ಪುಟ್ಟಿ
ಬೆಂಗಳೂರು: ಟಗರು ಹಾಗೂ ಕೆಂಡಸಂಪಿಗೆ ಸಿನಿಮಾ ಖ್ಯಾತಿಯ ಮನ್ವಿತಾ ಕಾಮತ್ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಕುರಿತು ಪೋಸ್ಟ್ ಹಾಕುತ್ತಿರುತ್ತಾರೆ. ಅದೇ ರೀತಿ ಸಾಮಾಜಿಕ ಆಗುಹೋಗುಗಳ ಕುರಿತು ಸಹ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ. ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದೆ. ಹಲವರು ನಿರುದ್ಯೋಗಿಗಳಾಗಿದ್ದಾರೆ. ಲಾಕ್ಡೌನ್ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದೆ. ಭಾರತದಾದ್ಯಂತ ಚಿತ್ರೀಕರಣವೇ ಸ್ಥಗಿತವಾಗಿದೆ. ಇತ್ತೀಚೆಗೆ …
Read More »ತಾಯಿ ತೀರಿದ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ
ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಖುಷಿ ವಿಚಾರವಾದರೆ, ಬೇಸರದ ಸಂಗತಿ ಎಂಬಂತೆ ಮಹಿಳೆಯ ತಾಯಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ದುರಾದೃಷ್ಟವಶಾತ್ ಕೊರೊನಾ ಸೋಂಕಿತೆ ಗರ್ಭಿಣಿಯ ತಾಯಿ ಕೊರೊನಾದಿಂದಾಗಿಯೇ ಸಾವನ್ನಪ್ಪಿದ್ದು, ಅಮ್ಮ ತೀರಿಕೊಂಡ ನೋವಿನಲ್ಲೂ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಮ್ಮನೇ ಮತ್ತೆ ನನ್ನ ಹೊಟ್ಟೆಯಲ್ಲೇ ಹುಟ್ಟಿದ್ದಾಳೆ ಎಂದು ಗರ್ಭಿಣಿ ಭಾವಿಸಿದ್ದಾಳೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ 23 …
Read More »ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ನೀಡಿ: ಅಮಿತ್ ಶಾಗೆ ರಿಯಾ ಮನವಿ
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ನಟಿ ರಿಯಾ ಚಕ್ರವರ್ತಿ ಕೇಂದ್ರ ಗೃಹಸಚಿವ ಅಮಿತ್ ಶಾ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ರಿಯಾ ಟ್ವೀಟ್: ಮಾನ್ಯ ಅಮಿತ್ ಶಾ ಅವರೇ, ನಾನು ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ. ಸುಶಾಂತ್ ನಿಧನವಾಗಿ ಒಂದು ತಿಂಗಳಕ್ಕೂ ಅಧಿಕ ಸಮಯ ಕಳೆದಿದೆ. ನನಗೆ ಸರ್ಕಾರದ …
Read More »ಎಲ್ಲೂ ಬೆಡ್ ಸಿಗ್ತಿಲ್ಲವೆಂದು ಪತ್ನಿ, ಮಕ್ಕಳ ಸಮೇತ ಸಿಎಂ ಮನೆ ಬಳಿ ಬಂದ ಸೋಂಕಿತ
ಬೆಂಗಳೂರು: ನನಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಕರೆ ಮಾಡಿ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಎಲ್ಲೂ ಬೆಡ್ ಸಿಗುತ್ತಿಲ್ಲವೆಂದು ಕೊರೊನಾ ಸೋಂಕಿತರೊಬ್ಬರು ಸಿಎಂ ನಿವಾಸ ಕಾವೇರಿ ಬಳಿ ಗೋಳಿಟ್ಟಿದ್ದಾರೆ. ಕುಟುಂಬ ಸಮೇತರಾಗಿ ಸಿಎಂ ಮನೆ ಬಳಿ ಬಂದ ಸೋಂಕಿತ, ನನಗೆ ಎಲ್ಲೂ ಬೆಡ್ ಸಿಗುತ್ತಿಲ್ಲ. ತುಂಬಾ ಸುಸ್ತು ಆಗುತ್ತಿದೆ, ನನಗೆ ಆಸ್ಪತ್ರೆಯಲ್ಲಿ ಬೆಡ್ ಕೊಡಿಸಿ ಎಂದು ತನ್ನ ಪತ್ನಿ ಹಾಗೂ ಮಕ್ಕಳ ಜೊತೆಯಲ್ಲಿ ಕೊರೊನಾ ಸೋಂಕಿತ ಕಾವೇರಿ …
Read More »ಬೆಡ್ ಸಿಗದೆ ಕೊರೊನಾಗೆ ಪೌರ ಕಾರ್ಮಿಕ ಮಹಿಳೆ ಸಾವು
ಬೆಂಗಳೂರು: ಕೊರೊನಾ ವೈರಸ್ ಭಯ, ಲಾಕ್ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳದ ವಿಶ್ವನಾಥ ನಾಗನಹಳ್ಳಿಯ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಕಲಿದ್ದು, ಚಿಕಿತ್ಸೆಗಾಗಿ ಮಹಿಳೆ ಐದಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದರೂ ಎಲ್ಲಿಯೂ ಬೆಡ್ ಸಿಕ್ಕಿಲ್ಲ. ಐದು ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ ಎಂದು ಹೇಳಿ ಕಳುಹಿಸಲಾಗಿದೆ. …
Read More »