ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …
Read More »ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು-
ಮುಂಬೈ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಸಂಜಯ್ ದತ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಂಜಯ್ ದತ್ ಅವರನ್ನು ತೀವ್ರನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಂಜಯ್ ದತ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಅವರನ್ನು ಆಂಟಿಜಿನ್ ಕಿಟ್ ಬಳಸಿ ಕೊರೊನಾ ಪೆರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜುಲೈ …
Read More »ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್
ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ ಭಯದಿಂದ ಬರುತ್ತಿಲ್ಲ. ಅಂತಹ ನೌಕರರಿಗೆ ನೋಟೀಸ್ ನೀಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಕೆಲಸಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೋನಾಗೆ ಆತಂಕಪಡುವ ಅಗತ್ಯವಿಲ್ಲ. ಕೊರೋನಾ ವಾರಿಯರ್ಸ್ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಹೇಳಿದ್ದಾರೆ. …
Read More »ಪಾಸಿಟಿವ್ ಬಂದರೂ ಜೀವಕ್ಕೆ ತೊಂದರೆ ಇಲ್ಲ
ಬಂಗಾರಪೇಟೆ: ಕೋವಿಡ್ ಪಾಸಿಟಿವ್ ಇದ್ದರೂ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ 850ಕ್ಕೂ ಹೆಚ್ಚು ಜನರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೋಂಕಿತರಿಗೆ ಧೈರ್ಯ ತುಂಬಿದರು. ತಾಲೂಕಿನ ಬೂದಿಕೋಟೆ ಹೋಬಳಿಯ ಎಳೇಸಂದ್ರ ವಸತಿ ಶಾಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಪಾಸಿಟಿವ್ ಬಂದ ಮೇಲೆ ಮರಣ ಗ್ಯಾರಂಟಿ ಎನ್ನುವುದನ್ನು ತಮ್ಮ ಮನಸ್ಸಿನಿಂದ …
Read More »ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …
Read More »ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್
ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್ ಮಾಡಿದ್ದಾರೆ. ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್ …
Read More »ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್ ವ್ಯವಸ್ಥೆ: ಬೆಳಗಾವಿ ಡಿ.ಸಿ
ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …
Read More »20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …
Read More »ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ
: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …
Read More »
Laxmi News 24×7