ಬೆಂಗಳೂರು: ಯಾರೂ ನಿರೀಕ್ಷಿಸದ ಘಟನೆಯೊಂದು ರಾಜ್ಯದಲ್ಲಿಂದು ನಡೆದಿದೆ. ಅಸಂಖ್ಯಾತ ಅಭಿಮಾನಿಗಳ ಬಳಗವನ್ನೇ ಹೊಂದಿರುವ ನಟ ದರ್ಶನ್ ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದು, ಈ ಸುದ್ದಿ ರಾಜ್ಯಾದ್ಯಂತ ತಲ್ಲಣವನ್ನೇ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ನಟಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಜೂನ್ 8ರಂದು ಮನೆಯಿಂದ ಹೊರಟ ರೇಣುಕಾಸ್ವಾಮಿ ಮತ್ತೆ ವಾಪಸ್ ಮನೆಗೆ ಬರಲೇ ಇಲ್ಲ. ಇದರಿಂದ …
Read More »ಮೂಡಲಗಿ: ಘಟಪ್ರಭಾ ನದಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ
ಮೂಡಲಗಿ: ಘಟಪ್ರಭಾ ನದಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ ಮೂಡಲಗಿ: ತಾಲ್ಲೂಕಿನ ಅವರಾದಿ ಸೇತುವೆಯಿಂದ ಘಟಪ್ರಭಾ ನದಿಯಲ್ಲಿ ಭಾನುವಾರ ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದರಿಂದ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮಂಗಳವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಚುರಕಾ ಸುರೇನ್ ಮೃತ ವ್ಯಕ್ತಿ. ಸತತ ಮಳೆಯಿಂದ ಮುಳುಗಡೆಯಾಗಿದ್ದ ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ, ಅಪಾಯವನ್ನೂ ಲೆಕ್ಕಿಸದೆ ಈ ಸೇತುವೆ ಮೇಲೆ ಸಾಗುತ್ತಿದ್ದಾಗ, ಟ್ರ್ಯಾಕ್ಟರ್ನಲ್ಲಿದ್ದ 10 ಮಂದಿ ನೀರಿನ ಸೆಳವಿಗೆ …
Read More »‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆಗೆ ‘ಸಿಎಂ ಸಿದ್ಧರಾಮಯ್ಯ’ ಈ ಮಾನದಂಡ ಫಿಕ್ಸ್
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಅದೇ ನೌಕರರ ವರ್ಗಾವಣೆ ನಾನು ಬೇರೆ ಯಾವುದಕ್ಕೂ ಮಣೆ ಹಾಕೋದಿಲಲ್. ಆ ಮಾನದಂತ ಪೂರೈಸಿದ್ರೆ ಮಾತ್ರವೇ ವರ್ಗಾವಣೆ ಅನುಮತಿಸೋದಾಗಿ ಎಚ್ಚರಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ …
Read More »ಬೀನ್ಸ್ ಬೆಲೆ ಇಳಿಕೆ; ಟೊಮೆಟೊ ದುಬಾರಿ
ಮೈಸೂರು: ದ್ವಿಶತಕ ದಾಟಿದ್ದ ಬೀನ್ಸ್ ಬೆಲೆಯು ಈ ವಾರ ಅರ್ಧದಷ್ಟು ಇಳಿಕೆ ಆಗಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಟೊಮೆಟೊ ಧಾರಣೆ ಏರುಮುಖವಾಗಿದೆ. ವಾರದ ಹಿಂದಷ್ಟೇ ಬೀನ್ಸ್ ಪ್ರತಿ ಕೆ.ಜಿ.ಗೆ ₹200ರವರೆಗೆ ಮಾರಾಟವಾಗಿ ಕೊಳ್ಳುವವರ ಕಣ್ಣಲ್ಲಿ ನೀರು ತರಿಸಿತ್ತು. ರಾಜ್ಯದಾದ್ಯಂತ ಕಳೆದೊಂದು ತಿಂಗಳಿಂದ ಹದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಬೀನ್ಸ್ ಬೆಳೆಯಲು ಆರಂಭಿಸಿದ್ದು, ಮಾರುಕಟ್ಟೆಗೆ ಉತ್ಪನ್ನದ ಆವಕ ಏರತೊಡಗಿದೆ. ಈ ಹಿನ್ನೆಲೆಯಲ್ಲಿ ಇದರ ಬೆಲೆ ಗಣನೀಯ ಇಳಿಕೆ ಕಂಡಿದೆ. ಮೈಸೂರು …
Read More »ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ
ಬೆಂಗಳೂರು, ಜೂನ್ 10: 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ (Rain) ಆಗಿದೆ. ಆ ಮೂಲಕ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ(Krishna Byre Gowda)ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ …
Read More »ಯಾರಿಗೇ ಟಿಕೆಟ್ ಕೊಟ್ರೂ ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ: ಬೊಮ್ಮಾಯಿ
ಬೆಂಗಳೂರು, : ಶಿಗ್ಗಾಂವಿ ಕ್ಷೇತ್ರಕ್ಕೆ(Shiggaon)ಯಾರು ಅಭ್ಯರ್ಥಿ ಆಗಬೇಕೆಂದು ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷ ಯಾರನ್ನೇ ನಿಲ್ಲಿಸಿದರೂ ನಮ್ಮ ಬೆಂಬಲ ಇದೆ ಎಂದು ನೂತನ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮಗನ ಹೆಸರು ಕೇಳಿ ಬರೋದು ಸಹಜ. ಆದರೆ ಆಥರದ ಪ್ರಸ್ತಾವನೆ ನಮ್ಮ ಕಡೆಯಿಂದ ಇಲ್ಲ. ಇದರಲ್ಲಿ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಉದಾಸಿಗೇ ಕೊಡಲಿ, ಯಾರಿಗೇ ಕೊಡಲಿ ಅದು …
Read More »ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ
ಬೆಳಗಾವಿ, ಜೂನ್ 10: ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಪ್ರಕರಣದಲ್ಲಿ(Child Trafficking)ಈಗಾಗಲೇ ಪೊಲೀಸರು ವೈದ್ಯ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆದರೆ ಅಸಲಿಗೆ ಬಂಧಿತ ವೈದ್ಯ ಕಿಂಗ್ಪಿನ್ (Kingpin) ಅಬ್ದುಲ್ ಗಫರ್ ಲಾಡಖಾನ್ ವೈದ್ಯನೇ ಅಲ್ಲ. ಯಾವುದೇ ಅನುಮತಿ ಪಡೆಯದೆ ಕಳೆದ 10 ವರ್ಷಗಳಿಂದ ಕಿತ್ತೂರು ಪಟ್ಟಣದಲ್ಲಿ ಆರ್ಎಂಪಿ ವೈದ್ಯ ಎಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತಿದ್ದ. ಈತನ ಬಗ್ಗೆ ಹಲವು ಬಾರಿ ಸ್ಥಳೀಯರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇನ್ನು ಮಕ್ಕಳ ಮಾರಾಟ ಅಷ್ಟೇ …
Read More »ಮಾವು ಕೀಳಲು ಹೋದಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು
ಹೊಸಕೋಟೆ: ಇಲ್ಲಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ಭಾನುವಾರ ವಿದ್ಯಾರ್ಥಿಯೊಬ್ಬ ಮಾವು ಕೀಳಲು ಹೋಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಸೂಲಿಬೆಲೆ ಹೋಬಳಿಯ ತಿಮ್ಮಪ್ಪನಹಳ್ಳಿಯ ಸಾಯಿಭುವನ್(13) ಮೃತ ವಿದ್ಯಾರ್ಥಿ. ಈತ 9ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿನಿಲಯ ಕಟ್ಟಡದ ಮೇಲೆ ಬಟ್ಟೆ ಒಣಗಿಸುವ ವೇಳೆ ಪಕ್ಕದಲ್ಲಿದ್ದ ಮಾವಿನ ಮರದಲ್ಲಿದ್ದ ಮಾವಿನ ಹಣ್ಣು ಕೀಳಲು ಹೋಗಿದ್ದ. ಮಾವಿನ ಹಣ್ಣು ಕೀಳಲು ಬಳಸಿದ ಕಂಬಿಗೆ ಮರದ ಸಮೀಪ ಹಾದುಹೋಗಿದ್ದ 11 ಕೆ.ವಿ. ವಿದ್ಯುತ್ ತಗುಲಿ …
Read More »ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ಡಿ.ಕೆ.ಶಿ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸ್ಜಿವಕುಮಾರ್, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ …
Read More »ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ
ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. ತಾಯಿ ಹಾಗೂ ಮಗಳ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಯಿ ಮಾಳಮ್ಮ ಕೂಲಿ ಕೆಲಸ ಮಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೊಯದಿಂದ ಮನನೊಂದು ಮಗಳ ಸಮೇತ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ …
Read More »