Breaking News

Uncategorized

ಲೇಖಕಿಯರ ಸಂಘ: ಅಧಿಕಾರ ಹಸ್ತಾಂತರ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ‌.ಹೇಮಾವತಿ ಸೋನೊಳಿ ಅವರಿಗೆ ನಿರ್ಗಮಿತ ಅಧ್ಯಕ್ಷೆ ಜ್ಯೋತಿ ಬದಾಮಿ ಅಧಿಕಾರ ಹಸ್ತಾಂತರಿಸಿದರು. ‘ತಮ್ಮ ಎರಡು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಯಿತು. ಕುಪ್ಪಳ್ಳಿ ಹಾಗೂ ನಿಡಸೋಸಿಯ ಶ್ರೀಮಠದ ಸಾಹಿತ್ಯ ಚಿಂತನ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿತು’ ಎಂದು ಜ್ಯೋತಿ ತಿಳಿಸಿದರು. ಉಡುಪಿಯ ಉಪನ್ಯಾಸಕಿ ಸಂಧ್ಯಾ ಶೆಣೈ, ’20 ವರ್ಷಗಳ ಗಟ್ಟಿ ಹೆಜ್ಜೆಗುರುತು ಮೂಡಿಸುತ್ತಾ ಹಿರಿಯ …

Read More »

ಅಂಜುಮನ್ ಸಂಸ್ಥೆಯಿಂದ ಆರೋಗ್ಯ ಸೇವೆ

ಬೆಳಗಾವಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಸಮಿತಿಯು ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಸಿದ್ಧತೆ ಮಾಡಿಕೊಂಡಿದೆ. ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದು ಮನೆಗಳಲ್ಲಿ ಆರೈಕೆಯಲ್ಲಿರುವವರಿಗೆ ಅಥವಾ ಇತರ ಆರೋಗ್ಯ ಸಂಬಂಧಿ ಸಮಸ್ಯೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡವರಿಗೆ ಚಿಕಿತ್ಸಾ ಸೇವೆ ನೀಡಲಿದೆ. ರೋಗಿಗಳ ಮನೆಗಳಿಗೇ ಕಳುಹಿಸುವುದಕ್ಕೆಂದು ಈಗಾಗಲೇ 120 ಆಕ್ಸಿಜನ್ ಸಿಲಿಂಡರ್‌ಗಳನ್ನು ಖರೀದಿಸಿ ಸಂಗ್ರಹಿಸಿದೆ. ಸಿಲಿಂಡರ್‌ ಒಂದನ್ನು ₹ 9,500ಕ್ಕೆ ಖರೀದಿಸಲಾಗಿದೆ. …

Read More »

ಕೆಮ್ಮುತ್ತಿದ್ದ ಹುಡುಗಿಯನ್ನು ನೋಡಿ ಕೊರೊನಾ, ಕೊರೊನಾ ಎಂದೆ… ಆದರೆ!

ಮೈಸೂರು: ನಾನು ಕೋವಿಡ್-19 ಪೀಡಿತನಾಗಿದ್ದು ನನ್ನ ತಪ್ಪಿನಿಂದಲೇ. ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಡುಗಿಯೊಬ್ಬಳು ಕೆಮ್ಮುತ್ತಿದ್ದಳು. ಮೊಬೈಲ್‌ನಲ್ಲಿ ಮಾತನಾಡುತ್ತಲೇ ಆಕೆಯನ್ನು ರೇಗಿಸಿದೆ. ಕೊರೊನಾ… ಕೊರೊನಾ… ಎಂದೆ. ಇದರಿಂದ ಸಿಟ್ಟಾದ ಆಕೆ ನೇರವಾಗಿ ನನ್ನ ಬಳಿ ಬಂದು ಕೆಮ್ಮಿದಳು. ನನಗೆ ಬಂದಿದ್ದರೆ, ನಿಮಗೂ ಬರಲಿ ಅಂದಳು. ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಕಾರಣ ನಾನು ಮಾಸ್ಕ್‌ಅನ್ನು ಕುತ್ತಿಗೆಗೆ ಇಳಿಸಿಕೊಂಡಿದ್ದೆ. ಅದೇ ಪರಿಸರದಲ್ಲಿ ಉಸಿರಾಡಿದ್ದೆ. ಎರಡ್ಮೂರು ದಿನ ಕಳೆಯೋದರೊಳಗೆ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಾಣಿಸಿಕೊಂಡವು. ನನಗೆಲ್ಲಿ …

Read More »

ಆಗಸ್ಟ್ 31 ರವರೆಗೆ ಮಹಾರಾಷ್ಟ್ರ ಲಾಕ್‌-ಡೌನ್ ವಿಸ್ತರಣೆ

  ಮುಂಬೈ: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಬುಧವಾರ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಒಳಗೊಂಡಿರುವ ತುರ್ತು ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   ಮಿಷನ್ ಬಿಗಿನ್ ಎಗೇನ್ ಉಪಕ್ರಮದ ಭಾಗವಾಗಿ, ಚಿತ್ರಮಂದಿರಗಳು, ಆಹಾರ ಮಳಿಗೆಗಳು, ನ್ಯಾಯಾಲಯಗಳು, ರೆಸ್ಟೋರೆಂಟ್‌ಗಳಿಲ್ಲದ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಆಗಸ್ಟ್ …

Read More »

ಚೀನಕ್ಕೆ ಭಾರತದ ತಿರುಗೇಟು..

ಹೊಸದಿಲ್ಲಿ: ಲಡಾಖ್‌ನಲ್ಲಿ ತಿಂಗಳುಗಳಿಂದ ಭಾರತಕ್ಕೆ ಕಿರಿಕಿರಿ ಉಂಟು ಮಾಡಿದ್ದ ಚೀನ, ಈಗ ದಕ್ಷಿಣದ ಹಿಂದೂ ಮಹಾ ಸಾಗರದಲ್ಲಿ ತನ್ನ ಆಧಿಪತ್ಯ ಸ್ಥಾಪಿಸಲು ಮುಂದಾಗಿದೆ. ಇದಕ್ಕೆ ಪ್ರತಿಯಾಗಿ, ಭಾರತೀಯ ನೌಕಾಪಡೆ ತನ್ನ ಸಮರ ನೌಕೆಗಳನ್ನು ಹಿಂದೂ ಮಹಾ ಸಾಗರ ಪ್ರಾಂತ್ಯದಲ್ಲಿ (ಐಒಆರ್‌) ನಿಯೋಜಿಸಿ, ಚೀನಕ್ಕೆ ಸೆಡ್ಡು ಹೊಡೆದಿದೆ.   ಚೀನಕ್ಕೆ ಆಮದಾಗುವ ಕಚ್ಚಾ ತೈಲದಲ್ಲಿ ಶೇ. 80ರಷ್ಟು ಸರಕು ಹಿಂದೂ ಮಹಾ ಸಾಗರದ ಮೂಲಕವೇ ಹಾದು ಹೋಗುವುದರಿಂದ ಆ ಸಮುದ್ರ ಭಾಗವನ್ನು ತನ್ನ …

Read More »

ಬಕ್ರೀದ್ ಸಂಭ್ರಮಕ್ಕೆ ಕೊರೊನಾ ಅಡ್ಡಗಾಲು – ಬೆಳಗಾವಿ ಕುರಿಗಾಹಿಗಳಿಗೆ ಉಡುಪಿಯಲ್ಲಿ ಟೆನ್ಶನ್

ಉಡುಪಿ: ಜಿಲ್ಲೆಯ ಬಕ್ರೀದ್ ಆಚರಣೆಗೆ ಕೊರೊನ ಮಹಾಮಾರಿ ಅಡ್ಡಗಾಲು ಇಟ್ಟಿದೆ. ಮುಸಲ್ಮಾನರ ಪವಿತ್ರ ಮತ್ತು ಅದ್ಧೂರಿ ಹಬ್ಬ ಬಕ್ರೀದ್ ಈ ಬಾರಿ ಕಳೆ ಕಟ್ಟಿಲ್ಲ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮುಸಲ್ಮಾನರು ಈ ಬಾರಿ ಸರಳವಾಗಿ ಬಕ್ರೀದ್ ಆಚರಿಸಲು ನಿರ್ಧಾರ ಮಾಡಿದಂತಿದೆ. ಪ್ರತಿ ವರ್ಷ ಬಕ್ರೀದ್ ಬಂದಾಗ ಉಡುಪಿ ನಗರದ ಬೀಡಿನಗುಡ್ಡೆ ಮೈದಾನದಲ್ಲಿ ನಾಲ್ಕು ದಿನದಲ್ಲಿ ಸಾವಿರದ ಇನ್ನೂರು ಆಡು ಮತ್ತು ಕುರಿ ವ್ಯಾಪಾರ ಆಗುತ್ತಿತ್ತು. ಈ ಬಾರಿ ಕೇವಲ 250 ರಿಂದ …

Read More »

ಕೊರೊನಾ ವೈರಸ್ 40 ರಿಂದ 70 ವರ್ಷಗಳ ಹಿಂದೆ ಬಾವಲಿಗಳಲ್ಲಿ ಕಂಡುಬಂದಿದೆ – ಪ್ರೊ. ಡೇವಿಡ್ ರಾಬರ್ಟ್ಸ್‌ನ್‌

ನವದೆಹಲಿ: ಇಡೀ ವಿಶ್ವವವನ್ನು ಬೆಚ್ಚಿ ಬೀಳಿಸಿದ ಕೊರೊನಾ ಸೋಂಕು ಮಾನವರಿಗೆ ತಗುಲುವ ಮುನ್ನ ದಶಕಗಳಿಂದ ಬಾವಲಿಗಳ ದೇಹದಲ್ಲಿತ್ತು. ಆದರೆ ಅದನ್ನು ಕಂಡುಹಿಡಿಯಲಾಗಲಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ವೈರಸ್‍ಗೆ 40 ರಿಂದ 70 ವರ್ಷಗಳ ಮೊದಲು ಬಾವಲಿಗಳಲ್ಲಿ ಕಂಡುಬಂದಿದೆ ಎಂದು ಇತ್ತೀಚಿನ ಸಂಶೋಧನೆಯೊಂದು ಬಹಿರಂಗಪಡಿಸಿದೆ. ಬಹುಶಃ ಈ ವೈರಸ್ ಈಗ ಮನುಷ್ಯರನ್ನು ತಲುಪಿರಬಹುದು ಎಂದು ಸಂಶೋಧಕರು ಹೇಳಿದ್ದಾರೆ. ನೇಚರ್ ಮೈಕ್ರೋ ಬಯಾಲಜಿ ಜರ್ನಲ್ ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯೊಂದರಲ್ಲಿ ಕೆಲಸ ಮಾಡಿದ …

Read More »

ಆಗಸ್ಟ್‌ 31ರ ವರೆಗೆಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್‌ಘೋಷಿಸಿದೆ.

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕೊರೋನಾ ಪ್ರಕರಣಗಳು ಊಹೆಗೂ ನಿಲುಕದಷ್ಟು ಏರುತ್ತಲೇ ಇದೆ. ಎಷ್ಟೇ ಪ್ರಯತ್ನಿಸಿದರೂ ಸೋಂಕು ಹರಡದಂತೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಅಸಾಧ್ಯವಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಆಗಸ್ಟ್‌ 31ರ ವರೆಗೆ ರಾಜ್ಯಾದ್ಯಂತ ಲಾಕ್‌ಡೌನ್‌ ಅನ್ನು ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 4 ಲಕ್ಷ ಸೋಂಕಿತರಿದ್ದು ಭಾರತದಲ್ಲೇ ಅತ್ಯಧಿಕ ಸೋಂಕಿತರನ್ನು ಹೊಂದಿರುವ ರಾಜ್ಯ ಎಂಬ ಕುಖ್ಯಾತಿಗೆ ಒಳಗಾಗಿದೆ.ಈ ಕುರಿತು ಸ್ಪಷ್ಟನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಜಯ್‌ ಕುಮಾರ್‌, …

Read More »

ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್‍ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ.

ಬೆಂಗಳೂರು: ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್‍ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ. ಅಧೀರನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಂಜಯ್ ದತ್ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಕನ್‌ಫ್ಯೂಸ್ ಆಗಬೇಡಿ. ಬೊಮ್ಮನಹಳ್ಳಿಯ ಬಿಬಿಎಂಪಿಯವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಆಧೀರನನ್ನು ಬಳಸಿದ್ದಾರೆ. ಕೆಜಿಎಫ್ ಚಿತ್ರದ ಅಧೀರ ರುಮಾಲಿನ ಬಟ್ಟೆಯಿಂದ ಬಾಯಿ ಮುಚ್ಚಿಕೊಂಡಿರುವ ಫೋಟೋ ಹಾಕಿ, ಮಾಸ್ಕ್ ಹಾಕಿಕೊಳ್ಳಿ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ನೋಡಿ …

Read More »

(ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ.

ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ. ಕೋವಿಡ್19 ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಸಿಇಟಿ ಪರೀಕ್ಷೆ ನಿಗದಿಪಡಿಸಿ 2020ರ ಮೇ 13 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿದೆ. ಈ‌ ಕುರಿತು ಬಿ.ಆರ್. ಉಲ್ಲಾಸ್ ಮತ್ತು‌ ಅಬ್ಬುಲ್ಲಾ‌ ಖಾನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜಿರ್ಯನ್ನು ಬುಧವಾರ ಮೂರು …

Read More »