Breaking News

Uncategorized

ಬೆಂಗಳೂರು ಅಲ್ಲ, ರಾಜ್ಯದಲ್ಲಿ ಎಲ್ಲೂ ಲಾಕ್‌ಡೌನ್‌ ಇರಲ್ಲ: ಸಿಎಂ .B.S.Y.

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್‌ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರುವುದಿಲ್ಲ. ಜನರ ರಕ್ಷಣೆಯ ಜೊತೆ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಅಗತ್ಯವಿದೆ. ಹೀಗಾಗಿ ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲೂ ಲಾಕ್‌ಡೌನ್‌ ಮಾಡುವುದಿಲ್ಲ. ಆದರೆ ಕಂಟೈನ್ಮೆಂಟ್‌ ವಲಯದಲ್ಲಿ ನಿಯಮ ಬಿಗಿ ಇರುತ್ತದೆ …

Read More »

ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.

  ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ  ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …

Read More »

ಪತಿಯನ್ನು ಕೊಲೆಗೈದ ಪತ್ನಿಗೆ ಕೊರೊನಾ- 13 ಪೊಲೀಸರು ಕ್ವಾರಂಟೈನ್‌

ಬೆಂಗಳೂರು: ಕೊಲೆ ಆರೋಪಿಗೆ ಕೋವಿಡ್‌ 19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯ 13 ಮಂದಿ ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಜೂನ್‌ 9 ರಂದು ಪ್ರಿಯರ ಅಭಿಷೇಕ್ ಜೊತೆಗೆ ಸೇರಿ ಗಂಡ ಹರೀಶ್‌ನನ್ನು ಪತ್ನಿ ಕೃಪಾ ಕೊಲೆ ಅಮೃತಹಳ್ಳಿಯಲ್ಲಿ ಮಾಡಿಸಿದ್ದಳು. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಇಬ್ಬರು ಸೇರಿ ಹರೀಶ್‌ನನ್ನು ಕೊಲೆ ಮಾಡಿಸಿದ್ದಳು. ಕೊಲೆ ಮಾಡಿದ ಬಳಿಕ ಗಂಡ ಕಾಣೆಯಾಗಿದ್ದಾನೆ ಅಂತಾ ಪೊಲೀಸ್ ಠಾಣೆಗೆ ಕೃಪಾ …

Read More »

ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಗಾಟ- ವಾಹನ ತಡೆದ ಭಜರಂಗದಳ ಕಾರ್ಯಕರ್ತರು

ಮಂಗಳೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮೂರು ದನ, ಎರಡು ಕರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದಾಗ ಭಜರಂಗ ದಳ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಇಂದು ನಸುಕಿನ ಜಾವ ಬೆಳ್ತಂಗಡಿ ಸಮೀಪ ನಡೆದಿದೆ. ಈ ವೇಳೆ ಗೋಸಾಗಾಟಗಾರ ರಾಜೇಶ್ ಹಾಗೂ ಇನ್ನೋರ್ವ ಆರೋಪಿ ಭಜರಂಗದಳ ಕಾರ್ಯಕರ್ತರ ಮೇಲೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ವಾಹನದಲ್ಲಿ ನಗರದ ಕಂಕನಾಡಿಯ ಪಿ.ಕೆ.ಚಿಕನ್ ಸೆಂಟರ್ ಮಾಲಕ ಅಬ್ದುಲ್ …

Read More »

ತಿರುಪತಿ ಯಲ್ಲಿ ಇಳಿಯ ಬೇಕಾದ ವಿಮಾನ ಬೆಂಗಳೂರಿನಲ್ಲಿ ಇಳಿದು ಜನರ ಪ್ರಾಣ ಉಳಿಸಿದೆ..!

ತಿರುಪತಿ: ಪೈಲಟ್ ಒಬ್ಬರ ಸಮಯ ಪ್ರಜ್ಞೆಯಿಂದ 75 ಜನ ಪ್ರಯಾಣಿಕರ ಜೀವ ಉಳಿದಿರುವ ಘಟನೆ ತಿರುಪತಿಯಲ್ಲಿ ಭಾನುವಾರ ನಡದಿದೆ. ಹೈದರಾಬಾದ್‌-ತಿರುಪತಿ-ಬೆಂಗಳೂರು ಮಧ್ಯೆ ಸಂಚಿಸಲಿರುವ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನವೊಂದು ಭಾರಿ ಅಪಘಾತಕ್ಕೆ ಈಡಾಗುವ ಸಂಭವವಿತ್ತು. ಈ ಮಧ್ಯೆಯೇ ಪೈಲಟ್‌ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ತಿರುಪತಿಯಲ್ಲಿ ಇಳಿಯಬೇಕಿದ್ದ ವಿಮಾನವನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ತಂದು ಇಳಿಸಲಾಗಿದೆ. ನಿನ್ನೆ ಬೆಳಗ್ಗೆ ಈ ವಿಮಾನವು  ಪ್ರಯಾಣಿಕರನ್ನು ಇಳಿಸುವ ಸಂಬಂಧ ತಿರುಪತಿ ಅಂತಾರಾಷ್ಟ್ರೀಯ …

Read More »

ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು

ಬೆಳಗಾವಿ  -: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಹಾಗೂ ಊಟೋಪಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. https://www.facebook.com/105350550949710/posts/182513749900056/?sfnsn=wiwspwa&extid=Jf6CE1WTyAcoaLRh&d=w&vh=e ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ (ಜು.20) ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ …

Read More »

ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?

ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್‍ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್‍ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …

Read More »

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ಕದ್ದು ಕದ್ದು ನೋಡ್ತಿದ್ದ ಕಾಮುಕನಿಗೆ ಧರ್ಮದೇಟು

ವಿಜಯಪುರ: ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಮೇಲೆ ಕಾಮುಕ ಕಣ್ಣು ಹಾಕಿದ್ದಕ್ಕೆ ಹಿಗ್ಗಾಮುಗ್ಗಾ ಧರ್ಮದೇಟು ತಿಂದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಶಿನಾಥ ಧರ್ಮದೇಟು ತಿಂದ ಕಾಮುಕ. ಈತ ಗಿಡದ ಮೇಲೆ ಕುಳಿತು ಕದ್ದು ಕದ್ದು ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನುಎಂದಿನಿಂತೆ ಭಾನುವಾರ ಕೂಡ ಕಾಮುಕ ಕಾಶಿನಾಥ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನು. ಆದರೆ ಈ ವೇಳೆ ಸಾರ್ವಜನಿಕರ ಕೈಯಲ್ಲಿ ರೆಡ್ …

Read More »

ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …

Read More »

ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ

ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ.   ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್​ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ …

Read More »